Homeಮುಖಪುಟಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಹರಿಯಾಣದ ಬಿಜೆಪಿ ನಾಯಕರಾದ ಪಮಿಂದರ್ ಸಿಂಗ್ ಧುಲ್ ಮತ್ತು ರಾಂಪಾಲ್ ಮಜ್ರಾ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಕರೆದಿದ್ದಾರೆ. ಕೇಂದ್ರ ರೈತರ ವಾದವನ್ನು ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ದೇಶಾದ್ಯಂತ ಕರೆ ನೀಡಿದ್ದ ಭಾರತ ಬಂದ್‌ ಹಿನ್ನೆಲೆ ರೈತ ಸಂಘಟನೆಗಳು, ರೈತಪರ ಹೋರಾಟಗಾರರು, ವಿರೋಧ ಪಕ್ಷಗಳು ಬೀದಿಗಿಳಿದಿವೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ, ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳ ರೈತ ಸಂಘಗಳು  “ಭಾರತ್ ಬಂದ್” ನಲ್ಲಿ ಭಾಗವಹಿಸಿವೆ.

ಪ್ರಮುಖ ರೈತ ಸಂಘಟನೆಗಳಾದ ಅಖಿಲ ಭಾರತ ಕಿಸಾನ್​ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್​ಸಿಸಿ), ಅಖಿಲ ಭಾರತ ಕಿಸಾನ್​ ಮಹಾಸಂಘ್​​(ಎಐಕೆಎಂ) ಮತ್ತು ಭಾರತೀಯ ಕಿಸಾನ್​ ಯೂನಿಯನ್​(ಬಿಕೆಯು) ಕರೆ ನೀಡಿದ್ದ ಪ್ರತಿಭಟನೆಗೆ ಕಾಂಗ್ರೆಸ್, ಡಿಎಂಕೆ, ಎಎಪಿ, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್ ಮತ್ತು ಕನಿಷ್ಠ 10 ಕೇಂದ್ರ ಕಾರ್ಮಿಕ ಸಂಘಗಳು ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಮಸೂದೆಗಳನ್ನು ರದ್ದುಗೊಳಿಸದ ಹೊರತು ತಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಕೃಷಿ ಸುಗ್ರೀವಾಜ್ಞೆಗಳನ್ನು ಆರಂಭದಿಂದಲೂ ತೀವ್ರವಾಗಿ ವಿರೋಧಿಸುತ್ತಿರುವ ಪಂಜಾಬ್‌ನ ರೈತ ಸಂಘಟನೆಗಳು ಬೆಳಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತಿವೆ. ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.

PC:Hindustan Times

ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ಆರ್​ಜೆಡಿ ಮುಖಂಡ ತೇಜಸ್ವಿ ಯಾದವ್​ ಟ್ರ್ಯಾಕ್ಟರ್​ ಚಾಲನೆ ಮಾಡುವ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಹರಿಯಾಣದ ಬಿಜೆಪಿ ನಾಯಕರಾದ ಪಮಿಂದರ್ ಸಿಂಗ್ ಧುಲ್ ಮತ್ತು ರಾಂಪಾಲ್ ಮಜ್ರಾ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಕರೆದಿದ್ದಾರೆ. ಕೇಂದ್ರ ರೈತರ ವಾದವನ್ನು ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ಪ್ರತಿಭಟನೆಗೆ ಆರ್‌ಎಸ್‌ಎಸ್‌ ನೇತೃತ್ವದ ಎಲ್ಲಾ ರೈತ ಸಂಘಟನೆಗಳು ಬೆಂಬಲ ಸೂಚಿಸಿ, ಪ್ರತಿಭಟನೆಗೆ ಕೈಜೋಡಿಸಿವೆ. ಕರ್ನಾಟಕ ರಾಜ್ಯದಲ್ಲೂ ಹಲವು ಜಿಲ್ಲೆಗಳಲ್ಲಿ ರಸ್ತೆ ತಡೆ ನಡೆಸಲಾಗುತ್ತಿದ್ದು, ರೈತ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸುತ್ತಿವೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ರೈತ, ಕಾರ್ಮಿಕ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಧಿಕ್ಕಾರ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಬೇಡವೇ ಬೇಡ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ಒಪ್ಪುವುದಿಲ್ಲ, ಕಾರ್ಪೊರೇಟ್ ಕಂಪನಿಗಳ ಪರ ನಿಂತಿರುವ ಕೇಂದ್ರ ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂಬ ಘೋಷಣೆಗಳು ಕೇಳಿಬಂದವು.

ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೂ, ರೈತರೇ ಈ ಮಸೂದೆಗಳನ್ನು ವಿರೋಧಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ವಿರೋಧ ಪಕ್ಷಗಳು ಮಸೂದೆಗಳ ವಿರುದ್ಧ ಸುಳ್ಳು ವದಂತಿ ಹರಡುತ್ತಿವೆ ಎನ್ನುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ರೈತರಿಗೆ ಈ ಕಾಯ್ದೆಗಳ ಮಹತ್ವ ತಿಳಿಸಿ ಎಂದು ಸಲಹೆ ನೀಡುತ್ತಿದ್ದಾರೆ.


ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...