Homeಕರ್ನಾಟಕಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ ಎಂಬುವವರಿಂದ 'ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (17 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ' ಎಂದು ದೂರಿನಲ್ಲಿ ಆರೋಪಿಸಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ದೂರು ನೀಡಿದ್ದು, ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿದೆ.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (17 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದು 1860 ರ ಭಾರತೀಯ ದಂಡ ಸಂಹಿತೆಯ 120 ಬಿ, ಸುಲಿಗೆ u/ss 384 r / w 34ರ ಅನ್ವಯ ಸುಲಿಗೆ ಮಾಡುವ ಗಂಭೀರ ಅಪರಾಧವಾಗಿದೆ. ಹಾಗಾಗಿ 1973 ರ ಕ್ರಿಮಿನಲ್ ಅಪರಾಧಗಳ ಆಧಾರದಲ್ಲಿ ದೂರು ನೀಡಿದ್ದೇವೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು “ನಮ್ಮ ರಾಜ್ಯದಲ್ಲಿ ಭ್ರಷ್ಟ ರಾಜಕಾರಣವು ನಡೆಯುತ್ತಿದೆಯೆಂದು ಎಲ್ಲರಿಗೂ ತಿಳಿದೇ ಇದೆ. ಇತ್ತೀಚಿಗೆ ಖಾಸಗಿ ಮಾಧ್ಯಮವೊಂದು ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್ ಮರಡಿಯವರು ವಸೂಲಿ ಮತ್ತು ಸುಲಿಗೆ ದಂಧೆಯನ್ನು ಖುಲ್ಲಂ ಖುಲ್ಲ ಮಾಡುತ್ತಿರುವುದನ್ನು ಬಿಚ್ಚಿಟ್ಟಿದೆ. ಇಂತಹ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ತಿಳಿದು ಸಹ ನಮ್ಮ ಜನಾಧಿಕಾರ ಸಂಘರ್ಷ ಪರಿಷತ್ ಕೈಕಟ್ಟಿ ಕೂರಬಾರದೆಂದು 25-09-2020 ರಂದು ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಆಯುಕ್ತರು ಹಾಗೂ ಶೇಷಾದ್ರಿಪುರಂ ಠಾಣಾಧಿಕಾರಿಗೆ ದೂರು ನೀಡಿದ್ದೇವೆ. ಈ ತರಹದ ವಸೂಲಿ ಧಂಧೆಯನ್ನು ಬಿಜೆಪಿ ಸರ್ಕಾರವು ನೇರ ನೇರಾ ಮಾಡುತ್ತಿದ್ದರೂ ಅದನ್ನು ತಡೆಯದ ಪ್ರಧಾನಿ ಮೋದಿಯವರು ಮಾತ್ರ ‘ನಾ ಖಾವುಂಗಾ ನಾ ಖಾನೆ ದೂಂಗಾ’ ಎಂದು ಹೇಳುವುದು ಡೋಂಗಿತನವಲ್ಲದೇ ಬೇರೆನೂ ಅಲ್ಲ” ಎಂದಿದ್ದಾರೆ.

ಇನ್ನೊಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಭ್ರಷ್ಟಾಚಾರದ ಕುರಿತು ವಿಶೇ‍ಷ ತನಿಖಾ ದಳದ ಮೂಲಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. “ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು” ಆಗ್ರಹಿಸಿದ್ದಾರೆ.

”‘ನಾ ಖಾವುಂಗಾ ನಾ ಖಾನೆ ದೂಂಗಾ’ ಎನ್ನುತ್ತಲೇ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಯನ್ನು ‘ಮೈ ಖಾವುಂಗಾ ಔರ್ ಖಾನೆ ದೂಂಗಾ’ ಎಂದು ತಕ್ಷಣ ಬದಲಾಯಿಸಿಕೊಳ್ಳುವುದು ಒಳಿತು. ಈ ಭ್ರಷ್ಟಾಚಾರದ ಹಣದಲ್ಲಿ ತನ್ನ ಪಾಲೆಷ್ಟು ಎನ್ನುವುದನ್ನು ಕೂಡಾ ನರೇಂದ್ರ ಮೋದಿಯವರು ತಿಳಿಸಬೇಕು” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...