Homeಅಂಕಣಗಳುಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ.

- Advertisement -
- Advertisement -

ಬ್ರಿಟಿಷ್ ವಸಾಹತುಶಾಹಿಯ ನೇಣಿಗೆ ನಗು ನಗುತ್ತಲೇ ಕೊರಳೊಡ್ಡಿ ಸ್ವಾತಂತ್ರ್ಯ ಕ್ರಾಂತಿಯ ಕಿಡಿಯನ್ನು ಲಕ್ಷಾಂತರ ಎದೆಗಳಲ್ಲಿ ಹೊತ್ತಿಸಿದ ಆತ ಬದುಕಿದ್ದು ಇಪ್ಪತ್ಮೂರೇ ವರ್ಷ. ಆತ ಹುಟ್ಟಿದ ದಿನ (ಸೆ.28) ಮತ್ತೊಮ್ಮೆ ಸಮೀಪಿಸಿದೆ. ಈ ಹೊತ್ತಿನಲ್ಲಿ ಆತನ ವಿಚಾರಗಳ ನೆನೆಯಬೇಕಿದೆ.

ಪಂಜಾಬಿ, ಹಿಂದಿ, ಉರ್ದು ಹಾಗೂ ಇಂಗ್ಲಿಷ್ ಭಾಷೆಗಳ ಮೇಲೆ ಹಿಡಿತವಿದ್ದ ಭಗತ್ ಬರೆಹಗಳನ್ನು ಅಂದಿನ ಹಲವು ಸಮಕಾಲೀನ ಪತ್ರಿಕೆಗಳು ಪ್ರಕಟಿಸುತ್ತಿದ್ದವು. ಪಿಸ್ತೂಲಿನಿಂದ ಕಾಡತೂಸು ಸಿಡಿಸಿ ಬಾಂಬುಗಳ ಎಸೆದವನಾದರೂ ಭಗತನ ಬಕ್ಕಣದಲ್ಲಿ ಪುಸ್ತಕವೊಂದು ಇಲ್ಲದಿದ್ದ ಕ್ಷಣವೇ ಇರುತ್ತಿರಲಿಲ್ಲವಂತೆ. ವಯಸ್ಸಿಗೆ ಮೀರಿದ ಪ್ರಬುದ್ಧತೆ, ನಿಸ್ವಾರ್ಥ ಸಮರ್ಪಣಾ ಭಾವ, ವಿನಮ್ರತೆ, ಸ್ವವಿಮರ್ಶೆ, ಸೂಕ್ಷ್ಮತೆಗೆ ಬದ್ಧನಾಗಿದ್ದ ಈ ತರುಣನನ್ನು ಪ್ರತಿಗಾಮಿ ಶಕ್ತಿಗಳು ತಮ್ಮ ತೆಕ್ಕೆಗೆ ಸೆಳೆದುಕೊಂಡು ಯಥಾಸ್ಥಿತಿವಾದದ ರಂಗು ಮೆತ್ತಿ ನಿಲ್ಲಿಸುವ ಹುಸಿಪ್ರಚಾರದ ಪ್ರಯತ್ನಗಳನ್ನು ಎಡೆಬಿಡದೆ ನಡೆಸಿವೆ.

ಇದನ್ನೂ ಓದಿ: ಭಾರತದ ಸ್ವಾತಂತ್ರ್ಯ ಸಂಗ್ರಾಮ: ಹಿಂದೂ ಮುಸ್ಲಿಂ ಐಕ್ಯತೆಯ ಅಪೂರ್ವ ಕಥನ

‘ಸಾಂಪ್ರದಾಯಿಕ ದಂಗೆಗಳು ಮತ್ತು ಅವುಗಳ ಇಲಾಜು’ ಎಂಬುದಾಗಿ ‘ಕೀರ್ತಿ’ (ರೈತರು ಮತ್ತು ಕೂಲಿಕಾರರ ಪಂಜಾಬೀ ಮಾಸಪತ್ರಿಕೆ) ಮತ್ತು ‘ಉತ್ತರಾರ್ಧ’ ಎಂಬ ನಿಯತಕಾಲಿಕಗಳಿಗೆ 1927ರಲ್ಲಿ ಭಗತ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೂ ಹಿಡಿದ ಕನ್ನಡಿ. ಕೋಮುವಾದದ ಬಾಬತ್ತಿನಲ್ಲಿ ತೊಂಬತ್ತು ವರ್ಷಗಳಿಂದ ನಾವು ಮುಂದೆ ಬಂದೇ ಇಲ್ಲ. ನಮ್ಮನ್ನು ಮತ್ತಷ್ಟು ಹಿಂದ ಹಿಂದಕ್ಕೆ ಕೊಂಡೊಯ್ಯುವ ಹುನ್ನಾರಗಳಿಗೆ ಯಶಸ್ಸು ದೊರೆಯತೊಡಗಿದೆ. ಕೋಮುವಾದಿ ನಂಜಿನ ಬಗ್ಗಡವನ್ನು ಬಡಿದೆಬ್ಬಿಸುತ್ತಿರುವ ವಿಷಮತೆ-ಅಸಹನೆಗಳ ಸಮಕಾಲೀನ ಸಂದರ್ಭಕ್ಕೆ ಅಚ್ಚರಿಯೆನಿಸುವಷ್ಟು ಪ್ರಸ್ತುತ ಭಗತ್ ವಿಚಾರಗಳು. ‘…ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿರಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರೆಂಬ ಕಾರಣಕ್ಕಾಗಿ ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ… ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಕೊನೆಯಿಲ್ಲದಷ್ಟು ಭಾಷಣಬಾಜಿ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧಮಾರ್ಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ…. ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ ಕುಳಿತಿರುವ ಇಂತಹವರ ಸಂಖ್ಯೆ ಸಣ್ಣದೇನೂ ಅಲ್ಲ.’

Photo Courtesy: DNA India

ಹಾಗೆಯೇ ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಅಂದಿನ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದ ಮಾತುಗಳ ಗಮನಿಸಿ ‘…ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು… ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ ಸಾಮರಸ್ಯ ಮೂಡಿಸುವುದು ಪತ್ರಿಕೆಗೆಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ – ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ. ಜನ ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಬೇಕಿದ್ದರೆ, ದೀನ ದರಿದ್ರರು ಮತ್ತು ರೈತರು ಹಾಗೂ ದುಡಿಯುವ ವರ್ಗಗಳಿಗೆ ಬಂಡವಾಳಶಾಹಿಯೇ ಅವರ ಅಸಲು ಶತ್ರು ಎಂಬ ವಾಸ್ತವವನ್ನು ತಿಳಿಸಿ ಹೇಳಬೇಕಿದೆ. ಅವರ ಕೈಯಲ್ಲಿನ ದಾಳ ಆಗದಂತೆ, ಅವರ ಮೋಸ ಮರೆಗಳ ಹುನ್ನಾರಗಳಿಗೆ ಬಲಿಯಾಗದಂತೆ ಎಚ್ಚರಗೊಳಿಸಬೇಕಿದೆ. ಎಲ್ಲ ಜಾತಿ, ವರ್ಣ, ಜನಾಂಗ, ರಾಷ್ಟ್ರೀಯತೆಯ ಭೇದ ಭಾವವಿಲ್ಲದೆ ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗೆ ಹೋರಾಡಬೇಕೆಂಬ ಅರಿವನ್ನು ಎಲ್ಲ ಬಡವರಲ್ಲಿ ಮೂಡಿಸಬೇಕಿದೆ’.

ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳು, ಮೇಲು-ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆಗಳ ವಿರುದ್ಧ ಭಗತ್ ಎತ್ತಿದ ದನಿ ಇಂದಿಗೂ ಧಗ ಧಗ. ಯಾಕೆಂದರೆ ಸ್ವಾತಂತ್ರ್ಯ ಗಳಿಕೆಯ ನಂತರ ಕಟ್ಟಬೇಕಿದ್ದ ಸಮ ಸಮಾಜದಲ್ಲಿ ನೆಟ್ಟಿತ್ತು ಆತನ ಮನ. ಹೀಗಾಗಿಯೇ ಹಿಂದೆಂದಿಗಿಂತಲೂ ಪ್ರಸ್ತುತ ಈತ.


ಇದನ್ನೂ ಓದಿ: ಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...