Homeಮುಖಪುಟಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು.

- Advertisement -
- Advertisement -

ಪ್ರಧಾನಿಯಾಗಿ 4 ತಿಂಗಳ ನಂತರ ಸೆಪ್ಟೆಂಬರ್ 29, 2014ರಂದು ನರೇಂದ್ರ ಮೋದಿಯವರು ಅಮೆರಿಕದ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕೇರ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಅಂದು ಅವರು ‘ಹಿಂದಿನ ಸರ್ಕಾರವು ಹೊಸ ಹೊಸ ಕಾನೂನನ್ನು ತರುವುದರಲ್ಲಿ ಸಂತೋಷ ಕಾಣುತ್ತಿತ್ತು. ನಾನು ಪ್ರತಿದಿನವೂ ಒಂದೊಂದು ಅಪ್ರಸ್ತುತ ಕಾನೂನನ್ನು ತೆಗೆದುಹಾಕಲಿದ್ದೇನೆ’ ಎಂದು ಘೋಷಿಸಿದ್ದರು. ಅದೇ ವೇಗದಲ್ಲಿ ಹೊರಟಿದ್ದರೆ ಈ ಹೊತ್ತಿಗೆ ದೇಶದಲ್ಲಿ ಒಂದು ಕಾನೂನೂ ಇರಬಾರದಿತ್ತು. ಆದರೆ ಕಾನೂನುಗಳಿವೆ ಮಾತ್ರವಲ್ಲಾ, ಅಂತಹ ಹಲವಾರು ಕಾನೂನುಗಳಿಗೆ ತಿದ್ದುಪಡಿ ತರಲಾಗಿದೆ. ಕಾನೂನುಗಳನ್ನು ಅಪ್‍ಡೇಟ್ ಮಾಡಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳಬಹುದಾದರೂ, ಕಾನೂನುಗಳನ್ನು ತೆಗೆಯಲಾಗಿಲ್ಲ.

ಇಡೀ ಬೆಳವಣಿಗೆಯನ್ನು ಗಮನಿಸಿದರೆ ಬಿಜೆಪಿ ಪ್ರತಿಪಾದಿಸುವ ಚಿಂತನೆಯ ಮೂಲ ಅರ್ಥವಾಗುತ್ತದೆ. ರೂಲ್ ಆಫ್ ಲಾ ಎಂಬೊಂದು ಮಾತಿದೆ. ಅಂದರೆ ಯಾರು ಆಳುತ್ತಿರುವರೋ ಅವರು ಹೇಳಿದಂತೆ ದೇಶ ನಡೆಯುವುದಿಲ್ಲ, ಹಾಗೆ ಮಾಡಿದರೆ ಅದು ರಾಜಪ್ರಭುತ್ವವಾಗಿಬಿಡುತ್ತದೆ; ಬದಲಿಗೆ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನೀತಿಯ ಕುರಿತಾಗಿ ಹೇಳಲ್ಪಡುವ ಮಾತು ಅದು. ಆದರೆ, ಪ್ರಜಾಪ್ರಭುತ್ವವು ವಿಸ್ತರಣೆಯಾದಂತೆಲ್ಲಾ ಅಷ್ಟೇ ಕಾನೂನುಗಳೂ ಸಾಲವು ಎಂದಾಯಿತು. ಶೋಷಿತರ ಪರವಾಗಿ, ಅವರ ಹಕ್ಕುಗಳನ್ನು ಕಾಪಾಡುವ ಕೆಲವು ಕಾನೂನುಗಳ ಅಗತ್ಯ ಕಾಣಿಸಿಕೊಂಡಿತು. ದೌರ್ಜನ್ಯಗಳನ್ನು ತಡೆಯಲು ‘ಎಲ್ಲರೂ ಸಮಾನರು’ ಎಂದಷ್ಟೇ ಹೇಳಿದರೆ ಸಾಲದು; ಏಕೆಂದರೆ ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂದಾಕ್ಷಣ ದೌರ್ಜನ್ಯಕ್ಕೊಳಗಾಗುವವರು, ದುಡಿಯುವ ಕಾರ್ಮಿಕರು ಆ ಕಾನೂನಿನಡಿಯಲ್ಲಿ ಪ್ರಬಲರ ಎದುರು ಗೆಲ್ಲುವುದು ಸುಲಭವಲ್ಲ. ಹೀಗಾಗಿಯೇ ಮಹಿಳೆಯರ, ದಲಿತರ, ಕಾರ್ಮಿಕರ ಹಾಗೂ ಭೂಮಿ ನಂಬಿ ಬದುಕುತ್ತಿದ್ದ ರೈತರ ಪರವಾದ ಕೆಲವು ಕಾನೂನುಗಳು ಬಂದವು.

Photo Courtesy: BankExamToday

ಮೋದಿಯವರು ಉಲ್ಲೇಖಿಸಿದ ‘ಅವರ ಹಿಂದಿನ ಸರ್ಕಾರಗಳು’ ತಂದ ಮಾಹಿತಿ ಹಕ್ಕಿನ ಕಾಯ್ದೆ, ಅರಣ್ಯ ಕಾಯ್ದೆ, ಭೂ ಸ್ವಾಧೀನ ನಡೆದಾಗ ಪರಿಹಾರ ನೀಡುವ ಕಾಯ್ದೆಯಂತಹ ಹಲವು ಕಾಯ್ದೆಗಳು ವಾಸ್ತವದಲ್ಲಿ ಈ ರೀತಿ ಶೋಷಿತರ ಪರವಾಗಿ ಬಂದಂಥವು. ಅದೇ ರೀತಿಯಾಗಿ ಪರಿಸರ ಸಂಬಂಧಿ ಕಾನೂನುಗಳು ಸಹಾ ಕಟ್ಟುನಿಟ್ಟಾದ ರೂಪದಲ್ಲಿ ಬಂದವು. ಇವೆಲ್ಲವೂ ಸಹಾ ದಮನಿತ ಅಥವಾ ಆಸಕ್ತ ಜನಸಾಮಾನ್ಯರ ಹೋರಾಟಗಳ ಕಾರಣದಿಂದ ಸರ್ಕಾರಗಳು ಜಾರಿಗೆ ತರಲೇಬೇಕಾಗಿ ಬಂದಿತ್ತು ಎಂಬುದನ್ನೂ ಮರೆಯಲಾಗದು.

ಆದರೆ, ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು. ಹಾಗಾಗಿ ಅವರು ದಿನಕ್ಕೊಂದು ಕಾನೂನು ಕಿತ್ತುಹಾಕುವ ಮಾತನ್ನಾಡಿದ್ದರು. ಆ ಕಾನೂನುಗಳನ್ನು ತೆಗೆದುಬಿಡಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಮತ್ತು ಕಾನೂನು ತಜ್ಞರು ಅವರಿಗೆ ಹೇಳಿರಬೇಕು. ಹಾಗಾಗಿ ಅವನ್ನು ಮೂಲಆಶಯಗಳಿಗೆ ವಿರುದ್ಧವಾಗಿ ತಿರುಚಲು ಅವರು ಆದೇಶ ಕೊಟ್ಟಂತಿದೆ. ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಕಾನೂನುಗಳು ಮೊದಲು ಅವರ ಕಣ್ಣಿಗೆ ಬಿದ್ದಿದ್ದವು. ಅವುಗಳನ್ನು ಬದಲಿಸಲು ಶುರು ಮಾಡಿ ಮೊದಲ ಅವಧಿಯಲ್ಲಿ ಹಿಂಜರಿಯಬೇಕಾಗಿ ಬಂದಿತ್ತು. ಅದಕ್ಕಿಂತ ಮೊದಲು ಭೂಸ್ವಾಧೀನ ಮಾಡಿಕೊಂಡಾಗ ನ್ಯಾಯಯುತ ಪರಿಹಾರ ಕಲ್ಪಿಸಬೇಕೆನ್ನುವ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರಲು ಹೊರಟಿದ್ದರು. ಅದನ್ನು ದೇಶಾದ್ಯಂತ ನಡೆದ ಪ್ರತಿಭಟನೆಗಳು ಹಿಮ್ಮೆಟ್ಟಿಸಿದ್ದವು..

Photo Courtesy: The Indian Express

ಇದೀಗ ಎರಡನೆಯ ಬಾರಿಗೆ ಗೆದ್ದು ಬಂದ ನಂತರ, ಸರಣಿ ಕಾನೂನು ತಿದ್ದುಪಡಿಗಳಿಗೆ ಮುಂದಾಗಿದ್ದಾರೆ. ಅದಕ್ಕಾಗಿ ಅವರು ಬಳಸಿಕೊಂಡಿದ್ದು ಕೊರೊನಾ ಸಂದರ್ಭದ ನಿರ್ಬಂಧಗಳನ್ನು. ಆಗ ಯಾರೂ ದನಿಯೆತ್ತದ ಸನ್ನಿವೇಶವಿರುತ್ತದೆ; ಪ್ರತಿಭಟನೆಗಳಿಗೂ ಅವಕಾಶವಿರುವುದಿಲ್ಲ, ಹಾಗಾಗಿ ಜನರ ವಿರುದ್ಧವಾಗಿ ತಿದ್ದುಪಡಿಗಳನ್ನು ಹೊರಟರು. ಅದೇ ಸಂದರ್ಭದಲ್ಲಿ ಕೊರೊನಾ ನಿರ್ಬಂಧಗಳಿಂದ ಶಾಸನಸಭೆಗಳೂ ನಡೆಯುತ್ತಿರಲಿಲ್ಲವಾದ್ದರಿಂದ ಸುಗ್ರೀವಾಜ್ಞೆಯ ಮೂಲಕ ಅದನ್ನು ಸಾಧಿಸಿದರು. ಇದೀಗ ಮತ್ತೆ ಸಂಸತ್ತು ಮತ್ತು ವಿಧಾನಮಂಡಲಗಳು ಅಧಿವೇಶನಗೊಳ್ಳುತ್ತಿವೆಯಾದ್ದರಿಂದ ಎಲ್ಲೆಡೆ ಅವುಗಳಿಗೆ ವಿರೋಧ ಬರುವುದು ಖಚಿತವಾಗಿದೆ. ಬಿಜೆಪಿಯ ಮಿತ್ರ ಪಕ್ಷ ಅಕಾಲಿದಳದ ಸಚಿವೆ ರೈತ ವಿರೋಧಿ ತಿದ್ದುಪಡಿಗಳನ್ನು ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಲ್ಲದೇ ಇಡೀ ಅಕಾಲಿ ದಳವೆ ಎನ್‌ಡಿಎಯಿಂದ ಹೊರಬಂದಿದೆ. ಅಂದರೆ ಪಂಜಾಬಿನ ರೈತ ಹೋರಾಟದ ಬಿಸಿ ಅವರಿಗೆ ತಟ್ಟುತ್ತಿದೆ ಎಂದಾಯಿತು.

ಹೀಗಿದ್ದೂ ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಅಣತಿಯ ಮೇರೆಗೆ ಕಾನೂನುಗಳ ಬದಲಾವಣೆಗೆ ಶುರು ಹಚ್ಚಿಕೊಂಡಿದೆ. ಇದನ್ನು ವಿರೋಧಿಸಿ ರಾಜ್ಯದ ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತರು ಅವರುಗಳ ಬೆನ್ನಿಗೆ ನಿಲ್ಲಬೇಕಿದೆ.


ಇದನ್ನೂ ಒದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...