Homeಮುಖಪುಟಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? - ಡಾ.ನರಸಿಂಹ ಗುಂಜಹಳ್ಳಿ

ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ.

- Advertisement -
- Advertisement -

ಒಂದು ಜನಾಂಗ ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಭೌದ್ಧಿಕವಾಗಿ ಶತಶತಮಾನಗಳಿಂದ ಶೋಷಣೆಗೆ ಒಳಗಾಗಿ, ಸಂವಿಧಾನಾತ್ಮಕ ಸೌಲಭ್ಯಗಳಿಂದ ವಂಚಿತರಾದ ಸಮುದಾಯಕ್ಕೆ ಈ ಸ್ಥಿತಿಗಳಿಂದ ಬಿಡುಗಡೆಗೊಳಿಸಲು ಕೆಲವು ಸಂವಿಧಾನಿಕ ವಿಶೇಷ ಸೌಲಭ್ಯಗಳೇ ಮೀಸಲಾತಿ. ಇದರ ಗುರಿ ಸಾಮಾಜಿಕ ನ್ಯಾಯ. ಇಂದು ಸಮಾನತೆಯ ದೇಶ ಕಟ್ಟವುದಕ್ಕೆ ಭೂಮಿ ಮತ್ತು ಮೀಸಲಾತಿ ಇವರೆಡು ಬಹುಮುಖ್ಯವಾದದ್ದು.

ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಗಳಿಗೆ ಸಂವಿಧಾನದತ್ತವಾಗಿ ಬಂದಿರುವ ಮೀಸಲಾತಿಯ ಶೇ. 15 ರಲ್ಲಿ ಮಾದಿಗ ಸಮುದಾಯಕ್ಕೆ ಸಿಗಬೇಕಾದ ಪ್ರಮಾಣ ಶೇ.8.ರಷ್ಟು. ಆದರೆ ಇದುವರೆಗೆ ದಕ್ಕಿರುವುದು ಕೇವಲ ಶೇ.2ರಷ್ಟು ಮಾತ್ರ ಎಂಬುದು ಮಾದಿಗರ ಅರೋಪವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾದ ನಮಗೆ ನ್ಯಾಯಯುತ ಮೀಸಲಾತಿ ದೊರೆತಿಲ್ಲವೆಂಬ ಅತೃಪ್ತಿಯಿದೆ. ನಮ್ಮ ಹೆಸರಿನಲ್ಲಿ ಬಲಿಷ್ಟ ದಲಿತ ಜಾತಿಯವರು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆಂದು ಆರೋಪಿಸುತ್ತ ತಮಗೆ ಆದ ಈ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇನ್ನೊಬ್ಬರ ಪಾಲು ನಮಗೆ ಬೇಡ. ನಮ್ಮ ಪಾಲಿನ ಹಕ್ಕನ್ನು ನಮಗೆ ಕೊಡಿಯೆಂದು ಒಳಮೀಸಲಾತಿಗಾಗಿ ಮಾದಿಗರು ರಾಜ್ಯದಲ್ಲಿ 1996 ರಿಂದ ಹೋರಾಟ ನಡೆಸಿದ್ದಾರೆ.

ಸರಕಾರ ರಚಿಸಿದ್ದ ಸದಾಶಿವ ಅಯೋಗವು 2012ರಲ್ಲಿ ವರದಿ ಸಲ್ಲಿಸದಾಗಿನಿಂದ ಅದರ ಪರ ಮತ್ತು ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ. ಇದು ಒಡೆದು ಆಳುವ ನೀತಿಯಲ್ಲ. ಇದು ಹಂಚಿ ತಿನ್ನುವ ಮಾನವತವಾದ. ಒಳಮೀಸಲಾತಿಯನ್ನು ವಿರೋಧಿಸುವುದೆಂದರೆ ಮೀಸಲಾತಿಯನ್ನು ಮತ್ತು ಸಮಪಾಲು – ಸಮಬಾಳು ತತ್ವವನ್ನು ವಿರೋಧಿಸುವುದಕ್ಕೆ ಸಮನಾದದ್ದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡುವ ಅಪಾಚಾರ ಸಹ ಹೌದು.

ಪರಿಶಿಷ್ಟ ಜಾತಿಯಲ್ಲಿರುವ ಮೀಸಲಾತಿಯನ್ನು ವಿಭಜಿಸಿದರೆ ದಲಿತರ ಒಗ್ಗಟ್ಟು ಹಾಳುಗುತ್ತಿದೆ ಎಂಬುದು ಸುಳ್ಳು. ಸಾಮಾಜಿಕ ನ್ಯಾಯಕ್ಕೆ ಭಂಗ ತರುವವರು ಇಂತಹ ಆರೋಪವನ್ನು ಮಾಡುತ್ತಾರೆ. ಸ್ವಾರ್ಥ ಮತ್ತು ಕೆಲವರು ತಮ್ಮ ಅನೂಕೂಲಕ್ಕೆ ತಕ್ಕ ಹಾಗೆ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆರ್ಥೈಸಿಕೊಳ್ಳುತ್ತಿದ್ದಾರೆ. ಅದ್ದರಿಂದ ಸದಾಶಿವ ಅಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡುಗಡೆ ಮಾಡಬೇಕು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ಡಾ.ಬಿ.ಆರ್.ಅಂಬೇಡ್ಕರ್ ಅವರ ಅಶಯವು ಭಾರತದಲ್ಲಿ ಜನಸಂಖ್ಯೆಯಾಧಾರಿತ ಮೀಸಲಾತಿ ಹಂಚಿಕೆಯಾಗಬೇಕೆನ್ನುವುದು ವಾದವಾಗಿತ್ತು. ದಲಿತರು ಒಳ ಮೀಸಲಾತಿಯನ್ನು ಪಡೆದರೂ ವಿಘಟನೆಗೊಳ್ಳದೆ, ಈ ದೇಶದಲ್ಲಿ ಜಾತಿವ್ಯವಸ್ಥೆ, ಆಸ್ಪೃಶ್ಯತೆ ಇರುವವರೆಗೂ ಅವುಗಳ ವಿರುದ್ಧ ಮತ್ತು ಖಾಸಗಿ ವಲಯದಲ್ಲೂ ಮೀಸಲಾತಿಗಾಗಿ ಹೋರಾಟ ಮಾಡಬೇಕು. ಅದನ್ನು ಬಳಿಸಿಕೊಂಡು ಜಾತಿ ವಿನಾಶಮಾಡದೇ ಹೋದರೆ ಉಳಿಗಾಲವಿಲ್ಲ. ಜಾತಿ ಜಾತಿಗಳ ನಡುವಿನ ಸಮಾನತೆಯು ಜಾತಿಯನ್ನು ನಾಶಮಾಡುತ್ತದೆ ಎನ್ನುವುದನ್ನು ದಲಿತರು ಅರ್ಥಮಾಡಿಕೋಳ್ಳಬೇಕು.

ಇವತ್ತಿನವರೆಗೆ ದಲಿತರ ಮಿಸಲಾತಿಯನ್ನು ಹೊಲೆಯರು, ಮಾದಿಗರು, ಲಂಬಾಣಿಗಳು ಮತ್ತು ಭೋವಿಗಳು – ಈ ನಾಲ್ಕು ಜಾತಿಗಳ ಮಾತ್ರ ಹೆಚ್ಚು ಪಡೆದಿವೆ. ಪರಿಶಿಷ್ಟರಲ್ಲಿನ ಸುಡುಗಾಡು ಸಿದ್ದರು ಸೇರಿದಂತೆ ಆನೇಕ ಸಣ್ಣ ಸಣ್ಣ ದಲಿತ ಜಾತಿಗಳು ಈವರೆಗೂ ಶೇ.1 ರಷ್ಟು ಸಹ ಮೀಸಲಾತಿ ಸೌಲಭ್ಯ ಪಡೆದಿಲ್ಲ. ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟರಲ್ಲಿ ಇರುವ 101 ಜಾತಿಗಳಿಗೆ ಈಗಿರುವ ಶೇ.15 ಮೀಸಲಾತಿಯನ್ನು ಸದಾಶಿವ ಆಯೋಗ ವಿಭಜಿಸಿಕೊಟ್ಟಿದೆ ಎನ್ನಲಾಗುತ್ತಿದೆ. ಇದರ ಪ್ರಕಾರ ಹಂಚಿಕೆ ಮಾಡಬೇಕು. ಇದು ಹಲವು ಸಣ್ಣ ಪರಿಶಿಷ್ಟ ಜಾತಿಗಳಿಗೆ ನೆರವಾಗಲಿದೆ. ಇದನ್ನು ಒಳಮೀಸಲಾತಿ ಎನ್ನಿ, ಮೀಸಲಾತಿ ಪುನರ್ ವಿಂಗಡನೆ ಎನ್ನಿ, ಮೀಸಲಾತಿ ಗುಂಪುಗಳು ಎನ್ನಿ, ಏನು ಬೇಕಾದರೂ ಹೇಳಿ, ಅದು ಸಂವಿಧಾನದ ಯಾವುದೇ ವಿಧಿಗಳ ಉಲ್ಲಂಘನೆಯಾಗುವುದಿಲ್ಲ.

ದಲಿತರಲ್ಲಿನ ಸ್ಪೃಶ್ಯ ಜಾತಿಗಳು ಅಸ್ಪೃಶ್ಯ ಸಮುದಾಯವನ್ನು ಸಹೋದರಂತೆ ಕಾಣಬೇಕು. ಮೀಸಲಾತಿ ಮತ್ತು ಒಳಮೀಸಲಾತಿ ಇದು ಒಂದು ಸಾಮಾಜಿಕ ನ್ಯಾಯ. ಸ್ಪೃಶ್ಯ ಜಾತಿಯವರು ಮತ್ತು ಸಾರ್ವಜನಿಕರು ಇದನ್ನು ಬೆಂಬಲಿಸಿ ಜಾರಿಗೆಗೋಳಿಸಲು ಸರಕಾರಕ್ಕೆ ಒತ್ತಾಯಿಸಬೇಕು.

ಮೀಸಲಾತಿ ಅಸಮರ್ಪಕ ವಿತರಣೆ, ಅಸಮಾನ ಹಂಚಿಕೆಯಿಂದ ದಲಿತ ಜಾತಿಗಳಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಯಾಗಿ ಸಂಬಂಧಗಳು ಕಳೆಯುತ್ತಿವೆ. ಆದ್ದರಿಂದ ಒಳಮೀಸಲಾತಿ ಕುರಿತು ದಲಿತರು ಒಟ್ಟಿಗೆ ಕುಳಿತು ಚರ್ಚಿಸಿಬೇಕು. ಇದನ್ನು ಲಾಭ- ನಷ್ಟದ ದೃಷ್ಟಿಯಿಂದ ಪರಿಗಣಿಸದೇ, ತಾಂತ್ರಿಕ ಕಾರಣಗಳಿಂದ ನೋಡದೇ ನ್ಯಾಯ, ಮಾನವೀಯ ಕಲ್ಪನೆಗಳಿಂದ ವಿಚಾರ ಮಾಡಬೇಕು. ಅದರ ಸಾಮಾಜಿಕ ಅರ್ಥಿಕ ಸಮಸ್ಯೆಗಳನ್ನು ಚರ್ಚಿಸಿ ಅನುಷ್ಟಾನಕ್ಕೆ ಒತ್ತಾಯಿಸಬೇಕು. ದಲಿತರಿಂದಲೇ ದಲಿತರಿಗೆ ಶೋಷಣೆಯಾಗಬಾರದು ಎಂದರೆ ಕೂಡಲೆ ಒಳಮೀಸಲಾತಿ ಜಾರಿಗೆ ತರಬೇಕು. ಮೀಸಲಾತಿ ವರ್ಗೀಕರಣ ಮಾಡಿದರೆ ದಲಿತರ ನಡುವೆ, ಜಾತಿ – ಜಾತಿಗಳ ನಡುವೆ ಸಮಾನತೆ, ಸೌಹರ್ದತೆ, ಜಾತ್ಯತೀತತೆ ಮತ್ತು ಸ್ನೇಹ ಬೆಳೆಯುತ್ತದೆ. ಸ್ಪೃಶ್ಯ ಜಾತಿಗಳು ಪಟ್ಟಭದ್ರ ಹಿತಶಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸಬೇಕು.

  • ಡಾ.ನರಸಿಂಹ ಗುಂಜಹಳ್ಳಿ

ರಾಯಚೂರು ತಾಲೂಕಿನ ಗುಂಜಳ್ಳಿಯ ನರಸಿಂಹ ಅವರು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಸಾಮಾಜಿಕ ಚಳುವಳಿಯಲ್ಲಿ ಸಕ್ರಿಯರು. ಬಿಎಂಟಿಸಿ ಕಂಡಕ್ಟರ್ ಆಗಿದ್ದುಕೊಂಡು ಪಿಎಚ್‌ಡಿ ಸಂಶೋಧನೆ ನಡೆಸಿ, ಪದವಿ ಪಡೆದುಕೊಂಡರು. ಇದೀಗ ಕೊಪ್ಪಳದ ಕಾಲೇಜಿನಲ್ಲಿ ಅಧ್ಯಾಪಕರು


ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...