Homeಮುಖಪುಟಸದಾಶಿವ ಆಯೋಗದ ವರದಿಗೆ ವಿರೋಧ: ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ನಡೆಗೆ ತೀವ್ರ ಖಂಡನೆ

ಸದಾಶಿವ ಆಯೋಗದ ವರದಿಗೆ ವಿರೋಧ: ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ನಡೆಗೆ ತೀವ್ರ ಖಂಡನೆ

ಕರ್ನಾಟಕದಲ್ಲಿ ದಸಂಸದಲ್ಲಿರುವ ಮುಂಚೂಣಿ ನಾಯಕರೂ ಕೂಡ ಹೊಲೆಯರೇ ಆಗಿದ್ದು, ಅವರೆಲ್ಲರೂ ಒಳ ಮೀಸಲಾತಿ ಮತ್ತು ಸದಾಶಿವ ಆಯೋಗದ ಪರವಾಗಿದ್ದಾರೆ - ಹುಲಿಕುಂಟೆ ಮೂರ್ತಿ

- Advertisement -
- Advertisement -

ಒಳ ಮೀಸಲಾತಿಗೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳ ನಡುವೆ, ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿಯನ್ನು ರದ್ದುಪಡಿಸುವಂತೆ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿರುವ ಛಲವಾದಿ ಸಂಘವು, “ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ಸದಾಶಿವ ಆಯೋಗದ ವರದಿಯು ಅವೈಜ್ಞಾನಿಕವಾಗಿದ್ದು, ತಕ್ಷಣವೇ ರದ್ದುಪಡಿಸಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

“ನಮ್ಮ ಜನಾಂಗದವರನ್ನು ಆದಿ ಕರ್ನಾಟಕ, ಆದಿ ದ್ರಾವಿಡ, ಹೊಲೆಯ, ಬಲಗೈ, ಛಲವಾದಿ, ತಳವಾರ ಮತ್ತು ಮಾದರ ಎಂಬ ಹೆಸರುಗಳಿಂದ ಕರೆಯಲಾಗುತ್ತದೆ. ಆದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾದಿಗ ಜನಾಂಗದವರು ಸಹ ಆದಿ ಕರ್ನಾಟಕ, ಆದಿ ದ್ರಾವಿಡ, ಮಾದರ ಎಂಬ ಹೆಸರುಗಳಿಂದ ಕರೆಯಲ್ಪಡುತ್ತಿದ್ದು, ಜಾತಿ ಪ್ರಮಾಣಪತ್ರವನ್ನೂ ಪಡೆಯುತ್ತಿದ್ದಾರೆ. ಒಟ್ಟು 16 ಜಿಲ್ಲೆಗಳಲ್ಲಿ ಚಲವಾದಿ ಮತ್ತು ಮಾದಿಗ ಜನಾಂಗದವರನ್ನು ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಸದಾಶಿವ ಆಯೋಗವು ಎರಡೂ ಜಾತಿಗಳನ್ನು ಮಾದಿಗ ಸಮುದಾಯ ಎಂದು ನಮೂದಿಸಿದೆ. ವಾಸ್ತವದಲ್ಲಿ ಮೈಸೂರು ಪ್ರಾಂತ್ಯದಲ್ಲಿ ಸುಮಾರು 30 ಲಕ್ಷ ಮಂದಿ ಆದಿ ಕರ್ನಾಟಕದವರಿದ್ದಾರೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ 15 ಲಕ್ಷವಿದ್ದು, ರಾಜ್ಯದಲ್ಲಿ 45 ಲಕ್ಷ ಮಂದಿ ಛಲವಾದಿ ಜನಾಂಗದವರಿದ್ದಾರೆ. ಈ ಗೊಂದಲವನ್ನು ಆಯೋಗವು ಸರಿಪಡಿಸಿಲ್ಲ. ಹಾಗಾಗಿ ದ್ವಿಸದಸ್ಯ ಆಯೋಗವನ್ನು ನೇಮಕ ಮಾಡಿ, ಪರಿಶಿಷ್ಟ ಜಾತಿ ಛಲವಾದಿ(ಬಲಗೈ) ಜನಾಂಗದ ಸಮೀಕ್ಷೆ ನಡೆಸುವ ಮೂಲಕ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು” ಎಂದು ಒತ್ತಾಯಿಸಿದೆ.

ಇದರ ಕುರಿತು ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿದ ಒಳಮೀಸಲಾತಿಗಾಗಿ ಮೊದಲಿನಿಂದಲೂ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಡಾ.ಪೂರ್ಣಾನಂದ, “ಹಳೆ ಮೈಸೂರು ಪ್ರಾಂತದಲ್ಲಿ ಆದಿ ದ್ರಾವಿಡ ಎಂದರೆ, ಮಾದಿಗರು, ಆದಿ ಕರ್ನಾಟಕ ಎಂದರೆ, ಹೊಲೆಯರು ಎಂದು ಅರ್ಥ. ಇದು ಗೊಂದಲ ಇರುವುದು ನಿಜ. ಆದರೆ ಸದಾಶಿವ ಆಯೋಗದಲ್ಲಿ ಈ ಗೊಂದಲವಿಲ್ಲ. ವರದಿಯಲ್ಲಿ ನೇರವಾಗಿ ಹೊಲೆಯ, ಮಾದಿಗ ಎಂದು ನಮೂದಿಸಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

“ಸದಾಶಿವ ಆಯೊಗವನ್ನು ರದ್ದು ಮಾಡಿ ಎಂದು ಹೇಳುತ್ತಿರುವವರು ನಿಜವಾಗಿಯೂ ಆಘುಂತಕರು. ಪ್ರಬಲರಾಗಿರುವವರು ತಮಗೆ ಸಿಗುತ್ತಿರುವ ಸೌಲಭ್ಯಗಳನ್ನು ಹಂಚಿಕೊಳ್ಳಲು ಮನಸ್ಸು ಮಾಡುತ್ತಿಲ್ಲ. ಈ ಮೂಲಕವಾದರೂ ಇನ್ನೊಂದಷ್ಟು ವರ್ಷ ಈ ಒಳ ಮೀಸಲಾತಿ ಪ್ರಕ್ರಿಯೆ ಮುಂದೆ ಹೋಗಲಿ ಎಂಬುದು ಅವರ ಆಶಯವಾಗಿದೆ. ಈಗಾಗಲೇ ಮಾದಿಗರು ಕಳೆದ 25 ವರ್ಷಗಳಿಂದ ಯಾವುದೇ ಸೌಲಭ್ಯಗಳು ಸಿಗದೇ ವಂಚಿತರಾಗಿದ್ದಾರೆ. ಕಳೆದ 10-15 ವರ್ಷಗಳಲ್ಲಿ ಮೀಸಲಾತಿ ಅಡಿಯಲ್ಲಿ ಸರ್ಕಾರಿ ಕೆಲಸ ತೆಗೆದುಕೊಂಡಿರುವವರ ಪಟ್ಟಿಯನ್ನು ಗಮನಿಸಿದಾಗ ಮಾದಿಗರ ಸಂಖ್ಯೆ ತೀರಾ ಕಡಿಮೆಯಿದೆ. ಹಾಗಾಗಿ, ಇವರಿಗೆ ನ್ಯಾಯ ಸಿಗಬೇಕು ಎನ್ನುವುದಾದರೆ, ಸದಾಶಿವ ಆಯೋಗವನ್ನು ಜಾರಿಗೊಳಿಸಿ, ಒಳ ಮೀಸಲಾತಿಯನ್ನು ಜಾರಿಗೆ ತರಬೇಕು. ಇದು ನಡೆದರೆ ಎಡಗೈ ಮತ್ತು ಬಲಗೈ ಇಬ್ಬರಿಗೂ ಸಮಾನ ಅವಕಾಶಗಳು ಸಿಗುತ್ತದೆ. ಇದರ ಜೊತೆಗೆ ಈಗಾಗಲೆ ನಡೆದಿರುವ ಜಾತಿಗಣತಿಯ ವರದಿಯನ್ನು ಬಿಡುಗಡೆ ಮಾಡಿದರೆ ಈ ಗೊಂದಲಗಳೂ ಪರಿಹಾರವಾಗುತ್ತದೆ. ಆದರೆ ಈ ಸಮಾನ ಅವಕಾಶಗಳನ್ನು ಹಂಚಿಕೊಳ್ಳಲು ಪ್ರಬಲರು ಇಚ್ಚಿಸುತ್ತಿಲ್ಲ. ಹಾಗಾಗಿಯೇ ಹೀಗೆ ಆಯೋಗದ ವರದಿಯನ್ನು ರದ್ದುಗೊಳಿಸಿ ಎಂದು ಹೇಳುತ್ತಿದ್ದಾರೆ” ಎಂದು ಹೇಳಿದರು.

“ಪ್ರತಿಯೊಂದು ಮೀಸಲಾತಿ ವರ್ಗದಲ್ಲಿಯೂ (ಇತರೆ ಹಿಂದುಳಿದ ವರ್ಗಗಳು ಸೇರಿದಂತೆ) ಈ ಒಳ ಮೀಸಲಾತಿ ಜಾರಿಗೆ ಬರಬೇಕು. ಇಲ್ಲವಾದರೆ ಕೇವಲ ಮುಂಚೂಣಿಯಲ್ಲಿರುವ 2-3 ಜಾತಿಗಳು ಮಾತ್ರ ಸೌಲಭ್ಯ ಪಡೆದುಕೊಂಡು ಮುಂದುವರಿಯುತ್ತವೆ. ಉದಾ: 2ಎ ವರ್ಗದಲ್ಲಿ ಹತ್ತಾರು ಜಾತಿಗಳಿವೆ. ಆದರೆ ಕೇವಲ ಕುರುಬರು ಮಾತ್ರ ಬಹುತೇಕ ಮೀಸಲಾಗಿ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಉಳಿದ ಜಾತಿಗಳಿಗೆ ಅನ್ಯಾಯ ಆಗುತ್ತಿದೆ. ಈ ಕಾರಣದಿಂದಲೆ ಒಳ ಮೀಸಲಾತಿ ಎಲ್ಲಾ ವರ್ಗಗಳಲ್ಲಿಯೂ ಜಾರಿಯಾಗಬೇಕು ಎನ್ನುವುದು ನನ್ನ ಆಶಯ” ಎಂದು ವಿವರಿಸಿದರು.

ಇದನ್ನೂ ಓದಿ: ಒಳಮೀಸಲಾತಿಯು ಒಳಗೇ ಕುಯ್ಯದಂತಿರಲು…….

ಹುಲಿಕುಂಟೆ ಮೂರ್ತಿಯವರು ಮಾತನಾಡಿ, “ಇದು ಸಮುದಾಯಗಳ ಬಗ್ಗೆ ಅವರಿಗಿರುವ ಅಜ್ಞಾನವನ್ನು ಎತ್ತಿತೋರಿಸುತ್ತದೆ. ಜೊತೆಗೆ ಮೀಸಲಾತಿಯ ಪರಿಕಲ್ಪನೆ ಮತ್ತು ಒಳ ಮೀಸಲಾತಿಯ ಪರಿಕಲ್ಪನೆಯನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂಬುದು ತಿಳಿದುಬರುತ್ತದೆ. ಯಾವುದೇ ಒಂದು ಸಮುದಾಯ ತನಗಾಗುತ್ತಿರುವ ಅನ್ಯಾಯದ ವಿರುದ್ಧ ದನಿಯೆತ್ತುತ್ತಿದೆ ಎಂದಾಗ, ಅದಕ್ಕೆ ಸಹಕರಿಸುವ ಗುಣ ಇರಬೇಕು. ಇಲ್ಲವಾದರೆ ಇಂತಹ ಅಭಿಪ್ರಾಯಗಳು ಸಮುದಾಯಗಳ ಒಳಗೆ ಬಿರುಕನ್ನುಂಟುಮಾಡುತ್ತದೆ. ಇದರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ನಿಶ್ಚಿತ” ಎಂದು ಹೇಳಿದರು.

“ಬೇಕಿದ್ದರೆ ಸದಾಶಿವ ಆಯೋಗದ ವರದಿಯನ್ನು ಚರ್ಚೆಗೆ ಒಳಪಡಿಸಿ ಎಂದು ಕೇಳಲಿ. ಆದರೆ ಇವರು ಹೇಳುತ್ತಿರುವಂತೆ ಏಕಾಏಕಿ ಆಯೋಗದ ವರದಿಯನ್ನು ರದ್ದುಪಡಿಸಿ ಎಂದು ಹೇಳುವುದು ಸರಿಯಲ್ಲ. ನಿಜವಾಗಿ ಹೇಳಬೇಕೆಂದರೆ, ಈ ಛಲವಾದಿ ಕ್ಷೇಮಾಭಿವೃದ್ಧಿ ಸಂಘ ಹೊಲೆಯರ ಪ್ರತಿನಿಧಿಯ ಸಂಘವೇ ಅಲ್ಲ. ಏಕೆಂದರೆ ತುಂಬಾ ಜನ ಹೊಲೆಯರು ತಾವು ಛಲವಾದಿಗಳು ಎಂದು ಕರೆದುಕೊಳ್ಳುವುದಿಲ್ಲ. ಕರ್ನಾಟಕದಲ್ಲಿ ದಸಂಸದಲ್ಲಿರುವ ಮುಂಚೂಣಿ ನಾಯಕರೂ ಕೂಡ ಹೊಲೆಯರೇ ಆಗಿದ್ದು, ಅವರೆಲ್ಲರೂ ಒಳ ಮೀಸಲಾತಿ ಮತ್ತು ಸದಾಶಿವ ಆಯೋಗದ ಪರವಾಗಿದ್ದಾರೆ. ಹಾಗಾಗಿ ಖಂಡಿತ ಇದನ್ನು ನಾನು ವಿರೋಧಿಸುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ತಿಳಿಯುವ ಮೊದಲೇ, ಇವರು ಈ ವರದಿಯನ್ನು ವಿರೋಧಿಸುತ್ತಿರುವುದಕ್ಕೆ ಪ್ರಮುಖ ಕಾರಣ, ಇದರ ಕುರಿತು ಹಬ್ಬಿಸಿರುವ ‘ಹೊಲೆಯ ಮತ್ತು ಲಂಬಾಣಿಗಳಿಗೆ ಅನ್ಯಾಯವಾಗುತ್ತದೆ ಎನ್ನುವ ತಪ್ಪುಕಲ್ಪನೆ ಮತ್ತು ಪೂರ್ವಗ್ರಹವಾಗಿದೆ. ಜೊತೆಗೆ ಇದರ ಹಿಂದೆ ಕೋಮುವಾದಿಗಳ ಒಡೆದು ಆಳುವ ರಾಜಕೀಯ ದುರುದ್ದೇಶವಂತೂ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ” ಎಂದು ಹೇಳಿದರು.


ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...