Homeಮುಖಪುಟಮಥುರಾ: ಶ್ರೀಕೃಷ್ಣಾ ದೇವಾಲಯದ ಬಳಿಯ ಈದ್ಗಾ ಮಸೀದಿ ತೆರವಿಗೆ ಮೊಕದ್ದಮೆ ದಾಖಲು

ಮಥುರಾ: ಶ್ರೀಕೃಷ್ಣಾ ದೇವಾಲಯದ ಬಳಿಯ ಈದ್ಗಾ ಮಸೀದಿ ತೆರವಿಗೆ ಮೊಕದ್ದಮೆ ದಾಖಲು

ಶ್ರೀಕೃಷ್ಣನ ಜನ್ಮಸ್ಥಳವು ಟ್ರಸ್ಟ್ ರಚಿಸಿದ ಮಸೀದಿಯ ಕೆಳಗೆ ಇದೆ ಎಂದು ಮೊಕದ್ದಮೆ ಆರೋಪಿಸಿದೆ

- Advertisement -
- Advertisement -

ಮಥುರಾದ ಶ್ರೀ ಕೃಷ್ಣ ದೇವಾಲಯ ಸಂಕೀರ್ಣದ ಪಕ್ಕದಲ್ಲಿರುವ ಶಾಹಿ ಈದ್ಗಾವನ್ನು ತೆಗೆದುಹಾಕುವಂತೆ ಕೋರಿ ಮಥುರಾ ನ್ಯಾಯಾಲಯದ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರ ಮುಂದೆ ಸಿವಿಲ್ ಮೊಕದ್ದಮೆ ಹೂಡಲಾಗಿದೆ.

ಉತ್ತರ ಪ್ರದೇಶದ ಲಕ್ನೋ ನಿವಾಸಿ ರಂಜನಾ ಅಗ್ನಿಹೋತ್ರಿ ಎಂಬವರು ಮೊಕದ್ದಮೆ ಹೂಡಿದ್ದು, ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಮತ್ತು ಶಾಹಿ ಈದ್ಗಾ ಟ್ರಸ್ಟ್‌ನ ನಿರ್ವಹಣಾ ಸಮಿತಿಯನ್ನು ಮೊಕದ್ದಮೆಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಮೊಕದ್ದಮೆಯು ದೇವಾಲಯದ ವ್ಯಾಪ್ತಿಯಲ್ಲಿರುವ 13.37 ಎಕರೆ ಭೂಮಿಯನ್ನು ಪಡೆಯಲು ಪ್ರಯತ್ನಿಸುತ್ತದೆ.

ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ಕೆಲವು ಮುಸ್ಲಿಮರ ಸಹಾಯದಿಂದ ಈದ್ಗಾ ಟ್ರಸ್ಟ್ ಶ್ರೀ ಕೃಷ್ಣ ಜನಂಸ್ಥಾನ್ ಟ್ರಸ್ಟ್ ಮತ್ತು ದೇವತೆಗೆ ಸೇರಿದ ಭೂಮಿಯನ್ನು ಅತಿಕ್ರಮಣ ಮಾಡಿ ಈದ್ಗಾ ಮಸೀದಿ ನಿರ್ಮಿಸಿದೆ ಎಂದು ಮೊಕದ್ದಮೆಯಲ್ಲಿ ದೂರಲಾಗಿದೆ.

ಶ್ರೀಕೃಷ್ಣನ ಜನ್ಮಸ್ಥಳವು ಟ್ರಸ್ಟ್ ರಚಿಸಿದ ಮಸೀದಿಯ ಕೆಳಗೆ ಇದೆ ಎಂದು ಮೊಕದ್ದಮೆ ಆರೋಪಿಸಿದೆ.

ಅಲ್ಲದೆ ದೇವಾಲಯ ಆಡಳಿತ ಮಂಡಳಿಯಾಗಿರುವ ಶ್ರೀ ಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ಆಸ್ತಿಯನ್ನು ಕಸಿದುಕೊಳ್ಳುವ ಉದ್ದೇಶದಿಂದ ಶಾಹಿ ಈದ್ಗಾ ಟ್ರಸ್ಟ್‌ನೊಂದಿಗೆ ಅಕ್ರಮ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಲಾಗಿದೆ.

“ಶ್ರೀ ಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ದೇವತೆ ಮತ್ತು ಭಕ್ತರ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು 1968 ರಲ್ಲಿ ಟ್ರಸ್ಟ್ ಮಸ್ಜಿದ್ ಈದ್ಗಾ (ಟ್ರಸ್ಟ್) ದ ನಿರ್ವಹಣಾ ಸಮಿತಿಯೊಂದಿಗೆ ಮೋಸದಿಂದ ರಾಜಿ ಮಾಡಿಕೊಂಡಿದೆ” ಮೊಕದ್ದಮೆ ಹೇಳಿದೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ… : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

ಜುಲೈ 20, 1973 ರಂದು ಮಥುರ ಸಿವಿಲ್ ನ್ಯಾಯಾಧೀಶರು ತೀರ್ಪು ನೀಡಿದ್ದ, “ಕೃಷ್ಣ ಜನ್ಮಸ್ಥಾನ್ ಸೇವಾ ಸಂಸ್ಥಾನ ಮತ್ತು ಟ್ರಸ್ಟ್ ನಡುವಿನ ರಾಜಿ” ಯ ಬಗೆಗಿನ ತೀರ್ಪನ್ನು ರದ್ದುಗೊಳಿಸಬೇಕೆಂದು ಮೊಕದ್ದಮೆಯಲ್ಲಿ ವಿನಂತಿಸಲಾಗಿದೆ.

ಅದಾಗ್ಯೂ 1991 ರಲ್ಲಿ ಅಂಗೀಕರಿಸಲ್ಪಟ್ಟ Places of Worship (Special Provisions Act) ಪ್ರಕಾರ, ಅಯೋಧ್ಯೆಯಲ್ಲಿನ ವಿವಾದಿತ ಸ್ಥಳವನ್ನು ಹೊರತುಪಡಿಸಿ ದೇಶಕ್ಕೆ ಸ್ವಾತಂತ್ರ್ಯ ಸಿಗುವ ಸಮಯದಲ್ಲಿ ಅಸ್ತಿತ್ವದಲ್ಲಿದ್ದಂತೆ ಎಲ್ಲಾ ಧಾರ್ಮಿಕ ರಚನೆಗಳನ್ನು ರಕ್ಷಿಸಬೇಕು ಎಂದು ಹೇಳುತ್ತದೆ.

ಹೀಗಾಗಿ, ಮಸೀದಿಗಳನ್ನು ದೇವಾಲಯಗಳಾಗಿ ಪರಿವರ್ತಿಸುವುದು ಅಥವಾ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸುವುದು ಕಾಯಿದೆಯು ನಿರ್ಬಂಧಿಸಿದೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...