Homeಮುಖಪುಟಒಳಮೀಸಲು ರಾಜಕೀಯ ಆಡುಂಬೊಲವಾಗದಿರಲಿ - ಎನ್. ರವಿಕುಮಾರ್

ಒಳಮೀಸಲು ರಾಜಕೀಯ ಆಡುಂಬೊಲವಾಗದಿರಲಿ – ಎನ್. ರವಿಕುಮಾರ್

- Advertisement -
- Advertisement -

ಒಳಮೀಸಲಾತಿಯನ್ನು ಕೇವಲ ಒಂದು ಸವಲತ್ತಿನ ಕಾರ್ಯಸೂಚಿಯಾಗಿ ನೋಡದೆ ಸಾಮಾಜಿಕ ಆಯಾಮಗಳಿಂದಲೂ ಅವಲೋಕಿಸಿ ನೋಡಿದಾಗ ಅಸ್ಪೃಶ್ಯ ಬದುಕಿನ ಸತ್ಯ ದರ್ಶನವಾಗುತ್ತದೆ. ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ಪೃಶ್ಯ-ಅಸ್ಪೃಶ್ಯ ಸ್ತರಗಳನ್ನು ಮೊದಲು ಮನಗಾಣಬೇಕು. ಹೊಲೆ-ಮಾದಿಗರು ಹೊರಗಿಟ್ಟ ಸಮುದಾಯವಾಗಿಯೇ ಬದುಕುತ್ತಿರುವ ಕಾಲ ಇನ್ನೂ ಜೀವಂತವಾಗಿದೆ. ಪರಿಶಿಷ್ಟ ಜಾತಿಯಲ್ಲಿನ ಬಹುತೇಕ ಬಲಾಢ್ಯ ಸ್ಪೃಶ್ಯಜಾತಿಗಳು ಮಾದಿಗರನ್ನು ಹೊಸ್ತಿಲ ಒಳಗೂ ಬಿಟ್ಟುಕೊಳ್ಳದೆ, ತಮ್ಮ ಹೊಲ, ಗದ್ದೆಗಳ ಜೀತಕ್ಕೂ ಇಟ್ಟುಕೊಂಡ ಪ್ರಕರಣಗಳು ಇವೆ. ಮಾದಿಗ ಸಮುದಾಯ ನಾಗರಿಕ ಸಮಾಜದ ಹೇಲು-ಉಚ್ಚೆ ಬಾಚಿ ಬಳಿಯುವ ದಾರುಣ ಬದುಕಿನಿಂದ ಮತ್ತು ಈ ಕಾಲಕ್ಕೂ ಪುಟ್‍ಬಾತ್‍ನಲ್ಲಿ ಅಂಬೇಡ್ಕರ್, ಬಾಬು ಜಗಜೀವನ ರಾಂ ಹೆಸರಿನಲ್ಲಿ ಪೆಟ್ಟಿಗೆಗಳನ್ನಿಟ್ಟುಕೊಂಡು ಚಪ್ಪಲಿ ಹೊಲಿಯುವ ಕಸುಬಿನಿಂದ ಈಗಿನ ತಲೆಮಾರುಗಳು ಇನ್ನೂ ಮುಕ್ತಿಹೊಂದಿಲ್ಲ. ಪರಿಶಿಷ್ಟ ಜಾತಿಗಳಲ್ಲಿನ ಸ್ಪೃಶ್ಯ-ಅಸ್ಪೃಶ್ಯ ಜಾತಿಗಳಿಗೆ ಒಟ್ಟು ಮೀಸಲಾತಿ ಅನ್ವಯವಾಗಿರುವಾಗ ಈ ಇಬ್ಬರ ನಡುವೆ ಇಂತಹ ಅಮಾನುಷ ಅಂತರ ಏಕಿದೆ ಎಂಬುದನ್ನು ಒಳಮೀಸಲಾತಿ ವಿರೋಧಿಸುವ ಸಹೋದರರು ಯೋಚಿಸಬೇಕಾಗಿದೆ.

ಒಳಮೀಸಲಾತಿಯ ಕೂಗು ಇಂದು – ನೆನ್ನೆಯದಲ್ಲ. 1994-95 ರಲ್ಲಿ ಆಂಧ್ರದಲ್ಲಿ ಆರಂಭಗೊಂಡ ಒಳಮೀಸಲಾತಿಯ ಕೂಗಿನ ಹಿಂದೆ ಜನಸಂಖ್ಯೆ ಆಧರಿಸಿ ಬಹುಸಂಖ್ಯಾತರಾಗಿದ್ದ ಅಸ್ಪೃಶ್ಯ ಜಾತಿಗಳು ಮೀಸಲಾತಿಯ ಫಲವನ್ನು ದಕ್ಕಿಸಿಕೊಳ್ಳಲಾಗದ ನೋವು ಸ್ಫೋಟಗೊಂಡಿತು. ಆಂಧ್ರದಲ್ಲಿ ಭುಗಿಲೆದ್ದ ಹೋರಾಟದ ಪರಿಣಾಮ ಅಂದಿನ ಆಂಧ್ರ ಸರ್ಕಾರ ಜಸ್ಟೀಸ್ ರಾಮಚಂದ್ರ ರಾವ್ ಆಯೋಗವನ್ನು ರಚಿಸಿದ್ದು, ಆಯೋಗವು ಮಾದಿಗ ಮತ್ತು ಸಂಬಂಧಿತ ಅಸ್ಪೃಶ್ಯ ಜಾತಿಗಳಿಗೆ ಒಳಮೀಸಲಾತಿ ನೀಡುವ ಅಗತ್ಯತೆಯನ್ನು ಸ್ಪಷ್ಟವಾಗಿ ವೈಜ್ಞಾನಿಕ ಕೋನದಲ್ಲಿ ಮಂಡಿಸಿತು. ಸರ್ಕಾರ ಕೂಡ ಇದನ್ನು ಅನುಷ್ಠಾನಗೊಳಿಸಲು ಮುಂದಾದಾಗ ಆರ್ಥಿಕವಾಗಿ ಪ್ರಬಲವಾಗಿದ್ದ ಮಾಲ ಸಮುದಾಯವು ನ್ಯಾಯಾಲಯಕ್ಕೆ ಮೊರೆಹೋಗಿದ್ದರಿಂದ ಉದ್ದೇಶಿತ ಒಳಮೀಸಲಾತಿಗೆ ಹಿನ್ನಡೆಯಾಯಿತು.

ಆಂಧ್ರದ ಚಳವಳಿಯಿಂದ ಪ್ರೇರಣೆಗೊಂಡು ಕರ್ನಾಟಕದಲ್ಲೂ ಒಳಮೀಸಲಾತಿ ಹೋರಾಟ ಆರಂಭಗೊಂಡಿತು. ಅದರ ಪರಿಣಾಮದಿಂದ ರಚನೆಯಾದ ಜಸ್ಟಿಸ್ ಸದಾಶಿವ ಆಯೋಗದ ವರದಿಯಲ್ಲಿ ಜನಸಂಖ್ಯೆಗನುಗುಣವಾಗಿ ಮೀಸಲು ಹಂಚಿಕೆಯ ಮಾನದಂಡವೊಂದು ಪ್ರಸ್ತಾಪಿತವಾಗಿದೆ. ಒಟ್ಟು ಮೀಸಲು ಪ್ರಮಾಣ ಶೇ. 15ರಲ್ಲಿ – ಶೇ. 33.47 ರಷ್ಟಿರುವ ಮಾದಿಗ ಸಮುದಾಯಕ್ಕೆ ಶೇ. 6, ಶೇ. 32 ರಷ್ಟು ಪ್ರಮಾಣದ ಜನಸಂಖ್ಯೆ ಹೊಂದಿರುವ ಬಲಗೈ ಸಮುದಾಯಕ್ಕೆ ಶೇ. 5 ಉಳಿದ ಸ್ಪೃಶ್ಯ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 3 ಮತ್ತು ಇತರೆ ಜಾತಿಗಳಿಗೆ ಶೇ. 1 ರಷ್ಟು ಮೀಸಲಾತಿಯ ಹಂಚಿಕೆಯನ್ನು ಪ್ರತಿಪಾದಿಸಿದೆ. ಜನಸಂಖ್ಯೆ ಆಧರಿಸಿ ಮೀಸಲು ಪ್ರಮಾಣ ಹಂಚಿಕೆಯಾಗುವುದು ನ್ಯಾಯಸಮ್ಮತವೂ ಮತ್ತು ಹಕ್ಕು ಆಗಿರುವಾಗ ಇದನ್ನು ವಿರೋಧಿಸುವುದು ಸಾಮಾಜಿಕ ನ್ಯಾಯದ ಉಲ್ಲಂಘನೆಯೂ ಆಗುತ್ತದೆ. ಮೀಸಲಾತಿಯ ಬಗೆಗಿನ ವೈಜ್ಞಾನಿಕವಾದ ಮತ್ತು ಪ್ರಜಾತಾಂತ್ರಿಕವಾದ ನಿಲುವನ್ನು ಬಿತ್ತುವ ಮತ್ತು ಹೊಂದುವ ಅಗತ್ಯ ಎಲ್ಲಾ ಕಾಲಕ್ಕೂ ಇರತಕ್ಕದ್ದು. ಅದು ಒಳಮೀಸಲಾತಿಗೂ ವಿಸ್ತರಿಸಬೇಕು. ಈ ಮೂಲಕ ಹಂಚುಣ್ಣುವ ಮನೋಧರ್ಮವನ್ನು ಧರಿಸಲು ಸಾಧ್ಯ.

ಇದನ್ನೂ ಓದಿ: ಒಳಮೀಸಲಾತಿಯೆಂಬುದು ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರ – ಅಂಬಣ್ಣ ಅರೋಲಿಕರ್

ನೆನಗುದಿಗೆ ಬಿದ್ದಿದ್ದ ಜಸ್ಟಿಸ್ ಸದಾಶಿವ ಆಯೋಗಕ್ಕೆ 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪನವರು ಹಣಕಾಸು ನೀಡಿ ಚಾಲನೆ ನೀಡಿದರು. ಈಗ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿದ್ದಾರೆ. ವರದಿ ಮಂಡನೆಯಾಗಿ ಎಂಟು ವರ್ಷಗಳು ಕಳೆದಿವೆ. ಆದರೆ ಈ ವರದಿ ಕೇವಲ ರಾಜಕೀಯ ಕಾರಣಕ್ಕಾಗಿ ಬಳಕೆಯಾಗದೆ ಉದ್ದೇಶಿತ ನ್ಯಾಯವನ್ನು ಜಾರಿಗೊಳಿಸುವ ಬದ್ಧತೆಯನ್ನು ತೋರಬೇಕಿದೆ. ಇಲ್ಲಿ ಮೂಲಭೂತವಾದ ಪ್ರಶ್ನೆಯೆಂದರೆ, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನು ಒಪ್ಪುವುದು, ತಿರಸ್ಕರಿಸುವ ಹೊಣೆಗಾರಿಕೆ ಯಾರದ್ದು?!

ಈ ವರದಿಯ ಚರ್ಚೆ ಹಾದಿ – ಬೀದಿಯಲ್ಲಿ ನಡೆಯಬೇಕಾ? ಪರಿಶಿಷ್ಟ ಸಹೋದರರು ಪರ-ವಿರೋಧಗಳ ಹಗೆಗೆ ಬಿದ್ದು ಬೀದಿಗೆ ಬರಬೇಕಾ?

ಸುಪ್ರೀಂ ಕೋರ್ಟ್ ರಾಷ್ಟ್ರ ಮಟ್ಟದಲ್ಲೇ ಒಳಮೀಸಲಾತಿ ಕುರಿತಂತೆ ಸಕಾರಾತ್ಮಕವಾಗಿ ತನ್ನ ಅಭಿಪ್ರಾಯವನ್ನು ವ್ಯಕ್ತಿಪಡಿಸಿದೆ. ವಿಸ್ತೃತ ಪೀಠದ ಪರಿಶೀಲನೆಗೂ ಒಪ್ಪಿಸಿದೆ. ವಿಸ್ತೃತ ಸಂವಿಧಾನಿಕ ನ್ಯಾಯಪೀಠ ತನ್ನ ಅಂತಿಮ ತೀರ್ಪು ನೀಡುವವರೆಗೂ ಒಳಮೀಸಲು ವಂಚಿತ ಸಮುದಾಯಗಳು ರಾಜಕೀಯ ಪಕ್ಷಗಳ ಓಲೈಕೆಯ ಬಾಲಂಗೋಚಿಗಳಾಗಿ ಬದುಕುವಂತಾಗಬಹುದು. ಕೇಂದ್ರ ಸರ್ಕಾರ ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ10 ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ತನ್ನ ಪರಮ ಕರ್ತವ್ಯದಂತೆ ದಿನಬೆಳಗಾಗುವುದರೊಳಗೆ ಅನುಷ್ಠಾನಗೊಳಿಸಿರುವಾಗ ಒಳಮೀಸಲಾತಿ ವಿಚಾರದಲ್ಲಿ ಯಾಕೆ ನ್ಯಾಯಾಲಯದ ಕಡೆ ಬೆರಳು ತೋರಿ ಕುಳಿತಿರುವುದು?

ಪರಿಶಿಷ್ಟ ಜಾತಿಗಳಲ್ಲಿನ ಸಮುದಾಯಗಳ ನಡುವೆ ಪರ-ವಿರೋಧದ ಸಂಗತಿ ಎನ್ನುವುದಕ್ಕಿಂತ ಸರ್ಕಾರದ ಇಚ್ಛಾಶಕ್ತಿಯ ಪ್ರಶ್ನೆಯೂ ಅಡಗಿದೆ. ರಾಜ್ಯ ಸರ್ಕಾರವೇ ರಚಿಸಿದ ಸದಾಶಿವ ಆಯೋಗವು ಸ್ಪಷ್ಟವಾಗಿ ವರದಿಯನ್ನು ನೀಡಿರುವಾಗ ಸರ್ಕಾರ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಚರ್ಚೆಗೊಳಪಡಿಸಲಿ. ವಿಧಾನಮಂಡಲ ಸಾಂವಿಧಾನಿಕ ವೇದಿಕೆಯಾಗಿರುವಾಗ ಒಳಮೀಸಲಾತಿ ಫಲಿತಾಂಶವೂ ಅಲ್ಲೆ ಇತ್ಯರ್ಥವಾಗಬಾರದೇಕೆ? ಸಂಬಂಧಿತ ಜಾತಿಗಳ ನಡುವೆ ಕಲಹಕ್ಕೆ ಎಡೆಮಾಡುವಂತೆ ವರದಿಯನ್ನು ತೇಲಿಸಿಬಿಟ್ಟು ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಕೂರುವುದು ನಾಗರಿಕ ಸರ್ಕಾರದ ಹೊಣೆಗಾರಿಕೆಯಲ್ಲ. ಸದನದಲ್ಲಿ ವರದಿ ಮಂಡನೆಯಾಗಿ ಅದರಲ್ಲಿರಬಹುದಾದ ಭೂತ, ಹಾವು ಚೇಳುಗಳು ಹೊರಬರಲಿ. ಜೊತೆಗೆ ಹಲವರ ಬಣ್ಣಗಳೂ ಬಯಲಾಗಲಿ. ಒಳಮೀಸಲಾತಿ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಪ್ರಕಟಿಸುವ ಮೂಲಕ ಸಮಾಜದ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು.

ಒಳಮೀಸಲಾತಿಗೆ ಸಂಬಂಧಿಸಿದಂತೆ ಸದಾಶಿವ ಆಯೋಗದ ವರದಿ ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಹಾಗೂ ಇತ್ತೀಚೆಗಷ್ಟೆ ಜಸ್ಟಿಸ್ ನಾಗಮೋಹನ ದಾಸ್ ಆಯೋಗದ (ಮೀಸಲು ಪ್ರಮಾಣ ಹೆಚ್ಚಳ) ವರದಿಯೂ ಸರ್ಕಾರದ ಮುಂದೆ ಇವೆ. ಈ ಮೂರು ಆಯೋಗದ ವರದಿಗಳಲ್ಲಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹಂಚುವ ಸಮಾನ ನ್ಯಾಯ ಪ್ರತಿಪಾದನೆಯಾಗಿರುವುದು ಮಹತ್ವದ ಸಂಗತಿ. ಒಳಮೀಸಲಾತಿ ಎಂಬುದು ಅಸ್ಪೃಶ್ಯ ಸಮುದಾಯವನ್ನು ವಂಚಿಸುವ ರಾಜಕೀಯ ಆಡುಂಬೊಲವಾಗದಿರಲಿ.

ಸಾಮಾಜಿಕ ನ್ಯಾಯವೆಂಬುದು ಕಟ್ಟಕಡೆಯ ದುರ್ಬಲ ವ್ಯಕ್ತಿಗೂ ದಕ್ಕಿದಾಗ ಅದು ಸಾರ್ಥಕಗೊಳ್ಳುತ್ತದೆ. ಒಟ್ಟಾರೆ ಮೀಸಲಾತಿಯನ್ನು ಅನುಷ್ಠಾನಗೊಳಿಸುವಾಗ ಇದ್ದ ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಪ್ರತಿಪಾದನೆ ಒಳಮೀಸಲಾತಿ ವಿಷಯದಲ್ಲೂ ಇರಬೇಕಾಗುತ್ತದೆ. ಒಳಮೀಸಲಾತಿಯನ್ನು ವಿರೋಧಿಸುವವರು ಅಂತಿಮವಾಗಿ ಮೀಸಲಾತಿಯ ವಿರೋಧಿಗಳೂ ಆಗಿರುತ್ತಾರೆ.
ಎನ್. ರವಿಕುಮಾರ್
ಶಿವಮೊಗ್ಗದ ಟೆಲೆಕ್ಸ್ ಪತ್ರಿಕೆಯ ಬರಹಗಳಿಂದ ಎಲ್ಲರಿಗೂ ಪರಿಚಿತರಾಗಿರುವ ರವಿಕುಮಾರ್. ‘ಟೆಲೆಕ್ಸ್ ರವಿ’ ಎಂದೇ ಹೆಚ್ಚಿನವರಿಗೆ ಗೊತ್ತಿದ್ದಾರೆ. ತಮ್ಮ ತೀಕ್ಷ್ಣ ಕವಿತೆಗಳು ಹಾಗೂ ಖಚಿತ ಬರಹಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಚ್ಚುಮೆಚ್ಚು

ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...