Homeಮುಖಪುಟಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯ 36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಅಧ್ಯಕ್ಷರಲ್ಲಿ ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು.

- Advertisement -
- Advertisement -

ಇದೀಗ ಪರಿಶಿಷ್ಠ ಜಾತಿಯ ಮೀಸಲಾತಿಯಲ್ಲಿ ಒಳ ಮೀಸಲಾತಿಯ ಚರ್ಚೆಗಳು ಮುನ್ನಲೆಗೆ ಬಂದಿವೆ. ಈ ಮೀಸಲಾತಿಗೆ ಒಳಗಾಗುವ ಸಮುದಾಯಗಳು ಒಂದು ರಾಜಕೀಯ ಪಕ್ಷದ `ಒಳ’ ಮೀಸಲಾತಿಯಲ್ಲಿ ಯಾವ ಸ್ಥಾನ ಪಡೆದಿವೆ ಎನ್ನುವುದು ಕುತೂಹಲದ ವಿಷಯ. 2018ರ ಆಗಸ್ಟ್ 1 ರಂದು `ದಿ ಪ್ರಿಂಟ್’ ರುಹಿ ತಿವಾರಿ ಮತ್ತು ಪ್ರ್ರಾಗ್ಯ ಕೌಶಿಕ್ ಅವರುಗಳು ಬರೆದ ಸಂಶೋಧನ ವರದಿಯೊಂದನ್ನು ಪ್ರಕಟಿಸಿತ್ತು. ಇದು ಒಂದು ಸಾವಿರ ಬಿಜೆಪಿ ನಾಯಕರುಗಳನ್ನು ಸಮೀಕ್ಷೆಗೆ ಒಳಪಡಿಸಿ ಬಿಜೆಪಿಯು `ಬ್ರಾಹ್ಮಣ-ಬನಿಯಾ ಕ್ಲಬ್’ ಎಂದು ವಿಶ್ಲೇಷಿಸಿತು. ಈ ಎರಡು ವರ್ಷದ ಅವಧಿಯಲ್ಲಿ ಅಂಕೆಸಂಖ್ಯೆಗಳು ಚೂರು ಬದಲಾಗಿದ್ದರೂ ಈ ಬ್ರಾಹ್ಮಣ-ಬನಿಯಾ ಕ್ಲಬ್ ಮಾದರಿ ಹಿಡಿತ ಸಡಿಲವಾಗಿಲ್ಲ. ಈ ವರದಿಯ ಕೆಲವು ಮುಖ್ಯಾಂಶಗಳು ಈ ಕೆಳಗಿನಂತಿವೆ.

2011ರ ಜನಗಣತಿಯ ಪ್ರಕಾರ ದಲಿತರು ದೇಶದ ಜನಸಂಖ್ಯೆಯ ಶೇಕಡಾ 16.6ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇಕಡಾ 8.6 ರಷ್ಟಿದೆ. ಮುಸ್ಲಿಮರು ಶೇಕಡಾ 14ರಷ್ಟಿದ್ದರೆ, 2007ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‍ಎಸ್‍ಎಸ್‍ಒ) ನಡೆಸಿದ ಸಮೀಕ್ಷೆಯ ಪ್ರಕಾರ ಒಬಿಸಿ ಜನಸಂಖ್ಯೆ ಶೇಕಡಾ 41ರಷ್ಟಿದೆ. ಈ ಪ್ರಾತಿನಿಧ್ಯಕ್ಕೆ ತಕ್ಕ ಹಾಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಜಕೀಯ ಪಕ್ಷವೊಂದು ಪ್ರಾತಿನಿಧ್ಯ ನೀಡಿದೆಯೇ?

36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ಅಧ್ಯಕ್ಷರಲ್ಲಿ ಯಾರೂ ದಲಿತರಿಲ್ಲ. ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು. ಜಿಲ್ಲಾ ಮಟ್ಟದಲ್ಲಿಯೂ ಸಹ, ಪಕ್ಷದ ಅಧ್ಯಕ್ಷರಲ್ಲಿ 65 ಪ್ರತಿಶತ ಜನರು ಮೇಲ್ಜಾತಿಯವರಾಗಿದ್ದು, ಅವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಬ್ರಾಹ್ಮಣರಾಗಿದ್ದಾರೆ. ಬಿಜೆಪಿಯಲ್ಲಿ 752 ಜಿಲ್ಲಾಧ್ಯಕ್ಷರು ಇರಬೇಕಿದ್ದರೆ, ಮೂರು ಹುದ್ದೆಗಳು ಖಾಲಿ ಇರುವುದರಿಂದ 746 ಕ್ಕೆ ದತ್ತಾಂಶಗಳು ಲಭ್ಯವಿದ್ದು, ಮೂವರು ಜಿಲ್ಲಾಧ್ಯಕ್ಷರ ಜಾತಿಗಳು ಸ್ಪಷ್ಟವಾಗಿಲ್ಲ. ಈ ಪೈಕಿ 487 ಮೇಲ್ಜಾತಿಯವರಾಗಿದ್ದರೆ, ಶೇಕಡಾ 25 ರಷ್ಟು ಒಬಿಸಿ, ಬಿ.ಸಿ, ಎಂಬಿಸಿ ವರ್ಗಗಳಿಗೆ ಸೇರಿದವರಾಗಿದ್ದಾರೆ. ಶೇಕಡಾ 4 ಕ್ಕಿಂತ ಕಡಿಮೆ ಎಸ್‍ಸಿಗಳು. ಶೇಕಡಾ 2 ರಷ್ಟು ಸಹ ಅಲ್ಪಸಂಖ್ಯಾತ ಸಮುದಾಯಗಳಿಂದ ಬಂದವರಿಲ್ಲ. ಇವುಗಳಲ್ಲಿ ಯಾವುದೂ ಜನಸಂಖ್ಯೆಯನ್ನಾಧರಿಸಿದ ಪಾಲುದಾರಿಕೆಯಿಲ್ಲ.

Photo Courtesy: The Print

ಬಿಜೆಪಿಯ 50 ರಾಷ್ಟ್ರೀಯ ಪದಾಧಿಕಾರಿಗಳಲ್ಲಿ 17 ಮಂದಿ ಬ್ರಾಹ್ಮಣರು, 21 ಮಂದಿ ಇತರ ಮುಂದುವರಿದ ಬಲಾಢ್ಯ ಜಾತಿ, ನಾಲ್ಕು ಒಬಿಸಿಗಳು, ಮೂವರು ಪರಿಶಿಷ್ಟ ಜಾತಿ, ಇಬ್ಬರು ಪರಿಶಿಷ್ಟ ಪಂಗಡ, ಇಬ್ಬರು ಮುಸ್ಲಿಂ ಸಮುದಾಯದವರು, ಮತ್ತು ಒಬ್ಬರು ಸಿಖ್. ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿ ಅಲ್ಪಸಂಖ್ಯಾತರ ಕನಿಷ್ಠ ಪ್ರಾತಿನಿಧ್ಯ ಇದೆ: ಮೂವರು ದಲಿತರಲ್ಲಿ ಒಬ್ಬರು ಪಕ್ಷದ ಎಸ್‍ಸಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇಬ್ಬರು ಮುಸ್ಲಿಮರಲ್ಲಿ ಒಬ್ಬರು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥರಾಗಿದ್ದಾರೆ. ಬುಡಕಟ್ಟು ಪ್ರತಿನಿಧಿಗಳ ವಿಷಯದಲ್ಲಿ ಇದು ಇನ್ನೂ ಕೆಟ್ಟದಾಗಿದೆ, ಏಕೆಂದರೆ ಒಬ್ಬರು ಪಕ್ಷದ ಎಸ್‍ಟಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇನ್ನೊಬ್ಬರು ಮಧ್ಯಪ್ರದೇಶದ ಜ್ಯೋತಿ ಧ್ರುವೆ. ರಾಜ್ಯ ಸರ್ಕಾರ ಆಕೆಯ ಎಸ್‍ಟಿ ಪ್ರಮಾಣಪತ್ರವನ್ನು ರದ್ದುಪಡಿಸಿದೆ. ಈ ವಿಷಯ ಇನ್ನೂ ನ್ಯಾಯಾಲಯದಲ್ಲಿದೆ. ಪರಿಣಾಮ, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳಲ್ಲಿ ಶೇಕಡಾ 76 ರಷ್ಟು ಮೇಲ್ಜಾತಿಯವರಾಗಿದ್ದರೆ, ಕೇವಲ ಶೇ.8ರಷ್ಟು ಮಾತ್ರ ಒಬಿಸಿ ಮತ್ತು ಶೇ.6ರಷ್ಟು ಎಸ್‍ಸಿ. ಇನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿರುವ 97 ಸದಸ್ಯರಲ್ಲಿ 29 ಮಂದಿ ಬ್ರಾಹ್ಮಣರು, 37 ಮಂದಿ ಇತರ ಮೇಲ್ಜಾತಿಯವರು, 18 ಮಂದಿ ಒಬಿಸಿಗಳು ಅಥವಾ ಬಿ.ಸಿ.ಗಳು, ಏಳು ಮಂದಿ ಪರಿಶಿಷ್ಟ ಜಾತಿ, ಮೂವರು ಅಲ್ಪಸಂಖ್ಯಾತ ಸಮುದಾಯಗಳು, ಒಬ್ಬರು ಸಿಖ್ ಮತ್ತು ಒಬ್ಬರು ಎಸ್.ಟಿ. ಪರಿಣಾಮವಾಗಿ, ಶೇಕಡಾ 69 ರಷ್ಟು ಜನರು ಮುಂದುವರಿದ ಜಾತಿಗಳಿಂದ ಬಂದವರು ಮತ್ತು ಕೇವಲ 27 ಪ್ರತಿಶತದಷ್ಟು ಜನರು ಇತರ ಸಮುದಾಯಗಳಿಂದ ಬಂದವರು.

2018 ರಲ್ಲಿ `ದಿ ಪ್ರಿಂಟ್’ ಪತ್ರಿಕೆ ಮಾಡಿರುವ ಈ ಸರ್ವೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ದೇಶದ ದಲಿತರು, ದಮನಿತರು, ಬುಡಕಟ್ಟು ಅಲೆಮಾರಿಗಳು, ಅಲ್ಪಸಂಖ್ಯಾತರನ್ನು ಬಹಳ ಪೂರ್ವಯೋಜಿತವಾಗಿ ಒಂದು ಪ್ರಭಾವಿ ರಾಜಕೀಯ ಪಕ್ಷ ದೂರ ಇಡಲಾಗಿರುವುದು ಕಣ್ಣಿಗೆ ರಾಚುವಂತೆ ಕಾಣುತ್ತದೆ. ದೇಶವನ್ನು ಆಳುವ ರಾಜಕೀಯ ಪಕ್ಷವೊಂದು ತನ್ನ ಆಂತರಿಕ ಆಡಳಿತದಲ್ಲಿ ಹೀಗೆ ಎಸ್‍ಸಿ/ಎಸ್‍ಟಿ/ಒಬಿಸಿ/ಅಲ್ಪಸಂಖ್ಯಾತ/ಮಹಿಳಾ ಪ್ರಾತಿನಿಧ್ಯವನ್ನು ಕಡಿತಗೊಳಿಸಿದರೆ, ಈ ಪಕ್ಷದ ಆಡಳಿತವಿರುವ ಸರಕಾರದ ಆದ್ಯತೆಯೇನು ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ. ನಮ್ಮ ಸಂವಿಧಾನಬದ್ಧ ಪಾಲನ್ನೆ ಇಲ್ಲವಾಗಿಸುತ್ತಿರುವ ಈ ಬಿಜೆಪಿಗರು ಮೀಸಲಾತಿ, ಒಳ ಮೀಸಲಾತಿ ನೀಡುವರೆ ಎಂಬುದು ಪ್ರಶ್ನೆಯಾಗಿದೆ.


ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...