Homeಮುಖಪುಟಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟಕ್ಕೆ ಕಿವಿಗೊಡದೆ, ಕನಿಷ್ಟ ಪ್ರಜಾತಾಂತ್ರಿಕ ವಿಧಾನವನ್ನು ಅನುಸರಿಸದೆ, ಸರ್ವಾಧಿಕಾರಿ ವಿಧಾನದಲ್ಲಿ ಈ ಸರ್ಕಾರ ಬಡಜನರ ಮರಣ ಶಾಸನಗಳನ್ನು ಅನುಮೋದಿಸಿದೆ. ಆ ಮೂಲಕ ಕೊನೆಗೂ ಯಡಿಯೂರಪ್ಪ ಸರ್ಕಾರ ಜನತೆಯ ವಿಶ್ವಾಸಕ್ಕೆ ದ್ರೋಹ ಬಗೆದಿದೆ. ಹಾಗಾಗಿ ಈ ಜನದ್ರೋಹಿ ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಲು ಎಂದು ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಐಕ್ಯಹೋರಾಟ ಸಮಿತಿಯ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿದ ಯಡಿಯೂರಪ್ಪನವರು ಇಂದು ರೈತರ ಎದೆಗೆ ನೇರಾನೇರಾ ಚೂರಿ ಹಾಕಿ ತಾನು ರೈತರ ಪರ ಅಲ್ಲ, ಕಾರ್ಪೊರೇಟ್ ಪರ ಎಂಬುದನ್ನು ರುಜುವಾತು ಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಉಳುವವರಿಗೇ ಭೂಮಿ” ಎಂಬ ಸಮಾಜವಾದಿ ಆಶಯದ ಕೊಲೆಗೈದು ” ಉಳ್ಳವರದೇ ಎಲ್ಲಾ ಭೂಮಿ” ಎಂಬ ಬಲಾಢ್ಯ ಹಿತಾಸಕ್ತಿಯನ್ನು ಎತ್ತಿಹಿಡಿದಿದ್ದಾರೆ. ಕಾರ್ಪೋರೇಟ್ ಮತ್ತು ರಿಯಲ್ ಎಸ್ಟೇಟ್ ಲಾಭಿಗೆ ನಮ್ಮ ಬಡಜನರ ಬದುಕನ್ನು ಬಲಿ ಕೊಟ್ಟಿದ್ದಾರೆ ಎಂದು ರೈತ ಮುಖಂಡರು ದೂರಿದ್ದಾರೆ.

ಪತ್ರಿಕಾಗೋಷ್ಟಿಯ ಲೈವ್ ನೋಡಿ

ಐಕ್ಯ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡಸಿಲಾಯಿತು….

Posted by Naanu Gauri on Saturday, September 26, 2020

ಎಪಿಎಂಸಿ ಮಾರುಕಟ್ಟೆಯನ್ನು ನಿರ್ನಾಮ ಮಾಡಿ ಕಾರ್ಪೊರೇಟ್ ಮಾರುಕಟ್ಟೆಗೆ ರತ್ನಗಂಬಳಿ ಹಾಸಲಾಗಿದೆ. ರೈತರನ್ನು ಕಾರ್ಪೊರೇಟ್ ಕಣ್ಕಟ್ಟಿನ ಜಾಲಕ್ಕೆ ಸಿಲುಕಿಸಲಾಗಿದೆ. ಸ್ಥಳೀಯ ವರ್ತಕರನ್ನು ದಿವಾಳಿ ಮಾಡಲಾಗುತ್ತದೆ ಮತ್ತು ಸಹಸ್ರಾರು ಹಮಾಲಿ ಮತ್ತು ಇತರೆ ಉದ್ಯೋಗಿಗಳನ್ನು ಬೀದಿಪಾಲು ಮಾಡಲಾಗುತ್ತಿದೆ. ಇದಲ್ಲದೆ, ಕೈಗಾರಿಕಾ ಸ್ನೇಹಿ ವಾತಾವರಣ ಸೃಷ್ಟಿಸುವ ಹೆಸರಿನಲ್ಲಿ ಕಾರ್ಮಿಕ ಅನೇಕ ನ್ಯಾಯಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

ಲಕ್ಷಾಂತರ ಜನರ ಹೋರಾಟದ ನಡುವೆಯೂ ಈ ಮಸೂದೆಗಳಿಗೆ ವಿಧಾನಸಭಾ ಒಪ್ಪಿಗೆ ಪಡೆದಿದ್ದರೂ ಅದನ್ನು ಜಾರಿಯಾಗಲು ಬಿಡುವುದಿಲ್ಲ. ಇದುವರೆಗೆ ನಡೆಸಿದ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ದುಡಿಯುವ ಜನರ ಜನ ಸಂಗ್ರಾಮವನ್ನಾಗಿ ಪರಿವರ್ತಿಸುತ್ತದೆ. ನಿಮ್ಮ ಜನದ್ರೋಹದ ಹಿಂದಿರುವ ಹುನ್ನಾರವನ್ನು ಹಳ್ಳಿಹಳ್ಳಿಗೆ ತಲುಪಿಸುತ್ತೇವೆ. ಈ ದುಷ್ಟ ಮಸೂದೆಗಳ ಹಿಂದಿರುವ ಒಂದು ಲಕ್ಷ ಕೋಟಿಯ ಹಗರಣವನ್ನು ಜನರ ಎದುರು ಬಯಲುಗೊಳಿಸುತ್ತೇವೆ ಎಂದು ಮುಖಂಡರು ಪಣ ತೊಟ್ಟಿದ್ದಾರೆ.

 

ಸೆಪ್ಟಂಬರ್ 28ರ ಬಂದ್‌ ಅನ್ನು ಯಶಸ್ವಿಗೊಳಿಸುತ್ತೇವೆ. ಜೊತೆಗೆ ಮುಖ್ಯಮಂತ್ರಿಗಳನ್ನು ಕಂಡ ಕಂಡಲ್ಲಿ ಘೇರಾವ್ ಮಾಡಿ ಮಸೂದೆಗಳ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ರಾಜ್ಯರೈತ ಸಂಘದ ರಾಜ್ಯಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ಕುರುಬೂರು ಶಾಂತಕುಮಾರ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ಸಿಐಟಿಯು ರಾಜ್ಯಾ‍ಧ್ಯಕ್ಷೆ ವರಲಕ್ಷ್ಮಿ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...