Homeಕರ್ನಾಟಕಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

"ಭೂ ಸುಧಾರಣಗೆ ಸಂಬಂಧಿಸಿದಂತೆ ಟೌನ್ ಅಂಡ್ ಕಂಟ್ರಿ ಪ್ಲಾನ್ ಅಡಿಯಲ್ಲಿ 20 ಯೂನಿಟ್‌ಗಳಿಂದ 40 ಯೂನಿಟ್‌ಗೆ 2015ರಲ್ಲಿ ಹೆಚ್ಚಿಸಲಾಗಿದೆ. ಅವರ ಕಾಂಗ್ರೆಸ್‌ಗೆ ಇದು ರೈತವಿರೋಧಿ ಎಂದು ಜ್ಞಾಪಕ ಇರಲಿಲ್ಲವೇ?

- Advertisement -
- Advertisement -

ಸೆಪ್ಟಂಬರ್ 26 ರಂದು ವಿಧಾನಸಭಾ ಅಧಿವೇಶನದ ಕೊನೆಯ ದಿನ ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿಷಯ ಸದನದಲ್ಲಿ ಚರ್ಚೆಗೆ ಬಂದು ಗದ್ದಲದ ನಡುವೆಯೇ ಅಂಗೀಕರಿಸಲಾಯಿತು. ಈ ಮಸೂದೆ ಚರ್ಚೆಯ ವೇಳೆ ಬಿಜೆಪಿ ಶಾಸಕರು, ಸಚಿವರು ಕಾಂಗ್ರೆಸ್‌ ಮುಖಂಡರನ್ನು ಪೇಚಿಗೆ ಸಿಲುಕಿಸಿದರು. ಹಾಗಾದರೆ ಸದನದಲ್ಲಿ ನಡೆದುದ್ದಾದರೂ ಏನು? ಇಲ್ಲಿದೆ ವಿವರ..

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡಿ “ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಇಲ್ಲ” ಎಂದರು.

ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ತಂದು ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು, ರಾಜ್ಯ ಬಿಜೆಪಿ ಸರ್ಕಾರ ಉಳ್ಳವನನ್ನೇ ಭೂ ಒಡೆಯನನ್ನಾಗಿ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದಿರುವ ಕೊನೆಯ ಮೊಳೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ಕೃಷಿ ಭೂಮಿ ಖರೀದಿಗೆ ಆದಾಯದ ಮಿತಿಯ ಸೆಕ್ಷನ್ 79ಎ, ಕೃಷಿಕರೇತರರಿಗೆ ಭೂಮಿ ಖರೀದಿ ನಿಷೇಧಿಸಿದ್ದ ಸೆಕ್ಷನ್ 79ಬಿ, ಸುಳ್ಳು ಪ್ರಮಾಣಪತ್ರಕ್ಕೆ ದಂಡ ವಿಧಿಸುವ ಸೆಕ್ಷನ್ 79 ಸಿ, ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ನಿಷೇಧಿಸಿದ್ದ ಸೆಕ್ಷನ್ 80, ಗರಿಷ್ಠ ಭೂಮಿತಿಯ ಸೆಕ್ಷನ್ 63ರ ರದ್ದತಿ ಭೂತಾಯಿಗೆ ಬಗೆವ ದ್ರೋಹ ಎಂದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್ “ಈ ತಿದ್ದುಪಡಿಯನ್ನು ಬಿಜೆಪಿ ತಂದಿದೆ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ 03-01-2014 ರಂದು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಒಂದು ಉಪಸಮಿತಿ ರಚಿಸಿದ್ದರು. ವಾಸ್ತವಿಕವಾಗ ಸದರಿ ಕಾಯ್ದೆಯು ಕಾಲಕ್ರಮೇಣ ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಇದನ್ನು ಜಾರಿಗೊಳಿಸಲು ಸಾಧ್ಯವಿಲ್ಲದ ಕಾರಣ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ ರದ್ದುಗೊಳಿಸಬೇಕೆಂದು ಉಪಸಮಿತಿ ನಿರ್ಣಯ ಮಾಡಿತ್ತು’ ಎಂದರು.

ಆಗ ಕಾಂಗ್ರೆಸ್ ಪಕ್ಷದ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತವಿರೋಧಿ ಸರ್ಕಾರ ಎಂದು ಜರಿದು ಗದ್ದಲವೆಬ್ಬಿಸಿ, ತಿದ್ದುಪಡಿ ಮಸೂದೆಯ ಪ್ರತಿಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿ ಸದನದಿಂದ ಹೊರನಡೆದರು.

“ಭೂ ಸುಧಾರಣಗೆ ಸಂಬಂಧಿಸಿದಂತೆ ಟೌನ್ ಅಂಡ್ ಕಂಟ್ರಿ ಪ್ಲಾನ್ ಅಡಿಯಲ್ಲಿ 20 ಯೂನಿಟ್‌ಗಳಿಂದ 40 ಯೂನಿಟ್‌ಗೆ 2015ರಲ್ಲಿ ಹೆಚ್ಚಿಸಲಾಗಿದೆ. ಆಗ ಕಾಂಗ್ರೆಸ್‌ಗೆ ಇದು ರೈತವಿರೋಧಿ ಎಂದು ಜ್ಞಾಪಕ ಇರಲಿಲ್ಲವೇ? 4 ಯೂನಿಟ್‌ನಿಂದ ಕಾಂಗ್ರೆಸ್ 8 ಕ್ಕೆ ಹೆಚ್ಚಿಸಿದೆ. ಪದೇ ಪದೇ ಈ ಸುಧಾರಣೆಗಳನ್ನು ತಿದ್ದುಪಡಿಮಾಡಬೇಕೆಂದು ತಂದವರು ಅವರೆ, ನಾವಲ್ಲ. ಈಗ ನಾನು 2014ರ ಸಣ್ಣ ಸ್ಯಾಂಪಲ್ ಕೊಟ್ಟಿದ್ದಕ್ಕೆ ಓಡಿ ಹೋದರು. ಇವರು ಭ್ರಷ್ಟಾಚಾರಿಗಳ ಪರ, ಇವರ ನಾಟಕ ಬಯಲಾಯಿತು” ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

“ಕಾಯ್ದೆಯನ್ನು ಯಾರು ತಂದಿತ್ತು? ಕಾಂಗ್ರೆಸ್ ಪಕ್ಷವೇ ಪ್ರಸ್ತಾಪ ಮಾಡಿತ್ತು. ನಾಚಿಕೆಯಾಗಬೇಕು ಅದಕ್ಕೆ. 109 ಅಡಿಯಲ್ಲಿ 1973, 74 ರ ಅಧಿವೇಶನದಲ್ಲಿ 79 ಎ, ಬಿ ಬೇಕಾ ಬೇಡವೇ ಎಂಬ ಚರ್ಚೆ ನಡೆಯುತ್ತಿತ್ತು. ವಿಶ್ವನಾಥ್ ರೆಡ್ಡಿಯವರು, ಎಚ್.ಎಸ್ ಸಿದ್ದಪ್ಪನವರು, ಮಲ್ಲಿಕಾರ್ಜುನ ಖರ್ಗೆ, ಎಂ.ಡಿ ನಂಜುಂಡಸ್ವಾಮಿಯವರು, ಏಕಾಂತಯ್ಯನವರು ಸೇರಿದಂತೆ ಹಲವರು ಇದನ್ನು ತೆಗೆಯಬೇಕೆಂದು ಒತ್ತಾಯಿಸಿದ್ದರು. ಆಗ ಭೂಮಿತಿ ಕೇವಲ 54 ಎಕರೆ ಇರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಭೂಮಿ ಖರೀದಿಗೆ 50,000 ವಾರ್ಷಿಕ ಆದಾಯ ಮಿತಿಯನ್ನು ತೆಗೆದುಹಾಕಬೇಕೆಂದು ಕಾಂಗ್ರೆಸ್ ಸದಸ್ಯರು ವಾದಿಸಿದ್ದರು. ಆದರೆ ಈಗ ಮಾತ್ರ ರೈತರ ಪರ ಎಂದು ಪೋಸು ಕೊಡುತ್ತಿದ್ದಾರೆ” ಎಂದು ಆರ್ ಅಶೋಕ್ ಕಿಡಿಕಾರಿದರು. ಆದರೆ ಉತ್ತರಿಸಲು ಕಾಂಗ್ರೆಸ್ ಸದಸ್ಯರಾರೂ ಇರಲಿಲ್ಲ..


ಇದನ್ನೂ ಓದಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...