Homeಮುಖಪುಟತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ಆರೋಪಿಗಳನ್ನು ಹಿಂಸಿಸಲು ಲಾಠಿಗಳ ಬಳಕೆ ಮತ್ತು ರಕ್ತದ ಕಲೆಗಳನ್ನು ಹೊತ್ತ ಟೇಬಲ್ ಭೀಕರ ಅಪರಾಧಕ್ಕೆ ಸಾಕ್ಷಿಯಾಗಿದೆ. ಅಪರಾಧ ನಡೆದ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯ ಹೇಳಿಕೆಯನ್ನು ಆಧರಿಸಿ ಈ ತನಿಖೆ ನಡೆದಿವೆ.

- Advertisement -
- Advertisement -

ದೇಶಾದ್ಯಂತ ಭಾರಿ ಕೋಲಾಹಲಕ್ಕೆ ಕಾರಣವಾದ ತಮಿಳುನಾಡಿನ ಜಯರಾಜ್ ಮತ್ತು ಅವರ ಪುತ್ರ ಬೆನಿಕ್ಸ್ ಅವರ ಲಾಕಪ್ ಡೆತ್‌ ಪ್ರಕರಣದಲ್ಲಿ ಒಂಬತ್ತು ಪೊಲೀಸರ ಮೇಲೆ ಕೊಲೆ, ಪಿತೂರಿ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌‌ಶೀಟ್ ದಾಖಲಿಸಿದೆ.

ಕಳೆದ ಜೂನ್‌ನಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ ಅಂಗಡಿಯೊಂದನ್ನು ನಡೆಸುತ್ತಿದ್ದ ತಂದೆ-ಮಗ ಜೋಡಿಯನ್ನು ಲಾಕ್‌ಡೌನ್ ನಿಯಮ ಉಲ್ಲಂಘನೆ ಎಂಬ ಆರೋಪದ ಮೇಲೆ ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಇಬ್ಬರಿಗೂ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಲೈಂಗಿಕವಾಗಿ ಹಿಂಸಿಸಲಾಗಿತ್ತು. ಚಿತ್ರಹಿಂಸೆಯಿಂದ ಇಬ್ಬರ ಗುದನಾಳಗಳಿಂದ ರಕ್ತ ಹರಿಯುತ್ತಿತ್ತು. ನಂತರ ಅವರಿಬ್ಬರೂ ಕೋವಿಲ್ಪಟ್ಟಿ ಜೈಲಿನಲ್ಲಿ ಮೃತಪಟ್ಟಿದ್ದರು.

ಈ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿ, ಬೃಹತ್ ಪ್ರತಿಭಟನೆಗಳು ನಡೆದಿದ್ದವು. ನಂತರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. 9 ಪೊಲೀಸರ ಮೇಲೆ ಚಾರ್ಜ್‌‌ಶೀಟ್ ಸಲ್ಲಿಸಿದ ಸಿಬಿಐ ಪೊಲೀಸರು ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿರುವ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್‌ ಡೆತ್: ಪೊಲೀಸ್ ದೌರ್ಜನ್ಯಕ್ಕೆ ಕೊನೆಯೆಂದು? ಮಾತು ಸೋತ ಭಾರತ

ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಅಂದಿನ ಇನ್ಸ್‌ಪೆಕ್ಟರ್ ಮತ್ತು ಎಸ್‌ಎಚ್‌ಒ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಕೆ.ಬಾಲಕೃಷ್ಣನ್, ಪಿ.ರಘುಗಣೇಶ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಎಸ್.ಮುರುಗನ್, ಎ.ಸಮದುರೈ, ಮತ್ತು ಕಾನ್‌ಸ್ಟೆಬಲ್‌ಗಳಾದ ಎಂ.ಮುತ್ತುರಾಜ, ಎಸ್.ಚೆಲ್ಲದುರೈ, ಎಕ್ಸ್.ಫ್ರಾನ್ಸಿಸ್ ಮತ್ತು ಎಸ್.ವಿಲುಮುತ್ತು ಎಂಬ 9 ಮಂದಿ ಪೊಲೀಸರ ಹೆಸರುಗಳಿವೆ.

ಸೆಪ್ಟೆಂಬರ್ 30 ರಂದು ಆರೋಪಿಗಳ ಮೂರು ತಿಂಗಳ ಕಸ್ಟಡಿ ಮುಗಿಯುತ್ತಿರುವುದರಿಂದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ. ಪೊಲೀಸರ ಚಿತ್ರಹಿಂಸೆ ನಂತರ, ಪೊಲೀಸ್ ಅಧಿಕಾರಿಗಳು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಮತ್ತು ಮೃತರ ಮೇಲೆ “ನಕಲಿ” ಆರೋಪಗಳನ್ನು ದಾಖಲಿಸಿದ್ದಾರೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.

ತನಿಖೆಯ ಸಮಯದಲ್ಲಿ, ಈ ಆರೋಪಿಗಳಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ ಒಬ್ಬ ಆರೋಪಿ ಸಬ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಆಗಿ, ಮೃತಪಟ್ಟರು. ಉಳಿದ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ಕೊರೊನಾ ಸಾಂಕ್ರಾಮಿಕ ನಡುವೆಯೂ ಸಿಬಿಐ ತಂಡವು ಮಧುರೈನಲ್ಲಿ ನಿರಂತರವಾಗಿ ಬೀಡುಬಿಟ್ಟು  ಪ್ರಕರಣದ ಕುರಿತು ಅವಿರತವಾಗಿ ಕೆಲಸ ಮಾಡಿದೆ ಎಂದು ಸಿಬಿಐ ವಕ್ತಾರ ಆರ್.ಕೆ.ಗೌರ್ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: ಆರೋಪಿ ಎಸ್‌ಐ ಪಾಲ್‌ದೊರೈ ಕೊರೊನಾದಿಂದ ನಿಧನ

ತಂದೆ-ಮಗನನ್ನು 19.06.2020 ರ ಸಂಜೆ ಬಂಧಿಸಲಾಗಿದೆ ಮತ್ತು ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಸಂಜೆ ಮತ್ತು ಮಧ್ಯರಾತ್ರಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಸಿಬಿಐ ತನಿಖೆಯಲ್ಲಿ ತಿಳಿದುಬಂದಿದೆ. ಹಿಂಸೆಯ ಪರಿಣಾಮವಾಗಿ ಜೂನ್ 22 ಮತ್ತು ಜೂನ್ 23ರ ಮಧ್ಯರಾತ್ರಿಯಲ್ಲಿ ಇಬ್ಬರೂ ಸಾವನ್ನಪ್ಪಿದರು.

ತನಿಖೆಯ ನಂತರ, ಎರಡೂ ಪ್ರಕರಣಗಳಲ್ಲಿ ಸಂಯೋಜಿತ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ಗೌರ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ಇತರ ವ್ಯಕ್ತಿಗಳ ಪಾತ್ರದ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.

ಆರೋಪಿಗಳನ್ನು ಹಿಂಸಿಸಲು ಲಾಠಿಗಳ ಬಳಕೆ ಮತ್ತು ರಕ್ತದ ಕಲೆಗಳನ್ನು ಹೊತ್ತ ಟೇಬಲ್ ಭೀಕರ ಅಪರಾಧಕ್ಕೆ ಸಾಕ್ಷಿಯಾಗಿದೆ. ಅಪರಾಧ ನಡೆದ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯ ಹೇಳಿಕೆಯನ್ನು ಆಧರಿಸಿ ಈ ತನಿಖೆ ನಡೆದಿವೆ.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...