Homeಮುಖಪುಟಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು.

- Advertisement -
- Advertisement -

ರಂಗಭೂಮಿ ತನ್ನ ಮೂಲ ಗುಣದಂತೆ ನಿಂತ ನೀರಾಗಲು ಬಯಸುವುದಿಲ್ಲ. ಅದು ಸದಾ ಒಂದಿಲ್ಲೊಂದು  ಬದಲಾವಣೆಯ ಪರಿವರ್ತನೆಯಲ್ಲಿ ತೊಡಗಿಕೊಂಡು ಹರಿಯುವ ನದಿಯ ಗುಣವನ್ನು ಹೊಂದಿದೆ. ಕೊರೊನಾ ಸಾಂಕ್ರಾಮಿಕದಿಂದ ಎಲ್ಲಾ ಕ್ಷೇತ್ರಗಳಿಗೂ ಹೊಡೆತ ಬಿದ್ದಂತೆ ರಂಗಭೂಮಿ ಕ್ಷೇತ್ರವು ತತ್ತಿರಿಸಿತು. ಆರೇಳು ತಿಂಗಳುಗಳ ಕಾಲ ಚಟುವಟಿಕೆಗಳು ಸ್ಥಗಿತಗೊಂಡವು.

ಈ ಸಮಯದಲ್ಲಿ ರಂಗಭೂಮಿಯ ಮೂಲಕ ಹೊಸದೊಂದನ್ನು ಹೇಳಲು ತವಕಿಸುವ ಸೃಜನಶೀಲ ಕಲಾವಿದರು ಮತ್ತು ರಂಗಭೂಮಿಯೇ ತಮ್ಮ ಜೀವನ ಎಂದು ಬದುಕು ಕಟ್ಟಿಕೊಳ್ಳಲು ಹೊರಟಿದ್ದವರ ಕಥೆ ಏನು? ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ರಂಗಕರ್ಮಿಗಳ ಮುಂದಿನ ಜೀವನ ಹೇಗೆ ? ರಂಗಭೂಮಿಯನ್ನು ಕಲಿಯುವ ಮತ್ತು ಕಲಿಸುವ ಬಗೆಯಾದರು ಹೇಗೆ? ರಂಗಭೂಮಿಯನ್ನು ಹೊಸ ರೀತಿಯಾಗಿ ಜನಸಮುದಾಯದ ಮಧ್ಯೆ ತರುವುದು ಹೇಗೆ ಎಂಬ ಹತ್ತು ಹಲವು ಹೊಸ ಚಿಂತನೆಗಳ ಮೂಲಕ ರಂಗಭೂಮಿಯನ್ನು ಮತ್ತೆ ಮುನ್ನಲೆಗೆ ತರಬೇಕು ಎಂಬ ಆಶಯದಲ್ಲಿ ‘ಪಾರಿಜಾತ‘ ಯುವಬಳಗವು ‘ಥೀಯೇಟರ್ ರೀಥೀಂಕಿಂಗ್’ ಎಂಬ ಪರಿಕಲ್ಪನೆಯ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ಕೊರೊನಾ ಸಮಯದಲ್ಲಿ ರಂಗಭೂಮಿಯನ್ನು ಪ್ರತಿ ದಿನ ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದ ನಿರ್ದೇಶಕರು, ನಟರು, ತಂತ್ರಜ್ಞರು ಒಟ್ಟಾರೆ ರಂಗತಂಡಗಳು ಎಲ್ಲರು ಸಹ ಹೈರಾಣಾಗಿ ಹೋದರು. ಇಂತಹ ಸಂಕಷ್ಟದ ಸಮಯದಲ್ಲಿ ರಂಗಭೂಮಿಯ ಜೊತೆಗೆ ನಿಲ್ಲಬೇಕಿದ್ದ ಸರ್ಕಾರ ತನ್ನ ಸಂಸ್ಕೃತಿ ಇಲಾಖೆ ಮತ್ತು ನಾಟಕ ಅಕಾಡೆಮಿ ಮೂಲಕ ಕಲಾವಿದರನ್ನು ಪಟ್ಟಿ ಮಾಡಿ 6 ತಿಂಗಳ ನಷ್ಟಕ್ಕೆ ತಲಾ 2000 ರೂ ಕೊಡುವ ಭರವಸೆ ನೀಡಿ ಕೆಲವರಿಗಷ್ಟೇ ನೀಡಿ ತನ್ನ ಬೇಜಾವಾಬ್ದಾರಿಯನ್ನು ತೋರಿತು.

ಯೋಚಿಸುವುದು ದಿನವೂ ಇರುತ್ತದೆ. ಆದರೆ ಇಂದಿನ ಅಸಹನೆ, ಸಿನಿಕತನಗಳ ನಡುವೆ ಕಳೆದುಕೊಳ್ಳುತ್ತಿರುವ ಸಾಂಸ್ಕೃತಿಕ ಪ್ರಜ್ಞೆಯನ್ನು ಮತ್ತೊಮ್ಮೆ ಮರುಪರಿಶೀಲಿಸುವ ರೀಥಿಂಕ್ ಇಂದಿನ ಅಗತ್ಯವಾಗಿದೆ. – ಮಹದೇವ ಹಡಪದ, ರಂಗನಿರ್ದೇಶಕರು.

ಕೊರೊನಾ ಪೆಟ್ಟಿನಿಂದ ಕಳೆದುಕೊಂಡ ಉತ್ಸಾಹವನ್ನು ರಂಗಭೂಮಿ ಮತ್ತೆ ಮುನ್ನೆಲೆಗೆ ತರಬೇಕಿದೆ. ಈಗಾಗಲೇ ಇರುವ ಸಿದ್ಧ ಮಾದರಿಯ ರಂಗಭೂಮಿಯ ಚಟುವಟಿಕೆಗಳಲ್ಲಿ ಹಲವು ತೊಡಕುಗಳಿವೆ. ಅವುಗಳನ್ನೇ ಇಟ್ಟಕೊಂಡು ಮತ್ತೆ ಶುರುಮಾಡುವುದು ಏಕತಾನತೆಯನ್ನು ಸೃಷ್ಟಿಸುತ್ತದೆ ಹೊರತು ಮತ್ತೇನು ಪ್ರಯೋಜನವಾಗಲಾರದು. ಜಗತ್ತೇ ಆನ್‍ಲೈನ್ ಹಿಂದೆ ಓಡುತ್ತಿರುವಾಗ ಆಫ್‌ಲೈನ್ ರಂಗಭೂಮಿಯ ಬಗ್ಗೆ ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗಾಗಿ ರಂಗಭೂಮಿಯಲ್ಲಿ ಹೊಸ ಬದಲಾವಣೆ, ಮರುಹಟ್ಟು ಹೇಗಿರಬೇಕೆಂಬ ಚಿಂತನೆಗಳಾಗಬೇಕಿದೆ. ರಂಗಭೂಮಿಯ ಹಿರಿಕಿರಿಯಿರೆಲ್ಲರೂ ಸೇರಿ ಈ ಚಿಂತನೆ ನಡೆಸಬೇಕೆಂಬುದು ಪಾರಿಜಾತ ಬಳಗದ ಅಭಿಮತವಾಗಿದೆ.

ನಾವು ಈಗ ಒಳಗೂ ಹೊರಗೂ ವಿಚಿತ್ರ ಬಗೆಯ ಬರ ಭಯ ರೋಗದ ಕಾಲವನ್ನು ಅನುಭವಿಸುತ್ತಿದ್ದೇನೆ. ಇದನ್ನು ನಾವು ಕಾಲದ ಎಚ್ಚರಿಕೆ ಅಂತಲೇ ಭಾವಿಸಿ, ನಮಗೆ ಕಾಲವು ನೀಡಿರುವ ಪಾಠಗಳನ್ನು ಸರಿಯಾಗಿ ಗ್ರಹಿಸಿ ನಮ್ಮ ಮುಂದಿನ ಸಾಂಸ್ಕೃತಿಕ ಮಾದರಿಗಳ ಕುರಿತು ‘ರೀ-ಥಿಂಕ್’ ಮಾಡಲೇಬೇಕಿದೆ. ಇದು ಸಾಂಸ್ಕೃತಿಕ ಸಮುದಾಯ – ಜನ ಸಮುದಾಯ- ಸರಕಾರ ಎಲ್ಲರೂ ಕೂಡಿ ಮಾಡಬೇಕಾದ ಕೆಲಸ. – ಲಕ್ಷ್ಮಣ್ ಕೆ ಪಿ, ಯುವ ರಂಗಕರ್ಮಿ.

ಮುಖ್ಯವಾಗಿ ಪರಿಜಾತ ಬಳಗ ಸದ್ಯಕ್ಕೆ ಈ ಕೆಳಗಿನ ಐದು ಪ್ರಮುಖ ಚಿಂತನೆಗಳನ್ನು ಬೇಡಿಕೆಯ ರೂಪದಲ್ಲಿ ಮುಂದಿಟ್ಟಿದೆ.

  1. ಕರ್ನಾಟಕದ ಎಲ್ಲ ಮುಖ್ಯ ಸಾಂಸ್ಕೃತಿಕ ಸಂಸ್ಥೆಗಳು, ರಂಗಶಾಲೆಗಳು, ರೆಪರ್ಟರಿಗಳು ತಮ್ಮ ಪಠ್ಯಕ್ರಮ ಮತ್ತು ಕೆಲಸದ ರೂಪುರೇಷೆಗಳನ್ನು ರೀಥಿಂಕ್ ಮಾಡಬೇಕು.
  2. ರಂಗಶಾಲೆಗಳು ತಮ್ಮ ಪಠ್ಯಕ್ರಮದ ಕುರಿತು ರೀಥಿಂಕ್ ಮಾಡಬೇಕು.
  3. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಅನುದಾನದ ನೀತಿಗಳ ಕುರಿತು ರೀಥಿಂಕ್‌ ಮಾಡಬೇಕು.
  4. ಹೊಸ ರಂಗಮಂದಿರಗಳನ್ನು ಕಟ್ಟುವ ಮೊದಲು ಈಗಿರುವ ಜಿಲ್ಲಾ ಮತ್ತು ತಾಲ್ಲೂಕು ರಂಗಮಂದಿರಗಳ ಸಾಂಸ್ಕೃತಿಕ ಜೀವಂತಿಕೆಯ ಬಗ್ಗೆ ರೀಥಿಂಕ್ ಮಾಡಬೇಕು.
  5. ನಗರ ಕೇಂದ್ರಿತ ಸಾಂಸ್ಕೃತಿಕ ಯಜಮಾನ್ಯವನ್ನು ನಿಲ್ಲಿಸಿ, ಸಾಂಸ್ಕೃತಿಕ ವಿಕೇಂದ್ರೀಕರಣ ಸಾಧಿಸಲು ಯೋಜನೆಗಳನ್ನು ರೂಪಿಸಬೇಕು.
  6. ಈಗಿರುವ ರಂಗಮಂದಿರಗಳನ್ನು ತೆರೆಯುವ ಮತ್ತು ಅಲ್ಲಿ ಕೊರೊನಾ ಸುರಕ್ಷತೆಗಳೊಂದಿಗೆ ಪ್ರದರ್ಶನಗಳನ್ನು ಆರಂಭಿಸುವಂತೆ ಅವಕಾಶ ನೀಡಲು ಮತ್ತು ಅದಕ್ಕೆ ಬೇಕಾದ ತಯಾರಿ ನಡೆಸಲು ಸರ್ಕಾರ ಸಹಾಯ ನೀಡಲು ಒತ್ತಾಯಿಸುತ್ತೇವೆ.

ಈ  ಬೇಡಿಕೆಗಳನ್ನು ತಮ್ಮದು ಎಂದುಕೊಂಡಂತಹ ಎಲ್ಲಾ ರಂಗಕರ್ಮಿಗಳು ಈ ಕುರಿತು ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಂದು (ಗಾಂಧಿ ಜಯಂತಿ ದಿನ) ತಾವು ಇರುವಲ್ಲಿಯೇ ಪ್ರತಿಭಟನೆ ದಾಖಲಿಸಬೇಕಾಗಿ ‘ಪಾರಿಜಾತ ಬಳಗ’ ಕೋರಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...