Homeಕರ್ನಾಟಕಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನೋಡಿ ಸ್ವಾಮಿ, ಶಿರಾ ಕ್ಷೇತ್ರದಲ್ಲಿ ಹಳೆ ಹುಲಿಗಳು ಇದ್ದರೆ ಮಾತ್ರ ಮತಗಳು ಬೀಳುತ್ತವೆ. ಇಲ್ಲಿ ಹೊಸಬರು ಮತ್ತು ಹೊಸ ನಾಣ್ಯಗಳು ಚಲಾವಣೆಯಾಗುವುದಿಲ್ಲ. ಕ್ಷೇತ್ರದ ಜನ ನಾಮಪತ್ರ ಸಲ್ಲಿಸುವವರೆಗೂ ಸುಮ್ಮನೆ ಲೆಕ್ಕಾಚಾರ ಮಾಡುತ್ತಾರೆ.

- Advertisement -
- Advertisement -

ಶಿರಾ ಕ್ಷೇತ್ರದ ಉಪಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇವೆ. ಬಹುತೇಕ ಮುಂದಿನ ವಾರದೊಳಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಮೂರೂ ಪಕ್ಷಗಳು ತೀವ್ರ ಕಸರತ್ತು ನಡೆಸಿವೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ಬಿರುಸಾಗಿಯೇ ಸಾಗಿದೆ. ಮೂರು ಪಕ್ಷಗಳ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಗುಂಪು ಚರ್ಚೆಗೂ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿದೆ. ಆದರೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದಿಂದ ಯಾರು ಸ್ಪರ್ಧಿಸುತ್ತಾರೆಂಬ ಸ್ಪಷ್ಟ ಚಿತ್ರಣ ಇದುವರೆಗೂ ಗೋಚರಿಸಿಲ್ಲ. ಹೀಗಾಗಿ ಈ ಎರಡೂ ಪಕ್ಷಗಳಿಗೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಿನ ವಿಷಯವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ದಿನಕ್ಕೊಬ್ಬ ಆಕಾಂಕ್ಷಿಗಳ ಹೆಸರು ಚಾಲ್ತಿಗೆ ಬರುತ್ತಲೇ ಇವೆ.

ಬಿಜೆಪಿ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಷಯವನ್ನು ಮುನ್ನೆಲೆಗೆ ತಂದಿತು. ಅದು ಉರುಳಿಸಿದ ದಾಳ ಬಿಜೆಪಿಗೆ ಮುಳುವಾಯಿತು. ಕ್ಷೇತ್ರದ ಮತದಾರರ ಆಕ್ರೋಶಕ್ಕೆ ಗುರಿಯಾಗಬೇಕಾಯಿತು. ಇದು ಜನರಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಅದೇ ಕಾರಣಕ್ಕಾಗಿಯೇ ಕ್ಷೇತ್ರದ ಜನ ಮೊದಲು ಮದಲೂರು ಕೆರೆಗೆ ನೀರು ಹರಿಸಿ, ಬಳಿಕ ಮತ ಕೇಳಲು ಬನ್ನಿ ಎಂದು ಅಭ್ಯರ್ಥಿಗಳಿಗೆ ಸವಾಲು ಹಾಕಿದ್ದಾರೆ. ಜನರ ಈ ಸವಾಲನ್ನು ಸ್ವೀಕರಿಸಲು ಯಾವ ಅಭ್ಯರ್ಥಿಯೂ ಮುಂದೆ ಬಂದಿಲ್ಲ. ಕೇವಲ ಮತಕ್ಕಾಗಿ ಮದಲೂರು ಕೆರೆಗೆ ನೀರು ಹರಿಸುವ ವಿಷಯವನ್ನು ಪ್ರಸ್ತಾಪಿಸಿದರೆ ಜನ ಕಣ್ಣು ಮುಚ್ಚಿ ಓಟು ಹಾಕುತ್ತಾರೆಂಬ ಭ್ರಮೆಯನ್ನು ಬಿಡಬೇಕು ಎನ್ನುತ್ತಾರೆ ಕ್ಷೇತ್ರದ ಮತದಾರರು.

ಇದನ್ನೂ ಓದಿ: ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಸ್ಥಳೀಯ ಮುಖಂಡ ರಾಚಪ್ಪ ನಾನುಗೌರಿ.ಕಾಂ ಜೊತೆ ವಸ್ತುಸ್ಥಿತಿಯನ್ನು ಹಂಚಿಕೊಂಡರು.”ಬಿಜೆಪಿ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆ-ನೋವು ಆಲಿಸುತ್ತಿಲ್ಲ. ನದಿ ಜೋಡಣೆ, ಕಪ್ಪುಹಣ, ಭ್ರಷ್ಟಾಚಾರ ನಿರ್ಮೂಲನೆ ಮೊದಲಾದ ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ಗೆ 60 ವರ್ಷ ಆಳ್ವಿಕೆಗೆ ಅವಕಾಶ ಕೊಟ್ಟಿದ್ದೀರಿ. ನಮಗೆ 6 ವರ್ಷ ಕೊಡಿ ಎಂದು ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಮೋದಿ ಪ್ರಧಾನಿ ಆದರು. ಜನರ ಪರವಾದ ಯೋಜನೆಗಳನ್ನೇ ಜಾರಿಗೊಳಿಸಲಿಲ್ಲ. ಅವರು ಕೊಟ್ಟ ಭರವಸೆಗಳು ನನ್ನ ಕಿವಿಯಲ್ಲಿ ಗುಯ್ ಗುಡುತ್ತಿವೆ. ಏನೂ ಕೆಲಸ ಆಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಶಿರಾ ಕ್ಷೇತ್ರಕ್ಕೆ ಬಿಜೆಪಿ ಏನು ಮಾಡಿದೆ. ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿವೃದ್ಧಿ ಕೆಲಸಗಳನ್ನೇ ಮಾಡಿಲ್ಲ. ಶಾಸಕ ಬಿ.ಸತ್ಯನಾರಾಯಣ್ ಅವರಿದ್ದಾಗ ಜನರ ಸಮಸ್ಯೆಗಳಿಗೆ ಸ್ಪಂದಿಸಿದರು. ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಿದರು. ಬಡವರ ನೋವಿಗೆ ಮರುಗುತ್ತಿದ್ದರು. ಕೆಲಸ ಮಾಡಿಕೊಡುತ್ತಿದ್ದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಕೂಡ ಸಾಕಷ್ಟು ಕೆಲಸ ಮಾಡಿದ್ದಾರೆ. ನೀರಾವರಿ ಯೋಜನೆಗಳನ್ನು ಶಿರಾಕ್ಕೆ ತಂದಿದ್ದಾರೆ. ಈಗ ಬಿಜೆಪಿ ಸರ್ಕಾರ ಇದೆ  ನಿಜ. ಹಾಗೆಂದು ಎಸ್.ಆರ್. ಗೌಡಗೆ ಟಿಕೆಟ್ ನೀಡಿದರೆ ಏನು ಕೆಲಸ ಮಾಡಬಲ್ಲ? ಅವರು ಕೇವಲ ಕಳ್ಳಂಬೆಳ್ಳ ಹೋಬಳಿಗೆ ಮಾತ್ರ ಸೀಮಿತರಾಗಿದ್ದಾರೆ” ಎನ್ನುತ್ತಾರೆ ರಾಚಪ್ಪ.

ಇದನ್ನೂ ಓದಿ: ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ಬಿಜೆಪಿ, ಜೆಡಿಎಸ್ ಪಕ್ಷಗಳು ದೇವಾಲಯಗಳಿಗೆ ಹಣ ನೀಡುತ್ತಿವೆ. ಗೌಡಗೆರೆ ಹೋಬಳಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯ ಪತಿ ಕಲ್ಕೆರೆ ರವಿ ಕುಮಾರ್ ಸುಮಾರು 25 ದೇವಾಲಯಗಳ ಗೋಪುರ ನಿರ್ಮಾಣ, ಪ್ರಾಂಗಣ ನಿರ್ಮಾಣ ಮಾಡಿಸಿಕೊಟ್ಟಿದ್ದಾರೆ. ಜನರ ಒಲವು ಅವರ ಪರವಾಗಿದೆ. ಈಗ ಬಿಜೆಪಿ ದೇವಾಲಯಗಳಿಗೆ ಹಣ ಹಂಚಿಕೆ ಮಾಡುತ್ತಿದೆ ಎಂಬ ಮಾತುಗಳು ಚರ್ಚೆಯಾಗುತ್ತಿವೆ ಎನ್ನುತ್ತಾರೆ ಕ್ಷೇತ್ರದ ಜನ.

“ನೋಡಿ ಸ್ವಾಮಿ, ಶಿರಾ ಕ್ಷೇತ್ರದಲ್ಲಿ ಹಳೆ ಹುಲಿಗಳು ಇದ್ದರೆ ಮಾತ್ರ ಮತಗಳು ಬೀಳುತ್ತವೆ. ಇಲ್ಲಿ ಹೊಸಬರು ಮತ್ತು ಹೊಸ ನಾಣ್ಯಗಳು ಚಲಾವಣೆಯಾಗುವುದಿಲ್ಲ. ಕ್ಷೇತ್ರದ ಜನ ನಾಮಪತ್ರ ಸಲ್ಲಿಸುವವರೆಗೂ ಸುಮ್ಮನೆ ಲೆಕ್ಕಾಚಾರ ಮಾಡುತ್ತಾರೆ. ಆನಂತರವೇ ಯಾರು ಸಮರ್ಥರು ಎಂಬುದನ್ನು ತೀರ್ಮಾನಿಸಿ ಒಮ್ಮತಕ್ಕೆ ಬಂದು ಮತ ಚಲಾಯಿಸುತ್ತಾರೆ. ತಕ್ಷಣವೇ ಈ ಕ್ಷೇತ್ರದ ಜನ ಗುಟ್ಟು ಬಿಟ್ಟುಕೊಡುವುದಿಲ್ಲ. ಬಿಜೆಪಿ ಹೊಸಬರನ್ನು ತಂದು ನಿಲ್ಲಿಸಿದರೆ ಬೀಳುವ ಮತಗಳು ಮತ್ತೊಂದು ಕಡೆ ಚಲಾವಣೆಗೊಳ್ಳುತ್ತವೆ” ಇವು ಕ್ಷೇತ್ರದ ಮತದಾರರ ಆಂತರ್ಯದ ಮಾತುಗಳು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆಗಳು ಮತ್ತು ಸುಗ್ರೀವಾಜ್ಞೆಗಳನ್ನು ಅಂಗೀಕರಿಸಿವೆ. ರೈತ, ಕಾರ್ಮಿಕ, ದಲಿತ ಸಂಘಟನೆಗಳು ರೈತ ಕಾರ್ಮಿಕ ಮಸೂದೆಗಳನ್ನು ವಾಪಸ್ ಪಡೆಯುವಂತೆ ಹೋರಾಟ ಮಾಡುತ್ತಿವೆ. ಇದು ಜನರ ಮೇಲೆ ಪರಿಣಾಮ ಬೀರಿದ್ದು ಮತಗಳು ಕೂಡ ಆಡಳಿತ ಪಕ್ಷಕ್ಕೆ ವ್ಯತಿರಿಕ್ತವಾಗಿ ಬೀಳಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...