Homeಚಳವಳಿಭಗತ್‌ ಸಿಂಗ್ ಜನ್ಮದಿನ: ಭಾರತದ ಅದಮ್ಯ ಚೇತನದ ನೆನಪು

ಭಗತ್‌ ಸಿಂಗ್ ಜನ್ಮದಿನ: ಭಾರತದ ಅದಮ್ಯ ಚೇತನದ ನೆನಪು

ಭಗತ್ ಸಿಂಗ್ ಎಂಬ ಕ್ರಾಂತಿಕಾರಿಯ 'ನೂರ ಹದಿಮೂರನೇ ಜಯಂತಿ' ಆಚರಿಸುವ ಈ ಹೊತ್ತಿನಲ್ಲಿ ನಾವು ದೇಶಭಕ್ತ ಎಂದು ಪೂಜಿಸುವುದು, ಆತನನ್ನು ಒಂದು ಕೋಮು, ಪಕ್ಷ, ಜಾತಿಗೆ ಸೀಮಿತಗೊಳಿಸುವ ಸಾಹಸ ಅಪ್ಪಿತಪ್ಪಿಯೂ ಮಾಡಬಾರದು.

- Advertisement -
- Advertisement -

“ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಚಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.” ಇಂತಹ ಕೋರಿಕೆಯ ಮಾತುಗಳು ಬ್ರಿಟೀಷ್ ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಹೇಳಿರುವ ಕ್ರಾಂತಿಕಾರಿ ವೀರ ಯಾರು ಗೊತ್ತಾ? ಅವರೇ ಭಗತ್ ಸಿಂಗ್!

ಭಾರತದ ಇತಿಹಾಸದಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯುವ ಅದಮ್ಯ ಚೇತನ ಶಾಹಿದ್ ಭಗತ್ ಸಿಂಗ್. ಬ್ರಿಟಿಷ್ ವಸಾಹತುಶಾಹಿಯ ನೇಣಿಗೆ ನಗು ನಗುತ್ತಲೇ ಕೊರಳೊಡ್ಡಿದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ವೀರ. ಆತ ಬದುಕ್ಕಿದ್ದು ಕೇವಲ ಇಪ್ಪತ್ಮೂರು ವರ್ಷ ಮಾತ್ರ, ಆದರೆ ಆತನ ಕ್ರಾಂತಿಯ ಕಿಚ್ಚು ಲಕ್ಷಾಂತರ  ಯುವ ಸಮುದಾಯದ ಎದೆಯೊಳಗೆ ಹೊತ್ತಿಸಿದ್ದು ಸುಳ್ಳಲ್ಲ.

‘ಭಗತ್ ಸಿಂಗ್’ ಎಂದರೆ ಸ್ಪೂರ್ತಿಯ ಸೆಲೆ, ದೇಶಪ್ರೇಮದ ಕಿಡಿ, ಯುವ ಮನಸ್ಸಿಗೆ ಮತ್ತಷ್ಟು ಹುಮ್ಮಸ್ಸು ತುಂಬುವ ಧೀರ ಶಕ್ತಿ. ಈ ಎಲ್ಲಾ ಸಾಮರ್ಥ್ಯವನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಭಗತ್ ಸಿಂಗ್ ಭಾರತೀಯರಿಗೆ ಸದಾ ಯುವ ಚೇತನ, ಕ್ರಾಂತಿಯ ಚಿಲುಮೆ. ಭಗತ್‌‌ಸಿಂಗ್ ನಿಗೆ ಕೇವಲ ‘ಹುತಾತ್ಮ’ರ ಪಟ್ಟಿಗೆ ಸೇರಿಸಿ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಎಂದಷ್ಟೇ ಕರೆದು ಸೀಮಿತಗೊಳಿಸುವ ಪ್ರಯತ್ನ ಮಾಡುವುದು ಅಷ್ಟು ಸಮಂಜಸವಲ್ಲ.

ತನ್ನ ವಯಸ್ಸಿಗೆ ಮೀರಿದ ಭಗತನ ಪ್ರಬುದ್ಧತೆ, ಬರಹಗಳು ಬ್ರಿಟಿಷ್ ವಸಾಹತುಶಾಹಿಗೆ ನಡುಕ ಹುಟ್ಟಿಸುತ್ತಿದ್ದವು. ಅಂದಿನ ಸಮಕಾಲೀನ ಸಮಾಜದ ಅಸಮಾನತೆ, ಶೋಷಣೆ, ಧರ್ಮಾಂಧತೆ, ಕೋಮುವಾದ ವಿರುದ್ಧ ಕಠೋರ ನಿಲುವು ತಾಳಿದ ಭಗತ್ ಸಿಂಗ್ ಚಿಂತನೆಗಳು ಮುನ್ನೆಲೆಗೆ ಬರಬೇಕಾಗಿದೆ. ಆತನ ವಿಚಾರಗಳು ಪ್ರಸ್ತುತ ಸಮಾಜದ ಸ್ಥಿತಿಗತಿಗೆ ಹಿಡಿದ ಕನ್ನಡಿಯಾಗಿವೆ.

“ವ್ಯಕ್ತಿಗಳನ್ನು ಕೊಲ್ಲಬಹುದು, ಆದರೆ ಅವರ ವಿಚಾರಗಳನ್ನಲ್ಲ” ಎಂದಿರುವ ಭಗತ್‍ ಸಿಂಗ್‍ ದೈಹಿಕವಾಗಿ ಇಂದು ನಮ್ಮೊಂದಿಗಿಲ್ಲ. ಆದರೆ ಆತನೇ ಹೇಳಿರುವಂತೆ ಆತನ ಪ್ರಬುದ್ಧತೆಯ ಲೇಖನಗಳು, ಆದರ್ಶ ಸಿದ್ಧಾಂತ, ಕ್ರಾಂತಿಕಾರಿ ಹೋರಾಟದ ಬದುಕು ಇಂದಿಗೂ ಭಾರತದಲ್ಲಿ ಉಸಿರಾಡುತ್ತಿದೆ.  ನಾವು ಭಗತ್ ಸಿಂಗ್ ನನ್ನು ಒಬ್ಬ ಅಪ್ಪಟ ‘ದೇಶಪ್ರೇಮಿ’ ಎಂದು ಆರಾಧನೆ ಮಾಡುವುದಲ್ಲ. ಭಗತ್ ನ ಉನ್ನತ ಧ್ಯೇಯ ಮತ್ತು ಆದರ್ಶ ಚಿಂತನೆಗಳು ಪ್ರಸ್ತುತ ಸಮಾಜದಲ್ಲಿ ಅನುಷ್ಠಾನಗೊಳಿಸುವ ಪ್ರಯತ್ನ ಮಾಡುವುದು ತೀರ ಅಗತ್ಯತೆ ಇದೆ. ಇದೇ ನಾವು ಆತನಿಗೆ ಸಲ್ಲಿಸುವ ಮಹೋನ್ನತ ಗೌರವವಾಗಿದೆ.

ಶಾಹಿದ್ ಭಗತ್ ಸಿಂಗ್ ಹುಟ್ಟಿದ್ದು ಇಪ್ಪತ್ತೆಂಟನೆ ಸೆಪ್ಟೆಂಬರ್ 1907 ರಂದು, ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಮೂರನೆಯ ಮಗನಾಗಿ ಭಗತನು ಜನಿಸಿದ. ಅಗಾಧ ದೇಶಭಕ್ತಿಗೆ ಹೆಸರುವಾಸಿ, ಹಾಗೂ ಕ್ರಾಂತಿಕಾರಿ ವಿಚಾರಧಾರೆಯ ಕುಟುಂಬದಲ್ಲಿ ಜನಿಸಿದ ಭಗತ ಎದೆಯಲ್ಲಿ ಹುಟ್ಟುತ್ತಲೇ ದೇಶಪ್ರೇಮದ ಕಿಚ್ಚು ಮೊಳಕೆಯೊಡೆದಿತ್ತು.

ಅದು 1919ರ ವೇಳೆ ಜಲಿಯಾನ್ ವಾಲ್ ಬಾಗದಲ್ಲಿ ಸಂಭವಿಸಿದ ರಕ್ತ ಕ್ರಾಂತಿಯ ಹತ್ಯಾಕಾಂಡ ಭಗತ್ ಸಿಂಗ್ ನಿಗೆ ಅತಿಯಾಗಿ ಕಾಡಿದ್ದು. ಅಂದಿನ ಆ ಘಟನೆ ಭಗತ್ ಸಿಂಗ್ ನನ್ನು ಒಬ್ಬ ಅಪ್ರತಿಮ ಹೋರಾಟಗಾರ, ಕೌರ್ಯ ಸಮಾಜದ ವಿರುದ್ಧ ಸಿಡಿದೇಳುವಂತೆ ಮಾಡಿತ್ತು. ಮುಂದೆ ಬ್ರಿಟೀಷ್ ರಿಗೆ ಸಿಂಹಸ್ವಪ್ನವಾಗಿ, ಭವಿಷ್ಯ ಭಾರತದ ದಾರ್ಶನಿಕತೆಗಾಗಿ, ಶೋಷಣೆ ರಹಿತ, ಜಾತಿ ರಹಿತವಾದ ಸಮ ಸಮಾಜಕ್ಕಾಗಿ ಹೋರಾಡಿದನು.

ಭಾರತದ ಸ್ವಾತಂತ್ರ್ಯ ಚಳುವಳಿಗೆ ಬ್ರಿಟಿಷರ ವಿರುದ್ಧ ಸಮರ ಸಾರಿದವರಲ್ಲಿ ಭಗತ್‍ಸಿಂಗ್ ಮತ್ತು ಆತನ ಸಂಗಾತಿಗಳಾದ ರಾಜಗುರು, ಸುಖದೇವ್ ಮೊದಲಿಗರು. ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ಸಾಮ್ರಾಜ್ಯದ ವಿರುದ್ಧ ಅಷ್ಟೇ ಹೋರಾಟ ನಡೆಸಲಿಲ್ಲ. ದೇಶದ ಕೋಮುವಾದ, ಅಸಮಾನತೆ, ಶೋಷಣೆ, ಅಶಾಂತಿ ಮತ್ತು ಕೌರ್ಯದ ವಿರುದ್ಧ ಹೋರಾಟ ಆರಂಭಿಸಿದನು.

ಬಹುತ್ವ ಭಾರತದ ಅಸ್ಮಿತೆ ಉಳಿವಿಗಾಗಿ ಶ್ರಮಿಸಿದ ಭಗತ್ ಸಿಂಗ್  “ಭಾರತದ ನೆಲದಲ್ಲಿ ಪ್ರಸ್ತುತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ಸಮಾಜವಾದಿ ಗಣತಂತ್ರವನ್ನು ಸ್ಥಾಪಿಸುವವರೆಗೂ ನಮ್ಮ ಅವಿರತ ಹೋರಾಟ ದಿಟ್ಟತನದಿಂದ, ದೃಢತೆಯಿಂದ ಮತ್ತು ಅಪರಿಮಿತ ವಿಶ್ವಾಸದಿಂದ ನಡೆಯುತ್ತದೆ” ಎನ್ನುವ ಕೆಚ್ಚೆದೆಯ ಚಿಂತನೆಗಳು ಪ್ರತಿಪಾದಿಸಿದನು.

ಕ್ರಾಂತಿಯ ಮೂಲಕವೇ ಸಾಮಾಜಿಕ ಬದಲಾವಣೆ ಬಯಸಿದ ಭಗತ್ ಸಿಂಗ್ ‘ಕ್ರಾಂತಿ’ ಎಂದರೆ ಕ್ರಿಯೆ ಹಾಗೂ ಪವಿತ್ರವಾದದ್ದು ಎಂದು ತಿಳಿದಿದನು. “ಸಂಘಟಿತರಾಗಿ, ವ್ಯವಸ್ಥಿತವಾದ ಕಾರ್ಯ ಯೋಜನೆಯ ಮೂಲಕ ಉದ್ದೇಶಪೂರ್ವಕವಾಗಿ ಬದಲಾವಣೆ ತರುವುದನ್ನು ಕ್ರಾಂತಿ ಎನ್ನಲಾಗುತ್ತದೆ” ಎಂದು ಹೇಳುತ್ತಾನೆ. ಮುಂದೆ ‘ಕ್ರಾಂತಿಕಾರಿಗಳು ಸಂಪೂರ್ಣ ಕ್ರಾಂತಿಗಾಗಿ ಹೋರಾಡುತ್ತೇವೆ ಆದರೆ ಸಂಪ್ರದಾಯವಾದಿಗಳು ಕ್ರಾಂತಿಕಾರಿ ಶಕ್ತಿಯನ್ನು ಭಂಗಗೊಳಿಸಿ ಹೋರಾಟವನ್ನು ವಿಫಲಗೊಳಿಸುತ್ತಾರೆ. ಹಾಗಾಗಿ ಇಂತಹ ಬಿಕ್ಕಟ್ಟಿನ ಸನ್ನಿವೇಶಗಳಲ್ಲಿ ನಾವು ಗೊಂದಲಕ್ಕೆ ಒಳಗಾಗದೇ ಧ್ಯೇಯವನ್ನು ಸಾಧಿಸಬೇಕು’ ಎನ್ನುವ ಸವಾಲು ಎದುರಿಸಲು ಧೈರ್ಯ ತುಂಬುತ್ತಾನೆ.

ಭಗತ್ ಸಿಂಗ್ ಎಂಬ ಕ್ರಾಂತಿಕಾರಿಯ ‘ನೂರ ಹದಿಮೂರನೇ ಜಯಂತಿ’ ಆಚರಿಸುವ ಈ ಹೊತ್ತಿನಲ್ಲಿ ನಾವು ದೇಶಭಕ್ತ ಎಂದು ಪೂಜಿಸುವುದು, ಆತನನ್ನು ಒಂದು ಕೋಮು, ಪಕ್ಷ, ಜಾತಿಗೆ ಸೀಮಿತಗೊಳಿಸುವ ಸಾಹಸ ಅಪ್ಪಿತಪ್ಪಿಯೂ ಮಾಡಬಾರದು.

“ಸಮಾಜವನ್ನು ನೂತನ ನೆಲೆಯಲ್ಲಿ, ಹೆಚ್ಚು ಸಮರ್ಥವಾದ ನೆಲೆಯಲ್ಲಿ, ಪ್ರಸಕ್ತ ಆಡಳಿತ ವ್ಯವಸ್ಥೆ ಮತ್ತು ಪ್ರಭುತ್ವವನ್ನು ಕೊನೆಗೊಳಿಸಿ ವ್ಯವಸ್ಥಿತವಾಗಿ ನವ ಸಮಾಜವನ್ನು ನಿರ್ಮಿಸುವುದು ಕ್ರಾಂತಿಯ ಸ್ವರೂಪ” ಎಂದಿರುವ ಭಗತ್ ಸಿಂಗ್ ಚಿಂತನೆ ಇಂದು ಇಲ್ಲವಾಗುತ್ತಿವೆ. ಆತನ ಮೂಲ ತತ್ವ ಸಿದ್ಧಾಂತ ಬದಿಗೊತ್ತಿ ಹುಸಿಚಿಂತನೆಯ ಸಿದ್ಧಾಂತದ ತೆಕ್ಕೆಗೆ ಸೆಳೆದುಕೊಳ್ಳುವ ಪ್ರತಿಗಾಮಿ ಶಕ್ತಿಗಳ ಪ್ರಯತ್ನ ಎಗ್ಗಿಲ್ಲದೆ ನಡೆಸುತ್ತಿದೆ.

ಸಾಮಾಜಿಕ ವಿಚಾರಗಳನ್ನು ಸೇರಿದಂತೆ ಇನ್ನಿತರ ಮಹನೀಯರು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅನುಭವಾತ್ಮಕವಾಗಿ ಅರ್ಥೈಸಿಕೊಳ್ಳಲು ಭಗತ್ ಸಿಂಗ್ ಹೆಚ್ಚು ಇಷ್ಟಪಡುತ್ತಿದ್ದನು. ಹೀಗಾಗಿಯೇ “ಎಲ್ಲ ವಿಚಾರಗಳ ಅಧ್ಯಯನ ನಡೆಸಲು ಸೆರೆಮನೆಯೇ ಸೂಕ್ತ ತಾಣ ಎಂದು ನನಗೆ ಭಾಸವಾಗುತ್ತದೆ. ಯಾವುದೇ ವ್ಯಕ್ತಿ ಸ್ವತಃ ನೋವು ಅನುಭವಿಸಿದಲ್ಲಿ ಮಾತ್ರ‌ ಸ್ವಯಂ ಅಧ್ಯಯನ ಅತ್ಯುನ್ನತ ಹಂತ ಕಾಣಲು ಸಾಧ್ಯ” ಎಂದು
ಓದು-ಬರಹದ ಬಗ್ಗೆ ತನಗಿರುವ ಹೆಮ್ಮೆಯ ಕುರಿತು ಹೇಳಿಕೊಂಡಿದ್ದಾನೆ.

ಸಮಕಾಲೀನ ಭಾರತದಲ್ಲಿ ಭಗತ್ ಸಿಂಗ್ ಕೇವಲ ಆರಾಧನೆಗಾಗಿ ಮಾತ್ರ ಉಳಿದಿದ್ದಾನೆ ಎಂದೆನಿಸುತ್ತಿದೆ. ಇಂದು ಭಾರತದಲ್ಲಿ ಭಗತನು ಪ್ರತಿಪಾದಿಸಿದ ಸಿದ್ಧಾಂತ ಉಸಿರಾಡಲು ನಲುಗುತ್ತಿದೆ. ಎಲ್ಲ ಮೌಲ್ಯಗಳೂ ಪ್ರಭುತ್ವದ ಶೋಷಣೆಗೆ ಸಿಲುಕಿ ಒದ್ದಾಡುತ್ತಿವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಕಳೆದುಕೊಳ್ಳುತ್ತಿರುವ ಪ್ರಸ್ತುತ ಸಮಾಜದಲ್ಲಿ ಮಾತು ಮೌನವಾಗಿ, ಕಣ್ಣಿದ್ದು ಕುರುಡರಾಗಿದ್ದೇವೆ. ನಾನು ಈ ನೆಲದ ಅಸ್ಮಿತೆಯ ಉಳಿವಿಗಾಗಿ ಹೋರಾಡಿದ್ದೇನೆ, ನನ್ನನ್ನು ಗುಂಡಿಕ್ಕಿ ಕೊಂದುಬಿಡಿ, ಎಂದು ಬ್ರಿಟಿಷ ಸರ್ಕಾರಕ್ಕೆ ವಿನಂತಿಸಿಕೊಂಡು ತನ್ನ ಕೆಚ್ಚೆದೆಯ ಅಪ್ರತಿಮ ಚೈತನ್ಯ ತೋರಿದ ಭಾರತದ ಏಕೈಕ ದೇಶಪ್ರೇಮಿ ಭಗತನಿಗೆ ಇನ್ನೂ ‘ಭಾರತ ರತ್ನ’ ಕೊಡಲು ಸಾಧ್ಯವಾಗಲಿಲ್ಲ.

ಭಗತ್ ‌ಸಿಂಗ್, ರಾಜಗುರು ಹಾಗೂ ಸುಖದೇವ್ ಸೇರಿದಂತೆ ಅಸಂಖ್ಯಾತ ಸಂಗಾತಿಗಳನ್ನು ನಾವು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಆದರೆ ಇಂದಿನ ಯುವ ‌‌ಸಮುದಾಯವನ್ನು ಒಗ್ಗೂಡಿಸಿ ಕ್ರಾಂತಿಯ ಮಾರ್ಗದಲ್ಲಿ ಕೊಂಡೊಯ್ಯಬಲ್ಲ ಸಾಮರ್ಥ್ಯ ಕೇವಲ ಭಗತ್ ಸಿಂಗ್ ಚಿಂತನೆಗಳಲ್ಲಿದೆ. ಅಂದಿನ ಭಗತ್ ಸಿಂಗ್ ಎನ್ನುವ ‘ರಿಯಲ್ ಹೀರೋ’ ಇಂದಿನ ಯುವ ಪೀಳಿಗೆಗೆ ಆದರ್ಶ, ರೋಲ್ ಮಾಡೆಲ್.

ಭಗತ್ ಸಿಂಗ್ ನ ಆಳವಾದ ಚಿಂತನೆ, ಆತನ ಮಾನವೀಯ ಮೌಲ್ಯಗಳು ಈಗಾಗಲೇ ನಮ್ಮೆಲ್ಲರ ಮನಸ್ಸಿನ ಪ್ರಭಾವ ಬೀರಿವೆ. ನಾವು ಕಟ್ಟಲು ಬಯಸಿದ ಭವಿಷ್ಯ ಭಾರತ ದೇಶಕ್ಕೆ ಭಗತ್ ಸಿಂಗ್ ಎನ್ನುವ ತರುಣ ಸದಾ ಆದರ್ಶವಾಗಿರುತ್ತಾನೆ. ಆತನ ಚಿಂತನೆಗಳು ಮತ್ತೆ ಮುನ್ನೆಲೆಗೆ ತರುವ ಪ್ರಯತ್ನ ನಾವೆಲ್ಲರೂ ಮಾಡಬೇಕಾಗಿದೆ. ತ್ಯಾಗ ಬಲಿದಾನದ ಸಂಕೇತವಾಗಿ ಗಳಿಸಿದ ಈ ಸ್ವಾತಂತ್ರ್ಯವನ್ನು ನಾವು ಅಷ್ಟೇ ಹೆಮ್ಮೆ ಹಾಗೂ ಗೌರವದಿಂದ ಉಳಿಸಿಕೊಳ್ಳುವ ಮಹತ್ವದ ಜವಾಬ್ದಾರಿ ಕೂಡ ನಮ್ಮೆಲ್ಲರ ಮೇಲಿದೆ, ಅದಕ್ಕೆ ಭಗತ್ ಸಿಂಗ್ ಎನ್ನುವ ಕ್ರಾಂತಿಯ ಯುವ ಚೇತನ ಸ್ಪೂರ್ತಿವೆ.

ಬಾಲಾಜಿ ಕುಂಬಾರ, ಚಟ್ನಾಳ,

ಶಿಕ್ಷಕರು ಮತ್ತು ಯುವ ಬರಹಗಾರ. ತಾ.ಔರಾದ ಬಾ, ಜೀ. ಬೀದರ.


ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...