Homeಚಳವಳಿಭಗತ್‌ ಸಿಂಗ್ ಜನ್ಮದಿನ: ಭಾರತದ ಅದಮ್ಯ ಚೇತನದ ನೆನಪು

ಭಗತ್‌ ಸಿಂಗ್ ಜನ್ಮದಿನ: ಭಾರತದ ಅದಮ್ಯ ಚೇತನದ ನೆನಪು

ಭಗತ್ ಸಿಂಗ್ ಎಂಬ ಕ್ರಾಂತಿಕಾರಿಯ 'ನೂರ ಹದಿಮೂರನೇ ಜಯಂತಿ' ಆಚರಿಸುವ ಈ ಹೊತ್ತಿನಲ್ಲಿ ನಾವು ದೇಶಭಕ್ತ ಎಂದು ಪೂಜಿಸುವುದು, ಆತನನ್ನು ಒಂದು ಕೋಮು, ಪಕ್ಷ, ಜಾತಿಗೆ ಸೀಮಿತಗೊಳಿಸುವ ಸಾಹಸ ಅಪ್ಪಿತಪ್ಪಿಯೂ ಮಾಡಬಾರದು.

- Advertisement -
- Advertisement -

“ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಚಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.” ಇಂತಹ ಕೋರಿಕೆಯ ಮಾತುಗಳು ಬ್ರಿಟೀಷ್ ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಹೇಳಿರುವ ಕ್ರಾಂತಿಕಾರಿ ವೀರ ಯಾರು ಗೊತ್ತಾ? ಅವರೇ ಭಗತ್ ಸಿಂಗ್!

ಭಾರತದ ಇತಿಹಾಸದಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯುವ ಅದಮ್ಯ ಚೇತನ ಶಾಹಿದ್ ಭಗತ್ ಸಿಂಗ್. ಬ್ರಿಟಿಷ್ ವಸಾಹತುಶಾಹಿಯ ನೇಣಿಗೆ ನಗು ನಗುತ್ತಲೇ ಕೊರಳೊಡ್ಡಿದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ವೀರ. ಆತ ಬದುಕ್ಕಿದ್ದು ಕೇವಲ ಇಪ್ಪತ್ಮೂರು ವರ್ಷ ಮಾತ್ರ, ಆದರೆ ಆತನ ಕ್ರಾಂತಿಯ ಕಿಚ್ಚು ಲಕ್ಷಾಂತರ  ಯುವ ಸಮುದಾಯದ ಎದೆಯೊಳಗೆ ಹೊತ್ತಿಸಿದ್ದು ಸುಳ್ಳಲ್ಲ.

‘ಭಗತ್ ಸಿಂಗ್’ ಎಂದರೆ ಸ್ಪೂರ್ತಿಯ ಸೆಲೆ, ದೇಶಪ್ರೇಮದ ಕಿಡಿ, ಯುವ ಮನಸ್ಸಿಗೆ ಮತ್ತಷ್ಟು ಹುಮ್ಮಸ್ಸು ತುಂಬುವ ಧೀರ ಶಕ್ತಿ. ಈ ಎಲ್ಲಾ ಸಾಮರ್ಥ್ಯವನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಭಗತ್ ಸಿಂಗ್ ಭಾರತೀಯರಿಗೆ ಸದಾ ಯುವ ಚೇತನ, ಕ್ರಾಂತಿಯ ಚಿಲುಮೆ. ಭಗತ್‌‌ಸಿಂಗ್ ನಿಗೆ ಕೇವಲ ‘ಹುತಾತ್ಮ’ರ ಪಟ್ಟಿಗೆ ಸೇರಿಸಿ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಎಂದಷ್ಟೇ ಕರೆದು ಸೀಮಿತಗೊಳಿಸುವ ಪ್ರಯತ್ನ ಮಾಡುವುದು ಅಷ್ಟು ಸಮಂಜಸವಲ್ಲ.

ತನ್ನ ವಯಸ್ಸಿಗೆ ಮೀರಿದ ಭಗತನ ಪ್ರಬುದ್ಧತೆ, ಬರಹಗಳು ಬ್ರಿಟಿಷ್ ವಸಾಹತುಶಾಹಿಗೆ ನಡುಕ ಹುಟ್ಟಿಸುತ್ತಿದ್ದವು. ಅಂದಿನ ಸಮಕಾಲೀನ ಸಮಾಜದ ಅಸಮಾನತೆ, ಶೋಷಣೆ, ಧರ್ಮಾಂಧತೆ, ಕೋಮುವಾದ ವಿರುದ್ಧ ಕಠೋರ ನಿಲುವು ತಾಳಿದ ಭಗತ್ ಸಿಂಗ್ ಚಿಂತನೆಗಳು ಮುನ್ನೆಲೆಗೆ ಬರಬೇಕಾಗಿದೆ. ಆತನ ವಿಚಾರಗಳು ಪ್ರಸ್ತುತ ಸಮಾಜದ ಸ್ಥಿತಿಗತಿಗೆ ಹಿಡಿದ ಕನ್ನಡಿಯಾಗಿವೆ.

“ವ್ಯಕ್ತಿಗಳನ್ನು ಕೊಲ್ಲಬಹುದು, ಆದರೆ ಅವರ ವಿಚಾರಗಳನ್ನಲ್ಲ” ಎಂದಿರುವ ಭಗತ್‍ ಸಿಂಗ್‍ ದೈಹಿಕವಾಗಿ ಇಂದು ನಮ್ಮೊಂದಿಗಿಲ್ಲ. ಆದರೆ ಆತನೇ ಹೇಳಿರುವಂತೆ ಆತನ ಪ್ರಬುದ್ಧತೆಯ ಲೇಖನಗಳು, ಆದರ್ಶ ಸಿದ್ಧಾಂತ, ಕ್ರಾಂತಿಕಾರಿ ಹೋರಾಟದ ಬದುಕು ಇಂದಿಗೂ ಭಾರತದಲ್ಲಿ ಉಸಿರಾಡುತ್ತಿದೆ.  ನಾವು ಭಗತ್ ಸಿಂಗ್ ನನ್ನು ಒಬ್ಬ ಅಪ್ಪಟ ‘ದೇಶಪ್ರೇಮಿ’ ಎಂದು ಆರಾಧನೆ ಮಾಡುವುದಲ್ಲ. ಭಗತ್ ನ ಉನ್ನತ ಧ್ಯೇಯ ಮತ್ತು ಆದರ್ಶ ಚಿಂತನೆಗಳು ಪ್ರಸ್ತುತ ಸಮಾಜದಲ್ಲಿ ಅನುಷ್ಠಾನಗೊಳಿಸುವ ಪ್ರಯತ್ನ ಮಾಡುವುದು ತೀರ ಅಗತ್ಯತೆ ಇದೆ. ಇದೇ ನಾವು ಆತನಿಗೆ ಸಲ್ಲಿಸುವ ಮಹೋನ್ನತ ಗೌರವವಾಗಿದೆ.

ಶಾಹಿದ್ ಭಗತ್ ಸಿಂಗ್ ಹುಟ್ಟಿದ್ದು ಇಪ್ಪತ್ತೆಂಟನೆ ಸೆಪ್ಟೆಂಬರ್ 1907 ರಂದು, ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಮೂರನೆಯ ಮಗನಾಗಿ ಭಗತನು ಜನಿಸಿದ. ಅಗಾಧ ದೇಶಭಕ್ತಿಗೆ ಹೆಸರುವಾಸಿ, ಹಾಗೂ ಕ್ರಾಂತಿಕಾರಿ ವಿಚಾರಧಾರೆಯ ಕುಟುಂಬದಲ್ಲಿ ಜನಿಸಿದ ಭಗತ ಎದೆಯಲ್ಲಿ ಹುಟ್ಟುತ್ತಲೇ ದೇಶಪ್ರೇಮದ ಕಿಚ್ಚು ಮೊಳಕೆಯೊಡೆದಿತ್ತು.

ಅದು 1919ರ ವೇಳೆ ಜಲಿಯಾನ್ ವಾಲ್ ಬಾಗದಲ್ಲಿ ಸಂಭವಿಸಿದ ರಕ್ತ ಕ್ರಾಂತಿಯ ಹತ್ಯಾಕಾಂಡ ಭಗತ್ ಸಿಂಗ್ ನಿಗೆ ಅತಿಯಾಗಿ ಕಾಡಿದ್ದು. ಅಂದಿನ ಆ ಘಟನೆ ಭಗತ್ ಸಿಂಗ್ ನನ್ನು ಒಬ್ಬ ಅಪ್ರತಿಮ ಹೋರಾಟಗಾರ, ಕೌರ್ಯ ಸಮಾಜದ ವಿರುದ್ಧ ಸಿಡಿದೇಳುವಂತೆ ಮಾಡಿತ್ತು. ಮುಂದೆ ಬ್ರಿಟೀಷ್ ರಿಗೆ ಸಿಂಹಸ್ವಪ್ನವಾಗಿ, ಭವಿಷ್ಯ ಭಾರತದ ದಾರ್ಶನಿಕತೆಗಾಗಿ, ಶೋಷಣೆ ರಹಿತ, ಜಾತಿ ರಹಿತವಾದ ಸಮ ಸಮಾಜಕ್ಕಾಗಿ ಹೋರಾಡಿದನು.

ಭಾರತದ ಸ್ವಾತಂತ್ರ್ಯ ಚಳುವಳಿಗೆ ಬ್ರಿಟಿಷರ ವಿರುದ್ಧ ಸಮರ ಸಾರಿದವರಲ್ಲಿ ಭಗತ್‍ಸಿಂಗ್ ಮತ್ತು ಆತನ ಸಂಗಾತಿಗಳಾದ ರಾಜಗುರು, ಸುಖದೇವ್ ಮೊದಲಿಗರು. ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ಸಾಮ್ರಾಜ್ಯದ ವಿರುದ್ಧ ಅಷ್ಟೇ ಹೋರಾಟ ನಡೆಸಲಿಲ್ಲ. ದೇಶದ ಕೋಮುವಾದ, ಅಸಮಾನತೆ, ಶೋಷಣೆ, ಅಶಾಂತಿ ಮತ್ತು ಕೌರ್ಯದ ವಿರುದ್ಧ ಹೋರಾಟ ಆರಂಭಿಸಿದನು.

ಬಹುತ್ವ ಭಾರತದ ಅಸ್ಮಿತೆ ಉಳಿವಿಗಾಗಿ ಶ್ರಮಿಸಿದ ಭಗತ್ ಸಿಂಗ್  “ಭಾರತದ ನೆಲದಲ್ಲಿ ಪ್ರಸ್ತುತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ಸಮಾಜವಾದಿ ಗಣತಂತ್ರವನ್ನು ಸ್ಥಾಪಿಸುವವರೆಗೂ ನಮ್ಮ ಅವಿರತ ಹೋರಾಟ ದಿಟ್ಟತನದಿಂದ, ದೃಢತೆಯಿಂದ ಮತ್ತು ಅಪರಿಮಿತ ವಿಶ್ವಾಸದಿಂದ ನಡೆಯುತ್ತದೆ” ಎನ್ನುವ ಕೆಚ್ಚೆದೆಯ ಚಿಂತನೆಗಳು ಪ್ರತಿಪಾದಿಸಿದನು.

ಕ್ರಾಂತಿಯ ಮೂಲಕವೇ ಸಾಮಾಜಿಕ ಬದಲಾವಣೆ ಬಯಸಿದ ಭಗತ್ ಸಿಂಗ್ ‘ಕ್ರಾಂತಿ’ ಎಂದರೆ ಕ್ರಿಯೆ ಹಾಗೂ ಪವಿತ್ರವಾದದ್ದು ಎಂದು ತಿಳಿದಿದನು. “ಸಂಘಟಿತರಾಗಿ, ವ್ಯವಸ್ಥಿತವಾದ ಕಾರ್ಯ ಯೋಜನೆಯ ಮೂಲಕ ಉದ್ದೇಶಪೂರ್ವಕವಾಗಿ ಬದಲಾವಣೆ ತರುವುದನ್ನು ಕ್ರಾಂತಿ ಎನ್ನಲಾಗುತ್ತದೆ” ಎಂದು ಹೇಳುತ್ತಾನೆ. ಮುಂದೆ ‘ಕ್ರಾಂತಿಕಾರಿಗಳು ಸಂಪೂರ್ಣ ಕ್ರಾಂತಿಗಾಗಿ ಹೋರಾಡುತ್ತೇವೆ ಆದರೆ ಸಂಪ್ರದಾಯವಾದಿಗಳು ಕ್ರಾಂತಿಕಾರಿ ಶಕ್ತಿಯನ್ನು ಭಂಗಗೊಳಿಸಿ ಹೋರಾಟವನ್ನು ವಿಫಲಗೊಳಿಸುತ್ತಾರೆ. ಹಾಗಾಗಿ ಇಂತಹ ಬಿಕ್ಕಟ್ಟಿನ ಸನ್ನಿವೇಶಗಳಲ್ಲಿ ನಾವು ಗೊಂದಲಕ್ಕೆ ಒಳಗಾಗದೇ ಧ್ಯೇಯವನ್ನು ಸಾಧಿಸಬೇಕು’ ಎನ್ನುವ ಸವಾಲು ಎದುರಿಸಲು ಧೈರ್ಯ ತುಂಬುತ್ತಾನೆ.

ಭಗತ್ ಸಿಂಗ್ ಎಂಬ ಕ್ರಾಂತಿಕಾರಿಯ ‘ನೂರ ಹದಿಮೂರನೇ ಜಯಂತಿ’ ಆಚರಿಸುವ ಈ ಹೊತ್ತಿನಲ್ಲಿ ನಾವು ದೇಶಭಕ್ತ ಎಂದು ಪೂಜಿಸುವುದು, ಆತನನ್ನು ಒಂದು ಕೋಮು, ಪಕ್ಷ, ಜಾತಿಗೆ ಸೀಮಿತಗೊಳಿಸುವ ಸಾಹಸ ಅಪ್ಪಿತಪ್ಪಿಯೂ ಮಾಡಬಾರದು.

“ಸಮಾಜವನ್ನು ನೂತನ ನೆಲೆಯಲ್ಲಿ, ಹೆಚ್ಚು ಸಮರ್ಥವಾದ ನೆಲೆಯಲ್ಲಿ, ಪ್ರಸಕ್ತ ಆಡಳಿತ ವ್ಯವಸ್ಥೆ ಮತ್ತು ಪ್ರಭುತ್ವವನ್ನು ಕೊನೆಗೊಳಿಸಿ ವ್ಯವಸ್ಥಿತವಾಗಿ ನವ ಸಮಾಜವನ್ನು ನಿರ್ಮಿಸುವುದು ಕ್ರಾಂತಿಯ ಸ್ವರೂಪ” ಎಂದಿರುವ ಭಗತ್ ಸಿಂಗ್ ಚಿಂತನೆ ಇಂದು ಇಲ್ಲವಾಗುತ್ತಿವೆ. ಆತನ ಮೂಲ ತತ್ವ ಸಿದ್ಧಾಂತ ಬದಿಗೊತ್ತಿ ಹುಸಿಚಿಂತನೆಯ ಸಿದ್ಧಾಂತದ ತೆಕ್ಕೆಗೆ ಸೆಳೆದುಕೊಳ್ಳುವ ಪ್ರತಿಗಾಮಿ ಶಕ್ತಿಗಳ ಪ್ರಯತ್ನ ಎಗ್ಗಿಲ್ಲದೆ ನಡೆಸುತ್ತಿದೆ.

ಸಾಮಾಜಿಕ ವಿಚಾರಗಳನ್ನು ಸೇರಿದಂತೆ ಇನ್ನಿತರ ಮಹನೀಯರು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅನುಭವಾತ್ಮಕವಾಗಿ ಅರ್ಥೈಸಿಕೊಳ್ಳಲು ಭಗತ್ ಸಿಂಗ್ ಹೆಚ್ಚು ಇಷ್ಟಪಡುತ್ತಿದ್ದನು. ಹೀಗಾಗಿಯೇ “ಎಲ್ಲ ವಿಚಾರಗಳ ಅಧ್ಯಯನ ನಡೆಸಲು ಸೆರೆಮನೆಯೇ ಸೂಕ್ತ ತಾಣ ಎಂದು ನನಗೆ ಭಾಸವಾಗುತ್ತದೆ. ಯಾವುದೇ ವ್ಯಕ್ತಿ ಸ್ವತಃ ನೋವು ಅನುಭವಿಸಿದಲ್ಲಿ ಮಾತ್ರ‌ ಸ್ವಯಂ ಅಧ್ಯಯನ ಅತ್ಯುನ್ನತ ಹಂತ ಕಾಣಲು ಸಾಧ್ಯ” ಎಂದು
ಓದು-ಬರಹದ ಬಗ್ಗೆ ತನಗಿರುವ ಹೆಮ್ಮೆಯ ಕುರಿತು ಹೇಳಿಕೊಂಡಿದ್ದಾನೆ.

ಸಮಕಾಲೀನ ಭಾರತದಲ್ಲಿ ಭಗತ್ ಸಿಂಗ್ ಕೇವಲ ಆರಾಧನೆಗಾಗಿ ಮಾತ್ರ ಉಳಿದಿದ್ದಾನೆ ಎಂದೆನಿಸುತ್ತಿದೆ. ಇಂದು ಭಾರತದಲ್ಲಿ ಭಗತನು ಪ್ರತಿಪಾದಿಸಿದ ಸಿದ್ಧಾಂತ ಉಸಿರಾಡಲು ನಲುಗುತ್ತಿದೆ. ಎಲ್ಲ ಮೌಲ್ಯಗಳೂ ಪ್ರಭುತ್ವದ ಶೋಷಣೆಗೆ ಸಿಲುಕಿ ಒದ್ದಾಡುತ್ತಿವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಕಳೆದುಕೊಳ್ಳುತ್ತಿರುವ ಪ್ರಸ್ತುತ ಸಮಾಜದಲ್ಲಿ ಮಾತು ಮೌನವಾಗಿ, ಕಣ್ಣಿದ್ದು ಕುರುಡರಾಗಿದ್ದೇವೆ. ನಾನು ಈ ನೆಲದ ಅಸ್ಮಿತೆಯ ಉಳಿವಿಗಾಗಿ ಹೋರಾಡಿದ್ದೇನೆ, ನನ್ನನ್ನು ಗುಂಡಿಕ್ಕಿ ಕೊಂದುಬಿಡಿ, ಎಂದು ಬ್ರಿಟಿಷ ಸರ್ಕಾರಕ್ಕೆ ವಿನಂತಿಸಿಕೊಂಡು ತನ್ನ ಕೆಚ್ಚೆದೆಯ ಅಪ್ರತಿಮ ಚೈತನ್ಯ ತೋರಿದ ಭಾರತದ ಏಕೈಕ ದೇಶಪ್ರೇಮಿ ಭಗತನಿಗೆ ಇನ್ನೂ ‘ಭಾರತ ರತ್ನ’ ಕೊಡಲು ಸಾಧ್ಯವಾಗಲಿಲ್ಲ.

ಭಗತ್ ‌ಸಿಂಗ್, ರಾಜಗುರು ಹಾಗೂ ಸುಖದೇವ್ ಸೇರಿದಂತೆ ಅಸಂಖ್ಯಾತ ಸಂಗಾತಿಗಳನ್ನು ನಾವು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಆದರೆ ಇಂದಿನ ಯುವ ‌‌ಸಮುದಾಯವನ್ನು ಒಗ್ಗೂಡಿಸಿ ಕ್ರಾಂತಿಯ ಮಾರ್ಗದಲ್ಲಿ ಕೊಂಡೊಯ್ಯಬಲ್ಲ ಸಾಮರ್ಥ್ಯ ಕೇವಲ ಭಗತ್ ಸಿಂಗ್ ಚಿಂತನೆಗಳಲ್ಲಿದೆ. ಅಂದಿನ ಭಗತ್ ಸಿಂಗ್ ಎನ್ನುವ ‘ರಿಯಲ್ ಹೀರೋ’ ಇಂದಿನ ಯುವ ಪೀಳಿಗೆಗೆ ಆದರ್ಶ, ರೋಲ್ ಮಾಡೆಲ್.

ಭಗತ್ ಸಿಂಗ್ ನ ಆಳವಾದ ಚಿಂತನೆ, ಆತನ ಮಾನವೀಯ ಮೌಲ್ಯಗಳು ಈಗಾಗಲೇ ನಮ್ಮೆಲ್ಲರ ಮನಸ್ಸಿನ ಪ್ರಭಾವ ಬೀರಿವೆ. ನಾವು ಕಟ್ಟಲು ಬಯಸಿದ ಭವಿಷ್ಯ ಭಾರತ ದೇಶಕ್ಕೆ ಭಗತ್ ಸಿಂಗ್ ಎನ್ನುವ ತರುಣ ಸದಾ ಆದರ್ಶವಾಗಿರುತ್ತಾನೆ. ಆತನ ಚಿಂತನೆಗಳು ಮತ್ತೆ ಮುನ್ನೆಲೆಗೆ ತರುವ ಪ್ರಯತ್ನ ನಾವೆಲ್ಲರೂ ಮಾಡಬೇಕಾಗಿದೆ. ತ್ಯಾಗ ಬಲಿದಾನದ ಸಂಕೇತವಾಗಿ ಗಳಿಸಿದ ಈ ಸ್ವಾತಂತ್ರ್ಯವನ್ನು ನಾವು ಅಷ್ಟೇ ಹೆಮ್ಮೆ ಹಾಗೂ ಗೌರವದಿಂದ ಉಳಿಸಿಕೊಳ್ಳುವ ಮಹತ್ವದ ಜವಾಬ್ದಾರಿ ಕೂಡ ನಮ್ಮೆಲ್ಲರ ಮೇಲಿದೆ, ಅದಕ್ಕೆ ಭಗತ್ ಸಿಂಗ್ ಎನ್ನುವ ಕ್ರಾಂತಿಯ ಯುವ ಚೇತನ ಸ್ಪೂರ್ತಿವೆ.

ಬಾಲಾಜಿ ಕುಂಬಾರ, ಚಟ್ನಾಳ,

ಶಿಕ್ಷಕರು ಮತ್ತು ಯುವ ಬರಹಗಾರ. ತಾ.ಔರಾದ ಬಾ, ಜೀ. ಬೀದರ.


ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...