Homeಮುಖಪುಟಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

- Advertisement -
- Advertisement -

ಸಂಸತ್ತು ಅಂಗೀಕರಿಸಿರುವ ವಿವಾದಿತ ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯಲು ಆಗ್ರಹಿಸಿ ವಿರುದ್ಧ ದೇಶದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು, ರೈತ ಸಂಘಟನೆಗಳು, ಯುವ, ದಲಿತ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿವೆ.

ಇವುಗಳ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಈ ಕಾಯಿದೆಗಳ ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಈ ಮೂರು ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

ಮಸೂದೆಗಳಿ ಇಡೀ ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ಹಸ್ತಾಂತರಿಸುವುದರಿಂದ ಎಂಎಸ್‌ಪಿ ನೀಡಿ ರೈತರ ಬೆಳೆ ಕೊಳ್ಳುವುದರಿಂದ ಸರ್ಕಾರಗಳು ಹಿಂದೆ ಸರಿಯುತ್ತವೆ ಎಂದು ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಈಗ ಮುಕ್ತ-ಸಂಗ್ರಹದಡಿಯಲ್ಲಿ, ಪಿಡಿಎಸ್‌ಗಾಗಿ ಭಾರತದ ಆಹಾರ ನಿಗಮ (ಎಫ್‌ಸಿಐ) ಸೇರಿದಂತೆ ಸರ್ಕಾರಿ ಸಂಸ್ಥೆಗಳು ಎಂಎಸ್‌ಪಿ ದರನೀಡಿ ನಿಗದಿತ ಅವಧಿಯೊಳಗೆ ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಿ ಸಂಗ್ರಹಿಸುತ್ತವೆ. ಕೆಲವು ರಾಜ್ಯಗಳು ಗೋಧಿ ಮತ್ತು ಭತ್ತದ ಮೇಲೆ ಎಂಎಸ್‌ಪಿಗಿಂತ ಹೆಚ್ಚಿನ ರಾಜ್ಯ ಬೋನಸ್ ಸಹ ಘೋಷಿಸುತ್ತವೆ.

 

“ಈ ಕಾಯಿದೆಗಳಿಂದ ಆಹಾರ ದಾಸ್ತಾನು ಮಾಡಲು ಯಾವುದೇ ಸರ್ಕಾರಿ ನಿಯಮಗಳು ಮತ್ತು ನಿರ್ಬಂಧವಿಲ್ಲದ ಕಾರಣ, ಕಾರ್ಪೋರೆಟ್ ಮಾರುಕಟ್ಟೆ ಸಂಗ್ರಹವು ಸರ್ಕಾರದ ಖರೀದಿ, ಸಂಗ್ರಹಣೆ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳ್ಳುತ್ತವೆ” ಎಂದು ಪಶ್ಚಿಮ ಬಂಗಾಳದ ಕೃಷಿ ಸಚಿವ ಆಸಿಶ್ ಬ್ಯಾನರ್ಜಿ ದಿ ಫೆಡರಲ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ಈ ಮಸೂದೆಗಳು ರೈತರಿಗೆ ಮರಣದಂಡನೆ ಮಾತ್ರವಲ್ಲದೆ ಆಹಾರ ಭದ್ರತೆ ಮತ್ತು ರಾಜ್ಯ ಸರ್ಕಾರಗಳು ಸಬ್ಸಿಡಿ ನೀಡುವ ಆಹಾರ ಧಾನ್ಯಗಳ ವಿತರಣೆಯ ಮೇಲೂ ಪರಿಣಾಮ ಬೀರುತ್ತವೆ. ಈ ಮಸೂದೆಗಳಲ್ಲಿ ಬೆಲೆ ನಿಗದಿ ಮಾಡಲು ಯಾವುದೇ ನಿಗದಿತ ಕಾರ್ಯವಿಧಾನಗಳಿಲ್ಲ. ಇದರಿಂದಾಗಿ ರೈತರು ಮತ್ತು ಗ್ರಾಹಕರನ್ನು ಶೋಷಿಸಲು ಕಾರ್ಪೊರೇಟ್‌‌ಗಳಿಗೆ ಎಲ್ಲ ಅವಕಾಶ ದೊರೆಯುತ್ತದೆ ಎಂದು ಆಸಿಶ್ ಬ್ಯಾನರ್ಜಿ ಹೇಳಿದ್ದಾರೆ.

’ಇತ್ತೀಚೆಗೆ ಆಲೂಗಡ್ಡೆ ಮತ್ತು ಈರುಳ್ಳಿಯ ಬೆಲೆಗಳು ಗಗನಕ್ಕೇರಿದಾಗ, ಬೆಲೆಗಳನ್ನು ನಿಯಂತ್ರಿಸಲು ಸರ್ಕಾರ ಹೇಗೆ ಮಧ್ಯಪ್ರವೇಶಿಸಿತು ಎಂಬುದನ್ನು ನೀವು ನೋಡಿದ್ದೀರಿ. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೇ ಭವಿಷ್ಯದಲ್ಲಿ, ಸರ್ಕಾರವು ತನ್ನ ಆಹಾರ ಧಾನ್ಯಗಳ ಅಗತ್ಯವನ್ನು ಪೂರೈಸಲು ಕಾರ್ಪೋರೇಟ್‌‌ಗಳನ್ನು ಅವಲಂಬಿಸಬೇಕಾಗುತ್ತದೆ’ ಎಂದು ಬ್ಯಾನರ್ಜಿ ಆತಂಕ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...