Homeಮುಖಪುಟಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

- Advertisement -
- Advertisement -

ಸಂಸತ್ತು ಅಂಗೀಕರಿಸಿರುವ ವಿವಾದಿತ ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯಲು ಆಗ್ರಹಿಸಿ ವಿರುದ್ಧ ದೇಶದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು, ರೈತ ಸಂಘಟನೆಗಳು, ಯುವ, ದಲಿತ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿವೆ.

ಇವುಗಳ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಈ ಕಾಯಿದೆಗಳ ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಈ ಮೂರು ಕೃಷಿ ಮಸೂದೆಗಳು ದೀರ್ಘಾವಧಿಯಲ್ಲಿ ಸಾರ್ವಜನಿಕ ಬೆಂಬಲ ವ್ಯವಸ್ಥೆಯ ಮೇಲೆ (ಪಿಡಿಎಸ್) ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕೊನೆಗೊಳಿಸಲು ಪರೋಕ್ಷವಾಗಿ ಕಾರಣವಾಗುತ್ತವೆ ಎಂದು ಪ.ಬಂಗಾಳ ಸರ್ಕಾರ ತಿಳಿಸಿದೆ.

ಮಸೂದೆಗಳಿ ಇಡೀ ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ಹಸ್ತಾಂತರಿಸುವುದರಿಂದ ಎಂಎಸ್‌ಪಿ ನೀಡಿ ರೈತರ ಬೆಳೆ ಕೊಳ್ಳುವುದರಿಂದ ಸರ್ಕಾರಗಳು ಹಿಂದೆ ಸರಿಯುತ್ತವೆ ಎಂದು ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಈಗ ಮುಕ್ತ-ಸಂಗ್ರಹದಡಿಯಲ್ಲಿ, ಪಿಡಿಎಸ್‌ಗಾಗಿ ಭಾರತದ ಆಹಾರ ನಿಗಮ (ಎಫ್‌ಸಿಐ) ಸೇರಿದಂತೆ ಸರ್ಕಾರಿ ಸಂಸ್ಥೆಗಳು ಎಂಎಸ್‌ಪಿ ದರನೀಡಿ ನಿಗದಿತ ಅವಧಿಯೊಳಗೆ ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಿ ಸಂಗ್ರಹಿಸುತ್ತವೆ. ಕೆಲವು ರಾಜ್ಯಗಳು ಗೋಧಿ ಮತ್ತು ಭತ್ತದ ಮೇಲೆ ಎಂಎಸ್‌ಪಿಗಿಂತ ಹೆಚ್ಚಿನ ರಾಜ್ಯ ಬೋನಸ್ ಸಹ ಘೋಷಿಸುತ್ತವೆ.

 

“ಈ ಕಾಯಿದೆಗಳಿಂದ ಆಹಾರ ದಾಸ್ತಾನು ಮಾಡಲು ಯಾವುದೇ ಸರ್ಕಾರಿ ನಿಯಮಗಳು ಮತ್ತು ನಿರ್ಬಂಧವಿಲ್ಲದ ಕಾರಣ, ಕಾರ್ಪೋರೆಟ್ ಮಾರುಕಟ್ಟೆ ಸಂಗ್ರಹವು ಸರ್ಕಾರದ ಖರೀದಿ, ಸಂಗ್ರಹಣೆ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳ್ಳುತ್ತವೆ” ಎಂದು ಪಶ್ಚಿಮ ಬಂಗಾಳದ ಕೃಷಿ ಸಚಿವ ಆಸಿಶ್ ಬ್ಯಾನರ್ಜಿ ದಿ ಫೆಡರಲ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ಈ ಮಸೂದೆಗಳು ರೈತರಿಗೆ ಮರಣದಂಡನೆ ಮಾತ್ರವಲ್ಲದೆ ಆಹಾರ ಭದ್ರತೆ ಮತ್ತು ರಾಜ್ಯ ಸರ್ಕಾರಗಳು ಸಬ್ಸಿಡಿ ನೀಡುವ ಆಹಾರ ಧಾನ್ಯಗಳ ವಿತರಣೆಯ ಮೇಲೂ ಪರಿಣಾಮ ಬೀರುತ್ತವೆ. ಈ ಮಸೂದೆಗಳಲ್ಲಿ ಬೆಲೆ ನಿಗದಿ ಮಾಡಲು ಯಾವುದೇ ನಿಗದಿತ ಕಾರ್ಯವಿಧಾನಗಳಿಲ್ಲ. ಇದರಿಂದಾಗಿ ರೈತರು ಮತ್ತು ಗ್ರಾಹಕರನ್ನು ಶೋಷಿಸಲು ಕಾರ್ಪೊರೇಟ್‌‌ಗಳಿಗೆ ಎಲ್ಲ ಅವಕಾಶ ದೊರೆಯುತ್ತದೆ ಎಂದು ಆಸಿಶ್ ಬ್ಯಾನರ್ಜಿ ಹೇಳಿದ್ದಾರೆ.

’ಇತ್ತೀಚೆಗೆ ಆಲೂಗಡ್ಡೆ ಮತ್ತು ಈರುಳ್ಳಿಯ ಬೆಲೆಗಳು ಗಗನಕ್ಕೇರಿದಾಗ, ಬೆಲೆಗಳನ್ನು ನಿಯಂತ್ರಿಸಲು ಸರ್ಕಾರ ಹೇಗೆ ಮಧ್ಯಪ್ರವೇಶಿಸಿತು ಎಂಬುದನ್ನು ನೀವು ನೋಡಿದ್ದೀರಿ. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೇ ಭವಿಷ್ಯದಲ್ಲಿ, ಸರ್ಕಾರವು ತನ್ನ ಆಹಾರ ಧಾನ್ಯಗಳ ಅಗತ್ಯವನ್ನು ಪೂರೈಸಲು ಕಾರ್ಪೋರೇಟ್‌‌ಗಳನ್ನು ಅವಲಂಬಿಸಬೇಕಾಗುತ್ತದೆ’ ಎಂದು ಬ್ಯಾನರ್ಜಿ ಆತಂಕ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...