Homeಕರ್ನಾಟಕಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ ಢೋಂಗಿ ರೈತನಾಯಕ - ಸಿದ್ದರಾಮಯ್ಯ

ಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ ಢೋಂಗಿ ರೈತನಾಯಕ – ಸಿದ್ದರಾಮಯ್ಯ

ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದ ರೈತರಿಗಷ್ಟೇ ಅಲ್ಲ ಗ್ರಾಹಕರಿಗೂ ಭವಿಷ್ಯದಲ್ಲಿ ದೊಡ್ಡ ನಷ್ಟ ಕಾದಿದೆ. ಖಾಸಗಿ ಕಂಪನಿಗಳು ರೈತರಿಂದ ಕಡಿಮೆ ಬೆಲೆಗೆ ಕೃಷಿ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚು ಬೆಲೆಗೆ ಮಾರಿ ಜನರ ಸುಲಿಗೆಗೆ ಇಳಿಯಲಿವೆ.

- Advertisement -
- Advertisement -

ರಾಜ್ಯ ಸರ್ಕಾರ ನಿಜವಾಗಿ ರೈತರು, ಕಾರ್ಮಿಕರು, ಬಡವರ ಪರವಾಗಿದ್ದರೆ ಎಪಿಎಂಸಿ ಕಾಯಿದೆ, ಭೂ ಸುಧಾರಣಾ ಕಾಯಿದೆ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರುವ ತಪ್ಪನ್ನು ಮಾಡುತ್ತಲೇ ಇರಲಿಲ್ಲ. ಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ “ಢೋಂಗಿ ರೈತನಾಯಕ” ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ಮಸೂದೆಗಳ ವಿರುದ್ಧ ರೈತ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್‌ ಹೋರಾಟ ಬೆಂಬಲಿಸಿ ಪಕ್ಷದ ವತಿಯಿಂದ ಬೆಂಗಳೂರಿನ ಕಾಂಗ್ರೆಸ್ ಭವನದ ಆವರಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದ ರೈತರಿಗಷ್ಟೇ ಅಲ್ಲ ಗ್ರಾಹಕರಿಗೂ ಭವಿಷ್ಯದಲ್ಲಿ ದೊಡ್ಡ ನಷ್ಟ ಕಾದಿದೆ. ಖಾಸಗಿ ಕಂಪನಿಗಳು ರೈತರಿಂದ ಕಡಿಮೆ ಬೆಲೆಗೆ ಕೃಷಿ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚು ಬೆಲೆಗೆ ಮಾರಿ ಜನರ ಸುಲಿಗೆಗೆ ಇಳಿಯಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಉಳುವವನನ್ನು ಭೂಮಿಯ ಒಡೆಯನಾಗಿಸಿದ್ದು ದೇವರಾಜ ಅರಸು ಅವರ ನಾಯಕತ್ವದ ಕಾಂಗ್ರೆಸ್ ಸರ್ಕಾರ. ಈಗ ಬಡವರ ಭೂಮಿಯನ್ನು ಉಳ್ಳವರ ಪಾಲು ಮಾಡಲು ಹೊರಟಿರುವುದು ಬಿಜೆಪಿ ಸರ್ಕಾರ. ಹಾಗಾದರೆ ನಿಜವಾಗಿ ಯಾರು ರೈತರ ಪರ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಭೂ ಸುಧಾರಣಾ ಕಾಯಿದೆ ತಿದ್ದುಪಡಿಯಿಂದ ಕೃಷಿಕನಲ್ಲದವನು ಕೃಷಿ ಭೂಮಿ ಖರೀದಿಸುವಂತಿಲ್ಲ ಎಂಬ ನಿಯಮ ಹೋಗಿ, ಧನಿಕರು ಕೂಡ ಕೃಷಿ ಭೂಮಿ ಖರೀದಿ ಮಾಡಲಿದ್ದಾರೆ. ನಂತರ ಆ ಭೂಮಿಯಲ್ಲಿ ಫಾರ್ಮ್‌ಹೌಸ್‌ಗಳು, ಕಾರ್ಖಾನೆಗಳು ತಲೆಯೆತ್ತಲಿವೆ. ಅಲ್ಲಿಗೆ ಕೃಷಿ ಕ್ಷೇತ್ರ ಸರ್ವನಾಶವಾಗಲಿದೆ. ದೇಶದ ಒಟ್ಟು ರೈತರಲ್ಲಿ ಸಣ್ಣ ಹಿಡುವಳಿದಾರರ ಪ್ರಮಾಣ ಶೇ.86 ಇದೆ. ಈ ರೈತರೆಲ್ಲಾ ಧನಿಕರಿಗೆ ತಮ್ಮ ಭೂಮಿ ಮಾರಿ, ದುಡಿಮೆಗಾಗಿ ಪಟ್ಟಣ ಸೇರುತ್ತಾರೆ. ಕೃಷಿ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲದ ಅಮಾಯಕ ಮಂದಿ ನಗರಗಳಲ್ಲಿ ಕೂಲಿ ಮಾಡಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಈ ಕಾಯಿದೆಗಳ ಜಾರಿ ಹಿಂದೆ ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಯಿದೆ. ಆತ್ಮಸಾಕ್ಷಿ ಇಲ್ಲದ ಯಡಿಯೂರಪ್ಪನವರು ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ನಾಡನ್ನು ಗುಲಾಮಗಿರಿಗೆ ತಳ್ಳಲು ಹೊರಟಿದ್ದಾರೆ. ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಸಿದ್ದು ಕಿಡಿಕಾರಿದ್ದಾರೆ.

ಧರಣಿಯಲ್ಲಿ ಕರ್ನಾಟಕದ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಅಲೀಂ ಅಹಮದ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ರಾಜ್ಯಾದ್ಯಂತ ಸಿಡಿದೆದ್ದ ರೈತರು: ಕರ್ನಾಟಕ ಬಂದ್ ಯಶಸ್ವಿ. ಹಲವು ಜಿಲ್ಲೆ ತಾಲ್ಲೂಕುಗಳಲ್ಲಿ ನಡೆದ ಹೋರಾಟದ ಫೋಟೊ ಗ್ಯಾಲರಿ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...