Homeಕರ್ನಾಟಕಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ. ನಾವು ಮತ್ತೇ ಬೆಳೆಯುತ್ತೇವೆ, ಹೋರಾಟ ಮುಂದುವರೆಯುತ್ತದೆ ಎಂದು ಚಾನೆಲ್‌ನ ಪ್ರಿನ್ಸಿಪಲ್‌ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “ಪವರ್‌ ಟಿವಿ”ಯ ಪ್ರಸಾರವನ್ನು ತಡೆಹಿಡಿಯಲಾಗಿದೆ ಎಂದು ಮಾಧ್ಯಮದ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

ನಿನ್ನೆ ರಾತ್ರಿ 10:45 ಕ್ಕೆ ತಮ್ಮ ಫೇಸ್‌‌ಬುಕ್ ಖಾತೆಯಿಂದ ಲೈವ್‌ ಮೂಲಕ ಮಾತನಾಡಿದ ರಹಮಾನ್ ಹಾಸನ್, “ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ, ಆದರೆ ಯಾಕೆ ಎಂದು ಗೊತ್ತಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾದ ರಹಮಾನ್, “ಇದು ಮಾಧ್ಯಮ ಲೋಕದಲ್ಲಿ ಕರಾಳ ದಿನ” ಎಂದು ಹೇಳಿದ್ದಾರೆ.

ಟಿವಿಯು ದಾಖಲೆಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ದ ಧ್ವನಿ ಎತ್ತುತ್ತಿದೆ. ಅದಕ್ಕಾಗಿ ಚಾನೆಲ್ ಎಂ.ಡಿ ಮೇಲೆ ಕೇಸು ಹಾಕುವುದು ಹಾಗೂ ತನಿಖೆ ನಡೆಸುವುದು ನಿಮ್ಮ ಸ್ವಾತಂತ್ಯ್ರ, ಆದರೆ ಒಂದು ಸಂಸ್ಥೆಯನ್ನು ಕಟ್ಟುವುದು ತುಂಬಾ ಕಷ್ಟದ ಕೆಲಸ, ಈಗ ಎಲ್ಲರೂ ಬೀದಿಗೆ ಬಂದಿದ್ದೇವೆ. ಇದು ಸರಿಯಲ್ಲ ಯಡಿಯೂರಪ್ಪನವರೇ ಎಂದು ರಹಮಾನ್ ತಮ್ಮ ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

“ಆದರೆ ನಮ್ಮ ಕೆಲಸ ಸತ್ಯಕ್ಕಾಗಿ ಧ್ವನಿ ಎತ್ತಿರುವಂತದ್ದು. ವಿಜಯೇಂದ್ರ ಅವರ ಭ್ರಷ್ಟಾಚಾರ ಸಂಬಂಧಪಟ್ಟಂತೆ ಮಾಡಿರುವ ವರದಿ ಮುಂದುವರೆಯುತ್ತದೆ. ನಮ್ಮ ಚಾನೆಲ್‌ ಅನ್ನು ನೀವು ಮುಗಿಸಿರಬಹುದು, ಫೇಸ್‌ಬುಕ್ ಖಾತೆಯನ್ನು ಮುಗಿಸಿರಬಹುದು. ಆದರೆ ನಮ್ಮದೆ ವೈಯಕ್ತಿಕ ಫೇಸ್‌ಬುಕ್‌ ಖಾತೆಗಳಿವೆ. ಅದನ್ನು ಮುಗಿಸಿದರೆ ನಾವು ಇನ್ನೊಂದು ಖಾತೆಯನ್ನು ತೆರೆಯುತ್ತೇವೆ ಆದರೆ ನಾವು ಸುಮ್ಮನಿರುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

“ನಿಮ್ಮ ರಾಜಾಹುಲಿ ಎಂಬ ಬಿರುದು ನಾವು ಮಾಧ್ಯಮವೇ ಕೊಟ್ಟಿರುವುದು, ಆದರೆ ಇದು ರಾಜಾಹುಲಿ ಮಾಡುವ ಕೆಲಸವೇ ಯಡಿಯೂರಪ್ಪನವರೇ? ನಿಮ್ಮಲ್ಲಿ ಅಧಿಕಾರ ಇರಬಹುದು, ಪೊಲೀಸರು ಇರಬಹುದು. ನೀವು ಏನು ಬೇಕಾದರೂ ಮಾಡಬಹುದು ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ದ ಸುದ್ದಿ ಮಾಡಬಾರದು ಎಂದು ಕೋರ್ಟ್‌ನಿಂದ ಇಂಜೆಕ್ಷನ್ ಬಂದಿದೆ. ಆದರೆ ನಾವು ಸುಖಾಸುಮ್ಮನೆ ಇಲ್ಲಸಲ್ಲದ ಸುದ್ದಿ ಮಾಡಿಲ್ಲ. ನಮ್ಮಲ್ಲಿ ಎಲ್ಲಾ ದಾಖಲೆ ಇದೆ. ಸಿಸಿಬಿ ತನಿಖೆಗೂ ನಾವು ಸಹಕಾರ ಕೊಟ್ಟಿದ್ದೇವೆ. ಆದರೆ ಚಾನೆಲ್ ಯಾಕೆ ಬಂದ್ ಮಾಡಿದ್ದೀರಿ” ಎಂದು ಮುಖ್ಯಮಂತ್ರಿಯವರಿಗೆ ಪ್ರಶ್ನಿಸಿದ್ದಾರೆ.

“ಇವತ್ತು ನಮ್ಮ ಚಾನೆಲನ್ನು ಮುಗಿಸಿದ್ದಾರೆ. ಮುಂದೊಂದು ದಿನ ಬೇರೆ ಚಾನೆಲ್‌ಗೂ ಇಂತಹ ಪರಿಸ್ಥಿತಿ ಬರಬಹುದು. ಇದು ಪತ್ರಕರ್ತರು ಒಗ್ಗಟ್ಟಾಗುವ ಸಮಯ ಇದು. ರಾಜ್ಯದಲ್ಲಿ ಬೇಕಾದಷ್ಟು ಚಾನೆಲ್ ಬೇರೆ ಬೇರೆ ಕಾರಣಗಳಿಗೆ ಮುಚ್ಚಿಹೋಗಿದೆ. ಆದರೆ ಇಂತಹ ಕಾರಕ್ಕೆ ಯಾವ ಚಾನೆಲ್‌ಗಳು ಕೂಡಾ ಮುಚ್ಚಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

Posted by Rahman Hassan on Monday, September 28, 2020

“ನಾವು ಮಾಡಿರುವ ಕೆಲಸಕ್ಕೆ ನಮಗೆ ಹೆಮ್ಮೆಯಿದೆ. ಆದರೆ ಯಡಿಯೂರಪ್ಪನವರೆ ನಿಮ್ಮ ಕೆಲಸ ನಾಚಿಗೇಡು. ಒಂದು ಚಾನೆಲ್‌ ಅನ್ನು ಮುಚ್ಚಿಸುವಷ್ಟು ಕೆಳಹಂತಕ್ಕೆ ಹೋಗುತ್ತೀರಿ ಎಂದು ಭಾವಿಸಿರಲಿಲ್ಲ. ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ, ನಾವು ಮತ್ತೇ ಬೆಳೆಯುತ್ತೇವೆ” ಎಂದು ರಹಮಾನ್ ಹೇಳಿದ್ದಾರೆ.

“ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಯಿಂದ ಪಕ್ಷದ ಗೌರವ ಹಾಳಾಗುತ್ತಿದೆ, ಅವರ ವಿರುದ್ದ ಕ್ರಮ ಕೈಗೊಳ್ಳಿ: ಶಂಕರ್‌ ಬಿದರಿ

ವಿಡಿಯೋ ನೋಡಿ:

ರೈತ ಹೋರಾಟಕ್ಕೆ ಬೆಂಬಲ ನೀಡಿ ವಿದ್ಯಾರ್ಥಿ ನಾಯಕ ಸರೋವರ್ ಬೆಂಕಿಕೆರೆಯ ಕಿಡಿನುಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...