Homeಕರ್ನಾಟಕಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ. ನಾವು ಮತ್ತೇ ಬೆಳೆಯುತ್ತೇವೆ, ಹೋರಾಟ ಮುಂದುವರೆಯುತ್ತದೆ ಎಂದು ಚಾನೆಲ್‌ನ ಪ್ರಿನ್ಸಿಪಲ್‌ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “ಪವರ್‌ ಟಿವಿ”ಯ ಪ್ರಸಾರವನ್ನು ತಡೆಹಿಡಿಯಲಾಗಿದೆ ಎಂದು ಮಾಧ್ಯಮದ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

ನಿನ್ನೆ ರಾತ್ರಿ 10:45 ಕ್ಕೆ ತಮ್ಮ ಫೇಸ್‌‌ಬುಕ್ ಖಾತೆಯಿಂದ ಲೈವ್‌ ಮೂಲಕ ಮಾತನಾಡಿದ ರಹಮಾನ್ ಹಾಸನ್, “ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ, ಆದರೆ ಯಾಕೆ ಎಂದು ಗೊತ್ತಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾದ ರಹಮಾನ್, “ಇದು ಮಾಧ್ಯಮ ಲೋಕದಲ್ಲಿ ಕರಾಳ ದಿನ” ಎಂದು ಹೇಳಿದ್ದಾರೆ.

ಟಿವಿಯು ದಾಖಲೆಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ದ ಧ್ವನಿ ಎತ್ತುತ್ತಿದೆ. ಅದಕ್ಕಾಗಿ ಚಾನೆಲ್ ಎಂ.ಡಿ ಮೇಲೆ ಕೇಸು ಹಾಕುವುದು ಹಾಗೂ ತನಿಖೆ ನಡೆಸುವುದು ನಿಮ್ಮ ಸ್ವಾತಂತ್ಯ್ರ, ಆದರೆ ಒಂದು ಸಂಸ್ಥೆಯನ್ನು ಕಟ್ಟುವುದು ತುಂಬಾ ಕಷ್ಟದ ಕೆಲಸ, ಈಗ ಎಲ್ಲರೂ ಬೀದಿಗೆ ಬಂದಿದ್ದೇವೆ. ಇದು ಸರಿಯಲ್ಲ ಯಡಿಯೂರಪ್ಪನವರೇ ಎಂದು ರಹಮಾನ್ ತಮ್ಮ ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

“ಆದರೆ ನಮ್ಮ ಕೆಲಸ ಸತ್ಯಕ್ಕಾಗಿ ಧ್ವನಿ ಎತ್ತಿರುವಂತದ್ದು. ವಿಜಯೇಂದ್ರ ಅವರ ಭ್ರಷ್ಟಾಚಾರ ಸಂಬಂಧಪಟ್ಟಂತೆ ಮಾಡಿರುವ ವರದಿ ಮುಂದುವರೆಯುತ್ತದೆ. ನಮ್ಮ ಚಾನೆಲ್‌ ಅನ್ನು ನೀವು ಮುಗಿಸಿರಬಹುದು, ಫೇಸ್‌ಬುಕ್ ಖಾತೆಯನ್ನು ಮುಗಿಸಿರಬಹುದು. ಆದರೆ ನಮ್ಮದೆ ವೈಯಕ್ತಿಕ ಫೇಸ್‌ಬುಕ್‌ ಖಾತೆಗಳಿವೆ. ಅದನ್ನು ಮುಗಿಸಿದರೆ ನಾವು ಇನ್ನೊಂದು ಖಾತೆಯನ್ನು ತೆರೆಯುತ್ತೇವೆ ಆದರೆ ನಾವು ಸುಮ್ಮನಿರುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

“ನಿಮ್ಮ ರಾಜಾಹುಲಿ ಎಂಬ ಬಿರುದು ನಾವು ಮಾಧ್ಯಮವೇ ಕೊಟ್ಟಿರುವುದು, ಆದರೆ ಇದು ರಾಜಾಹುಲಿ ಮಾಡುವ ಕೆಲಸವೇ ಯಡಿಯೂರಪ್ಪನವರೇ? ನಿಮ್ಮಲ್ಲಿ ಅಧಿಕಾರ ಇರಬಹುದು, ಪೊಲೀಸರು ಇರಬಹುದು. ನೀವು ಏನು ಬೇಕಾದರೂ ಮಾಡಬಹುದು ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ದ ಸುದ್ದಿ ಮಾಡಬಾರದು ಎಂದು ಕೋರ್ಟ್‌ನಿಂದ ಇಂಜೆಕ್ಷನ್ ಬಂದಿದೆ. ಆದರೆ ನಾವು ಸುಖಾಸುಮ್ಮನೆ ಇಲ್ಲಸಲ್ಲದ ಸುದ್ದಿ ಮಾಡಿಲ್ಲ. ನಮ್ಮಲ್ಲಿ ಎಲ್ಲಾ ದಾಖಲೆ ಇದೆ. ಸಿಸಿಬಿ ತನಿಖೆಗೂ ನಾವು ಸಹಕಾರ ಕೊಟ್ಟಿದ್ದೇವೆ. ಆದರೆ ಚಾನೆಲ್ ಯಾಕೆ ಬಂದ್ ಮಾಡಿದ್ದೀರಿ” ಎಂದು ಮುಖ್ಯಮಂತ್ರಿಯವರಿಗೆ ಪ್ರಶ್ನಿಸಿದ್ದಾರೆ.

“ಇವತ್ತು ನಮ್ಮ ಚಾನೆಲನ್ನು ಮುಗಿಸಿದ್ದಾರೆ. ಮುಂದೊಂದು ದಿನ ಬೇರೆ ಚಾನೆಲ್‌ಗೂ ಇಂತಹ ಪರಿಸ್ಥಿತಿ ಬರಬಹುದು. ಇದು ಪತ್ರಕರ್ತರು ಒಗ್ಗಟ್ಟಾಗುವ ಸಮಯ ಇದು. ರಾಜ್ಯದಲ್ಲಿ ಬೇಕಾದಷ್ಟು ಚಾನೆಲ್ ಬೇರೆ ಬೇರೆ ಕಾರಣಗಳಿಗೆ ಮುಚ್ಚಿಹೋಗಿದೆ. ಆದರೆ ಇಂತಹ ಕಾರಕ್ಕೆ ಯಾವ ಚಾನೆಲ್‌ಗಳು ಕೂಡಾ ಮುಚ್ಚಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

Posted by Rahman Hassan on Monday, September 28, 2020

“ನಾವು ಮಾಡಿರುವ ಕೆಲಸಕ್ಕೆ ನಮಗೆ ಹೆಮ್ಮೆಯಿದೆ. ಆದರೆ ಯಡಿಯೂರಪ್ಪನವರೆ ನಿಮ್ಮ ಕೆಲಸ ನಾಚಿಗೇಡು. ಒಂದು ಚಾನೆಲ್‌ ಅನ್ನು ಮುಚ್ಚಿಸುವಷ್ಟು ಕೆಳಹಂತಕ್ಕೆ ಹೋಗುತ್ತೀರಿ ಎಂದು ಭಾವಿಸಿರಲಿಲ್ಲ. ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ, ನಾವು ಮತ್ತೇ ಬೆಳೆಯುತ್ತೇವೆ” ಎಂದು ರಹಮಾನ್ ಹೇಳಿದ್ದಾರೆ.

“ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಯಿಂದ ಪಕ್ಷದ ಗೌರವ ಹಾಳಾಗುತ್ತಿದೆ, ಅವರ ವಿರುದ್ದ ಕ್ರಮ ಕೈಗೊಳ್ಳಿ: ಶಂಕರ್‌ ಬಿದರಿ

ವಿಡಿಯೋ ನೋಡಿ:

ರೈತ ಹೋರಾಟಕ್ಕೆ ಬೆಂಬಲ ನೀಡಿ ವಿದ್ಯಾರ್ಥಿ ನಾಯಕ ಸರೋವರ್ ಬೆಂಕಿಕೆರೆಯ ಕಿಡಿನುಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...