Homeಕರ್ನಾಟಕPower TV ಬೆಂಬಲಕ್ಕೆ ನಿಂತ ಜನತೆ: ಮುಖ್ಯಮಂತ್ರಿಗೆ ಪತ್ರ ಬರೆದ ಕಾರ್ಯನಿರತ ಪತ್ರಕರ್ತರ ಸಂಘ

Power TV ಬೆಂಬಲಕ್ಕೆ ನಿಂತ ಜನತೆ: ಮುಖ್ಯಮಂತ್ರಿಗೆ ಪತ್ರ ಬರೆದ ಕಾರ್ಯನಿರತ ಪತ್ರಕರ್ತರ ಸಂಘ

ಟ್ವಿಟ್ಟರ್‌ನಲ್ಲಿ #StandwithpowerTv ಟ್ರೆಂಡ್ ಆಗುತ್ತಿದ್ದು, ಹಲವಾರು ಜನರು ಸರ್ಕಾರದ ನಡೆಯನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರದ ಕುರಿತು ನಿರಂತರ ವರದಿ ಮಾಡಿದ್ದ ಪವರ್‌ ಟಿವಿ ಕನ್ನಡ ಸುದ್ದಿ ವಾಹಿನಿಯ ಲೈವ್‌ ಬಂದ್‌ ಮಾಡಿರುವುದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದೆ.

ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಬರೆದ ಪತ್ರದಲ್ಲಿ, “ಪವರ್ ಟಿವಿ ಮಾಲೀಕರ ಮೇಲೆ ಆರೋಪ ಬೇರೆ ವಿಚಾರ, ಅದಕ್ಕೆ ತನಿಖೆ ನಡೆಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಗಳ ದಾಳಿಗೆ ಬಗ್ಗುವುದಿಲ್ಲ, ಪವರ್ ಟಿವಿ ಪುಟಿದೇಳಲಿದೆ: ರಹಮಾನ್ ಹಾಸನ್

“ಒಂದು ಟಿವಿ ವಾಹಿನಿ ಲೈವ್ ಬಂದ್ ಮಾಡುವುದರಿಂದ ಅದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪತ್ರಕರ್ತರ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ತಾವು ಈ ಕೂಡಲೇ ಗೃಹ ಸಚಿವರಿಗೆ ನಿರ್ದೇಶನ ನೀಡಿ, ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ವಿನಂತಿಸಿಕೊಳ್ಳುತ್ತೇವೆ” ಸಂಘವು ತನ್ನ ಪತ್ರದಲ್ಲಿ ಹೇಳಿದೆ.

ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “Power TV”ಯ ಪ್ರಸಾರವನ್ನು ನಿನ್ನೆ ರಾತ್ರಿಯಿಂದ ತಡೆಹಿಡಿಯಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕೂಡಾ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಹಲವಾರು ಕಡೆ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ತಯಾರಿಗಳು ನಡೆಯುತ್ತಿವೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಕನ್ನಡ ಚಿತ್ರನಟ, ಚಿಂತಕ ಚೇತನ್, “1975 ರಲ್ಲಿ ಇಂದಿರಾ ಗಾಂಧಿ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿದ್ದರು, ಮಾಧ್ಯಮದವರನ್ನು ನಿಶ್ಶಬ್ದಗೊಳಿಸಲಾಗಿತ್ತು ಮತ್ತು 250 ಜನ ಪತ್ರಕರ್ತರನ್ನು ಜೈಲಿಗಟ್ಟಲಾಗಿತ್ತು. ಕರಾಳ ಸಮಯ. ಈಗ ಕರ್ನಾಟಕದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಮುಖ್ಯಮಂತ್ರಿಯ ಕುಟುಂಬದವರಿಂದ ನಡೆದಿದೆ ಎನ್ನಲಾದ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ, ಬಿಜೆಪಿ ಮತ್ತು ಸಿ.ಸಿ.ಬಿ ಸೇರಿ ಪವರ್ ಟೀವಿಯನ್ನು ಮುಚ್ಚಲಾಗಿದೆ. ಎಲ್ಲಾ ಮಾಧ್ಯಮಗಳು ಒಂದಾಗಬೇಕು, ಮತ್ತು ಮಾಧ್ಯಮಕ್ಕಿರುವ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಹಿರಿಯ ಪತ್ರಕರ್ತ ಶಶಿಧರ ಹೆಮ್ಮಾಡಿ, “ಬೆಂಗಳೂರು ಟೆರರ್ ಹಬ್ ಎಂದು ಒಬ್ಬ ಬಿಜೆಪಿ ಎಂಪಿ ಹೇಳುತ್ತಾನೆ. ಅವನದೇ ಪಕ್ಷದ ಸರ್ಕಾರ ಸ್ವತಃ ತಾನೇ ಭಯೋತ್ಪಾದಕ ಸರ್ಕಾರ ಎನ್ನುವುದನ್ನು ಸಾಬೀತುಪಡಿಸಿದ ಮೇಲೆ ಆ ಎಂಪಿ ಹೇಳುವುದರಲ್ಲಿ ವಿಶೇಷವೇನೂ ಇಲ್ಲ. ಪವರ್ ಟಿವಿಯಂತಹ ಒಂದು ಚಾನಲ್ ಅನ್ನೇ ಈ ಭಯೋತ್ಪಾದಕ ಸರ್ಕಾರ ಬಂದ್ ಮಾಡುತ್ತದೆ ಎಂದರೆ ಇದು ತುರ್ತು ಸ್ಥಿತಿಗೂ ಕರಾಳ. ಈ ಸಂದರ್ಭದಲ್ಲಿ ಪವರ್ ಟಿವಿಯ ಪರ ಮತ್ತು ಸರ್ಕಾರದ ಈ ಭಯೋತ್ಪಾದಕ ನೀತಿಯ ವಿರುದ್ಧ ನಿಲ್ಲದ ಮಾಧ್ಯಮದ ಮಂದಿ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರನ _______ ನೆಕ್ಕುವುದೇ ಅತ್ಯಂತ ಸೂಕ್ತ. ಈ ದುಷ್ಟ ಸರ್ಕಾರಕ್ಕೆ ಧಿಕ್ಕಾರವಿರಲಿ. ನಾನು ಪವರ್ ಟಿವಿಯ ಜೊತೆ” ಎಂದು ತಮ್ಮ ಫೇಸ್‌ಬುಕ್‌‌ನಲ್ಲಿ ಬರೆದಿದ್ದಾರೆ.

ಬೆಂಗಳೂರು ಟೆರರ್ ಹಬ್ ಎಂದು ಒಬ್ಬ ಬಿಜೆಪಿ ಎಂಪಿ ಹೇಳುತ್ತಾನೆ. ಅವನದೇ ಪಕ್ಷದ ಸರ್ಕಾರ ಸ್ವತಃ ತಾನೇ ಭಯೋತ್ಪಾದಕ ಸರ್ಕಾರ ಎನ್ನುವುದನ್ನು…

Posted by Shashidhar Hemmady on Monday, September 28, 2020

ಹೋರಾಟಗಾರ್ತಿ ಭಾರತಿ ಪ್ರಶಾಂತ್‌, “#PowerTV ಯವರು ವಿಜಯೇಂದ್ರನ ಬಗ್ಗೆ ಇನ್ನೇನು ಹೇಳಬೇಕಾಗಿಲ್ಲ. ನಿಮ್ಮ ಚಾನೆಲನ್ನು ಮುಚ್ಚಿಸಿದಾಗಲೆ ಜನತೆಗೆ ಅವರ ಭ್ರಷ್ಟಾಚಾರದ ಸ್ಟಷ್ಟತೆ ಸಿಕ್ಕಿತು. ಹೆಗಲು ಮುಟ್ಟಿ ನೋಡಿದ ಕುಂಬಳಕಾಯಿ ಕಳ್ಳ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾದಂಬರಿಗಾರ ಕಾರ್ತಿಕಾದಿತ್ಯ ಬೆಳಗೋಡ್‌‌, “ಯಡಿಯೂರಪ್ಪನವರ ಮಗ ಪ್ರಶ್ನಾತೀತರಾ!? ಪವರ್ ಟಿವಿ ಸುಳ್ಳು ವರದಿ ಪ್ರಸಾರ ಮಾಡಿದ್ದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಿ. ಅದನ್ನು ಬಿಟ್ಟು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಹೊರಡುವ ಕೆಲಸ ಯಡಿಯೂರಪ್ಪನವರಿಗಂತೂ ಶೋಭೆಯಲ್ಲ. ಈ ಕೆಟ್ಟ ಬೆಳವಣಿಗೆಯ ಬಗ್ಗೆ ನಮ್ಮ ‘ನಾ ಖಾವೂಂಗಾ ನಾ ಖಾನೇದೂಂಗಾ’ ಪ್ರಧಾನಿಗಳು ಏನು ಕ್ರಮ ಕೈಗೊಳ್ಳುತ್ತಾರೋ ನೋಡಬೇಕು” ಎಂದು ಬರೆದಿದ್ದಾರೆ.

ಪವರ್ ಟಿವಿಯನ್ನು ರಾತ್ರೋ ರಾತ್ರಿ ಮುಚ್ಚಿಸಿರುವುದು ನಿಜಕ್ಕೂ ಆತಂಕಕಾರಿ. ಇದು ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದೌರ್ಜನ್ಯ. ಒಂದು ವರದಿಯ…

Posted by Kartikaditya Belgodu on Monday, September 28, 2020

ಇಷ್ಟೆ ಅಲ್ಲದೆ ಟ್ವಿಟ್ಟರ್‌ನಲ್ಲಿ #StandwithpowerTv ಟ್ರೆಂಡ್ ಆಗುತ್ತಿದೆ. ಹಲವಾರು ಜನರು ಸರ್ಕಾರದ ನಡೆಯ ವಿರುದ್ದ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...