Homeಮುಖಪುಟತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ಎನ್‌ಐಎ ಹೊಸ ಮೂರು ಎನ್‌ಐಎ ಘಟಕಗಳನ್ನು ಆರಂಭಿಸಿದ್ದು, ಪಟ್ಟಿಯಲ್ಲಿ ಬೆಂಗಳೂರಿನ ಹೆಸರಿಲ್ಲ.

- Advertisement -
- Advertisement -

ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್‌ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್‌ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯೊಳಗಿನ ಕೆಲ ಅಪ್ರಭುದ್ಧರ ಹೇಳಿಕೆ ಪಕ್ಷದ ಹಿರಿಯ ನಾಯಕರಿಗೆ ಅವಮಾನ ಎಂದಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ ಬೆಂಗಳೂರನ್ನು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ ಎಂದು ಹೇಳಿಕೆ ನೀಡಿದವರಿಂದ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

’ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!’ ಎಂದು ವ್ಯಂಗ್ಯವಾಡಿದ್ದಾರೆ.

‘ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಇನ್ನೂ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕ ಚಟುವಟಿಕೆಗೆ ಉದಾಹರಣೆ ನೀಡಿದ್ದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣಗಳ ಕುರಿತು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ’ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಅಪ್ರಭುದ್ಧರ ಹೇಳಿಕೆಯಿಂದ ಬೆಂಗಳೂರಿಗೆ ಅವಮಾನ. ಜೊತೆಗೆ ಪಕ್ಷದ ಹಿರಿಯರಿಗೂ ಅವಮಾನ ಎಂದಿದ್ದಾರೆ.

ಇತ್ತ ಗೃಹ ಸಚಿವ ಅಮಿತ್ ಶಾಗೆ ಮನವಿ ಸಲ್ಲಿಸಿದ್ದೇನೆ. ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ನಿನ್ನೆ ಎನ್‌ಐಎ  ಹೊಸ ಮೂರು ಎನ್‌ಐಎ ಘಟಕಗಳನ್ನು ಮಂಜೂರು ಮಾಡಿದ್ದು, ಸಂಸ್ಥೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಹೆಸರು ಇಲ್ಲ. ಅಂದರೆ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರದ ಆರಂಭಕ್ಕೆ ಯಾವುದೇ ಸೂಚನೆ ದೊರೆತಿಲ್ಲ.

ಇಂಫಾಲ್ (ಮಣಿಪುರ), ಚೆನ್ನೈ (ತಮಿಳುನಾಡು) ಮತ್ತು ರಾಂಚಿ (ಜಾರ್ಖಂಡ್)ಯಲ್ಲಿ ಹೊಸ ಮೂರು ಹೆಚ್ಚುವರಿ ಶಾಖೆಗಳನ್ನು ಮಂಜೂರು  ಮಾಡಲು ಗೃಹ ಸಚಿವಾಲಯ (ಎಂಎಚ್‌ಎ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಮಂಜೂರು ಮಾಡಿದೆ. ಈ ಮೂರು ಕಡೆ ಮಾತ್ರ ಸದ್ಯ ಎನ್‌ಐಎ ಘಟಕ ಆರಂಭಿಸಲಾಗುತ್ತದೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪ್ರಸ್ತುತ, ಎನ್ಐಎ ಭಾರತದಾದ್ಯಂತ ಒಂಬತ್ತು ಶಾಖೆಗಳನ್ನು ಹೊಂದಿದೆ. ಅವು ಗುವಾಹಟಿ, ಮುಂಬೈ, ಜಮ್ಮು, ಕೋಲ್ಕತಾ, ಹೈದರಾಬಾದ್, ಕೊಚ್ಚಿ, ಲಕ್ನೋ, ರಾಯ್‌ಪುರ ಮತ್ತು ಚಂಡೀಗಡದಲ್ಲಿವೆ, ನವದೆಹಲಿಯಲ್ಲಿ  ವಿಶೇಷ ಘಟಕಗಳಿವೆ. ಬೆಂಗಳೂರಿನಲ್ಲಿ ಎನ್‌ಐಎ ಉಪಶಾಖೆ ಇದ್ದು, ಇದು ಹೈದರಾಬಾದ್ ಎನ್‌ಐಎ ಪ್ರಾದೇಶಿಕ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ತೇಜಸ್ವಿ ಸೂರ್ಯ ಹೇಳಿಕೆಗೆ ನೆಟ್ಟಿಗರು ಮತ್ತು ರಾಜಕೀಯ ಮುಖಂಡರು ತೀವ್ರ ಖಂಡನೆ ವ್ಯಕ್ತಪಡಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್ ಮುಖಂಡ ಪ್ರಿಯಾಂಕ್‌ ಖರ್ಗೆ, ಶಾಸಕಿ ಸೌಮ್ಯಾ ರೆಡ್ಡಿ ಸೇರಿದಂತೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿ, ತೇಜಸ್ವಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು.


ಇದನ್ನೂ ಓದಿ: ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...