Homeಮುಖಪುಟಸರ್ಕಾರದ ದುರುದ್ದೇಶಪೂರಿತ ದಾಳಿ ಆರೋಪ: ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಿದೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್

ಸರ್ಕಾರದ ದುರುದ್ದೇಶಪೂರಿತ ದಾಳಿ ಆರೋಪ: ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಿದೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್

ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯು ಮಾನವ ಹಕ್ಕುಗಳನ್ನು ರಕ್ಷಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಾ ಬಂದಿದೆ. ಈ ಕೆಲಸಗಳಿಗಾಗಿ 1977 ರಲ್ಲಿ "ನೋಬೆಲ್ ಶಾಂತಿ ಪುರಸ್ಕಾರ"ವನ್ನೂ ಪಡೆದುಕೊಂಡಿದೆ.

- Advertisement -
- Advertisement -

ಖ್ಯಾತ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಭಾರತದಲ್ಲಿನ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ತನ್ನ ವರದಿಗಳನ್ನು ಸಹಿಸದ ಸರ್ಕಾರ ನಿರಂತರವಾಗಿ ದುರುದ್ದೇಶಪೂರಿತ ದಾಳಿ ನಡೆಸುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅಮ್ನೆಸ್ಟಿ ತಿಳಿಸಿದೆ.

ಜಾಗತಿಕವಾಗಿ ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಇಂಗ್ಲೆಂಡ್ ಮೂಲದ ಸರ್ಕಾರೇತರ ಸಂಸ್ಥೆಯು, ಭಾರತದಲ್ಲಿನ ತನ್ನ ಸಂಶೋಧನೆಗಳನ್ನು ನಿಲ್ಲಿಸಿ, ಉದ್ಯೋಗಿಗಳನ್ನು ಬೀಳ್ಕೊಡಲಿದೆ ಎಂದಿದೆ. ಭಾರತದಂತಹ ಅತಿ ದೊಡ್ಡ ದೇಶದಲ್ಲಿ ಅದು ತನ್ನ ಸೇವೆ ನಿಲ್ಲಿಸುತ್ತಿರುವುದು ಮಾನವ ಹಕ್ಕು ಕಾರ್ಯಕರ್ತರಿಗೆ ಬೇಸರ ತಂದಿದೆ.

ಇತ್ತೀಚೆಗೆ ನಡೆದ ದೆಹಲಿ ಗಲಭೆ ಮತ್ತು ಕಾಶ್ಮೀರದ ಸ್ವಾಯುತ್ತ ಸ್ಥಾನಮಾನ ರದ್ದುಗೊಳಿಸಿದ ನಂತರ ಅಮ್ನೆಸ್ಟಿ ಈ ವಿಷಯಗಳಲ್ಲಿ ಗಂಭೀರ ಮಾನವ ಹಕ್ಕು ಉಲ್ಲಂಘನೆಯಾಗಿದೆ ಎಂದು ತನ್ನ ವರದಿಗಳನ್ನ ಬಿಡುಗಡೆಗೊಳಿಸಿತ್ತು. ಇದರ ಪರಿಣಾಮವಾಗಿ ಸರ್ಕಾರ ತನ್ನ ಮೇಲೆ ಮುಗಿಬಿದ್ದಿದೆ ಎಂದು ಅಮ್ನೆಸ್ಟಿ ಆರೋಪಿಸಿದೆ.

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ)ಯ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಕಾನೂನುಬಾಹಿರವಾಗಿ ವಿದೇಶಿ ದೇಣಿಗೆಗಳನ್ನು ಪಡೆಯಲಾಗಿದೆ ಎಂಬ ಆರೋಪದಡಿಯಲ್ಲಿ ಕೆಲವು ವರ್ಷಗಳಿಂದ ಹಲವು ತನಿಖಾ ಸಂಸ್ಥೆಗಳು ಅಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಅನ್ನು ತನಿಖೆಗೊಳಪಡಿಸಿವೆ.

ಆದರೆ, ಸಂಸ್ಥೆಯು ತನ್ನ ಪತ್ರಿಕಾ ಹೇಳಿಕೆಯಲ್ಲಿ, “ಇದು ಆಧಾರ ರಹಿತ ಮತ್ತು ದುರುದ್ದೇಶ ಪ್ರೇರಿತ ಆರೋಪ. ಭಾರತ ಸರ್ಕಾರವು ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ತಡೆಹಿಡಿದಿದೆ. ಇದು ಸಂಸ್ಥೆಯ ಎಲ್ಲಾ ಕೆಲಸಗಳ ಮೇಲೆ ಪರಿಣಾಮ ಬೀರಿದೆ. ಭಾರತದಲ್ಲಿನ ಸಿಬ್ಬಂದಿಯನ್ನು ಕೆಲಸದಿಂದ ಕೈಬಿಟ್ಟು, ತನ್ನ ಎಲ್ಲಾ ಸಂಶೋಧನಾ ಕಾರ್ಯಗಳನ್ನು ನಿಲ್ಲಿಸುವಂತೆ ಒತ್ತಾಯಿಸಲಾಗಿದೆ. ಆದರೆ ನಾವು ಭಾರತೀಯ ಮತ್ತು ಅಂತರಾಷ್ಟ್ರೀಯ ಎಲ್ಲಾ ಕಾನೂನುಗಳನ್ನು ಪಾಲಿಸಿದ್ದೇವೆ” ಎಂದು ಹೇಳಿದೆ.

ಇದನ್ನೂ ಓದಿ: ಅಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಬೆಂಗಳೂರು ಕಚೇರಿಯ ಮೇಲೆ ಸಿಬಿಐ ದಾಳಿ

“ಕಳೆದ 2 ವರ್ಷಗಳಿಂದ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿ ಮತ್ತು ಇತ್ತೀಚೆಗೆ ಬ್ಯಾಂಕ್ ಖಾತೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವುದು ಆಕಸ್ಮಿಕವೇನಲ್ಲ. ಇತ್ತೀಚೆಗೆ ನಡೆದ ದೆಹಲಿ ಗಲಭೆ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಭಾರತ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸಿ, ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆಯನ್ನು ಕೋರಿದ್ದಕ್ಕಾಗಿ, ಜಾರಿ ನಿರ್ದೇಶನಾಲಯ ಸೇರಿದಂತೆ ಇತರೆ ಸರ್ಕಾರಿ ಸಂಸ್ಥೆಗಳು ನಮಗೆ ಕಿರುಕುಳ ನೀಡುತ್ತಿವೆ” ಎಂದು ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅವಿನಾಶ್ ಹೇಳಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ…

“ಸಂಸ್ಥೆಯು ಎಫ್‌ಡಿಐ (ವಿದೇಶಿ ನೇರ ಹೂಡಿಕೆ) ಮಾರ್ಗದ ಮೂಲಕ ಹಣವನ್ನು ಪಡೆದುಕೊಂಡಿದೆ. ಲಾಭರಹಿತ ಸಂಸ್ಥೆಯಾದ ಅಮ್ನೆಸ್ಟಿಗೆ ಈ ಅಧಿಕಾರವಿಲ್ಲ” ಎಂದು ಗೃಹ ಸಚಿವಾಲಯ ಹೇಳಿದೆ.

ಅಮ್ನೆಸ್ಟಿ ಇಂಡಿಯಾ, 2011-12ರಲ್ಲಿ ಅಮ್ನೆಸ್ಟಿ ಸಂಸ್ಥೆ ಇಂಗ್ಲೆಂಡ್‌ನಿಂದ ಸುಮಾರು 69 1.69 ಕೋಟಿ ಪಡೆಯಲು ಸರ್ಕಾರದ ಅನುಮತಿಯನ್ನು ಪಡೆಯಿತು. ಆದರೆ 2013 ರಿಂದ ಆ ಅನುಮತಿಯನ್ನು ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮ್ನೆಸ್ಟಿ ಇಂಡಿಯಾ ಬೆಂಗಳೂರು ಕೇಂದ್ರ

2018 ರಲ್ಲಿ, ಜಾರಿ ನಿರ್ದೇಶನಾಲಯವು ಅವರ ಖಾತೆಗಳನ್ನು ಸ್ಥಗಿತಗೊಳಿಸಿತ್ತು. ನಂತರ ಅಮ್ನೆಸ್ಟಿ ನ್ಯಾಯಾಲಯದ ಮೆಟ್ಟಿಲೇರಿ, ಪ್ರಕರಣವನ್ನು ಗೆದ್ದುಕೊಂಡಿತ್ತು. ಆದರೆ ಆಗಲೇ ಅವರ ಖಾತೆಗಳಿಗೆ ಸೀಲ್ ಹಾಕಲಾಗಿತ್ತು. ಕಳೆದ ವರ್ಷ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಗ್ಲೆಂಡ್ ಸಚಿವಾಲಯದ ಅನುಮೋದನೆಯಿಲ್ಲದೆ ಅಮ್ನೆಸ್ಟಿ ಇಂಡಿಯಾ ಸಂಸ್ಥೆಗಳಿಗೆ 10 ಕೋಟಿಯನ್ನು ಎಫ್‌ಡಿಐ ಆಗಿ ವರ್ಗಾಯಿಸಿದೆ ಎಂಬ ದೂರಿನ ಆಧಾರದ ಮೇಲೆ ಮತ್ತೊಂದು ಸಿಬಿಐ ಪ್ರಕರಣ ದಾಖಲಿಸಿದೆ.

“ಗೃಹಸಚಿವಾಲಯದ ಅನುಮತಿಯಿಲ್ಲದೇ 26 ಕೋಟಿಯನ್ನು ಇಂಗ್ಲೆಂಡ್ ಮೂಲದ ಸಂಸ್ಥೆಗಳಿಂದ ಭಾರತದ ಶಾಖೆಗೆ ರವಾನಿಸಿಕೊಳ್ಳಲಾಗಿದೆ. ಇದನ್ನು FCRA ಉಲ್ಲಂಘಿಸಿ ಖರ್ಚು ಮಾಡಲಾಗಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಳೆದ ವರ್ಷವೂ ಅಮ್ನೆಸ್ಟಿ ಇಂಡಿಯಾದ ಮೇಲೆ ಸಿಬಿಐ ದಾಳಿ ನಡೆಸಿತ್ತು. ಆಗಲೂ, “ರಾಜಕೀಯ ಕಾರಣಗಳಿಗಾಗಿಯೇ ನಮ್ಮ ಮೇಲೆ ಈ ರೀತಿ ಪದೇ ಪದೇ ದಾಳಿ ನಡೆಯುತ್ತಿದೆ” ಎಂಬುದನ್ನು ಅಮ್ನೆಸ್ಟಿ ಇಂಟರ್‌ ನ್ಯಾಷನಲ್ ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ: ಟೀಕೆಗಳು ಪ್ರಜಾಪ್ರಭುತ್ವದ ಸಂಕೇತವಲ್ಲವೇ? ಭಾರತಕ್ಕೆ ಬ್ರಿಟೀಷ್ ಸಂಸದೆಯ ಪ್ರಶ್ನೆ

1961 ರಲ್ಲಿ ಇಂಗ್ಲೆಂಡ್‌ನಲ್ಲಿ ಸ್ಥಾಪನೆಯಾದ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯು, ಮಾನವ ಹಕ್ಕುಗಳನ್ನು ರಕ್ಷಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಾ ಬಂದಿದೆ. ಈ ಕೆಲಸಗಳಿಗಾಗಿ 1977 ರಲ್ಲಿ ಜಗತ್ತಿನ ಶ್ರೇಷ್ಠ ಮತ್ತು ಅತ್ಯುನ್ನತ ಪ್ರಶಸ್ತಿಯಾದ “ನೋಬೆಲ್ ಶಾಂತಿ ಪುರಸ್ಕಾರ”ವನ್ನೂ ಪಡೆದುಕೊಂಡಿದ್ದು, ಜಗತ್ತಿನಾದ್ಯಂತ ಸುಮಾರು 60ಕ್ಕೂ ಹೆಚ್ಚು ದೇಶಗಳಲ್ಲಿ ತನ್ನ ಕೇಂದ್ರಗಳನ್ನನ್ನು ತೆರೆದು ಮಾನವ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಿದೆ.

ಭಾರತದ ಬಿಹಾರದಲ್ಲಿ 1966 ರಿಂದ ಕೆಲಸ ಮಾಡುತ್ತಿರುವ ಈ ಸಂಸ್ಥೆಯು, ಮಹಿಳೆಯರ ಹಕ್ಕುಗಳು, ದೌರ್ಜನ್ಯ, ಖೈದಿಗಳು, ಕಾನೂನಿನ ದುರುಪಯೋಗ, ಕಾರ್ಪೋರೇಟ್ ಹೊಣೆಗಾರಿಕೆ ಮತ್ತು ಇತರೆ ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಯಶಸ್ವಿಯಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ.

ಇಂತಹ ಸಂಸ್ಥೆಯು ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿರುವುದು ಮತ್ತು ಇದಕ್ಕೆ ಕಾರಣ ಭಾರತ ಸರ್ಕಾರದ ಕಿರುಕುಳವೆ ಎಂದು ಆರೋಪಿಸಿದೆ. ಇದರಿಂದ ದೇಶದ ದಮನಿತರ ನಷ್ಟವಾಗಲಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...