Homeಚಳವಳಿಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಸಾಂತ್ವನ ಮಾಡುವುದೋ ಮಾಡುತ್ತಿಲ್ಲ.

- Advertisement -
- Advertisement -

ಕೇಂದ್ರದ ಹೊಸ ಕೃಷಿಕಾನೂನನ್ನು ವಿರೋಧಿಸಿ ನಿರಂತರವಾಗಿ ಹದಿನೈದು ದಿನದಿಂದ ರೈತರು ದೇಶದಾದ್ಯಂತ ಹೋರಾಟ ನಡೆಸುತ್ತಿದ್ದು, ನಿನ್ನೆ ಮುಂಜಾನೆ ದೆಹಲಿಯ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯಲ್ಲಿ ಟ್ರಾಕ್ಟ‌‌ರ್‌ ಒಂದನ್ನು ಸುಟ್ಟು, ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ನೇಣಿಗೇರಿಸಿ ತಮ್ಮ ಆಕ್ರೋಶದ ತೀವ್ರತೆಯನ್ನು ವ್ಯಕ್ತಪಡಿಸಿದ್ದರು.

ಟ್ರಾಕ್ಟರ್‌‌‌ ಸುಟ್ಟ ರೈತರ ವಿರುದ್ದ ಈಗಾಗಲೆ ಕೇಸು ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, “ಹೊಸ ಕೃಷಿ ಕಾನೂನುಗಳನ್ನು ವಿರೋಧಿಸುವವರು ನಿಜವಾಗಿ ರೈತರನ್ನು ಅವಮಾನಿಸುತ್ತಿದ್ದಾರೆ. ಪ್ರತಿಭಟನಾಕಾರರು ರೈತರು ಗೌರವಿಸುವ ಕೃಷಿ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ಸುಟ್ಟು ರೈತರನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರೈತರ ಬಗ್ಗೆ ಪ್ರಧಾನಿ ನೀಡಿರುವ ಹೇಳಿಕೆಗೆ ಹಲವಾರು ರೈತ ಹೋರಾಟಗಾರರು ಪ್ರತಿಕ್ರಿಯೆ ನೀಡಿದ್ದು ಪ್ರಧಾನಿಯೆ ರೈತರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ರೈತರ ಬದುಕನ್ನು ಕಿತ್ತು ತಮ್ಮ ಗೆಳೆಯರಿಗೆ ಹಾಗೂ ಕಾರ್ಪೊರೇಟ್‌ ಕಂಪೆನಿಗಳ ವಶಕ್ಕೆ ನೀಡಿರುವ ಮೋದಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದು ಹೇಳಿದರು.

“ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಅವರಿಗೆ ಸಾಂತ್ವನ ಮಾಡುವುದೋ ಮಾಡುತ್ತಿಲ್ಲ. ನಿಜವಾಗಿ ಮೋದಿಯೇ ರೈತರಿಗೆ ಅವಮಾನ ಮಾಡಿದ್ದಾರೆ. ಅದರಲ್ಲೂ ರೈತರ ಜೊತೆ ಸೌಜನ್ಯಕ್ಕೂ ಚರ್ಚೆ ಮಾಡದೆ ಮಸೂದೆಗಳನ್ನು ಪಾಸ್‌ ಮಾಡಿರುವವರು ರೈತರ ಬಗ್ಗೆ ಕನಿಕರ ತೋರಿಸುವುದು ಖಂಡನೀಯ” ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಪ್ರಧಾನಿ ಒಬ್ಬ ಸುಳ್ಳುಗಾರ, ಸುಳ್ಳನ್ನೇ ಸತ್ಯವೆಂದು ನಂಬಿಸುವಲ್ಲಿ ಇದುವರೆಗೂ ಅವರು ಯಶಸ್ವಿಯಾಗಿದ್ದಾರೆ. ನಲವತ್ತು ವರ್ಷದ ಹಿಂದೆ ಏನೂ ಅಲ್ಲದೆ ಸಂಘಟನೆ ಈಗ ಬಲಾಡ್ಯಗೊಂಡು ದೇಶದ ಆಡಳಿತ ಹಿಡಿದಿದ್ದಾರೆಂದರೆ ಅದಕ್ಕೆ ಕಾರಣ ಈ ಸುಳ್ಳುಗಳೇ. ಆದರೆ ಅವರ ಸಾಧನೆ ಏನು?” ಎಂದು ಪ್ರಶ್ನಿಸಿದರು.

“ರೈತ ಹೋರಾಟಗಾರರು ಟ್ರಾಕ್ಟರ್‌ ಸುಟ್ಟಿದ್ದು ಸರ್ಕಾರದ ಗಮನ ಸೆಳೆಯಲು, ಕೃಷಿ ಕ್ಷೇತ್ರಕ್ಕೆ ಸರ್ಕಾರ ಮಾಡಿದ ದ್ರೋಹವನ್ನು ತಿಳಿಸಲು, ಅದಕ್ಕೆ ಪ್ರಧಾನಿ ಉತ್ತರ ಕೊಡಬೇಕು. ರೈತರು ಕ್ರಿಮಿನಲ್‌ಗಳಲ್ಲ, ಕೃಷಿಯನ್ನು ನಾಶಮಾಡಲು ಹೊರಟಿದ್ದಕ್ಕೆ, ಕೃಷಿ ಮಾರುಕಟ್ಟೆಯನ್ನು ದಿವಾಳಿ ಮಾಡಲು ಹೊರಟಿದ್ದಕ್ಕೆ ರೈತರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ರೈತರ ಬಾಯಿಗೆ ವಿಷ ಹಾಕಿ, ರೈತರ ಮೇಲೆ ಕ್ರಿಮಿನಲ್ ಕೇಸು ಹಾಕಿ ಕಾರ್ಪೊರೇಟ್‌ಗಳಿಗೆ ಲಾಭ ಮಾಡಲು ಹೊರಟಿದೆ. ರೈತರು ಟ್ರಾಕ್ಟರ್‌ಗೆ ಬೆಂಕಿ ಹಾಕಿರುವುದು ಪ್ರಧಾನಿ ಮಾತನಾಡಲಿ ಎಂದಾಗಿದೆ. ಅದನ್ನು ಬಿಟ್ಟು ರೈತರಿಗೆ ಅವಮಾನ ಎಂದರೆ ಏನರ್ಥ ? ರೈತರಿಗೆ ಅವಮಾನ ಯಾರು ಮಾಡುತ್ತಿದ್ದಾರೆ ಎಂದು ಇಡಿ ದೇಶಕ್ಕೆ ಗೊತ್ತಿದೆ” ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಬೆಂಗಳೂರಿನಲ್ಲಿ ಅಭೂತಪೂರ್ವ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...