Homeಚಳವಳಿಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಸಾಂತ್ವನ ಮಾಡುವುದೋ ಮಾಡುತ್ತಿಲ್ಲ.

- Advertisement -
- Advertisement -

ಕೇಂದ್ರದ ಹೊಸ ಕೃಷಿಕಾನೂನನ್ನು ವಿರೋಧಿಸಿ ನಿರಂತರವಾಗಿ ಹದಿನೈದು ದಿನದಿಂದ ರೈತರು ದೇಶದಾದ್ಯಂತ ಹೋರಾಟ ನಡೆಸುತ್ತಿದ್ದು, ನಿನ್ನೆ ಮುಂಜಾನೆ ದೆಹಲಿಯ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯಲ್ಲಿ ಟ್ರಾಕ್ಟ‌‌ರ್‌ ಒಂದನ್ನು ಸುಟ್ಟು, ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ನೇಣಿಗೇರಿಸಿ ತಮ್ಮ ಆಕ್ರೋಶದ ತೀವ್ರತೆಯನ್ನು ವ್ಯಕ್ತಪಡಿಸಿದ್ದರು.

ಟ್ರಾಕ್ಟರ್‌‌‌ ಸುಟ್ಟ ರೈತರ ವಿರುದ್ದ ಈಗಾಗಲೆ ಕೇಸು ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, “ಹೊಸ ಕೃಷಿ ಕಾನೂನುಗಳನ್ನು ವಿರೋಧಿಸುವವರು ನಿಜವಾಗಿ ರೈತರನ್ನು ಅವಮಾನಿಸುತ್ತಿದ್ದಾರೆ. ಪ್ರತಿಭಟನಾಕಾರರು ರೈತರು ಗೌರವಿಸುವ ಕೃಷಿ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ಸುಟ್ಟು ರೈತರನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರೈತರ ಬಗ್ಗೆ ಪ್ರಧಾನಿ ನೀಡಿರುವ ಹೇಳಿಕೆಗೆ ಹಲವಾರು ರೈತ ಹೋರಾಟಗಾರರು ಪ್ರತಿಕ್ರಿಯೆ ನೀಡಿದ್ದು ಪ್ರಧಾನಿಯೆ ರೈತರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ರೈತರ ಬದುಕನ್ನು ಕಿತ್ತು ತಮ್ಮ ಗೆಳೆಯರಿಗೆ ಹಾಗೂ ಕಾರ್ಪೊರೇಟ್‌ ಕಂಪೆನಿಗಳ ವಶಕ್ಕೆ ನೀಡಿರುವ ಮೋದಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದು ಹೇಳಿದರು.

“ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಅವರಿಗೆ ಸಾಂತ್ವನ ಮಾಡುವುದೋ ಮಾಡುತ್ತಿಲ್ಲ. ನಿಜವಾಗಿ ಮೋದಿಯೇ ರೈತರಿಗೆ ಅವಮಾನ ಮಾಡಿದ್ದಾರೆ. ಅದರಲ್ಲೂ ರೈತರ ಜೊತೆ ಸೌಜನ್ಯಕ್ಕೂ ಚರ್ಚೆ ಮಾಡದೆ ಮಸೂದೆಗಳನ್ನು ಪಾಸ್‌ ಮಾಡಿರುವವರು ರೈತರ ಬಗ್ಗೆ ಕನಿಕರ ತೋರಿಸುವುದು ಖಂಡನೀಯ” ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಪ್ರಧಾನಿ ಒಬ್ಬ ಸುಳ್ಳುಗಾರ, ಸುಳ್ಳನ್ನೇ ಸತ್ಯವೆಂದು ನಂಬಿಸುವಲ್ಲಿ ಇದುವರೆಗೂ ಅವರು ಯಶಸ್ವಿಯಾಗಿದ್ದಾರೆ. ನಲವತ್ತು ವರ್ಷದ ಹಿಂದೆ ಏನೂ ಅಲ್ಲದೆ ಸಂಘಟನೆ ಈಗ ಬಲಾಡ್ಯಗೊಂಡು ದೇಶದ ಆಡಳಿತ ಹಿಡಿದಿದ್ದಾರೆಂದರೆ ಅದಕ್ಕೆ ಕಾರಣ ಈ ಸುಳ್ಳುಗಳೇ. ಆದರೆ ಅವರ ಸಾಧನೆ ಏನು?” ಎಂದು ಪ್ರಶ್ನಿಸಿದರು.

“ರೈತ ಹೋರಾಟಗಾರರು ಟ್ರಾಕ್ಟರ್‌ ಸುಟ್ಟಿದ್ದು ಸರ್ಕಾರದ ಗಮನ ಸೆಳೆಯಲು, ಕೃಷಿ ಕ್ಷೇತ್ರಕ್ಕೆ ಸರ್ಕಾರ ಮಾಡಿದ ದ್ರೋಹವನ್ನು ತಿಳಿಸಲು, ಅದಕ್ಕೆ ಪ್ರಧಾನಿ ಉತ್ತರ ಕೊಡಬೇಕು. ರೈತರು ಕ್ರಿಮಿನಲ್‌ಗಳಲ್ಲ, ಕೃಷಿಯನ್ನು ನಾಶಮಾಡಲು ಹೊರಟಿದ್ದಕ್ಕೆ, ಕೃಷಿ ಮಾರುಕಟ್ಟೆಯನ್ನು ದಿವಾಳಿ ಮಾಡಲು ಹೊರಟಿದ್ದಕ್ಕೆ ರೈತರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ರೈತರ ಬಾಯಿಗೆ ವಿಷ ಹಾಕಿ, ರೈತರ ಮೇಲೆ ಕ್ರಿಮಿನಲ್ ಕೇಸು ಹಾಕಿ ಕಾರ್ಪೊರೇಟ್‌ಗಳಿಗೆ ಲಾಭ ಮಾಡಲು ಹೊರಟಿದೆ. ರೈತರು ಟ್ರಾಕ್ಟರ್‌ಗೆ ಬೆಂಕಿ ಹಾಕಿರುವುದು ಪ್ರಧಾನಿ ಮಾತನಾಡಲಿ ಎಂದಾಗಿದೆ. ಅದನ್ನು ಬಿಟ್ಟು ರೈತರಿಗೆ ಅವಮಾನ ಎಂದರೆ ಏನರ್ಥ ? ರೈತರಿಗೆ ಅವಮಾನ ಯಾರು ಮಾಡುತ್ತಿದ್ದಾರೆ ಎಂದು ಇಡಿ ದೇಶಕ್ಕೆ ಗೊತ್ತಿದೆ” ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಬೆಂಗಳೂರಿನಲ್ಲಿ ಅಭೂತಪೂರ್ವ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...