Homeಮುಖಪುಟಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ಉಮಾ ಭಾರತಿ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಲಖನೌದ ವಿಶೇಷ ಸಿಬಿಐ ನ್ಯಾಯಾಲಯ ನಾಳೆ (ಸೆ.30) ತೀರ್ಪು ಪ್ರಕಟಿಸಲಿದೆ. ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಲಿದ್ದು, ತೀರ್ಪಿನ ವಿಚಾರಣೆಗಾಗಿ ಪ್ರಕರಣದ 32 ಆರೋಪಿಗಳನ್ನು ಆ ದಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶಿಸಿತ್ತು.

ನಾಳೆ ತೀರ್ಪು ಬರುವ ಹಿನ್ನೆಲೆ ಬಿಜೆಪಿ ನಾಯಕಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಮಾ ಭಾರತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೇ ಗಲ್ಲಿಗೇರಿಸಲಿ ನಾನು ಸಿದ್ಧ ಎಂದಿದ್ದಾರೆ.

ಸೆಪ್ಟೆಂಬರ್ 26 ರಂದು ಬರೆದಿರುವ ಪತ್ರದಲ್ಲಿ “ಸೆಪ್ಟೆಂಬರ್ 30 ರಂದು ಅಯೋಧ್ಯೆಯ ತೀರ್ಪು ಏನೆಂದು ನನಗೆ ತಿಳಿದಿಲ್ಲ. ಆದರೆ ನಾನು ಜಾಮೀನು ಪಡೆಯುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಉಮಾಭಾರತಿ

“ಅಯೋಧ್ಯೆ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನನಗೆ ಹೆಮ್ಮೆ ಇದೆ. ಅಯೋಧ್ಯೆ ಚಳವಳಿಯ ಭಾಗವಾಗಿದ್ದಕ್ಕಾಗಿ  ಗಲ್ಲಿಗೇರುವ ಪರಿಸ್ಥಿತಿ ಬಂದರು, ಅದು ನನಗೆ ಸ್ವೀಕಾರಾರ್ಹ ಎಂದು ನಾನು ಯಾವಾಗಲೂ ಹೇಳಿದ್ದೇನೆ” ಎಂದು  ಬರೆದಿದ್ದಾರೆ. “ತೀರ್ಪು ಏನು ಎಂದು ನನಗೆ ತಿಳಿದಿಲ್ಲ, ಆದರೆ ನಾನು ಜಾಮೀನು ತೆಗೆದುಕೊಳ್ಳುವುದಿಲ್ಲ. ಜಾಮೀನು ತೆಗೆದುಕೊಳ್ಳುವುದರಿಂದ ನಾನು ಚಳವಳಿಯಲ್ಲಿ ಭಾಗವಹಿಸಿದ್ದ ಘನತೆಗೆ ಕಳಂಕ ತರುತ್ತದೆ ಎಂದಿದ್ದಾರೆ. ಇಂತಹ ಸಂದರ್ಭಗಳಲ್ಲಿ, ನೀವು ನನ್ನನ್ನು ಹೊಸ ತಂಡದಲ್ಲಿ ಇರಿಸಿಕೊಳ್ಳಲು ಬಯಸುತ್ತೀರೋ ಇಲ್ಲವೋ, ಅದನ್ನು ನೀವು ಪರಿಗಣಿಸಬೇಕು” ಎಂದಿದ್ದಾರೆ.

ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೊಸ ಬಿಜೆಪಿ ಪದಾಧಿಕಾರಿಗಳನ್ನು ಘೋಷಿಸಿದ ದಿನದಂದು ಬರೆಯಲಾಗಿದೆ. ಅಂದೇ ಉಮಾ ಭಾರತಿಯನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿತ್ತು. ಆದರೆ ಪಕ್ಷದ ಸಾಂಸ್ಥಿಕ ಪುರ್ನರಚನೆ ಮುಂಚಿತವಾಗಿಯೇ ಈ ಪತ್ರವನ್ನು ಬರೆಯಲಾಗಿದೆ ಎಂದು ಉಮಾ ಭಾರತಿಯವರ ಖಾಸಗಿ ಕಾರ್ಯದರ್ಶಿ ವಿಷ್ಣುಗುಪ್ತ ವೈದ್ಯ ಹೇಳಿದ್ದಾರೆ.

ಉಮಾಭಾರತಿ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಸಂಪುಟ ಸಭೆಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ಆದರೆ 2019ರ ಲೋಕಸಭಾ ಚುನಾವಣೆಯಿಂದ ದೂರ ಉಳಿದಿದ್ದರು.

ಇದನ್ನೂ ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ನಾಳೆ ಪ್ರಕರಣದ ತೀರ್ಪು ಹೊರಬೀಳಲಿದ್ದು, ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿತ್ತು.

ಆದರೆ ಕೆಲವು ಹಿರಿಯ ರಾಜಕೀಯ ಮುಖಂಡರು, ಕೆಲವರ ವೈಯಕ್ತಿಕ ಕಾರಣದಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದು ತಿಳಿದು ಬಂದಿದೆ.

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಸೇರಿದಂತೆ 32 ಆರೋಪಿಗಳಲ್ಲಿ ಕೆಲವರು, ತಮ್ಮ ವಯಸ್ಸು ಮತ್ತು ಕೊರೊನಾ ರೋಗವನ್ನು ಮುಂದಿಟ್ಟು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲು ನ್ಯಾಯಾಲಯವನ್ನು ಕೋರಬಹುದು ಎಂದು ಆರೋಪಿಗಳ ಪರ ವಕೀಲ ಕೆ.ಕೆ. ಮಿಶ್ರಾ ತಿಳಿಸಿದ್ದಾರೆ.

ಕೇಂದ್ರದ ಮಾಜಿ ಸಚಿವೆ ಉಮಾ ಭಾರತಿ ಅವರಿಗೆ ಸೋಮವಾರ ಕೊರೊನಾ ಸೋಂಕು ತಗುಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಏಮ್ಸ್ ವೈದ್ಯರು ಅನುಮತಿ ನೀಡಿದರೆ ಮಾತ್ರ ನಾಡಿದ್ದು ನಾನು ಲಖನೌದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಹಾಜರಾಗುತ್ತೇನೆ ಎಂದಿದ್ದರು.

ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಕೂಡ ಘಾಜಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ: ಸೆ.30ಕ್ಕೆ ಸಿಬಿಐ ವಿಶೇಷ ಕೋರ್ಟ್ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...