Homeಕರ್ನಾಟಕಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ಕಾಡುಗೊಲ್ಲರ ಅಭಿವೃದ್ಧಿ ನಿಗಮ ಮಾಡುವಲ್ಲಿ ವಿಫಲರಾದ ರಾಜ್ಯ ಸರಕಾರ, ಮುಖ್ಯಮಂತ್ರಿ ಮತ್ತು ನಿಗಮ ತಡೆಗೆ ಕಾರಣರಾದವರ ವಿರುದ್ಧ ತುಮಕೂರಿನಲ್ಲಿ ಶೀಘ್ರವೇ ರಾಜ್ಯ ಮಟ್ಟದ ಹೋರಾಟ ಮಾಡುತ್ತೇವೆ ಎಂದು ಯುವ ಸೇನೆಯ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.

- Advertisement -
- Advertisement -

ಶಿರಾ ಉಪಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಕಾಡು ಗೊಲ್ಲ ಅಬಿವೃದ್ಧಿ ನಿಗಮವನ್ನು ಸೆಪ್ಟೆಂಬರ್ 28 ರಂದು ಬೆಳಗ್ಗೆ ಘೋಷಣೆ ಮಾಡಿದರು. ಸಂಜೆ ವೇಳೆಗೆ ಅದು ಗೊಲ್ಲ ಅಭಿವೃದ್ಧಿ ನಿಗಮವಾಗಿ ದಿಢೀರ್ ಬದಲಾವಣೆ ಮಾಡಿದ್ದೂ ಆಯಿತು. ಊರುಗೊಲ್ಲ ಸಮುದಾಯಕ್ಕೆ ಸೇರಿದ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಕಾಡುಗೊಲ್ಲ ಎಂಬುದನ್ನು ಸಂಜೆ ವೇಳೆಗೆ ಬದಲಾಗುವಂತೆ ಮಾಡಿದರು ಎನ್ನಲಾಗಿದೆ. ಇದಕ್ಕೆ ಕಾಡುಗೊಲ್ಲ ಸಮುದಾಯ ಸಿಡಿದೆದ್ದು ನಿಂತಿದೆ.

ಮೊದಲಿನಂತೆ ಮುಖ್ಯಮಂತ್ರಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದು ಬದಲಾವಣೆ ಮಾಡದಿದ್ದರೆ ಸರ್ಕಾರದ ವಿರುದ್ಧ ಸಮುದಾಯ ಬೀದಿಗೆ ಇಳಿಯಲಿದೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ರಾಜ್ಯದ ಚಿತ್ರದುರ್ಗ, ತುಮಕೂರು, ಹಾಸನ, ಬಳ್ಳಾರಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯ ಅಧಿಕ ಸಂಖ್ಯೆಯಲ್ಲಿದೆ. ಅಲೆಮಾರಿಗಳಂತೆ ಜೀವನ ನಡೆಸುತ್ತಿದ್ದಾರೆ. ಕುರಿ, ಮೇಕೆ ಸಾಕಾಣಿಕೆ, ಪಶುಪಾಲನೆ ಕಾಡುಗೊಲ್ಲರ ಮುಖ್ಯ ಕಸುಬು. ಇದೇ ಜೀವನ ಎನ್ನುತ್ತಾರೆ ಸಮುದಾಯದ ಮುಖಂಡರು.

ಇದನ್ನೂ ಓದಿ: ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ತೀರಾ ಹಿಂದುಳಿದಿದ್ದಾರೆ. ಇದುವರೆಗೂ ರಾಜಕೀಯದಲ್ಲಿ ಸಮರ್ಥ ನಾಯಕರೇ ಬಂದಿಲ್ಲ. ಇಂದಿಗೂ ಕಾಡುಗೊಲ್ಲ ಸಮುದಾಯ ಮುಖ್ಯವಾಹಿನಿಗೆ ಬಂದಿಲ್ಲ. ಮುಟ್ಟುಚಟ್ಟು, ಋತುಸ್ರಾವ ಕಾಲದಲ್ಲಿ, ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ವಾರೊಂಭತ್ತು ದಿನಗಳು ಊರ ಹೊರಗೇ ಕಾಲ ಕಳೆಯುವಂತಹ ಮೂಢನಂಬಿಕೆಯುಳ್ಳ ಜನಾಂಗವಾಗಿದೆ. ಹಟ್ಟಿಗಳು ಕಂದಾಯ ಗ್ರಾಮಗಳಾಗಿಲ್ಲ. ಊರುಗೊಲ್ಲರು ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಪ್ರಬಲರಾಗಿದ್ದು ಬುಡಕಟ್ಟು ಅಲೆಮಾರಿ ಸಮುದಾಯವಾಗಿರುವ ಕಾಡುಗೊಲ್ಲರ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದು ಆರೋಪಿಸುತ್ತಾರೆ ಮುಖಂಡರು.

ಮುಖ್ಯಮಂತ್ರಿಗಳು ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುತ್ತಿದ್ದಂತೆಯೇ ಶಾಸಕಿ ಪೂರ್ಣಿಮ ಶ್ರೀನಿವಾಸ್ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆಂದು ಹೇಳಲಾಗುತ್ತಿದೆ. ಪೂರ್ಣಿಮಾ ಶಾಸಕಿಯಾಗಿದ್ದರೂ ಕಾಡುಗೊಲ್ಲರಿಗೆ ಅವರಿಂದೇನೂ ಪ್ರಯೋಜನವಾಗಿಲ್ಲ. ಅಕ್ಷರ ಜ್ಞಾನ ಇಲ್ಲದ ಸಮುದಾಯವನ್ನು ತುಳಿಯುವ ಪ್ರಯತ್ನವನ್ನು ಬಿಜೆಪಿ ಸರಕಾರ ಮಾಡಿದೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮ ಮಾಡುವಲ್ಲಿ ವಿಫಲರಾದ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ನಿಗಮ ತಡೆಗೆ ಕಾರಣರಾದವರ ವಿರುದ್ಧ ತುಮಕೂರಿನಲ್ಲಿ ಶೀಘ್ರವೇ ರಾಜ್ಯ ಮಟ್ಟದ ಹೋರಾಟ ಮಾಡುತ್ತೇವೆ ಎಂದು ಯುವ ಸೇನೆಯ ಜಿಲ್ಲಾಧ್ಯಕ್ಷ ಜಯಕೃಷ್ಣ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ

ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಡುಗೊಲ್ಲರಿಗೆ ದ್ರೋಹ ಮಾಡುತ್ತಿದ್ದಾರೆ. ಹಿರಿಯೂರಿನಲ್ಲಿ ಅಧಿಕ ಸಂಖ್ಯೆಯಲ್ಲಿರುವ ಕಾಡುಗೊಲ್ಲರ ಓಟುಗಳನ್ನು ಪಡೆದು ಗೆದ್ದು ಬಂದಿರುವ ಪೂರ್ಣಿಮಾ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

ಕಾಡುಗೊಲ್ಲರ ಮುಖಂಡರು ಮುಖ್ಯಮಂತ್ರಿಗಳ ಮೇಲೆ ಒತ್ಡ ಹೇರಿದ್ದು ಕಾಡುಗೊಲ್ಲ ಅಭಿವೃದ್ದಿ ನಿಗಮ ಎಂದೇ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದು ಶಿರಾ ಚುನಾವಣೆಯಲ್ಲಿ ಕಾಡುಗೊಲ್ಲರ ಮತಗಳನ್ನು ಪಡೆಯಲು ಮಾಡಿರುವ ತಂತ್ರ. ನಿಗಮ ಘೋಷಿಸಿದ್ದರೂ ಹಣ ಘೋಷಿಸಿಲ್ಲ ಎಂಬ ಬಗ್ಗೆ ಚರ್ಚೆ ಸಾರ್ವಜನಿಕರೆಡೆಯಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...