Homeಚಳವಳಿಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ಸುಖದೇವ್ ಸಿಂಗ್ ಕೊಕ್ರಿಕಲನ್ ಹೇಳಿದರು.

- Advertisement -
- Advertisement -

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಲಿದ್ದು, ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡುವ ನಿರೀಕ್ಷೆಯಿದೆ.

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಲಿರುವ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಲಿದ್ದಾರೆ.

ಇದನ್ನೂ ಓದಿ: ಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

ಮೂರು ವಿವಾದಾತ್ಮಕ ಕೃಷಿ ಮಸೂದೆಗಳು ಈಗ ರಾಷ್ಟ್ರಪತಿಗಳ ಅಂಕಿತದ ನಂತರ ಕಾನೂನುಗಳಾಗಿವೆ. ಹಾಗಾಗಿ, ‘ಘೆರಾವ್ ಕಾರ್ಪೊರೇಟ್ ವ್ಯವಹಾರಗಳು(Gherao Corporate Businesses)’ ಎಂಬ ಹೊಸ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ರಾಹುಲ್ ಗಾಂಧಿ ಅವರು ಕೃಷಿ ಶಾಸನಗಳ ಬಗ್ಗೆ ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈತರೊಂದಿಗೆ ಸಂವಹನ ನಡೆಸಿದ್ದಾರೆ. ಹೊಸ ಕಾನೂನುಗಳ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, 2 ಕೋಟಿ ರೈತರ ಸಹಿಯನ್ನು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರಿಗೆ ಸಲ್ಲಿಸುವುದಾಗಿ ಘೋಷಿಸಿದೆ.

ಈ ರೈತ ವಿರೋಧಿ ಶಾಸನಗಳ ಸಮಗ್ರ ವಿರೋಧದ ಭಾಗವಾಗಿ, ಪಕ್ಷವು ಅಕ್ಟೋಬರ್ 2 ರಂದು ದೇಶದಾದ್ಯಂತದ ಪ್ರತಿ ವಿಧಾನಸಭೆ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಮತ್ತು ಮೆರವಣಿಗೆಗಳನ್ನು ನಡೆಸುವ ಮೂಲಕ ‘ಕಿಸಾನ್-ಮಜ್ದೂರ್ ಬಚಾವೊ ದಿವಸ್’ ಆಚರಿಸಲಿದೆ.

ಇದನ್ನೂ ಓದಿ: ಮೋದಿ ವಿರುದ್ಧ ರೈತರು, ಯೋಧರ ಸ್ಪರ್ಧೆಯು ಜಡಗೊಂಡ ನೈತಿಕ ಪ್ರಜ್ಞೆಗೆ ಚಾಟಿ ಏಟು

ಫಿರೋಜ್‌ಪುರದಲ್ಲಿ ನಡೆದ ಬೃಹತ್ ಸಭೆಯಲ್ಲಿ, ಶಹೀದ್ ಭಗತ್ ಸಿಂಗ್ 113 ನೇ ಜನ್ಮ ದಿನಾಚರಣೆಯಂದು ಮತ್ತು ಭಗತ್ ಸಿಂಗ್ ಪೋಸ್ಟರ್ ಅನ್ನು ರೈಲ್ವೆ ಟ್ರ್ಯಾಕ್‌ನಲ್ಲಿ ನೇತುಹಾಕಲಾಗಿತ್ತು. ಸತ್ನಮ್ ಸಿಂಗ್ ಪನ್ನು ಬಿಕು (ಪನ್ನು ಗ್ರೂಪ್ ಅಧ್ಯಕ್ಷ), ಅಕ್ಟೋಬರ್ 2 ರವರೆಗೆ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಘೋಷಿಸಿದ್ದು, ಅಕ್ಟೋಬರ್ ತಿಂಗಳನ್ನು ಜಂಟಿ ಪ್ರತಿಭಟನೆಯಾಗಿ ಅರ್ಪಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹನ್ ಗ್ರೂಪ್) ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೊಕ್ರಿಕಲನ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, “ಮೋದಿ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕಾನೂನುಗಳನ್ನು ಜಾರಿಗೊಳಿಸಿದ್ದರಿಂದ, ಅಕ್ಟೋಬರ್ 1 ರಿಂದ ಬಹುರಾಷ್ಟ್ರೀಯ ಕಂಪನಿಗಳು ನಡೆಸುತ್ತಿರುವ ಎಲ್ಲಾ ವ್ಯವಹಾರಗಳನ್ನು ಅನಿರ್ದಿಷ್ಟಾವಧಿಗೆ ಘೆರಾವ್ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

“ಮಂಗಳವಾರ, ನಮ್ಮ ರಾಜ್ಯ ಮಟ್ಟದ ಸಭೆಯಲ್ಲಿ, ರಾಜ್ಯದಲ್ಲಿ ಮುತ್ತಿಗೆ ಹಾಕಬೇಕಾದ 18 ರಿಂದ 20 ಬಿಂದುಗಳನ್ನು ಗುರುತಿಸಿದ ನಂತರ ನಾವು ಈ ಪ್ರತಿಭಟನೆಗಳಿಗೆ ಅಂತಿಮ ಆಕಾರವನ್ನು ನೀಡುತ್ತೇವೆ. ಪ್ರತಿಯೊಂದು ಪ್ರತಿಭಟನಾ ಸ್ಥಳವು 2,000 ದಿಂದ 15,000 ಪ್ರತಿಭಟನಾಕಾರರನ್ನು ಒಟ್ಟುಗೂಡಿಸುವ ನಿರೀಕ್ಷೆಯಿದೆ” ಎಂದು ಹೇಳಿದರು.

ಪಂಜಾಬ್ ಯೂತ್ ಕಾಂಗ್ರೆಸ್ ನಾಯಕರು ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಅನ್ನು ಸುಟ್ಟುಹಾಕಿದ್ದರಿಂದ ರೈತರ ಪ್ರತಿಭಟನೆ ರಾಷ್ಟ್ರ ರಾಜಧಾನಿಯನ್ನು ತಲುಪಿದೆ. ನಂತರ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ರಾಜ್ಯಾದ್ಯಂತ ಸಿಡಿದೆದ್ದ ರೈತರು: ಕರ್ನಾಟಕ ಬಂದ್ ಯಶಸ್ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...