Homeಮುಖಪುಟನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ’ಪಾಮ್ ಡಿ ಓರ್’ ಪ್ರಶಸ್ತಿಯನ್ನು ಪಡೆದಿತ್ತು.

- Advertisement -
- Advertisement -

ಭಾರತೀಯ ಚಿತ್ರರಂಗದ ಅಪ್ರತಿಮ ನಟಿ, ನೃತ್ಯಸಂಯೋಜಕಿ, ರಂಗಕಲಾವಿದೆ ಜೊಹ್ರಾ ಮುಮ್ತಾಜ್ ಸೆಹಗಲ್‌ಗೆ ಗೂಗಲ್ ವಿಶೇಷ ಗೌರವ ಸಲ್ಲಿಸಿದೆ. ಹಿರಿಯ ನಟಿ ಜೊಹ್ರಾ ಸೆಗಲ್‌ರನ್ನು ಶಾಸ್ತ್ರೀಯ ನೃತ್ಯ ಭಂಗಿಯಲ್ಲಿ, ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ ಅನಿಮೇಟೆಡ್ ಚಿತ್ರವನ್ನು ಡೂಡಲ್ ತೋರಿಸಿದೆ. ಈ ಡೂಡಲ್ ಅನ್ನು ಕಲಾವಿದೆ ಪಾರ್ವತಿ ಪಿಳ್ಳೈ ವಿನ್ಯಾಸಗೊಳಿಸಿದ್ದಾರೆ.

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ಪಾಮ್ ಡಿ ಓರ್ ಪ್ರಶಸ್ತಿಯನ್ನು ಪಡೆದಿತ್ತು. ಆ ನೆನಪಿಗಾಗಿ ಗೂಗಲ್ ಈ ವಿಶೇಷ ಗೌರವ ಸಲ್ಲಿಸಿದೆ. ಗೂಗಲ್ ತನ್ನ ಟಿಪ್ಪಣಿಯಲ್ಲಿ ನಟಿಯನ್ನು ‘ಅಂತರರಾಷ್ಟ್ರೀಯ ವೇದಿಕೆಯಲ್ಲಿ ನಿಜವಾಗಿಯೂ ಮನ್ನಣೆಗಳಿಸಿದ ದೇಶದ ಮೊದಲ ಮಹಿಳಾ ನಟಿಯರಲ್ಲಿ ಒಬ್ಬರು’ ಎಂದು ಬಣ್ಣಿಸಿದೆ.

PC: Google

ಇದನ್ನೂ ಓದಿ: ಭಾರತೀಯರು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ್ದು ಏನನ್ನು? : ಆಗಸ್ಟ್‌ ತಿಂಗಳ ಮಾಹಿತಿ

ಹಿರಿಯ ನಟಿ ಸೆಹಗಲ್ ಏಪ್ರಿಲ್ 27, 1912 ರಂದು ಉತ್ತರಪ್ರದೇಶದಲ್ಲಿ ಜನಿಸಿದರು. ತನ್ನ 20 ರ ದಶಕದ ಆರಂಭದಲ್ಲಿ ಬ್ಯಾಲೆ ನೃತ್ಯ ಕಲಿಯಲು ಜರ್ಮನಿಯ ಪ್ರತಿಷ್ಠಿತ ಶಾಲೆಗೆ ಸೇರಿಕೊಂಡಿದ್ದರು. ಭಾರತೀಯ ಪ್ರಸಿದ್ಧ ನೃತ್ಯಗಾರ ಉದಯ್ ಶಂಕರ್ ಅವರೊಂದಿಗೆ ಅಂತರರಾಷ್ಟ್ರೀಯ ಪ್ರವಾಸ ಕೈಗೊಂಡಿದ್ದರು. ನಂತರ ಉದಯ್ ಶಂಕರ್ ಅವರ ತಂಡದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದರು. 1942ರ ಆಗಸ್ಟ್‌ನಲ್ಲಿ ಕಾಮೇಶ್ವರ ಸೆಹಗಲ್‌ರನ್ನು ವಿವಾಹವಾದರು.

PC: Scroll.in

ಜೊಹ್ರಾ ಸೆಹಗಲ್ ಬಾಲಿವುಡ್‌ಗೆ ಭಾರಿ ಕೊಡುಗೆ ನೀಡಿದ್ದು, ಅವರು ಕೊನೆಯ ಬಾರಿಗೆ ಸಂಜಯ್ ಲೀಲಾ ಭನ್ಸಾಲಿಯವರ ‘ಸಾವರಿಯಾ’ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ಸೋನಮ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ಅವರು ಯಶಸ್ವಿ ಚಿತ್ರಗಳಾದ ‘ಚೀನಿ ಕಮ್’, ‘ಹಮ್ ದಿಲ್ ದೇ ಚುಕೆ ಸನಮ್’, ‘ದಿಲ್ ಸೆ’, ‘ಕಭಿ ಖುಷಿ ಕಭಿ ಗಮ್’, ಮತ್ತು ‘ವೀರ್ ಜಾರಾ’ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

PC: Outlook India

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ನಿ ಗುರ್ಷರಣ್ ಕೌರ್ ನವದೆಹಲಿಯಲ್ಲಿ ಜೊಹ್ರಾ ಸೆಹಗಲ್‌ ಅವರ 100ನೇ ಹುಟ್ಟುಹಬ್ಬದಂದು ‘ಜೊಹ್ರಾ ಸೆಗಲ್’ ಪುಸ್ತಕವನ್ನು ಬಿಡುಗಡೆ ಮಾಡಿದ್ದರು.

ಪದ್ಮಶ್ರೀ (1998), ಕಾಳಿದಾಸ್ ಸಮ್ಮನ್ (2001), ಮತ್ತು ಪದ್ಮವಿಭೂಷಣ್ (2010) ಸೇರಿ ಹಲವು ಗೌರವಗಳನ್ನು ಸೆಹಗಲ್ ಪಡೆದಿದ್ದಾರೆ. ತಮ್ಮ 102 ನೇ ವಯಸ್ಸಿನಲ್ಲಿ ನವದೆಹಲಿಯಲ್ಲಿ ನಿಧನರಾದರು.


ಇದನ್ನೂ ಓದಿ: ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...