Homeಮುಖಪುಟನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ’ಪಾಮ್ ಡಿ ಓರ್’ ಪ್ರಶಸ್ತಿಯನ್ನು ಪಡೆದಿತ್ತು.

- Advertisement -
- Advertisement -

ಭಾರತೀಯ ಚಿತ್ರರಂಗದ ಅಪ್ರತಿಮ ನಟಿ, ನೃತ್ಯಸಂಯೋಜಕಿ, ರಂಗಕಲಾವಿದೆ ಜೊಹ್ರಾ ಮುಮ್ತಾಜ್ ಸೆಹಗಲ್‌ಗೆ ಗೂಗಲ್ ವಿಶೇಷ ಗೌರವ ಸಲ್ಲಿಸಿದೆ. ಹಿರಿಯ ನಟಿ ಜೊಹ್ರಾ ಸೆಗಲ್‌ರನ್ನು ಶಾಸ್ತ್ರೀಯ ನೃತ್ಯ ಭಂಗಿಯಲ್ಲಿ, ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ ಅನಿಮೇಟೆಡ್ ಚಿತ್ರವನ್ನು ಡೂಡಲ್ ತೋರಿಸಿದೆ. ಈ ಡೂಡಲ್ ಅನ್ನು ಕಲಾವಿದೆ ಪಾರ್ವತಿ ಪಿಳ್ಳೈ ವಿನ್ಯಾಸಗೊಳಿಸಿದ್ದಾರೆ.

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ಪಾಮ್ ಡಿ ಓರ್ ಪ್ರಶಸ್ತಿಯನ್ನು ಪಡೆದಿತ್ತು. ಆ ನೆನಪಿಗಾಗಿ ಗೂಗಲ್ ಈ ವಿಶೇಷ ಗೌರವ ಸಲ್ಲಿಸಿದೆ. ಗೂಗಲ್ ತನ್ನ ಟಿಪ್ಪಣಿಯಲ್ಲಿ ನಟಿಯನ್ನು ‘ಅಂತರರಾಷ್ಟ್ರೀಯ ವೇದಿಕೆಯಲ್ಲಿ ನಿಜವಾಗಿಯೂ ಮನ್ನಣೆಗಳಿಸಿದ ದೇಶದ ಮೊದಲ ಮಹಿಳಾ ನಟಿಯರಲ್ಲಿ ಒಬ್ಬರು’ ಎಂದು ಬಣ್ಣಿಸಿದೆ.

PC: Google

ಇದನ್ನೂ ಓದಿ: ಭಾರತೀಯರು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ್ದು ಏನನ್ನು? : ಆಗಸ್ಟ್‌ ತಿಂಗಳ ಮಾಹಿತಿ

ಹಿರಿಯ ನಟಿ ಸೆಹಗಲ್ ಏಪ್ರಿಲ್ 27, 1912 ರಂದು ಉತ್ತರಪ್ರದೇಶದಲ್ಲಿ ಜನಿಸಿದರು. ತನ್ನ 20 ರ ದಶಕದ ಆರಂಭದಲ್ಲಿ ಬ್ಯಾಲೆ ನೃತ್ಯ ಕಲಿಯಲು ಜರ್ಮನಿಯ ಪ್ರತಿಷ್ಠಿತ ಶಾಲೆಗೆ ಸೇರಿಕೊಂಡಿದ್ದರು. ಭಾರತೀಯ ಪ್ರಸಿದ್ಧ ನೃತ್ಯಗಾರ ಉದಯ್ ಶಂಕರ್ ಅವರೊಂದಿಗೆ ಅಂತರರಾಷ್ಟ್ರೀಯ ಪ್ರವಾಸ ಕೈಗೊಂಡಿದ್ದರು. ನಂತರ ಉದಯ್ ಶಂಕರ್ ಅವರ ತಂಡದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದರು. 1942ರ ಆಗಸ್ಟ್‌ನಲ್ಲಿ ಕಾಮೇಶ್ವರ ಸೆಹಗಲ್‌ರನ್ನು ವಿವಾಹವಾದರು.

PC: Scroll.in

ಜೊಹ್ರಾ ಸೆಹಗಲ್ ಬಾಲಿವುಡ್‌ಗೆ ಭಾರಿ ಕೊಡುಗೆ ನೀಡಿದ್ದು, ಅವರು ಕೊನೆಯ ಬಾರಿಗೆ ಸಂಜಯ್ ಲೀಲಾ ಭನ್ಸಾಲಿಯವರ ‘ಸಾವರಿಯಾ’ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ಸೋನಮ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ಅವರು ಯಶಸ್ವಿ ಚಿತ್ರಗಳಾದ ‘ಚೀನಿ ಕಮ್’, ‘ಹಮ್ ದಿಲ್ ದೇ ಚುಕೆ ಸನಮ್’, ‘ದಿಲ್ ಸೆ’, ‘ಕಭಿ ಖುಷಿ ಕಭಿ ಗಮ್’, ಮತ್ತು ‘ವೀರ್ ಜಾರಾ’ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

PC: Outlook India

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ನಿ ಗುರ್ಷರಣ್ ಕೌರ್ ನವದೆಹಲಿಯಲ್ಲಿ ಜೊಹ್ರಾ ಸೆಹಗಲ್‌ ಅವರ 100ನೇ ಹುಟ್ಟುಹಬ್ಬದಂದು ‘ಜೊಹ್ರಾ ಸೆಗಲ್’ ಪುಸ್ತಕವನ್ನು ಬಿಡುಗಡೆ ಮಾಡಿದ್ದರು.

ಪದ್ಮಶ್ರೀ (1998), ಕಾಳಿದಾಸ್ ಸಮ್ಮನ್ (2001), ಮತ್ತು ಪದ್ಮವಿಭೂಷಣ್ (2010) ಸೇರಿ ಹಲವು ಗೌರವಗಳನ್ನು ಸೆಹಗಲ್ ಪಡೆದಿದ್ದಾರೆ. ತಮ್ಮ 102 ನೇ ವಯಸ್ಸಿನಲ್ಲಿ ನವದೆಹಲಿಯಲ್ಲಿ ನಿಧನರಾದರು.


ಇದನ್ನೂ ಓದಿ: ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...