Homeಮುಖಪುಟನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ’ಪಾಮ್ ಡಿ ಓರ್’ ಪ್ರಶಸ್ತಿಯನ್ನು ಪಡೆದಿತ್ತು.

- Advertisement -
- Advertisement -

ಭಾರತೀಯ ಚಿತ್ರರಂಗದ ಅಪ್ರತಿಮ ನಟಿ, ನೃತ್ಯಸಂಯೋಜಕಿ, ರಂಗಕಲಾವಿದೆ ಜೊಹ್ರಾ ಮುಮ್ತಾಜ್ ಸೆಹಗಲ್‌ಗೆ ಗೂಗಲ್ ವಿಶೇಷ ಗೌರವ ಸಲ್ಲಿಸಿದೆ. ಹಿರಿಯ ನಟಿ ಜೊಹ್ರಾ ಸೆಗಲ್‌ರನ್ನು ಶಾಸ್ತ್ರೀಯ ನೃತ್ಯ ಭಂಗಿಯಲ್ಲಿ, ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ ಅನಿಮೇಟೆಡ್ ಚಿತ್ರವನ್ನು ಡೂಡಲ್ ತೋರಿಸಿದೆ. ಈ ಡೂಡಲ್ ಅನ್ನು ಕಲಾವಿದೆ ಪಾರ್ವತಿ ಪಿಳ್ಳೈ ವಿನ್ಯಾಸಗೊಳಿಸಿದ್ದಾರೆ.

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ಪಾಮ್ ಡಿ ಓರ್ ಪ್ರಶಸ್ತಿಯನ್ನು ಪಡೆದಿತ್ತು. ಆ ನೆನಪಿಗಾಗಿ ಗೂಗಲ್ ಈ ವಿಶೇಷ ಗೌರವ ಸಲ್ಲಿಸಿದೆ. ಗೂಗಲ್ ತನ್ನ ಟಿಪ್ಪಣಿಯಲ್ಲಿ ನಟಿಯನ್ನು ‘ಅಂತರರಾಷ್ಟ್ರೀಯ ವೇದಿಕೆಯಲ್ಲಿ ನಿಜವಾಗಿಯೂ ಮನ್ನಣೆಗಳಿಸಿದ ದೇಶದ ಮೊದಲ ಮಹಿಳಾ ನಟಿಯರಲ್ಲಿ ಒಬ್ಬರು’ ಎಂದು ಬಣ್ಣಿಸಿದೆ.

PC: Google

ಇದನ್ನೂ ಓದಿ: ಭಾರತೀಯರು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ್ದು ಏನನ್ನು? : ಆಗಸ್ಟ್‌ ತಿಂಗಳ ಮಾಹಿತಿ

ಹಿರಿಯ ನಟಿ ಸೆಹಗಲ್ ಏಪ್ರಿಲ್ 27, 1912 ರಂದು ಉತ್ತರಪ್ರದೇಶದಲ್ಲಿ ಜನಿಸಿದರು. ತನ್ನ 20 ರ ದಶಕದ ಆರಂಭದಲ್ಲಿ ಬ್ಯಾಲೆ ನೃತ್ಯ ಕಲಿಯಲು ಜರ್ಮನಿಯ ಪ್ರತಿಷ್ಠಿತ ಶಾಲೆಗೆ ಸೇರಿಕೊಂಡಿದ್ದರು. ಭಾರತೀಯ ಪ್ರಸಿದ್ಧ ನೃತ್ಯಗಾರ ಉದಯ್ ಶಂಕರ್ ಅವರೊಂದಿಗೆ ಅಂತರರಾಷ್ಟ್ರೀಯ ಪ್ರವಾಸ ಕೈಗೊಂಡಿದ್ದರು. ನಂತರ ಉದಯ್ ಶಂಕರ್ ಅವರ ತಂಡದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದರು. 1942ರ ಆಗಸ್ಟ್‌ನಲ್ಲಿ ಕಾಮೇಶ್ವರ ಸೆಹಗಲ್‌ರನ್ನು ವಿವಾಹವಾದರು.

PC: Scroll.in

ಜೊಹ್ರಾ ಸೆಹಗಲ್ ಬಾಲಿವುಡ್‌ಗೆ ಭಾರಿ ಕೊಡುಗೆ ನೀಡಿದ್ದು, ಅವರು ಕೊನೆಯ ಬಾರಿಗೆ ಸಂಜಯ್ ಲೀಲಾ ಭನ್ಸಾಲಿಯವರ ‘ಸಾವರಿಯಾ’ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ಸೋನಮ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ಅವರು ಯಶಸ್ವಿ ಚಿತ್ರಗಳಾದ ‘ಚೀನಿ ಕಮ್’, ‘ಹಮ್ ದಿಲ್ ದೇ ಚುಕೆ ಸನಮ್’, ‘ದಿಲ್ ಸೆ’, ‘ಕಭಿ ಖುಷಿ ಕಭಿ ಗಮ್’, ಮತ್ತು ‘ವೀರ್ ಜಾರಾ’ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

PC: Outlook India

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ನಿ ಗುರ್ಷರಣ್ ಕೌರ್ ನವದೆಹಲಿಯಲ್ಲಿ ಜೊಹ್ರಾ ಸೆಹಗಲ್‌ ಅವರ 100ನೇ ಹುಟ್ಟುಹಬ್ಬದಂದು ‘ಜೊಹ್ರಾ ಸೆಗಲ್’ ಪುಸ್ತಕವನ್ನು ಬಿಡುಗಡೆ ಮಾಡಿದ್ದರು.

ಪದ್ಮಶ್ರೀ (1998), ಕಾಳಿದಾಸ್ ಸಮ್ಮನ್ (2001), ಮತ್ತು ಪದ್ಮವಿಭೂಷಣ್ (2010) ಸೇರಿ ಹಲವು ಗೌರವಗಳನ್ನು ಸೆಹಗಲ್ ಪಡೆದಿದ್ದಾರೆ. ತಮ್ಮ 102 ನೇ ವಯಸ್ಸಿನಲ್ಲಿ ನವದೆಹಲಿಯಲ್ಲಿ ನಿಧನರಾದರು.


ಇದನ್ನೂ ಓದಿ: ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...