Homeಮುಖಪುಟನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ’ಪಾಮ್ ಡಿ ಓರ್’ ಪ್ರಶಸ್ತಿಯನ್ನು ಪಡೆದಿತ್ತು.

- Advertisement -
- Advertisement -

ಭಾರತೀಯ ಚಿತ್ರರಂಗದ ಅಪ್ರತಿಮ ನಟಿ, ನೃತ್ಯಸಂಯೋಜಕಿ, ರಂಗಕಲಾವಿದೆ ಜೊಹ್ರಾ ಮುಮ್ತಾಜ್ ಸೆಹಗಲ್‌ಗೆ ಗೂಗಲ್ ವಿಶೇಷ ಗೌರವ ಸಲ್ಲಿಸಿದೆ. ಹಿರಿಯ ನಟಿ ಜೊಹ್ರಾ ಸೆಗಲ್‌ರನ್ನು ಶಾಸ್ತ್ರೀಯ ನೃತ್ಯ ಭಂಗಿಯಲ್ಲಿ, ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ ಅನಿಮೇಟೆಡ್ ಚಿತ್ರವನ್ನು ಡೂಡಲ್ ತೋರಿಸಿದೆ. ಈ ಡೂಡಲ್ ಅನ್ನು ಕಲಾವಿದೆ ಪಾರ್ವತಿ ಪಿಳ್ಳೈ ವಿನ್ಯಾಸಗೊಳಿಸಿದ್ದಾರೆ.

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ಪಾಮ್ ಡಿ ಓರ್ ಪ್ರಶಸ್ತಿಯನ್ನು ಪಡೆದಿತ್ತು. ಆ ನೆನಪಿಗಾಗಿ ಗೂಗಲ್ ಈ ವಿಶೇಷ ಗೌರವ ಸಲ್ಲಿಸಿದೆ. ಗೂಗಲ್ ತನ್ನ ಟಿಪ್ಪಣಿಯಲ್ಲಿ ನಟಿಯನ್ನು ‘ಅಂತರರಾಷ್ಟ್ರೀಯ ವೇದಿಕೆಯಲ್ಲಿ ನಿಜವಾಗಿಯೂ ಮನ್ನಣೆಗಳಿಸಿದ ದೇಶದ ಮೊದಲ ಮಹಿಳಾ ನಟಿಯರಲ್ಲಿ ಒಬ್ಬರು’ ಎಂದು ಬಣ್ಣಿಸಿದೆ.

PC: Google

ಇದನ್ನೂ ಓದಿ: ಭಾರತೀಯರು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ್ದು ಏನನ್ನು? : ಆಗಸ್ಟ್‌ ತಿಂಗಳ ಮಾಹಿತಿ

ಹಿರಿಯ ನಟಿ ಸೆಹಗಲ್ ಏಪ್ರಿಲ್ 27, 1912 ರಂದು ಉತ್ತರಪ್ರದೇಶದಲ್ಲಿ ಜನಿಸಿದರು. ತನ್ನ 20 ರ ದಶಕದ ಆರಂಭದಲ್ಲಿ ಬ್ಯಾಲೆ ನೃತ್ಯ ಕಲಿಯಲು ಜರ್ಮನಿಯ ಪ್ರತಿಷ್ಠಿತ ಶಾಲೆಗೆ ಸೇರಿಕೊಂಡಿದ್ದರು. ಭಾರತೀಯ ಪ್ರಸಿದ್ಧ ನೃತ್ಯಗಾರ ಉದಯ್ ಶಂಕರ್ ಅವರೊಂದಿಗೆ ಅಂತರರಾಷ್ಟ್ರೀಯ ಪ್ರವಾಸ ಕೈಗೊಂಡಿದ್ದರು. ನಂತರ ಉದಯ್ ಶಂಕರ್ ಅವರ ತಂಡದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದರು. 1942ರ ಆಗಸ್ಟ್‌ನಲ್ಲಿ ಕಾಮೇಶ್ವರ ಸೆಹಗಲ್‌ರನ್ನು ವಿವಾಹವಾದರು.

PC: Scroll.in

ಜೊಹ್ರಾ ಸೆಹಗಲ್ ಬಾಲಿವುಡ್‌ಗೆ ಭಾರಿ ಕೊಡುಗೆ ನೀಡಿದ್ದು, ಅವರು ಕೊನೆಯ ಬಾರಿಗೆ ಸಂಜಯ್ ಲೀಲಾ ಭನ್ಸಾಲಿಯವರ ‘ಸಾವರಿಯಾ’ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ಸೋನಮ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ಅವರು ಯಶಸ್ವಿ ಚಿತ್ರಗಳಾದ ‘ಚೀನಿ ಕಮ್’, ‘ಹಮ್ ದಿಲ್ ದೇ ಚುಕೆ ಸನಮ್’, ‘ದಿಲ್ ಸೆ’, ‘ಕಭಿ ಖುಷಿ ಕಭಿ ಗಮ್’, ಮತ್ತು ‘ವೀರ್ ಜಾರಾ’ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

PC: Outlook India

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ನಿ ಗುರ್ಷರಣ್ ಕೌರ್ ನವದೆಹಲಿಯಲ್ಲಿ ಜೊಹ್ರಾ ಸೆಹಗಲ್‌ ಅವರ 100ನೇ ಹುಟ್ಟುಹಬ್ಬದಂದು ‘ಜೊಹ್ರಾ ಸೆಗಲ್’ ಪುಸ್ತಕವನ್ನು ಬಿಡುಗಡೆ ಮಾಡಿದ್ದರು.

ಪದ್ಮಶ್ರೀ (1998), ಕಾಳಿದಾಸ್ ಸಮ್ಮನ್ (2001), ಮತ್ತು ಪದ್ಮವಿಭೂಷಣ್ (2010) ಸೇರಿ ಹಲವು ಗೌರವಗಳನ್ನು ಸೆಹಗಲ್ ಪಡೆದಿದ್ದಾರೆ. ತಮ್ಮ 102 ನೇ ವಯಸ್ಸಿನಲ್ಲಿ ನವದೆಹಲಿಯಲ್ಲಿ ನಿಧನರಾದರು.


ಇದನ್ನೂ ಓದಿ: ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...