Homeಮುಖಪುಟಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಲಾಕ್‌ಡೌನ್ ಅವದಿಯಲ್ಲಿ ವಿಶ್ವವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವಾಗ, ಮುಖೇಶ್ ಅಂಬಾನಿಯವರ ಸಂಪತ್ತು ಮಾತ್ರ ಗಣನೀಯವಾಗಿ ಏರಿಕೆಯಾಗಿದ್ದು, ಈ ಪಟ್ಟಿಯಲ್ಲಿ ತಮ್ಮ ಮುಂದಿನ 'ಐದು ಜನ ಶತಕೋಟ್ಯಾಧಿಪತಿಗಳ ಒಟ್ಟು ಸಂಪತ್ತಿ'ಗಿಂತ ಅಂಬಾನಿಯವರ ಸಂಪತ್ತು ಹೆಚ್ಚಾಗಿದೆ.

- Advertisement -
- Advertisement -

IIFL ವೆಲ್ತ್ ಹುರುನ್ ಇಂಡಿಯಾ ರಿಚ್ ಲಿಸ್ಟ್ 2020ರ ವರದಿಯ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಮುಖೇಶ್ ಅಂಬಾನಿ, ಕಳೆದ 6 ತಿಂಗಳ ಲಾಕ್‌ಡೌನ್ ಅವಧಿಯಲ್ಲಿ ಗಂಟೆಗೆ 90 ಕೋಟಿಯಂತೆ ಆದಾಯ ಗಳಿಸಿದ್ದು, ಪ್ರಸ್ತುತ ಒಟ್ಟು 6 ಲಕ್ಷದ 58 ಸಾವಿರದ 400 ಕೋಟಿ ಸಂಪತ್ತನ್ನು ಹೊಂದಿದ್ದಾರೆ.

ಲಾಕ್‌ಡೌನ್ ಅವದಿಯಲ್ಲಿ ವಿಶ್ವವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವಾಗ, ಮುಖೇಶ್ ಅಂಬಾನಿಯವರ ಸಂಪತ್ತು ಮಾತ್ರ ಗಣನೀಯವಾಗಿ ಏರಿಕೆಯಾಗಿದ್ದು, ಈ ಪಟ್ಟಿಯಲ್ಲಿ ತಮ್ಮ ಮುಂದಿನ ಐದು ಜನ ಶತಕೋಟ್ಯಾಧಿಪತಿಗಳ ಒಟ್ಟು ಸಂಪತ್ತಿಗಿಂತ ಅಂಬಾನಿಯವರ ಸಂಪತ್ತು ಹೆಚ್ಚಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಮುಖೇಶ್ ಅಂಬಾನಿ ಕಳೆದ 9 ನೇ ವರ್ಷದಿಂದಲೂ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಮೊದಲ ಸ್ಥಾನವನ್ನು ಉಳಿಸಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಂಬಾನಿ ವಿಶ್ವದ ಐದನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಇದನ್ನೂ ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ಆರ್‌ಐಎಲ್ ಭಾರತದಲ್ಲಿ ಲಾಕ್‌ಡೌನ್ ಹೊರತಾಗಿಯೂ 13,248 ಕೋಟಿ ರೂ. ಆದಾಯ ಗಳಿಸಿದ್ದಾರೆ.

“ಕೊರೊನಾ ಸಾಂಕ್ರಾಮಿಕದ ಆರಂಭದಲ್ಲಿ, ಅಂಬಾನಿಯ ಸಂಪತ್ತು 28% ನಷ್ಟು ಇಳಿದು 3,50,000 ಕೋಟಿ ರೂ.ಗಳಿಗೆ ತಲುಪಿತ್ತು. ನಂತರ ಫೇಸ್‌ಬುಕ್, ಗೂಗಲ್ ಮತ್ತು ಇತರ ಜಿಯೋ ಮತ್ತು ರಿಲಯನ್ಸ್ ರಿಟೇಲ್‌ನಿಂದ ಧನಸಹಾಯ ಮತ್ತು ಕಾರ್ಯತಂತ್ರದ ಹೂಡಿಕೆಯ ಬೆಂಬಲದೊಂದಿಗೆ ‘ವಿ-ಆಕಾರದ ಚೇತರಿಕೆ’ ಕಂಡುಬಂದು, 4 ತಿಂಗಳಲ್ಲಿ 85% ಸಂಪತ್ತು ಹೆಚ್ಚಾಗಿದೆ” ಎಂದು ವರದಿ ತಿಳಿಸಿದೆ.

88.3 ಬಿಲಿಯನ್ ಡಾಲರ್ ನಿವ್ವಳ ಆಸ್ತಿಯನ್ನು ಹೊಂದಿರುವ ಅಂಬಾನಿ ಕುಟುಂಬವು ಏಷ್ಯಾದ ಅತ್ಯಂತ ಶ್ರೀಮಂತ ಕುಟುಂಬವಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದ ಜಿಡಿಪಿ ಕುಸಿದು, ಇತ್ತೀಚಿನ ವರ್ತಮಾನದ ಪ್ರಕಾರ ಅದು ಶೇ. -23ರಷ್ಟು ಕುಸಿದಿತ್ತು. ನಿರುದ್ಯೋಗ ದಾಖಲೆ ಪ್ರಮಾಣದಲ್ಲಿ ಏರಿತ್ತು. ಕೃಷಿಯೊಂದನ್ನು ಹೊರತುಪಡಿಸಿದರೆ ಉತ್ಪಾದನೆ, ಸೇವಾ ವಲಯ, ನಿರ್ಮಾಣ ವಲಯ ಸೇರಿದಂತೆ ಮಿಕ್ಕೆಲ್ಲಾ ಕ್ಷೇತ್ರಗಳು ತೀವ್ರ ಸಂಕಷ್ಟ ಅನುಭವಿಸಿದ್ದವು. ಹೀಗಿದ್ದಾಗ ಅಂಬಾನಿ ಆಸ್ತಿ ಮತ್ತು ಸಂಪಾದನೆ ಮಾತ್ರ ಏರಿದ್ದು ಹೇಗೆ ಎಂಬುದು ಮಹತ್ವದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಯೆಸ್‌ ಬ್ಯಾಂಕ್‌ ಬಿಕ್ಕಟ್ಟು: ರಿಲಾಯನ್ಸ್‌ ಮುಖ್ಯಸ್ಥ ಅನಿಲ್‌ ಅಂಬಾನಿಗೆ ಸಮನ್ಸ್‌..!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...