Homeಮುಖಪುಟಕನ್ನಡದಲ್ಲಿ NET ಪರೀಕ್ಷೆ ನಡೆಸಲು ಒತ್ತಾಯ: ಕೇಂದ್ರಕ್ಕೆ ಪತ್ರಬರೆದ ಟಿ.ಎಸ್.ನಾಗಾಭರಣ

ಕನ್ನಡದಲ್ಲಿ NET ಪರೀಕ್ಷೆ ನಡೆಸಲು ಒತ್ತಾಯ: ಕೇಂದ್ರಕ್ಕೆ ಪತ್ರಬರೆದ ಟಿ.ಎಸ್.ನಾಗಾಭರಣ

1976ರ ಕೇಂದ್ರ ಭಾಷಾ ನೀತಿ ಅನ್ವಯ ದಕ್ಷಿಣ ರಾಜ್ಯಗಳಿಗೆ ಹಿಂದಿ ಭಾಷೆಯು ಆಯ್ಕೆಯೇ ಹೊರತು ಅನಿವಾರ್ಯವಲ್ಲ. ಹಾಗಾಗಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸಿ.

- Advertisement -
- Advertisement -

ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳನ್ನು(NET) ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರದ ಸಚಿವರು, ಅಧಿಕಾರಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಪತ್ರ ಬರೆದು ಒತ್ತಾಯಿಸಿದ್ದಾರೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಸಂಸ್ಥೆಯು ಪ್ರತೀ ವರ್ಷ ಎರಡು ಬಾರಿ ನಡೆಸಲಾಗುವ NET ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುವುದರಿಂದ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸಾಕಷ್ಟು ತೊಂದರೆಯಾಗುತ್ತಿದ್ದು ಈ ಬಗ್ಗೆ ಕೂಡಲೇ ಗಮನಹರಿಸಿ ಕನ್ನಡದಲ್ಲಿಯೂ ಪರೀಕ್ಷೆ ಎದುರಿಸಲು ಸಹಕಾರ ನೀಡುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ರಮೇಶ್ ಪೊಕ್ರಿಯಲ್ ನಿಶಾಂಕ್‌ಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

“ರಾಜ್ಯ ಸರ್ಕಾರಗಳು ಪದವಿ ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ನಡೆಸುತ್ತದೆ. ಸದರಿ ನೇಮಕಾತಿಗೆ ಅರ್ಹತೆ ಪಡೆಯಲು ಪ್ರತೀ ಯುಜಿಸಿ ನಡೆಸುವ NET ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅವಶ್ಯಕವಾಗಿರುತ್ತದೆ. ಆದರೆ ಸದರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪ್ರಾದೇಶಿಕ ಭಾಷೆಯಲ್ಲಿ ಇರದ ಕಾರಣ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಇದು ಸಂವಿಧಾನದ 14 ಮತ್ತು 15ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗುತ್ತದೆ” ಎಂದು ತಿಳಿಸಿದ್ದಾರೆ.

“ಒಕ್ಕೂಟ ವ್ಯವಸ್ಥೆಯಲ್ಲಿ ಭಾರತ ಸರ್ಕಾರದ ಸಂವಿಧಾನದ 8ನೇ ಪರಿಚ್ಚೇದದಲ್ಲಿರುವ ಕನ್ನಡವೂ ಸೇರಿದಂತೆ 22 ಭಾಷೆಗಳಿಗೂ ಮಾನ್ಯ ನೀಡಬೇಕಿದೆ. ಆ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸಬೇಕಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

1976ರ ಕೇಂದ್ರ ಭಾಷಾ ನೀತಿ ಅನ್ವಯ ದಕ್ಷಿಣ ರಾಜ್ಯಗಳಿಗೆ ಹಿಂದಿ ಭಾಷೆಯು ಆಯ್ಕೆಯೇ ಹೊರತು ಅನಿವಾರ್ಯವಲ್ಲ. ಹಾಗಾಗಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಒತ್ತಾಯಿಸಿದ್ದಾರೆ.

“ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಿದರೆ ಆರೋಗ್ಯಕರ ಸ್ಪರ್ಧೆ ಉಂಟಾಗುವಂತೆ ನೋಡಿಕೊಳ್ಳಲು ಭಾಷೆ ಸಹ ಪ್ರಮುಖ ಸಾಧನವಾಗಲಿದೆ. ಹಾಗಾಗಿ ಈ ಮಾದರಿಯ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿಯೇ ನಡೆಸಿದಲ್ಲಿ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಸಹ ಉತ್ತರ ರಾಜ್ಯದ ವಿದ್ಯಾರ್ಥಿಗಳಿಗೆ ಸ್ಪರ್ಧೆ ನೀಡಬಲ್ಲರು ಎಂಬುದನ್ನು ತಿಳಿಸಿರುವ ಪ್ರಾಧಿಕಾರದ ಅಧ್ಯಕ್ಷರು, ಕೂಡಲೇ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷೆಯನ್ನು ನಡೆಸಸಲು ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ” ಎಂದು ಟಿ.ಎಸ್.ನಾಗಾಭರಣ ಅವರ ಆಪ್ತ ಸಹಾಯಕಿ ಪಂಕಜ ತಿಳಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...