Homeಮುಖಪುಟಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಕ್ರೈಮ್ಸ್ ಇನ್ ಇಂಡಿಯಾ -2019ರ ವರದಿಯ ಪ್ರಕಾರ, ಹಿಂದಿನ (2018) ವರ್ಷಕ್ಕಿಂತ 2019ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಶೇಕಡಾ 7.3 ರಷ್ಟು ಹೆಚ್ಚಾಗಿದೆ.

- Advertisement -
- Advertisement -

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2019ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 4,05,861 ಪ್ರಕರಣಗಳು ದಾಖಲಾಗಿವೆ. ಇದು, ಹಿಂದಿನ ವರ್ಷಕ್ಕಿಂತ (2018) ಶೇ. 7 ರಷ್ಟು ಹೆಚ್ಚಾಗಿದೆ.

ಕ್ರೈಮ್ಸ್ ಇನ್ ಇಂಡಿಯಾ -2019ರ ವರದಿಯ ಪ್ರಕಾರ, ಹಿಂದಿನ (2018) ವರ್ಷಕ್ಕಿಂತ 2019ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಶೇಕಡಾ 7.3 ರಷ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ಪ್ರಮಾಣವು 2019 ರಲ್ಲಿ ಪ್ರತಿ ಒಂದು ಲಕ್ಷ ಮಹಿಳೆಯರಲ್ಲಿ, ಶೇಕಡಾ 62.4 ರಷ್ಟಿದ್ದು, ಇದು 2018 ರ ಶೇಕಡಾ 58.8ಕ್ಕಿಂತ ಹೆಚ್ಚಾಗಿದೆ. 2018 ರಲ್ಲಿ ದೇಶದಲ್ಲಿ 3,78,236 ಅಪರಾಧ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಬೀದಿಬದಿ ಮಲಗಿದ್ದ ನಿರ್ಗತಿಕ ಮಹಿಳೆಯ ಹತ್ಯೆ, ಅತ್ಯಾಚಾರ: ಹಾಸನದಲ್ಲೊಂದು ಅಮಾನುಷ ಕೃತ್ಯ

ಆದರೆ, 2018 ರಲ್ಲಿ ದೇಶಾದ್ಯಂತ 33,356 ಅತ್ಯಾಚಾರಗಳು ದಾಖಲಾಗಿದ್ದು, 2017 ರಲ್ಲಿ 32,559 ರಷ್ಟಿತ್ತು ಎಂಬುದಾಗಿ ಅಂಕಿಅಂಶಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಈ ಪ್ರಕರಣಗಳಲ್ಲಿ ಹೆಚ್ಚಿನವು (ಶೇಕಡಾ 30.9) ಭಾರತೀಯ ದಂಡ ಸಂಹಿತೆಯಡಿ ‘ಪತಿ ಅಥವಾ ಅವರ ಸಂಬಂಧಿಕರಿಂದ ಕ್ರೌರ್ಯ’ದ ಸೆಕ್ಷನ್ ಅಡಿಯಲ್ಲಿ ದಾಖಲಾಗಿದ್ದು, ನಂತರದ ಸ್ಥಾನದಲ್ಲಿ, ‘ಮಹಿಳೆಯರ ಮೇಲಿನ ಹಲ್ಲೆ’ (ಶೇಕಡಾ 21.8), ‘ಮಹಿಳೆಯರ ಅಪಹರಣ (ಶೇ 17.9) ಎಂದು 2019 ರ NCRB ಅಂಕಿಅಂಶಗಳು ತಿಳಿಸಿವೆ.

NCRB ಸಂಗ್ರಹಿಸಿದ ಅಂಕಿ ಅಂಶಗಳ ಪ್ರಕಾರ, ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿಯೂ ಹೆಚ್ಚಳವಾಗಿವೆ. 2018 ಕ್ಕಿಂತ 2019 ರಲ್ಲಿ ಶೇಕಡಾ 4.5 ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

2019 ರಲ್ಲಿ ಒಟ್ಟು 1.48 ಲಕ್ಷ ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 46.6 ರಷ್ಟು ಅಪಹರಣ ಪ್ರಕರಣಗಳು ಮತ್ತು 35.3 ರಷ್ಟು ಪ್ರಕರಣಗಳು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿವೆ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NCRB, ದೇಶಾದ್ಯಂತದ ಅಪರಾಧ ದತ್ತಾಂಶಗಳನ್ನು ಸಂಗ್ರಹಿಸಿ ವಿಶ್ಲೇಷಿಸುತ್ತದೆ. 36 ರಾಜ್ಯಗಳು ಮತ್ತು 53 ಮೆಟ್ರೋಪಾಲಿಟನ್ ನಗರಗಳಿಂದ ಅಂಕಿಅಂಶಗಳನ್ನು ಒಟ್ಟುಗೂಡಿಸಿದ ನಂತರ ಸಂಸ್ಥೆ ಮೂರು ಸಂಪುಟಗಳ ವರದಿಯನ್ನು ಸಂಗ್ರಹಿಸಿ, ಬಿಡುಗಡೆ ಮಾಡಿದೆ.


ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...