Homeಮುಖಪುಟಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಕ್ರೈಮ್ಸ್ ಇನ್ ಇಂಡಿಯಾ -2019ರ ವರದಿಯ ಪ್ರಕಾರ, ಹಿಂದಿನ (2018) ವರ್ಷಕ್ಕಿಂತ 2019ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಶೇಕಡಾ 7.3 ರಷ್ಟು ಹೆಚ್ಚಾಗಿದೆ.

- Advertisement -
- Advertisement -

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2019ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 4,05,861 ಪ್ರಕರಣಗಳು ದಾಖಲಾಗಿವೆ. ಇದು, ಹಿಂದಿನ ವರ್ಷಕ್ಕಿಂತ (2018) ಶೇ. 7 ರಷ್ಟು ಹೆಚ್ಚಾಗಿದೆ.

ಕ್ರೈಮ್ಸ್ ಇನ್ ಇಂಡಿಯಾ -2019ರ ವರದಿಯ ಪ್ರಕಾರ, ಹಿಂದಿನ (2018) ವರ್ಷಕ್ಕಿಂತ 2019ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಶೇಕಡಾ 7.3 ರಷ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ಪ್ರಮಾಣವು 2019 ರಲ್ಲಿ ಪ್ರತಿ ಒಂದು ಲಕ್ಷ ಮಹಿಳೆಯರಲ್ಲಿ, ಶೇಕಡಾ 62.4 ರಷ್ಟಿದ್ದು, ಇದು 2018 ರ ಶೇಕಡಾ 58.8ಕ್ಕಿಂತ ಹೆಚ್ಚಾಗಿದೆ. 2018 ರಲ್ಲಿ ದೇಶದಲ್ಲಿ 3,78,236 ಅಪರಾಧ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಬೀದಿಬದಿ ಮಲಗಿದ್ದ ನಿರ್ಗತಿಕ ಮಹಿಳೆಯ ಹತ್ಯೆ, ಅತ್ಯಾಚಾರ: ಹಾಸನದಲ್ಲೊಂದು ಅಮಾನುಷ ಕೃತ್ಯ

ಆದರೆ, 2018 ರಲ್ಲಿ ದೇಶಾದ್ಯಂತ 33,356 ಅತ್ಯಾಚಾರಗಳು ದಾಖಲಾಗಿದ್ದು, 2017 ರಲ್ಲಿ 32,559 ರಷ್ಟಿತ್ತು ಎಂಬುದಾಗಿ ಅಂಕಿಅಂಶಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಈ ಪ್ರಕರಣಗಳಲ್ಲಿ ಹೆಚ್ಚಿನವು (ಶೇಕಡಾ 30.9) ಭಾರತೀಯ ದಂಡ ಸಂಹಿತೆಯಡಿ ‘ಪತಿ ಅಥವಾ ಅವರ ಸಂಬಂಧಿಕರಿಂದ ಕ್ರೌರ್ಯ’ದ ಸೆಕ್ಷನ್ ಅಡಿಯಲ್ಲಿ ದಾಖಲಾಗಿದ್ದು, ನಂತರದ ಸ್ಥಾನದಲ್ಲಿ, ‘ಮಹಿಳೆಯರ ಮೇಲಿನ ಹಲ್ಲೆ’ (ಶೇಕಡಾ 21.8), ‘ಮಹಿಳೆಯರ ಅಪಹರಣ (ಶೇ 17.9) ಎಂದು 2019 ರ NCRB ಅಂಕಿಅಂಶಗಳು ತಿಳಿಸಿವೆ.

NCRB ಸಂಗ್ರಹಿಸಿದ ಅಂಕಿ ಅಂಶಗಳ ಪ್ರಕಾರ, ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿಯೂ ಹೆಚ್ಚಳವಾಗಿವೆ. 2018 ಕ್ಕಿಂತ 2019 ರಲ್ಲಿ ಶೇಕಡಾ 4.5 ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

2019 ರಲ್ಲಿ ಒಟ್ಟು 1.48 ಲಕ್ಷ ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 46.6 ರಷ್ಟು ಅಪಹರಣ ಪ್ರಕರಣಗಳು ಮತ್ತು 35.3 ರಷ್ಟು ಪ್ರಕರಣಗಳು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿವೆ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NCRB, ದೇಶಾದ್ಯಂತದ ಅಪರಾಧ ದತ್ತಾಂಶಗಳನ್ನು ಸಂಗ್ರಹಿಸಿ ವಿಶ್ಲೇಷಿಸುತ್ತದೆ. 36 ರಾಜ್ಯಗಳು ಮತ್ತು 53 ಮೆಟ್ರೋಪಾಲಿಟನ್ ನಗರಗಳಿಂದ ಅಂಕಿಅಂಶಗಳನ್ನು ಒಟ್ಟುಗೂಡಿಸಿದ ನಂತರ ಸಂಸ್ಥೆ ಮೂರು ಸಂಪುಟಗಳ ವರದಿಯನ್ನು ಸಂಗ್ರಹಿಸಿ, ಬಿಡುಗಡೆ ಮಾಡಿದೆ.


ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...