Homeಮುಖಪುಟಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ.

- Advertisement -
- Advertisement -

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದ ಯುವತಿ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಯುವತಿಯ ಶವವನ್ನು ಅಂತ್ಯ ಸಂಸ್ಕಾರ ಮಾಡುವುದಕ್ಕೆ ಕುಟುಂಬದವರಿಗೆ ಕೂಡಾ ಅನುಮತಿ ನೀಡದ ಉತ್ತರ ಪ್ರದೇಶದ ಪೊಲೀಸರು ತಾವೇ ಮಧ್ಯರಾತ್ರಿ ಶವವನ್ನು ಸುಟ್ಟಿದ್ದಾರೆ. ಇದರ ವಿರುದ್ಧ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದು, ಈ ಸಂಬಂಧ ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕೊನೆಯ ಬಾರಿ ಮುಖವನ್ನು ನೋಡಲೂ ಅವಕಾಶ ಕೊಡದೇ ಪೊಲೀಸರು ಶವಸಂಸ್ಕಾರ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕುಟುಂಬದವರನ್ನು ಬಂಧನದಲ್ಲಿಟ್ಟಿರುವುದು. ಚಿತ್ರ ಕೃಪೆ: ಎನ್‌ಡಿಟಿವಿ

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ನಿನ್ನೆ ಬೆಳಿಗ್ಗೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು. ನಿನ್ನೆ ದೆಹಲಿಗೆ ತೆರಳುವವರೆಗೂ ಆಕೆಯನ್ನು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿಡಲಾಗಿತ್ತು.

ದೆಹಲಿ ಆಸ್ಪತ್ರೆಯ ಹೊರಗೆ ಪ್ರತಿಭಟನಾಕಾರರು ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಪ್ರತಿಭಟಿಸುತ್ತಿರುವಾಗ, ಸಂತ್ರಸ್ತೆಯ ಮೃತ ದೇಹವನ್ನು ಯುಪಿ ಪೊಲೀಸರು ತಮಗೆ ಅರಿವಿಲ್ಲದೆ ತೆಗೆದುಕೊಂಡುಹೋಗಿದ್ದಾರೆ ಎಂದು ಯುವತಿಯ ಸಹೋದರರು ಆರೋಪಿಸಿದ್ದಾರೆ.

ಆಕೆಯ ತಂದೆ ಮತ್ತು ಸಹೋದರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಅವರನ್ನು ಯುಪಿ ನಂಬರ್ ಪ್ಲೇಟ್ ಇರುವ ಕಪ್ಪು ಸ್ಕಾರ್ಪಿಯೋದಲ್ಲಿ ಪೊಲೀಸರು ಕರೆದೊಯ್ದರು ಎಂದು ತಿಳಿದುಬಂದಿದೆ.

 

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಯುವತಿಯ ಶವವನ್ನು ಮಧ್ಯರಾತ್ರಿಯಲ್ಲಿ ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್‌ನಲ್ಲಿರುವ ಹಳ್ಳಿಗೆ ಕೊಂಡೊಯ್ಯಲಾಯಿತು. ಪೊಲೀಸರು ಶವಸಂಸ್ಕಾರ ಮಾಡುತ್ತಿದ್ದಾರೆ ಎಂಬುದು ಕುಟುಂಬದವರಿಗೆ ತಿಳಿದನಂತರ ಇದನ್ನು ಕುಟುಂಬದವರು ಮತ್ತು ಗ್ರಾಮಸ್ಥರು ವಿರೋಧಿಸಿದ್ದಾರೆ. ಶವವನ್ನು ಮನೆಗೆ ತಂದು, ನಂತರ ಬೆಳಿಗ್ಗೆ ಶವಸಂಸ್ಕಾರ ಮಾಡುವಂತೆ ಆಕೆಯ ತಂದೆ ಬೇಡಿಕೊಂಡಿದ್ದಾರೆ.

ಕುಟುಂಬಸ್ಥರು ಮತ್ತು ಗ್ರಾಮಸ್ಥರು ಗೋಗರೆಯುತ್ತಿರುವುದು. ಚಿತ್ರಕೃಪೆ: ಎನ್‌ಡಿಟಿವಿ

ಆದರೂ, ಪ್ರತಿಭಟಿಸುತ್ತಿದ್ದವರನ್ನು ದೂರ ತಳ್ಳಿದ ಪೊಲೀಸರು ಸ್ಮಶಾನದ ಬಳಿಗೆ ವಾಹನವನ್ನು ತೆಗೆದುಕೊಂಡು ಹೋದರು.

“ಕೊನೆಯ ವಿಧಿಗಳಿಗಾಗಿ ಶವವನ್ನು ಮನೆಗೆ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಬೆಳಿಗ್ಗೆ 2:30 ಕ್ಕೆ, ಆಕೆಯ ಕುಟುಂಬದ ಬಹುಪಾಲು ಜನ ಮನೆಯಲ್ಲಿದ್ದಾಗ, ಪೊಲೀಸರು ಶವವನ್ನು ಸುಟ್ಟಿದ್ದಾರೆ. ವರದಿಗಾರರನ್ನು, ಕುಟುಂಬ ಮತ್ತು ಗ್ರಾಮಸ್ಥರನ್ನು ದೂರವಿರಿಸಲು ಹತ್ರಾಸ್ ಪೊಲೀಸರು ಮಾನವ ಸರಪಳಿಯನ್ನು ರಚಿಸಿದರು. ಪೊಲೀಸರು ಮಾತ್ರ ಹಾಜರಿದ್ದರು. ಕುಟುಂಬದವರು ಅವಳನ್ನು ಕೊನೆಯ ಬಾರಿಯೂ ನೋಡಲಾಗಲಿಲ್ಲ. ಅವರನ್ನು ಮನೆಯಲ್ಲಿ ಬಂಧಿಸಲಾಗಿದೆ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಶವವನ್ನು ಸುಡುತ್ತಿರುವ ಪೊಲೀಸರು. ಚಿತ್ರಕೃಪೆ: ಎನ್‌ಡಿಟಿವಿ

ಇದನ್ನೂ ಓದಿ:ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಅತ್ಯಾಚಾರ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾಲ್ವರು ಆರೋಪಿಗಳಾದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಮೇಲೆ ಸಾಮೂಹಿಕ ಅತ್ಯಾಚಾರ, ಸೆಕ್ಷನ್ 302 (ಕೊಲೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಆರಂಭದಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದ ಪೊಲೀಸರು, ಯುವತಿಯ ಔಪಚಾರಿಕ ಹೇಳಿಕೆಯ ನಂತರವೇ ಅತ್ಯಾಚಾರ ಆರೋಪಗಳನ್ನು ಸೇರಿಸಿದ್ದರು.

ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಂತ್ರಸ್ತರ ಮನವಿಗೆ ಸ್ಪಂದಿಸಲಿಲ್ಲ. ಆದರೆ ಸಾರ್ವಜನಿಕರ ಆಕ್ರೋಶದ ನಂತರ ಮಾತ್ರ ಪ್ರತಿಕ್ರಿಯಿಸಿದ್ದಾರೆ ಎನ್ನುವ ಯುವತಿಯ ಕುಟುಂಬದ ಆರೋಪವನ್ನು ಯುಪಿ ಪೊಲೀಸರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...