Homeಮುಖಪುಟಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ.

- Advertisement -
- Advertisement -

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದ ಯುವತಿ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಯುವತಿಯ ಶವವನ್ನು ಅಂತ್ಯ ಸಂಸ್ಕಾರ ಮಾಡುವುದಕ್ಕೆ ಕುಟುಂಬದವರಿಗೆ ಕೂಡಾ ಅನುಮತಿ ನೀಡದ ಉತ್ತರ ಪ್ರದೇಶದ ಪೊಲೀಸರು ತಾವೇ ಮಧ್ಯರಾತ್ರಿ ಶವವನ್ನು ಸುಟ್ಟಿದ್ದಾರೆ. ಇದರ ವಿರುದ್ಧ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದು, ಈ ಸಂಬಂಧ ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕೊನೆಯ ಬಾರಿ ಮುಖವನ್ನು ನೋಡಲೂ ಅವಕಾಶ ಕೊಡದೇ ಪೊಲೀಸರು ಶವಸಂಸ್ಕಾರ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕುಟುಂಬದವರನ್ನು ಬಂಧನದಲ್ಲಿಟ್ಟಿರುವುದು. ಚಿತ್ರ ಕೃಪೆ: ಎನ್‌ಡಿಟಿವಿ

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ನಿನ್ನೆ ಬೆಳಿಗ್ಗೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು. ನಿನ್ನೆ ದೆಹಲಿಗೆ ತೆರಳುವವರೆಗೂ ಆಕೆಯನ್ನು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿಡಲಾಗಿತ್ತು.

ದೆಹಲಿ ಆಸ್ಪತ್ರೆಯ ಹೊರಗೆ ಪ್ರತಿಭಟನಾಕಾರರು ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಪ್ರತಿಭಟಿಸುತ್ತಿರುವಾಗ, ಸಂತ್ರಸ್ತೆಯ ಮೃತ ದೇಹವನ್ನು ಯುಪಿ ಪೊಲೀಸರು ತಮಗೆ ಅರಿವಿಲ್ಲದೆ ತೆಗೆದುಕೊಂಡುಹೋಗಿದ್ದಾರೆ ಎಂದು ಯುವತಿಯ ಸಹೋದರರು ಆರೋಪಿಸಿದ್ದಾರೆ.

ಆಕೆಯ ತಂದೆ ಮತ್ತು ಸಹೋದರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಅವರನ್ನು ಯುಪಿ ನಂಬರ್ ಪ್ಲೇಟ್ ಇರುವ ಕಪ್ಪು ಸ್ಕಾರ್ಪಿಯೋದಲ್ಲಿ ಪೊಲೀಸರು ಕರೆದೊಯ್ದರು ಎಂದು ತಿಳಿದುಬಂದಿದೆ.

 

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಯುವತಿಯ ಶವವನ್ನು ಮಧ್ಯರಾತ್ರಿಯಲ್ಲಿ ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್‌ನಲ್ಲಿರುವ ಹಳ್ಳಿಗೆ ಕೊಂಡೊಯ್ಯಲಾಯಿತು. ಪೊಲೀಸರು ಶವಸಂಸ್ಕಾರ ಮಾಡುತ್ತಿದ್ದಾರೆ ಎಂಬುದು ಕುಟುಂಬದವರಿಗೆ ತಿಳಿದನಂತರ ಇದನ್ನು ಕುಟುಂಬದವರು ಮತ್ತು ಗ್ರಾಮಸ್ಥರು ವಿರೋಧಿಸಿದ್ದಾರೆ. ಶವವನ್ನು ಮನೆಗೆ ತಂದು, ನಂತರ ಬೆಳಿಗ್ಗೆ ಶವಸಂಸ್ಕಾರ ಮಾಡುವಂತೆ ಆಕೆಯ ತಂದೆ ಬೇಡಿಕೊಂಡಿದ್ದಾರೆ.

ಕುಟುಂಬಸ್ಥರು ಮತ್ತು ಗ್ರಾಮಸ್ಥರು ಗೋಗರೆಯುತ್ತಿರುವುದು. ಚಿತ್ರಕೃಪೆ: ಎನ್‌ಡಿಟಿವಿ

ಆದರೂ, ಪ್ರತಿಭಟಿಸುತ್ತಿದ್ದವರನ್ನು ದೂರ ತಳ್ಳಿದ ಪೊಲೀಸರು ಸ್ಮಶಾನದ ಬಳಿಗೆ ವಾಹನವನ್ನು ತೆಗೆದುಕೊಂಡು ಹೋದರು.

“ಕೊನೆಯ ವಿಧಿಗಳಿಗಾಗಿ ಶವವನ್ನು ಮನೆಗೆ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಬೆಳಿಗ್ಗೆ 2:30 ಕ್ಕೆ, ಆಕೆಯ ಕುಟುಂಬದ ಬಹುಪಾಲು ಜನ ಮನೆಯಲ್ಲಿದ್ದಾಗ, ಪೊಲೀಸರು ಶವವನ್ನು ಸುಟ್ಟಿದ್ದಾರೆ. ವರದಿಗಾರರನ್ನು, ಕುಟುಂಬ ಮತ್ತು ಗ್ರಾಮಸ್ಥರನ್ನು ದೂರವಿರಿಸಲು ಹತ್ರಾಸ್ ಪೊಲೀಸರು ಮಾನವ ಸರಪಳಿಯನ್ನು ರಚಿಸಿದರು. ಪೊಲೀಸರು ಮಾತ್ರ ಹಾಜರಿದ್ದರು. ಕುಟುಂಬದವರು ಅವಳನ್ನು ಕೊನೆಯ ಬಾರಿಯೂ ನೋಡಲಾಗಲಿಲ್ಲ. ಅವರನ್ನು ಮನೆಯಲ್ಲಿ ಬಂಧಿಸಲಾಗಿದೆ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಶವವನ್ನು ಸುಡುತ್ತಿರುವ ಪೊಲೀಸರು. ಚಿತ್ರಕೃಪೆ: ಎನ್‌ಡಿಟಿವಿ

ಇದನ್ನೂ ಓದಿ:ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಅತ್ಯಾಚಾರ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾಲ್ವರು ಆರೋಪಿಗಳಾದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಮೇಲೆ ಸಾಮೂಹಿಕ ಅತ್ಯಾಚಾರ, ಸೆಕ್ಷನ್ 302 (ಕೊಲೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಆರಂಭದಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದ ಪೊಲೀಸರು, ಯುವತಿಯ ಔಪಚಾರಿಕ ಹೇಳಿಕೆಯ ನಂತರವೇ ಅತ್ಯಾಚಾರ ಆರೋಪಗಳನ್ನು ಸೇರಿಸಿದ್ದರು.

ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಂತ್ರಸ್ತರ ಮನವಿಗೆ ಸ್ಪಂದಿಸಲಿಲ್ಲ. ಆದರೆ ಸಾರ್ವಜನಿಕರ ಆಕ್ರೋಶದ ನಂತರ ಮಾತ್ರ ಪ್ರತಿಕ್ರಿಯಿಸಿದ್ದಾರೆ ಎನ್ನುವ ಯುವತಿಯ ಕುಟುಂಬದ ಆರೋಪವನ್ನು ಯುಪಿ ಪೊಲೀಸರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...