Homeಮುಖಪುಟಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದರು.

- Advertisement -
- Advertisement -

28 ವರ್ಷಗಳ ಹಳೆಯ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಿ, ತೀರ್ಪು ನೀಡಿದ್ದು, ಬಿಜೆಪಿ ಮತ್ತು ವಿಶ್ವಹಿಂದೂ ಪರಿಷತ್‌ನ ಸದಸ್ಯರು ದೋಷಮುಕ್ತರು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ 32 ಆರೋಪಿಗಳೂ ದೋಷಮುಕ್ತರು ಎಂದಿರುವ ನ್ಯಾಯಾಲಯ, “ಈ ದ್ವಂಸ ಪೂರ್ವನಿರ್ಧರಿತವಲ್ಲ” ಎಂದು ತೀರ್ಪು ನೀಡಿದೆ.

2 ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಇಂದು ತೀರ್ಮಾನ ತೆಗೆದುಕೊಂಡಿದೆ. ಮೊದಲನೆಯದ್ದು, 197/1992, ಮಸೀದಿಯನ್ನು ಕೆಡವಿದ್ದ ಅನಾಮಧೇಯ ಕರಸೇವಕರ ವಿರುದ್ಧ ಮತ್ತು ಎರಡನೆಯದು, 198/1992, ಮಸೀದಿ ಕೆಡವುವಿಕೆಗೆ ಪ್ರಚೋದನೆ ನೀಡಿದ್ದಕ್ಕಾಗಿ 8 ಜನ ಬಿಜೆಪಿ ಮುಖಂಡರ (ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಲ್ಲು ಸಿಂಗ್, ಬಿಬಿ ಶರಣ್ ಸಿಂಗ್) ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಪ್ರಕರಣದ ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿತ್ತು.

ಆದರೆ, ವಯಸ್ಸಿನ ಕಾರಣಕ್ಕೆ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಮಹಾಂತ್ ಗೋಪಾಲ ದಾಸ್ ಮತ್ತು ಉಮಾ ಭಾರತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ವಿಚಾರಣೆಗೆ ನೇರವಾಗಿ ಹಾಜರಾಗಿರಲಿಲ್ಲ. ಸತೀಶ್ ಪ್ರಧಾನ್ ಸೇರಿದಂತೆ ಈ 6 ಜನ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಉಳಿದ 26 ಆರೋಪಿಗಳು ನೇರವಾಗಿ ಹಾಜರಿದ್ದರು.

ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಉಮಾಭಾರತಿ

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದರು.

ಏಪ್ರಿಲ್ 2017 ರಲ್ಲಿ, ಉನ್ನತ ನ್ಯಾಯಾಲಯವು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಎರಡು ವರ್ಷಗಳಲ್ಲಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆಯನ್ನು ನಡೆಸಿ ಪೂರ್ಣಗೊಳಿಸಲು ಕೇಳಿಕೊಂಡಿತ್ತು. ಅದರ ನಂತರ ಹಲವು ಬಾರಿ ಗಡುವು ವಿಸ್ತರಿಸಲಾಗಿತ್ತು. ಮತ್ತೆ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಹೆಚ್ಚಿನ ಸಮಯವನ್ನು ಕೇಳಿದಾಗ, ಸೆಪ್ಟೆಂಬರ್ 30 ರೊಳಗೆ ತನ್ನ ತೀರ್ಪನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇದನ್ನೂ ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ಕಳೆದ ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ ರಾಮ್ ಜನ್ಮಭೂಮಿ ಪ್ರಕರಣದ ತೀಪೂ ನೀಡಿದ್ದು, ದೇವಾಲಯ ನಿರ್ಮಿಸಲು ಆದೇಶಿಸಿತ್ತು. ‌ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಗಳು ಆರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇಂದು ತೀರ್ಪು ಬರುವ ಹಿನ್ನೆಲೆ ಬಿಜೆಪಿ ನಾಯಕಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಮಾ ಭಾರತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಸೆಪ್ಟೆಂಬರ್ 26 ರಂದು ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಜಾಮೀನು ಕೋರುವುದಿಲ್ಲ. ತಪ್ಪಿತಸ್ಥರೆಂದು ಸಾಬೀತಾದರೆ ಗಲ್ಲಿಗೇರಲೂ ನಾನು ಸಿದ್ಧ ಎಂದಿದ್ದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...