Homeಮುಖಪುಟದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಅತ್ಯಾಚಾರ ಆರೋಪಿಗಳು ಅಮಾಯಕರು ಎಂದು ಸಂಘಟನೆಯು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದೆ.

- Advertisement -
- Advertisement -

ಭೀಕರ ಅತ್ಯಾಚಾರಕ್ಕೆ ಒಳಗಾಗಿ ಅಸುನೀಗಿದ ಉತ್ತರ ಪ್ರದೇಶದ ಹತ್ರಾಸ್ ಸಂತ್ರಸ್ತೆಗೆ ನ್ಯಾಯ ಬೇಕು ಎಂದು ದೇಶವೇ ಪ್ರತಿಭಟನೆಗೆ ಇಳಿದಿದ್ದರೆ, ಇಲ್ಲೊಂದು ಸಂಘಟನೆ ಆಕೆಯ ಮೇಲೆ ಅತ್ಯಾಚಾರ, ಹಲ್ಲೆ ನಡೆದಿಲ್ಲ ಎಂದು ಆರೋಪಿಗಳ ಪರ ನಿಂತಿದೆ.

ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಹೆಸರಿಗಷ್ಟೇ ಇರುವ ಸ್ವತಂತ್ರ, ರಕ್ಷಣೆಗಳ ಕರಾಳ ಮುಖ ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಇದಕ್ಕೆ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಮತ್ತಷ್ಟು ಸಾಕ್ಷಿಗಳನ್ನು ಒದಗಿಸುತ್ತಲೇ ಇವೆ.

ಅಮಾನುಷವಾಗಿ ಅತ್ಯಾಚಾರ, ಹಲ್ಲೆಗೆ ಒಳಗಾಗಿದ್ದ ಹತ್ರಾಸ್‌ನ 19 ವರ್ಷದ ಯುವತಿ ನಿನ್ನೆ ದೆಹಲಿಯ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ದೇಶಾದ್ಯಂತ ಮಾನವೀಯ ಮನಸ್ಸುಗಳು ಯುವತಿಯ ಪರ ನ್ಯಾಯಕ್ಕಾಗಿ ಪ್ರತಿಭಟನೆಗಿಳಿದಿವೆ. ಆದರೆ ಉತ್ತರ ಪ್ರದೇಶದ ಸವರ್ಣ ಪರಿಷತ್ ಮಾತ್ರ ಆರೋಪಿಗಳು ಅಮಾಯಕರು ಎಂದು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ರಾಷ್ಟ್ರೀಯ ಸವರ್ಣ ಪರಿಷತ್‌ನ ರಾಷ್ಟ್ರೀಯ ಪ್ರಚಾರಕ ಪಂಕಜ್ ಧವರಾಯ ನೇತೃತ್ವದಲ್ಲಿ ಹಲವು ಮಂದಿ ಸದಸ್ಯರು ಆರೋಪಿಗಳನ್ನು ರಕ್ಷಿಸಲು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದ್ದರು.  ತಮ್ಮ ರಾಜಕೀಯ ಬೇಳೆ ಬೇಯಿಸಲು ಆರೋಪಿಗಳ ಪರ, ಅವರ ರಕ್ಷಣೆಗೆ ಈ ಸಂಘಟನೆ ಸದಸ್ಯರು ನಿಂತರು ಎಂದು ವರದಿಯಾಗಿರುವ ಪತ್ರಿಕೆ ತುಣುಕು ವೈರಲ್ ಆಗಿದೆ.

ಸವರ್ಣ ಪರಿಷತ್‌ ಸದಸ್ಯರ ಪ್ರಕಾರ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಮತ್ತು ಆರೋಪಿಗಳನ್ನು ಸುಮ್ಮನೆ ಪ್ರಕರಣದಲ್ಲಿ ಸಿಕ್ಕಿಹಾಕಿಸಲಾಗುತ್ತಿದೆ ಎಂದಿದ್ದಾರೆ. ಆದರೆ ಯುವತಿಯ ವೈದ್ಯಕೀಯ ವರದಿಯಲ್ಲಿ ಎಲ್ಲವೂ ಬೆಳಕಿಗೆ ಬಂದಿದೆ. ಇದರಲರ್‍ಲಿ ಗಮನಿಸಬೇಕಾದ ವಿಷಯವೆಂದರೆ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಈ ನಾಲ್ವರು ಆರೋಪಿಗಳು ಮೇಲ್ಜಾತಿಗೆ ಸೇರಿದ ಸಮಾಜದಿಂದ ಬಂದವರಾಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಪತ್ರಿಕೆಯ ತುಣುಕು ನೋಡಿದ ನಂತರ, ಜನರ ಪ್ರತಿಕ್ರಿಯೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜ್ಯದಲ್ಲಿ ಜಾತಿಯಾಧಾರದಲ್ಲಿ ಪೊಲೀಸರು ಅಪರಾಧ ಮತ್ತು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಜಾತಿಯ ಆಧಾರದ ಮೇಲೆ ಅತ್ಯಾಚಾರದಂತಹ ಗಂಭೀರ ಆರೋಪಗಳಲ್ಲಿ ತಪ್ಪಿತಸ್ಥರನ್ನು ಉಳಿಸಲು ಆರೋಪಿಗಳ ಪರ ಒಂದು ಸಂಸ್ಥೆ ಮುಂದಾಗಿರುವುದು ನಾಚಿಕೆಗೇಡು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆಯ ನಂತರ, ಸವರ್ಣ ಪರಿಷತ್ ಪ್ರಚಾರಕರನ್ನು ಸಂಪರ್ಕಿಸಲು ಕೆಲ ಮಾಧ್ಯಮಗಳು ಪ್ರಯತ್ನಿಸಿದ್ದರು ಸಂಪರ್ಕಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ಸೆ.14 ಸಾಮೂಹಿಕ ಅತ್ಯಾಚಾರ ನಡೆದರು ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದ್ದರು, ನಂತರ ಪ್ರಕರಣದ ಕಾವು ಹೆಚ್ಚಾದಾಗ ಮತ್ತು ಯುವತಿಯ ಸ್ಥಿತಿ ಗಂಭೀರವಾದ ಹಿನ್ನೆಲೆ, ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು, ಸೆ. 21 ರಂದು 376 ಮತ್ತು 376ಡಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ನಿನ್ನೆ ಸಾವನ್ನಪ್ಪಿದ ನಂತರ ಅವರ ಅಂತ್ಯ ಸಂಸ್ಕಾರಕ್ಕೆ ಕುಟುಂಬದವರನ್ನೇ ದೂರವಿಟ್ಟ ಪೊಲೀಸರ ಕ್ರಮ ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2019 ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 4,05,861 ಪ್ರಕರಣಗಳು ದಾಖಲಾಗಿವೆ. ಇದು, ಹಿಂದಿನ ವರ್ಷಕ್ಕಿಂತ (2018) ಶೇ. 7ರಷ್ಟು ಹೆಚ್ಚಾಗಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...