Homeಮುಖಪುಟದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಅತ್ಯಾಚಾರ ಆರೋಪಿಗಳು ಅಮಾಯಕರು ಎಂದು ಸಂಘಟನೆಯು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದೆ.

- Advertisement -
- Advertisement -

ಭೀಕರ ಅತ್ಯಾಚಾರಕ್ಕೆ ಒಳಗಾಗಿ ಅಸುನೀಗಿದ ಉತ್ತರ ಪ್ರದೇಶದ ಹತ್ರಾಸ್ ಸಂತ್ರಸ್ತೆಗೆ ನ್ಯಾಯ ಬೇಕು ಎಂದು ದೇಶವೇ ಪ್ರತಿಭಟನೆಗೆ ಇಳಿದಿದ್ದರೆ, ಇಲ್ಲೊಂದು ಸಂಘಟನೆ ಆಕೆಯ ಮೇಲೆ ಅತ್ಯಾಚಾರ, ಹಲ್ಲೆ ನಡೆದಿಲ್ಲ ಎಂದು ಆರೋಪಿಗಳ ಪರ ನಿಂತಿದೆ.

ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಹೆಸರಿಗಷ್ಟೇ ಇರುವ ಸ್ವತಂತ್ರ, ರಕ್ಷಣೆಗಳ ಕರಾಳ ಮುಖ ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಇದಕ್ಕೆ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಮತ್ತಷ್ಟು ಸಾಕ್ಷಿಗಳನ್ನು ಒದಗಿಸುತ್ತಲೇ ಇವೆ.

ಅಮಾನುಷವಾಗಿ ಅತ್ಯಾಚಾರ, ಹಲ್ಲೆಗೆ ಒಳಗಾಗಿದ್ದ ಹತ್ರಾಸ್‌ನ 19 ವರ್ಷದ ಯುವತಿ ನಿನ್ನೆ ದೆಹಲಿಯ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ದೇಶಾದ್ಯಂತ ಮಾನವೀಯ ಮನಸ್ಸುಗಳು ಯುವತಿಯ ಪರ ನ್ಯಾಯಕ್ಕಾಗಿ ಪ್ರತಿಭಟನೆಗಿಳಿದಿವೆ. ಆದರೆ ಉತ್ತರ ಪ್ರದೇಶದ ಸವರ್ಣ ಪರಿಷತ್ ಮಾತ್ರ ಆರೋಪಿಗಳು ಅಮಾಯಕರು ಎಂದು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ರಾಷ್ಟ್ರೀಯ ಸವರ್ಣ ಪರಿಷತ್‌ನ ರಾಷ್ಟ್ರೀಯ ಪ್ರಚಾರಕ ಪಂಕಜ್ ಧವರಾಯ ನೇತೃತ್ವದಲ್ಲಿ ಹಲವು ಮಂದಿ ಸದಸ್ಯರು ಆರೋಪಿಗಳನ್ನು ರಕ್ಷಿಸಲು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದ್ದರು.  ತಮ್ಮ ರಾಜಕೀಯ ಬೇಳೆ ಬೇಯಿಸಲು ಆರೋಪಿಗಳ ಪರ, ಅವರ ರಕ್ಷಣೆಗೆ ಈ ಸಂಘಟನೆ ಸದಸ್ಯರು ನಿಂತರು ಎಂದು ವರದಿಯಾಗಿರುವ ಪತ್ರಿಕೆ ತುಣುಕು ವೈರಲ್ ಆಗಿದೆ.

ಸವರ್ಣ ಪರಿಷತ್‌ ಸದಸ್ಯರ ಪ್ರಕಾರ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಮತ್ತು ಆರೋಪಿಗಳನ್ನು ಸುಮ್ಮನೆ ಪ್ರಕರಣದಲ್ಲಿ ಸಿಕ್ಕಿಹಾಕಿಸಲಾಗುತ್ತಿದೆ ಎಂದಿದ್ದಾರೆ. ಆದರೆ ಯುವತಿಯ ವೈದ್ಯಕೀಯ ವರದಿಯಲ್ಲಿ ಎಲ್ಲವೂ ಬೆಳಕಿಗೆ ಬಂದಿದೆ. ಇದರಲರ್‍ಲಿ ಗಮನಿಸಬೇಕಾದ ವಿಷಯವೆಂದರೆ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಈ ನಾಲ್ವರು ಆರೋಪಿಗಳು ಮೇಲ್ಜಾತಿಗೆ ಸೇರಿದ ಸಮಾಜದಿಂದ ಬಂದವರಾಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಪತ್ರಿಕೆಯ ತುಣುಕು ನೋಡಿದ ನಂತರ, ಜನರ ಪ್ರತಿಕ್ರಿಯೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜ್ಯದಲ್ಲಿ ಜಾತಿಯಾಧಾರದಲ್ಲಿ ಪೊಲೀಸರು ಅಪರಾಧ ಮತ್ತು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಜಾತಿಯ ಆಧಾರದ ಮೇಲೆ ಅತ್ಯಾಚಾರದಂತಹ ಗಂಭೀರ ಆರೋಪಗಳಲ್ಲಿ ತಪ್ಪಿತಸ್ಥರನ್ನು ಉಳಿಸಲು ಆರೋಪಿಗಳ ಪರ ಒಂದು ಸಂಸ್ಥೆ ಮುಂದಾಗಿರುವುದು ನಾಚಿಕೆಗೇಡು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆಯ ನಂತರ, ಸವರ್ಣ ಪರಿಷತ್ ಪ್ರಚಾರಕರನ್ನು ಸಂಪರ್ಕಿಸಲು ಕೆಲ ಮಾಧ್ಯಮಗಳು ಪ್ರಯತ್ನಿಸಿದ್ದರು ಸಂಪರ್ಕಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ಸೆ.14 ಸಾಮೂಹಿಕ ಅತ್ಯಾಚಾರ ನಡೆದರು ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದ್ದರು, ನಂತರ ಪ್ರಕರಣದ ಕಾವು ಹೆಚ್ಚಾದಾಗ ಮತ್ತು ಯುವತಿಯ ಸ್ಥಿತಿ ಗಂಭೀರವಾದ ಹಿನ್ನೆಲೆ, ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು, ಸೆ. 21 ರಂದು 376 ಮತ್ತು 376ಡಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ನಿನ್ನೆ ಸಾವನ್ನಪ್ಪಿದ ನಂತರ ಅವರ ಅಂತ್ಯ ಸಂಸ್ಕಾರಕ್ಕೆ ಕುಟುಂಬದವರನ್ನೇ ದೂರವಿಟ್ಟ ಪೊಲೀಸರ ಕ್ರಮ ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2019 ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 4,05,861 ಪ್ರಕರಣಗಳು ದಾಖಲಾಗಿವೆ. ಇದು, ಹಿಂದಿನ ವರ್ಷಕ್ಕಿಂತ (2018) ಶೇ. 7ರಷ್ಟು ಹೆಚ್ಚಾಗಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...