Homeಮುಖಪುಟಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ, ಪೊಲೀಸರು ಜಾತಿಯಾಧಾರದಲ್ಲಿ ಅಪರಾಧ ಮತ್ತು ಅಪರಾಧಿಯನ್ನು ಗಣನೆಗೆ ತೆಗೆದುಕೊಳ್ಳುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -
- Advertisement -

ಕಣ್ಣುಗಳಲ್ಲಿ ಭವಿಷ್ಯದ ಕನಸುಗಳನ್ನು ಕಟ್ಟಿಕೊಂಡು, ತನ್ನ ಕುಟುಂಬದ ಜೊತೆಗೆ ಖುಷಿಯಿಂದ ಜೀವನ ನಡೆಸುತ್ತಿದ್ದ ಹೆಣ್ಣು ಮಗಳ ಕನಸನ್ನು ಅಮಾನುಷವಾಗಿ ಆ ನಾಲ್ವರು ಕಿತ್ತುಕೊಂಡಿದ್ದಾರೆ. ಅದಕ್ಕಿಂತ ಘೋರವಾದ ವಿಚಾರವೆಂದರೆ ಅಂತಹ ವಿಕೃತ ಮನಸ್ಸಿನ ಆರೋಪಿಗಳ ಪರ ಸರ್ಕಾರ, ಪೊಲೀಸರು, ಜಾತಿವಾರು ಸಂಘಟನೆಗಳು ನಿಂತಿರುವುದು.

ಅತ್ಯಾಚಾರ ನಡೆದಿರುವುದಕ್ಕೆ ಸಾಕ್ಷಿಯಿದ್ದರೂ ಕಿರುಕುಳದ ಎಫ್‌ಐಆರ್ ದಾಖಲಿಸುವ ಪೊಲೀಸರು, ಜಾತಿಯಾಧಾರದಲ್ಲಿ ಅಪರಾಧ ಮತ್ತು ಅಪರಾಧಿಯನ್ನು ಗಣನೆಗೆ ತೆಗೆದುಕೊಳ್ಳುವುದು, ಇವೆಲ್ಲವೂ ಜನರಿಗೆ ವ್ಯವಸ್ಥೆ ಮೇಲೆ ಮತ್ತಷ್ಟು ಆಕ್ರೋಶ ಹುಟ್ಟಿಸುತ್ತಿದೆ.

ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ದಲಿತ ಯುವತಿಯರು, ಬಡ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ಬೆಳಕಿಗೆ ಬರುವುದೇ ಕಡಿಮೆಯಾಗಿದೆ. ಪೊಲೀಸ್ ವ್ಯವಸ್ಥೆ ಆರೋಪಿಗಳ ಪರ ನಿಂತು ಪ್ರಕರಣಗಳು ನ್ಯಾಯಾಲಯದವರೆಗೆ ಹೋಗಲು ಬಿಡುವುದೆ ಇಲ್ಲ. ಪೊಲೀಸ್ ಪಂಚಾಯಿತಿಗಳ ಮೂಲಕ ಪ್ರಕರಣ ಬಗೆ ಹರಿಸಲಾಗುತ್ತಿದೆ. ಇಲ್ಲವೇ ಹೆದರಿಸಿಯೋ, ಕೊಲೆ ಮಾಡಿಯೋ ಪ್ರಕರಣವನ್ನು ಮುಚ್ಚಿಹಾಕಲಾಗುತ್ತಿದೆ. ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರಿಗಳು ಇವರೇ ಎಂದು ಗೊತ್ತಿದ್ದರೂ ಶಿಕ್ಷೆ ನೀಡಲು ವರ್ಷಗಳೇ ಕಾಯಬೇಕಾಯಿತು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಈಗ ಮತ್ತೊಮ್ಮೆ ಹತ್ರಾಸ್ ಸಂತ್ರಸ್ತೆ, ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ದೇಶದಲ್ಲಿ ಸಂಚಲನ ಹುಟ್ಟು ಹಾಕಿದೆ. ಮಾನವೀಯತೆ, ಮನುಷ್ಯ ಕಷ್ಟಗಳಿಗೆ ಸ್ಪಂದಿಸುವ ಕೋಟ್ಯಾಂತರ ಮಂದಿ ಮೃತ ಸಂತ್ರಸ್ತೆಗೆ ನ್ಯಾಯ ಸಿಗಲಿ ಎಂದು ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘಟನೆ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಮತ್ತೊಬ್ಬ ಮಗಳು ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಆದರೆ ಆಕೆಯ ಅಂತ್ಯಸಂಸ್ಕಾರಕ್ಕೂ ಸಹ ಆಕೆಯ ಕುಟುಂಬವನ್ನೇ ದೂರವಿಡಲಾಗಿದೆ. ದಲಿತ ಸಮುದಾಯದ ಮೇಲೆ ನಡೆಸುತ್ತಿರುವ ದೌರ್ಜನ್ಯ, ನಾಚಿಕೆಯಾಗಬೇಕು ಸರ್ಕಾರಕ್ಕೆ ಎಂದಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಘಟನೆಯನ್ನು ಖಂಡಿಸಿದ್ದು, ಹತ್ರಾಸ್‌ನಲ್ಲಿ ನಡೆದದ್ದು ಅಮಾನವೀಯ ಮತ್ತು ಕ್ರೌರ್ಯವನ್ನು ಮೀರಿದೆ ಎಂದಿದ್ದಾರೆ.

ನಟಿ ಸ್ವರಾ ಭಾಸ್ಕರ್‌ ತಮ್ಮ ಟ್ವೀಟ್‌ನಲ್ಲಿ ಜಾತಿಯನ್ನು ನಿರಾಕರಿಸುವವರು, ಭಾರತದಲ್ಲಿ ಜಾತಿ ತಾರತಮ್ಯ ಇಲ್ಲ ಎನ್ನುವವರು ಇದನ್ನು ನೋಡಿ ಎಂದು ಮನೀಷ್ ಪಾಂಡೆಯವರು ಮಾಡಿರುವ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಗ್ರೌಂಡ್ ರಿಪೋರ್ಟ್ ಶೇರ್‌ ಮಾಡಿದ್ದಾರೆ.

ನಟ ಅಕ್ಷಯ್ ಕುಮಾರ್ ಕೂಡ ಟ್ವಿಟ್ಟರ್‌ನಲ್ಲಿ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಅತ್ಯಂತ ಕ್ರೂರ, ಇಂತಹ ಘಟನೆಗಳು ಯಾವಾಗ ನಿಲ್ಲುತ್ತದೆ ಎಂದು ಪ್ರಶ್ನಿಸಿದ್ದಾರೆ. ಅತ್ಯಾಚಾರಿಗಳಿಗೆ ಎಷ್ಟು ಕಠಿಣ ಶಿಕ್ಷೆಯಾಗಬೇಕು ಎಂದರೇ, ಶಿಕ್ಷೆಯ ಆಲೋಚನೆಯೇ ಅತ್ಯಾಚಾರಿಗಳನ್ನು ಭಯದಿಂದ ನಡುಗಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ನಟ, ಹೋರಾಟಗಾರ ಚೇತನ್, ಜಾತಿ,ಲಿಂಗ ಆಧಾರಿತ ಹಿಂಸಾಚಾರಕ್ಕೆ ಬಲಿಯಾದವರಿಗೆ ಇಂದಿನ ಭಾರತದಲ್ಲಿ ನ್ಯಾಯ ಬಹುದೊಡ್ಡ ಕನಸು. ಪೊಲೀಸ್ ಇಲಾಖೆಯ ನಿರಾಸಕ್ತಿ, ಬೇಜವಾಬ್ದಾರಿತನ, ನಿಂದನೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಪೊಲೀಸ್ ನೇತೃತ್ವದ ಹತ್ರಾಸ್ ಅತ್ಯಾಚಾರ, ಕೊಲೆ ಸಂತ್ರಸ್ತೆಯ ಶವಸಂಸ್ಕಾರ ಪೊಲೀಸ್ ಇಲಾಖೆಯು ಪ್ರಭಲರಿಗೆ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ತಿಳಿಸುತ್ತದೆ ಎಂದು ತಮ್ಮ ಟ್ವಿಟ್ಟರ್‌ ಮತ್ತು ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

#Hathras #Police #Abuseಜಾತಿ / ಲಿಂಗ ಆಧಾರಿತ ಹಿಂಸಾಚಾರಕ್ಕೆ ಬಲಿಯಾದವರಿಗೆ ನ್ಯಾಯ ಇಂದಿನ ಭಾರತದಲ್ಲಿ ಬಹುದೊಡ್ಡ ಕನಸುಪೊಲೀಸ್ ಇಲಾಖೆಯ…

Posted by Chetan Ahimsa on Wednesday, September 30, 2020

 

ನಟಿ ಕಂಗನಾ ರಾಣಾವತ್ ಸರ್ಕಾರ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವ ನಂಬಿಕೆ ಇದೆ ಎಂದಿದ್ದಾರೆ.

ಉತ್ತರ ಪ್ರದೇಶದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಜೊತೆಗೆ ಅವರನ್ನು ಬೆಮಬಲಿಸುವ ಪ್ರಧಾನಿಗಳು, ಸಂಘಪರಿವಾರದವರು ಹೊರಬೇಕು ಎಂದಿದ್ದಾರೆ. ಜೊತೆಗೆ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ ಆಗಿದ್ದಾರೆ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಈ ದುರ್ಘಟನೆಗೆ ಅತ್ಯಾಚಾರಿಗಳು ಎಷ್ಟು ಕಾರಣವೋ ಉತ್ತರಪ್ರದೇಶ ಸರ್ಕಾರ ಕೂಡ ಅಷ್ಟೇ ಕಾರಣ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆಯನ್ನು ಏಮ್ಸ್ ಗೆ ಸೇರಿಸಿಕೊಳ್ಳಬೇಕೆಂದು ನಾನು ಒತ್ತಾಯಿಸುತ್ತಲೇ ಇದ್ದೆ, ಆದರೆ ಬಿಜೆಪಿ ಸರ್ಕಾರ ಹಾಗೆ ಮಾಡಲಿಲ್ಲ. ನಮ್ಮ ಸಹೋದರಿಯ ಸಾವಿಗೆ ಕಾರಣವಾದ ಅತ್ಯಾಚಾರಿಗಳು ಉತ್ತರ ಪ್ರದೇಶ ಸರ್ಕಾರಕ್ಕೂ ಅಷ್ಟೇ ಕಾರಣ ಎಂದು ಟ್ವೀಟ್ ಮಾಡಿದ್ದಾರೆ.

#HathrasHorrorShocksIndia #Hathras #HatrasCase #HathrasHorror #JusticeForManisha, #JusticeForManishaValmiki, #JusticeForManishaValmiki ಹ್ಯಾಶ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿವೆ.

ಜನರ ಆಕ್ರೋಶ ಹೆಚ್ಚಾದ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಹತ್ರಾಸ್‌ನಲ್ಲಿ  ನಡೆದ ದುರ್ಘಟನೆಯ ಅಪರಾಧಿಗಳು ಬದುಕುಳಿಯುವುದಿಲ್ಲ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಮುಂದಿನ ಏಳು ದಿನಗಳಲ್ಲಿ ಈ ತಂಡ ತನ್ನ ವರದಿಯನ್ನು ಸಲ್ಲಿಸಲಿದೆ. ಈ ಪ್ರಕರಣದ ವಿಚಾರಣೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ನಡೆಯುತ್ತದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೃತ ಸಂತ್ರಸ್ತೆಗೆ ನ್ಯಾಯಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾಕಾರರನ್ನು ಬಂಧಿಸುವ ಕೆಲಸ ಕೂಡ ಉತ್ತರ ಪ್ರದೇಶ ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಮನೆ ಮುಂದೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿಯ ಯುಪಿ ಭವನದ ಮುಂದೆ ಪ್ರತಿಭಟನೆ ನಡೆಸಲು ಒಟ್ಟುಗೂಡುತ್ತಿದ್ದ ಸುಮಾರು 60 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...