Homeಮುಖಪುಟಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

’ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?’ #NoOneDemolishedBabriMasjid ಎಂದು ಟ್ವಿಟ್ಟರ್‌‌ನಲ್ಲಿ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

- Advertisement -
- Advertisement -

28 ವರ್ಷದ ಹಿಂದೆ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯವು ಮಸೀದಿಯ ಧ್ವಂಸವು ಪೂರ್ವನಿರ್ಧರಿತ ಅಲ್ಲವೆಂದು ಹೇಳಿ ಎಲ್ಲಾ ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ “ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?” (#NoOneDemolishedBabriMasjid) ಎಂದು ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

ಅಷ್ಟೇ ಅಲ್ಲದೆ ತೀರ್ಪಿನ ಬಗ್ಗೆ ಹಲವಾರು ಜನರು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿಪಿಐಎಂ ಪಾಲಿಟ್ ಬ್ಯೂರೊ ಸದಸ್ಯ ಸೀತಾರಾಮ್ ಯಚೂರಿ, “ಇದು ಸಂಪೂರ್ಣ ನ್ಯಾಯದ ಅಣಕವಾಗಿದೆ. ಬಾಬರಿ ಮಸೀದಿಯನ್ನು ಕೆಡವಲು ಕ್ರಿಮಿನಲ್ ಪಿತೂರಿ ನಡೆಸಿರುವ ಆರೋಪಿಗಳನ್ನು ದೋಷ ಮುಕ್ತಗೊಳಿಸಲಾಗಿದೆ. ಅದು ತಾನಾಗಿಯೆ ಬಿದ್ದು ಹೋಗಿದೆಯೆ? ಅಂದಿನ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಾಧೀಶರ ನೇತೃತ್ವದ ಸಂವಿಧಾನ ಪೀಠವು ಮಸೀದಿಯ ಧ್ವಂಸವೂ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಆದರೆ ಈಗ ಈ ತೀರ್ಪು!. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಚಿಂತಕ ಶಿವಸುಂದರ್‌, “ಓ ನ್ಯಾಯಾಲಯವೇ, ನಿಮ್ಮ ದೊರೆಗಳು ಒಪ್ಪದವರ ಭಾಷಣಗಳ
ಪದದ ಪಕ್ಕ ಇರದ ಕಾಮಾ, ಫುಲ್ ಸ್ಟಾಪುಗಳನ್ನೇ, ಭಯೋತ್ಪಾದಕ ದೇಶದ್ರೋಹಿ ಸಂಚಿಗೆ ಪರಮ ಸಾಕ್ಷಿ
ಎಂದು ಪರಿಗಣಿಸುವ ನಿಮಗೆ, ವರ್ಷಾನುಗಟ್ಟಲೇ ನಡೆದ ರಕ್ತ ಸಿಕ್ತ ರಾಮರಥಯಾತ್ರೆ ಸಂಚೆಂದು ಕಾಣುವುದಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ,

  • ಪ್ರಾಸಿಕ್ಯೂಷನ್ ಒದಗಿಸಿದ 350 ಕ್ಕೂ ಹೆಚ್ಚು ಪುರಾವೆಗಳನ್ನು ಒಪ್ಪದ ನ್ಯಾಯಾಲಯ
  • ಅಡ್ವಾನಿ ಮತ್ತಿತರರ ಪ್ರಚೋದನಕಾರಿ ಭಾಷಣಗಳ ವಿಡಿಯೋ ನಕಲಿ ಎಂದು ತಿರಸ್ಕರಿಸಿದ ನ್ಯಾಯಾಲಯ
  • ಲಿಬರ್ಹಾನ್ ಕಮಿಷನ್ ಕೊಟ್ಟ ವರದಿಯನ್ನು ಕಣ್ಣೆತ್ತಿಯೂ ನೋಡದ ನ್ಯಾಯಾಲಯ

“ತಮ್ಮ ಪರವಾಗಿ ಆರೋಪಿಗಳು ಒಂದು ಸಾಕ್ಷಿಯನ್ನೂ ಹಾಜರು ಪಡಿಸದಿದ್ದರೂ, ಈ ಸತ್ಪುರುಷರು ಅಲ್ಲಿ ’ಮಸೀದೀಯನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದರು’ ಎಂದು ಕಂಡುಹಿಡಿದು ಬಿಡುಗಡೆ ಮಾಡಿದೆ ಹಾಗೂ ಮಸೀದಿಯನ್ನು ಅಲ್ಲಿದ್ದ ಯಾವ ಮನುಷ್ಯರೂ ನಾಶ ಮಾಡಿಲ್ಲವಾದ್ದರಿಂದ ಅದು “Act Of God” ಎಂದು ಪರೋಕ್ಷವಾಗಿ ಸೂಚಿಸಿದೆ. ಬಾಬ್ರಿ ಮಸೀದಿ ನಾಶ ಮಾಡಿದ್ದನ್ನು act of god ಎಂದು ಘೋಷಿಸಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಬಿಬಿಸಿ ಪತ್ರಕರ್ತ ಸೌತಿಕ್ ಬಿಸ್ವಾಸ್, “28 ವರ್ಷಗಳು, 850 ಸಾಕ್ಷಿಗಳು, 7,000 ಕ್ಕೂ ಹೆಚ್ಚು ದಾಖಲೆಗಳು, ಜೊತೆಗೆ 100 ವರದಿಗಳು, ಘಟನೆಯ ಛಾಯಾಚಿತ್ರಗಳು ಮತ್ತು ವಿಡಿಯೋ ಟೇಪ್‌ಗಳು, 49 ಆರೋಪಿಗಳು, ಹಲವಾರು ನ್ಯಾಯಾಲಯಗಳು. ಆದರೆ ಯಾವುದೇ ಶಿಕ್ಷೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ದಿ ವೈರ್‌ ಪತ್ರಕರ್ತೆ ಅರ್ಫಾ ಖಾನುಂ ಶೇರ್‌ವಾನಿ, “ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಹಾಗಾದರೆ ಬಾಬರಿ ಮಸೀದಿಯನ್ನು ನೆಲಸಮ ಮಾಡಿದವರು ಯಾರು? ನಂತರದ ಗಲಭೆಯಲ್ಲಿ 1800 ಜನರನ್ನು ಕೊಂದವರು ಯಾರು? ಭಾರತದ ಆತ್ಮದ ಮೇಲೆ ಮಾಡಿದ ಅಪರಾಧಗಳಿಗೆ ಹೊಣೆ ಯಾರು?” ಎಂದು ಪ್ರಶ್ನಿಸಿದ್ದಾರೆ.

SFI ಪ್ರಧಾನ ಕಾರ್ಯದರ್ಶಿ ಮಯುಕ್ ಬಿಸ್ವಾಸ್, “ಆ ದಿನ … ಅವರು ಸಂತೋಷದಿಂದ ಮುಳುಗಿದ್ದರು, ಇಂದು ಸಹ. ಈ ಮಧ್ಯೆ, ನನ್ನ ದೇಶದ ಚೈತನ್ಯವನ್ನು ಮಾತ್ರ ಸೋಲಿಸಲಾಗಿದೆ!” ಎಂದು ಅಡ್ವಾನಿ ಸೇರಿದಂತೆ ಹಲವಾರು ಜನರು ಖುಷಿಯಿಂದ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಪತ್ರಕರ್ತ ಸಾಹಿಲ್ ಮುರುಳಿ ಮೇಂಗಾನಿ, “ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆದರೆ ’ಎಲ್ಲೆಲ್ಲಿ ಕಳೆ ಇದಿಯೋ ಅದನ್ನೆಲ್ಲಾ ತೆಗೆದು ಹಾಕುತ್ತೇವೆ’ ಎಂದು ಕಾಶಿ ಮತ್ತು ಮಥುರಾ ಬಗ್ಗೆ ‘ಆಚಾರ್ಯ’ ಧರ್ಮೇಂದ್ರ ಹೇಳುತ್ತಾರೆ. ಧರ್ಮೇಂದ್ರ ಬಾಬರಿ ಧ್ವಂಸ ಪ್ರಕರಣದಲ್ಲಿ ಖುಲಾಸೆಗೊಂಡ 32 ಆರೋಪಿಗಳಲ್ಲಿ ಒಬ್ಬ. ಅವರನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ಹೊರಗೆ ಅವರು ಈ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಟ್ವೀಟ್‌ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತು. ಆದರೆ ಇದನ್ನು ಅಲ್ಲ?” ಎಂದು ಟ್ವೀಟ್ ಮಾಡಿದ್ದಾರೆ.

ಬರಹಗಾರ ಸಂಶೋಧಕ ಸಂಜುಕ್ತ ಬಸು, “ಡಿಸೆಂಬರ್‌ ತಿಂಗಳ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, “ಬಾಬರಿ ಮಸೀದಿ ಧ್ವಂಸ ಪ್ರಕರಣದ 2,000 ಪುಟಗಳ ತೀರ್ಪು ಎಲ್ಲ ತಪ್ಪಿತಸ್ಥರನ್ನು ದೋಷಮುಕ್ತಗೊಳಿಸಿದೆ! ಭಾರತೀಯ ಸಂವಿಧಾನಕ್ಕೆ ಶ್ರದ್ದಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಗೌರವ್ ಅವರು ಮಾಜಿ ಪ್ರಧಾನಿ ವಾಜಪೇಯಿ ಮಾತನಾಡುವ ವಿಡಿಯೋ ಒಂದನ್ನು ಹಾಕಿ “ಈ ಭಾಷಣವು ಬಾಬರಿ ಮಸೀದಿಯನ್ನು ಧ್ವಂಸಗೊಳಿಸುವ ಮೊದಲು ಸಂಜೆ ವಾಜಪೇಯಿ ಮಾಡಿದ್ದಾಗಿದ್ದು, ಅದರಲ್ಲಿ ಆರೆಸ್ಸೆಸ್ ಗೂಂಡಾಗಳಿಗೆ ಮಸೀದಿಯನ್ನು ಕೆಡವಬೇಕೆಂದು ಸೂಚಿಸಿ, ’ಪ್ರದೇಶವನ್ನು ನೆಲಸಮ ಮಾಡಬೇಕು’ ಎಂದಿದ್ದರು. ಕಾನೂನಿನ ಕಣ್ಣು ಕುರುಡು ಎಂದು ಹೇಳಲಾಗುತ್ತದೆ, ಆದರೆ ಅದಕ್ಕೆ ಕಣ್ಣು ಕಾಣುವುದಿಲ್ಲ ಹಾಗೂ ಕಿವಿಯೂ ಕೇಳುವುದಿಲ್ಲ ಎಂದು ನನಗೆ ತಿಳಿದಿರಲಿಲ್ಲ!” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ವಿಡಿಯೋ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...