Homeಮುಖಪುಟಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

’ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?’ #NoOneDemolishedBabriMasjid ಎಂದು ಟ್ವಿಟ್ಟರ್‌‌ನಲ್ಲಿ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

- Advertisement -
- Advertisement -

28 ವರ್ಷದ ಹಿಂದೆ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯವು ಮಸೀದಿಯ ಧ್ವಂಸವು ಪೂರ್ವನಿರ್ಧರಿತ ಅಲ್ಲವೆಂದು ಹೇಳಿ ಎಲ್ಲಾ ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ “ಹಾಗಾದರೆ ಬಾಬರಿಯನ್ನು ಯಾರು ಧ್ವಂಸ ಮಾಡಿಲ್ಲ?” (#NoOneDemolishedBabriMasjid) ಎಂದು ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಗಿದೆ.

ಅಷ್ಟೇ ಅಲ್ಲದೆ ತೀರ್ಪಿನ ಬಗ್ಗೆ ಹಲವಾರು ಜನರು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿಪಿಐಎಂ ಪಾಲಿಟ್ ಬ್ಯೂರೊ ಸದಸ್ಯ ಸೀತಾರಾಮ್ ಯಚೂರಿ, “ಇದು ಸಂಪೂರ್ಣ ನ್ಯಾಯದ ಅಣಕವಾಗಿದೆ. ಬಾಬರಿ ಮಸೀದಿಯನ್ನು ಕೆಡವಲು ಕ್ರಿಮಿನಲ್ ಪಿತೂರಿ ನಡೆಸಿರುವ ಆರೋಪಿಗಳನ್ನು ದೋಷ ಮುಕ್ತಗೊಳಿಸಲಾಗಿದೆ. ಅದು ತಾನಾಗಿಯೆ ಬಿದ್ದು ಹೋಗಿದೆಯೆ? ಅಂದಿನ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಾಧೀಶರ ನೇತೃತ್ವದ ಸಂವಿಧಾನ ಪೀಠವು ಮಸೀದಿಯ ಧ್ವಂಸವೂ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಆದರೆ ಈಗ ಈ ತೀರ್ಪು!. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಚಿಂತಕ ಶಿವಸುಂದರ್‌, “ಓ ನ್ಯಾಯಾಲಯವೇ, ನಿಮ್ಮ ದೊರೆಗಳು ಒಪ್ಪದವರ ಭಾಷಣಗಳ
ಪದದ ಪಕ್ಕ ಇರದ ಕಾಮಾ, ಫುಲ್ ಸ್ಟಾಪುಗಳನ್ನೇ, ಭಯೋತ್ಪಾದಕ ದೇಶದ್ರೋಹಿ ಸಂಚಿಗೆ ಪರಮ ಸಾಕ್ಷಿ
ಎಂದು ಪರಿಗಣಿಸುವ ನಿಮಗೆ, ವರ್ಷಾನುಗಟ್ಟಲೇ ನಡೆದ ರಕ್ತ ಸಿಕ್ತ ರಾಮರಥಯಾತ್ರೆ ಸಂಚೆಂದು ಕಾಣುವುದಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ,

  • ಪ್ರಾಸಿಕ್ಯೂಷನ್ ಒದಗಿಸಿದ 350 ಕ್ಕೂ ಹೆಚ್ಚು ಪುರಾವೆಗಳನ್ನು ಒಪ್ಪದ ನ್ಯಾಯಾಲಯ
  • ಅಡ್ವಾನಿ ಮತ್ತಿತರರ ಪ್ರಚೋದನಕಾರಿ ಭಾಷಣಗಳ ವಿಡಿಯೋ ನಕಲಿ ಎಂದು ತಿರಸ್ಕರಿಸಿದ ನ್ಯಾಯಾಲಯ
  • ಲಿಬರ್ಹಾನ್ ಕಮಿಷನ್ ಕೊಟ್ಟ ವರದಿಯನ್ನು ಕಣ್ಣೆತ್ತಿಯೂ ನೋಡದ ನ್ಯಾಯಾಲಯ

“ತಮ್ಮ ಪರವಾಗಿ ಆರೋಪಿಗಳು ಒಂದು ಸಾಕ್ಷಿಯನ್ನೂ ಹಾಜರು ಪಡಿಸದಿದ್ದರೂ, ಈ ಸತ್ಪುರುಷರು ಅಲ್ಲಿ ’ಮಸೀದೀಯನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದರು’ ಎಂದು ಕಂಡುಹಿಡಿದು ಬಿಡುಗಡೆ ಮಾಡಿದೆ ಹಾಗೂ ಮಸೀದಿಯನ್ನು ಅಲ್ಲಿದ್ದ ಯಾವ ಮನುಷ್ಯರೂ ನಾಶ ಮಾಡಿಲ್ಲವಾದ್ದರಿಂದ ಅದು “Act Of God” ಎಂದು ಪರೋಕ್ಷವಾಗಿ ಸೂಚಿಸಿದೆ. ಬಾಬ್ರಿ ಮಸೀದಿ ನಾಶ ಮಾಡಿದ್ದನ್ನು act of god ಎಂದು ಘೋಷಿಸಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಬಿಬಿಸಿ ಪತ್ರಕರ್ತ ಸೌತಿಕ್ ಬಿಸ್ವಾಸ್, “28 ವರ್ಷಗಳು, 850 ಸಾಕ್ಷಿಗಳು, 7,000 ಕ್ಕೂ ಹೆಚ್ಚು ದಾಖಲೆಗಳು, ಜೊತೆಗೆ 100 ವರದಿಗಳು, ಘಟನೆಯ ಛಾಯಾಚಿತ್ರಗಳು ಮತ್ತು ವಿಡಿಯೋ ಟೇಪ್‌ಗಳು, 49 ಆರೋಪಿಗಳು, ಹಲವಾರು ನ್ಯಾಯಾಲಯಗಳು. ಆದರೆ ಯಾವುದೇ ಶಿಕ್ಷೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ದಿ ವೈರ್‌ ಪತ್ರಕರ್ತೆ ಅರ್ಫಾ ಖಾನುಂ ಶೇರ್‌ವಾನಿ, “ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಹಾಗಾದರೆ ಬಾಬರಿ ಮಸೀದಿಯನ್ನು ನೆಲಸಮ ಮಾಡಿದವರು ಯಾರು? ನಂತರದ ಗಲಭೆಯಲ್ಲಿ 1800 ಜನರನ್ನು ಕೊಂದವರು ಯಾರು? ಭಾರತದ ಆತ್ಮದ ಮೇಲೆ ಮಾಡಿದ ಅಪರಾಧಗಳಿಗೆ ಹೊಣೆ ಯಾರು?” ಎಂದು ಪ್ರಶ್ನಿಸಿದ್ದಾರೆ.

SFI ಪ್ರಧಾನ ಕಾರ್ಯದರ್ಶಿ ಮಯುಕ್ ಬಿಸ್ವಾಸ್, “ಆ ದಿನ … ಅವರು ಸಂತೋಷದಿಂದ ಮುಳುಗಿದ್ದರು, ಇಂದು ಸಹ. ಈ ಮಧ್ಯೆ, ನನ್ನ ದೇಶದ ಚೈತನ್ಯವನ್ನು ಮಾತ್ರ ಸೋಲಿಸಲಾಗಿದೆ!” ಎಂದು ಅಡ್ವಾನಿ ಸೇರಿದಂತೆ ಹಲವಾರು ಜನರು ಖುಷಿಯಿಂದ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಪತ್ರಕರ್ತ ಸಾಹಿಲ್ ಮುರುಳಿ ಮೇಂಗಾನಿ, “ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆದರೆ ’ಎಲ್ಲೆಲ್ಲಿ ಕಳೆ ಇದಿಯೋ ಅದನ್ನೆಲ್ಲಾ ತೆಗೆದು ಹಾಕುತ್ತೇವೆ’ ಎಂದು ಕಾಶಿ ಮತ್ತು ಮಥುರಾ ಬಗ್ಗೆ ‘ಆಚಾರ್ಯ’ ಧರ್ಮೇಂದ್ರ ಹೇಳುತ್ತಾರೆ. ಧರ್ಮೇಂದ್ರ ಬಾಬರಿ ಧ್ವಂಸ ಪ್ರಕರಣದಲ್ಲಿ ಖುಲಾಸೆಗೊಂಡ 32 ಆರೋಪಿಗಳಲ್ಲಿ ಒಬ್ಬ. ಅವರನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ಹೊರಗೆ ಅವರು ಈ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಟ್ವೀಟ್‌ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತು. ಆದರೆ ಇದನ್ನು ಅಲ್ಲ?” ಎಂದು ಟ್ವೀಟ್ ಮಾಡಿದ್ದಾರೆ.

ಬರಹಗಾರ ಸಂಶೋಧಕ ಸಂಜುಕ್ತ ಬಸು, “ಡಿಸೆಂಬರ್‌ ತಿಂಗಳ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, “ಬಾಬರಿ ಮಸೀದಿ ಧ್ವಂಸ ಪ್ರಕರಣದ 2,000 ಪುಟಗಳ ತೀರ್ಪು ಎಲ್ಲ ತಪ್ಪಿತಸ್ಥರನ್ನು ದೋಷಮುಕ್ತಗೊಳಿಸಿದೆ! ಭಾರತೀಯ ಸಂವಿಧಾನಕ್ಕೆ ಶ್ರದ್ದಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಗೌರವ್ ಅವರು ಮಾಜಿ ಪ್ರಧಾನಿ ವಾಜಪೇಯಿ ಮಾತನಾಡುವ ವಿಡಿಯೋ ಒಂದನ್ನು ಹಾಕಿ “ಈ ಭಾಷಣವು ಬಾಬರಿ ಮಸೀದಿಯನ್ನು ಧ್ವಂಸಗೊಳಿಸುವ ಮೊದಲು ಸಂಜೆ ವಾಜಪೇಯಿ ಮಾಡಿದ್ದಾಗಿದ್ದು, ಅದರಲ್ಲಿ ಆರೆಸ್ಸೆಸ್ ಗೂಂಡಾಗಳಿಗೆ ಮಸೀದಿಯನ್ನು ಕೆಡವಬೇಕೆಂದು ಸೂಚಿಸಿ, ’ಪ್ರದೇಶವನ್ನು ನೆಲಸಮ ಮಾಡಬೇಕು’ ಎಂದಿದ್ದರು. ಕಾನೂನಿನ ಕಣ್ಣು ಕುರುಡು ಎಂದು ಹೇಳಲಾಗುತ್ತದೆ, ಆದರೆ ಅದಕ್ಕೆ ಕಣ್ಣು ಕಾಣುವುದಿಲ್ಲ ಹಾಗೂ ಕಿವಿಯೂ ಕೇಳುವುದಿಲ್ಲ ಎಂದು ನನಗೆ ತಿಳಿದಿರಲಿಲ್ಲ!” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ವಿಡಿಯೋ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...