Homeಮುಖಪುಟಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ

ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ 'ದರ್ಬಾರ್ ಮಹಿಳಾ ಸಮನ್ವಯ ಸಮಿತಿ' ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು

- Advertisement -
- Advertisement -

ಯಾವುದೇ ಗುರುತನ್ನು ಕೇಳದೇ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ನ್ಯಾಕೋ) ಮತ್ತು ಅಧಿಕಾರಿಗಳು ಗುರುತಿಸಿರುವ ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ವಿತರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಆದೇಶ ನೀಡಿದೆ. ಜೊತೆಗೆ, ಈ ಅವಧಿಯಲ್ಲಿ ಪಡಿತರವನ್ನು ಪಡೆದ ಲೈಂಗಿಕ ಕಾರ್ಯಕರ್ತೆಯರ ಸಂಖ್ಯೆಯ ವಿವರಗಳನ್ನು ನೀಡಿ, ನಾಲ್ಕು ವಾರಗಳಲ್ಲಿ ಅನುಸರಣೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೂ ಆಗ್ರಹಿಸಿದೆ.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಅಜಯ್ ರಾಸ್ತೋಗಿ ಅವರನ್ನೊಳಗೊಂಡ ನ್ಯಾಯಪೀಠವು “ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡಬಹುದೇ ಎಂಬ ಅಂಶದ ಬಗ್ಗೆ ನಂತರ ವ್ಯವಹರಿಸುವುದಾಗಿ” ಹೇಳಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಯನ್ನು ಧ್ವನಿಸುವ ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿ, ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ಚೀಟಿ ಮತ್ತು ಇತರ ಸೌಲಭ್ಯಗಳನ್ನು ಅವರು ಹೇಗೆ ಒದಗಿಸುತ್ತಾರೆ ಎಂಬ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ರಾಜ್ಯಗಳನ್ನು ಕೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಮಹಿಳೆಯರು ವೇಶ್ಯೆರಾಗಬೇಕೆಂದು ಕಾರ್ಲ್ ಮಾರ್ಕ್ಸ್ ಎಲ್ಲಿಯೂ ಹೇಳಿಲ್ಲ : ಹಾಗಾದರೆ ಗುರುಮೂರ್ತಿಯವರು ಸುಳ್ಳು ಹೇಳಿದ್ದೇಕೆ?? – ಹರ್ಷ ಕುಮಾರ್‌…

“ನೆರವು ನೀಡಲು ರಾಜ್ಯಗಳು ಮುಂದೆ ಬರುತ್ತಿವೆ ಎಂಬ ಅಂಶಗಳ ಬಗ್ಗೆ ನಮಗೆ ತಿಳಿದಿದೆ. ಆದರೆ ಸಮಸ್ಯೆಯೆಂದರೆ ಈ ಲೈಂಗಿಕ ಕಾರ್ಯಕರ್ತೆಯರಿಗೆ ಯಾವುದೇ ಗುರುತಿನ ಪುರಾವೆಗಳಿಲ್ಲ. ಆದ್ದರಿಂದ, ಎಲ್ಲರಿಗೂ ಪಡಿತರವನ್ನು ನೀಡಬೇಕು. ಇದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂದು ರಾಜ್ಯಗಳು ನಮಗೆ ತಿಳಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

ಲೈಂಗಿಕ ಕಾರ್ಯಕರ್ತರಿಗೆ ರಾಜ್ಯಗಳು ಪಡಿತರವನ್ನು ನೀಡುತ್ತಿದ್ದರೆ ಆಕ್ಷೇಪವಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರು ಹೇಳಿದ್ದಾರೆ.

ಈ ವಿಷಯದಲ್ಲಿ ಅಮಿಕಸ್ ಕ್ಯೂರಿಯಂತೆ (ನ್ಯಾಯಾಲಯಗಳ ಸ್ನೇಹಿತ) ಸುಪ್ರೀಂ ಕೋರ್ಟ್‌ಗೆ ಸಹಾಯ ಮಾಡುತ್ತಿರುವ ವಕೀಲ ಪಿಜುಶ್ ಕುಮಾರ್ ರಾಯ್, “ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡುವ ಸಲುವಾಗಿ, ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಬ್ಯಾಂಕ್ ಖಾತೆಗಳನ್ನು ಸಹ ತೆರೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ: ಪ್ಲೇಗ್ ವೇಳೆ ವೇಶ್ಯೆಯರು & ಯಹೂದಿಗಳನ್ನು ಬಲಿಪಶು ಮಾಡಲಾಗಿತ್ತು! ಕೊರೋನ ವೇಳೆಯಲ್ಲಿ?

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ಗಮನಕ್ಕೆ ತೆಗೆದುಕೊಂಡಿತ್ತು. ಗುರುತಿನ ಪುರಾವೆಗಳನ್ನು ಒತ್ತಾಯಿಸದೆ ಮಾಸಿಕ ಪಡಿತರ ವಿತರಣೆ ಮತ್ತು ಹಣ ವರ್ಗಾವಣೆಯ ವಿಧಾನಗಳ ಬಗ್ಗೆ ತಿಳಿಸುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡಿತು.

ಎನ್‌ಜಿಒ ಒಂದರ ಪರವಾಗಿ ಹಾಜರಾದ ಹಿರಿಯ ವಕೀಲ ಆನಂದ್ ಗ್ರೋವರ್, “ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣದ 1.2 ಲಕ್ಷ ಲೈಂಗಿಕ ಕಾರ್ಯಕರ್ತರನ್ನೊಳಗೊಂಡು ನಡೆಸಿದ ಸಮೀಕ್ಷೆಯಲ್ಲಿ, ಶೇ. 96 ಪ್ರತಿಶತದಷ್ಟು ಜನರು ಸಾಂಕ್ರಾಮಿಕ ರೋಗದಲ್ಲಿ ತಮ್ಮ ಗಳಿಕೆಯ ಮೂಲವನ್ನು ಕಳೆದುಕೊಂಡಿದ್ದಾರೆ” ಎಂದು ವಾದಿಸಿದ್ದರು.

ಇದನ್ನೂ ಓದಿ: “ಬರುತ್ತೀಯಾ?.. ಕೂರುತ್ತೀಯಾ?: ಭಾರತೀಯ ಸೂಳೆಲೋಕದ ಕಥೆಗಳು” ಪುಸ್ತಕದ ಮುನ್ನುಡಿ

ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ನೇಮಕಗೊಂಡಿರುವ ಹಿರಿಯ ವಕೀಲ ಜಯಂತ್ ಭೂಷಣ್, “ಗುರುತಿನ ಪುರಾವೆಗೆ ಒತ್ತಾಯಿಸದೆ ಪಡಿತರ ಚೀಟಿಗಳನ್ನು ನೀಡಿದರೆ ಲೈಂಗಿಕ ಕಾರ್ಯಕರ್ತೆಯರ ದುಃಸ್ಥಿತಿಯನ್ನು ಪರಿಹರಿಸಬಹುದು” ಎಂದು ಹೇಳಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಲೈಂಗಿಕ ಕಾರ್ಯಕರ್ತೆಯರ ಹಕ್ಕುಗಳನ್ನು ಎತ್ತಿಹಿಡಿಯಲು ಉನ್ನತ ನ್ಯಾಯಾಲಯವನ್ನು ಕೋರಿ, ದೇಶದಾದ್ಯಂತ 9 ಲಕ್ಷಕ್ಕೂ ಹೆಚ್ಚಿರುವ ಮಹಿಳಾ ಮತ್ತು ಟ್ರಾನ್ಸ್‌ಜೆಂಡರ್ ಲೈಂಗಿಕ ಕಾರ್ಯಕರ್ತರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ‘ದರ್ಬಾರ್ ಮಹಿಳಾ ಸಮನ್ವಯ ಸಮಿತಿ’ ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.


ಇದನ್ನೂ ಓದಿ: ಮಹಿಳೆ ಮತ್ತು ಬಿಕ್ಕಟ್ಟಿನ ಕಾಲದ ಸಂದಿಗ್ಧಗಳು! – ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...