Homeಮುಖಪುಟಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಅರ್ಜಿಯನ್ನು ಮಥುರಾ ಸಿವಿಲ್ ನ್ಯಾಯಾಲಯ ವಜಾಗೊಳಿದೆ.

- Advertisement -
- Advertisement -

ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಮಥುರಾದಲ್ಲಿನ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿದ್ದ ಮನವಿಯನ್ನು ಮಥುರಾದ ಸಿವಿಲ್ ನ್ಯಾಯಾಲಯ ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿದೆ.

ಲಖನೌ ಹೈಕೋರ್ಟ್ ಮುಂದೆ ಅಯೋಧ್ಯ ಶೀರ್ಷಿಕೆ ಮೊಕದ್ದಮೆಯಲ್ಲಿ ವಾದಿಸಿದ ವಕೀಲರಲ್ಲಿ ಒಬ್ಬರಾದ ರಂಜನಾ ಅಗ್ನಿಹೋತ್ರಿ ಮೊಕದ್ದಮೆ ಹೂಡಿದ್ದರು. ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿರುವ ಸ್ಥಳದ ಮೇಲೆ ಮಾಲೀಕತ್ವವನ್ನು ಪಡೆಯಲು ಮತ್ತು ಮಸೀದಿಯನ್ನು ತೆಗೆಯಬೇಕೆಂದು ಕೋರಿ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಮಥುರಾ: ಶ್ರೀಕೃಷ್ಣಾ ದೇವಾಲಯದ ಬಳಿಯ ಈದ್ಗಾ ಮಸೀದಿ ತೆರವಿಗೆ ಮೊಕದ್ದಮೆ ದಾಖಲು

ಕೆಲವು ಮುಸ್ಲಿಮರ ಸಹಾಯದಿಂದ ಈದ್ಗಾ ಟ್ರಸ್ಟ್, ಶ್ರೀಕೃಷ್ಣ ಜನಂಸ್ಥಾನ್ ಟ್ರಸ್ಟ್ ಮತ್ತು ದೇವರಿಗೆ ಸೇರಿದ ಭೂಮಿಯನ್ನು ಅತಿಕ್ರಮಣ ಮಾಡಿ ಈದ್ಗಾ ಮಸೀದಿ ನಿರ್ಮಿಸಿದೆ ಎಂದು ಮೊಕದ್ದಮೆಯಲ್ಲಿ ದೂರಲಾಗಿತ್ತು. ಶ್ರೀಕೃಷ್ಣನ ಜನ್ಮಸ್ಥಳವು ಟ್ರಸ್ಟ್ ರಚಿಸಿದ ಮಸೀದಿಯ ಕೆಳಗೆ ಇದೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿತ್ತು.

ಅಲ್ಲದೆ ದೇವಾಲಯ ಆಡಳಿತ ಮಂಡಳಿಯಾಗಿರುವ ಶ್ರೀಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ಆಸ್ತಿಯನ್ನು ಕಸಿದುಕೊಳ್ಳುವ ಉದ್ದೇಶದಿಂದ ಶಾಹಿ ಈದ್ಗಾ ಟ್ರಸ್ಟ್‌ನೊಂದಿಗೆ ಅಕ್ರಮ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಲಾಗಿತ್ತು.

ಮೊಕದ್ದಮೆಯನ್ನು ವಜಾಗೊಳಿಸಲು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಹಿರಿಯ ವಿಭಾಗ) ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991 ಅನ್ನು ಉಲ್ಲೇಖಿಸಿದೆ. ಬಾಬರಿ ಮಸೀದಿಯನ್ನು ಅಕ್ರಮವಾಗಿ ಉರುಳಿಸಿದ ನಂತರ ಈ ಕಾಯ್ದೆ ಜಾರಿಗೆ ಬಂದಿತ್ತು.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಈ ಕಾಯ್ದೆಯ ಪ್ರಕಾರ, ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಸ್ವಾತಂತ್ರ್ಯದ ಸಮಯದಲ್ಲಿ ಹೇಗಿತ್ತೋ ಹಾಗೆ ಉಳಿಸುತ್ತದೆ. ಕಾಯ್ದೆ ಜಾರಿಗೆ ಬಂದ ನಂತರ ಪ್ರಾರ್ಥನಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಬದಲಾಯಿಸುವ ಯಾವುದೇ ಮನವಿಯನ್ನು ಯಾವುದೇ ನ್ಯಾಯಾಲಯವು ಒಪ್ಪಿಕೊಳ್ಳುವುದಿಲ್ಲ ಎಂದು ಕಾಯಿದೆಯ ಸೆಕ್ಷನ್ 4 ಹೇಳುತ್ತದೆ. ಈ ಹಿನ್ನೆಲೆ ನ್ಯಾಯಾಲಯವು ಈದ್ಗಾ ಮಸೀದಿ ತೆರವು ಅರ್ಜಿಯನ್ನು ಕಾನೂನಿನ ಪ್ರಕಾರ ವಜಾಗೊಳಿಸಿತು.

ಸದ್ಯ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಎಚ್‌ಪಿ ಕರಸೇವಕರ ನಾಚಿಕೆಗೇಡಿನ ಕೃತ್ಯಗಳಿಗೆ ನ್ಯಾಯಾಂಗದ ಅನುಮೋದನೆ, ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ರಾಮ ಮಂದಿರವನ್ನು ನಿರ್ಮಿಸಲು ಅನುಮತಿ ಸಿಕ್ಕಿದೆ. ಜೊತೆಗೆ ಈಗ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನಲ್ಲಿ ಅಂದು ಹಿಂಸಾಚಾರವನ್ನು ಪ್ರಚೋದಿಸಿದ ಎಲ್ಲ ಆರ್‌ಎಸ್‌ಎಸ್ ನಾಯಕರನ್ನು ಖುಲಾಸೆಗೊಳಿಸಿದೆ. ಇದು ಹಿಂದೂ ಮೂಲಭೂತವಾದಿಗಳಲ್ಲಿ ನಿರ್ಭಯದ ಭಾವನೆಯನ್ನು ಸೃಷ್ಟಿಸಿದೆ.

ಈದ್ಗಾ ಮಸೀದಿಯನ್ನು ತೆರುವುಗೊಳಿಸುವ ಮೊದಲಿನ ಪ್ರಯತ್ನಕ್ಕೆ ಸೋಲಾಗಿದೆ. ಕಾನೂನು ಕೂಡ ಮಸೀದಿ ತೆರವಿಗೆ ಅನುಮತಿ ನೀಡುವುದಿಲ್ಲ. ಆದರೂ ಇವೆಲ್ಲದರ ನಡುವೆಯೂ ಹಿಂದುತ್ವ ಕಾರ್ಯಕರ್ತರು ಮಸೀದಿ ತೆರವಿಗೆ ಒತ್ತಾಯಿಸುತ್ತಿದ್ದಾರೆ.

ಪ್ರಸ್ತುತ ರಾಮ ಜನ್ಮಭೂಮಿಯ ಉತ್ಸಾಹವು ಕಳೆದಿದೆ ಹಾಗಾಗಿ ಈ ಮೊಕದ್ದಮೆಯು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸಲು ಮತ್ತು ಸರ್ಕಾರದ ವೈಫಲ್ಯಗಳನ್ನು ಗಮನಿಸದಂತೆ ದೇಶದ ಜನರನ್ನು ಬೇರೆಡೆಗೆ ಸೆಳೆಯುವ ಮತ್ತೊಂದು ಪ್ರಚಾರ ಅಭಿಯಾನದ ಆರಂಭವನ್ನು ಸೂಚಿಸುತ್ತದೆ.


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...