Homeಮುಖಪುಟಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಅರ್ಜಿಯನ್ನು ಮಥುರಾ ಸಿವಿಲ್ ನ್ಯಾಯಾಲಯ ವಜಾಗೊಳಿದೆ.

- Advertisement -
- Advertisement -

ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಮಥುರಾದಲ್ಲಿನ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿದ್ದ ಮನವಿಯನ್ನು ಮಥುರಾದ ಸಿವಿಲ್ ನ್ಯಾಯಾಲಯ ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿದೆ.

ಲಖನೌ ಹೈಕೋರ್ಟ್ ಮುಂದೆ ಅಯೋಧ್ಯ ಶೀರ್ಷಿಕೆ ಮೊಕದ್ದಮೆಯಲ್ಲಿ ವಾದಿಸಿದ ವಕೀಲರಲ್ಲಿ ಒಬ್ಬರಾದ ರಂಜನಾ ಅಗ್ನಿಹೋತ್ರಿ ಮೊಕದ್ದಮೆ ಹೂಡಿದ್ದರು. ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿರುವ ಸ್ಥಳದ ಮೇಲೆ ಮಾಲೀಕತ್ವವನ್ನು ಪಡೆಯಲು ಮತ್ತು ಮಸೀದಿಯನ್ನು ತೆಗೆಯಬೇಕೆಂದು ಕೋರಿ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಮಥುರಾ: ಶ್ರೀಕೃಷ್ಣಾ ದೇವಾಲಯದ ಬಳಿಯ ಈದ್ಗಾ ಮಸೀದಿ ತೆರವಿಗೆ ಮೊಕದ್ದಮೆ ದಾಖಲು

ಕೆಲವು ಮುಸ್ಲಿಮರ ಸಹಾಯದಿಂದ ಈದ್ಗಾ ಟ್ರಸ್ಟ್, ಶ್ರೀಕೃಷ್ಣ ಜನಂಸ್ಥಾನ್ ಟ್ರಸ್ಟ್ ಮತ್ತು ದೇವರಿಗೆ ಸೇರಿದ ಭೂಮಿಯನ್ನು ಅತಿಕ್ರಮಣ ಮಾಡಿ ಈದ್ಗಾ ಮಸೀದಿ ನಿರ್ಮಿಸಿದೆ ಎಂದು ಮೊಕದ್ದಮೆಯಲ್ಲಿ ದೂರಲಾಗಿತ್ತು. ಶ್ರೀಕೃಷ್ಣನ ಜನ್ಮಸ್ಥಳವು ಟ್ರಸ್ಟ್ ರಚಿಸಿದ ಮಸೀದಿಯ ಕೆಳಗೆ ಇದೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿತ್ತು.

ಅಲ್ಲದೆ ದೇವಾಲಯ ಆಡಳಿತ ಮಂಡಳಿಯಾಗಿರುವ ಶ್ರೀಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ಆಸ್ತಿಯನ್ನು ಕಸಿದುಕೊಳ್ಳುವ ಉದ್ದೇಶದಿಂದ ಶಾಹಿ ಈದ್ಗಾ ಟ್ರಸ್ಟ್‌ನೊಂದಿಗೆ ಅಕ್ರಮ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಲಾಗಿತ್ತು.

ಮೊಕದ್ದಮೆಯನ್ನು ವಜಾಗೊಳಿಸಲು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಹಿರಿಯ ವಿಭಾಗ) ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991 ಅನ್ನು ಉಲ್ಲೇಖಿಸಿದೆ. ಬಾಬರಿ ಮಸೀದಿಯನ್ನು ಅಕ್ರಮವಾಗಿ ಉರುಳಿಸಿದ ನಂತರ ಈ ಕಾಯ್ದೆ ಜಾರಿಗೆ ಬಂದಿತ್ತು.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಈ ಕಾಯ್ದೆಯ ಪ್ರಕಾರ, ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಸ್ವಾತಂತ್ರ್ಯದ ಸಮಯದಲ್ಲಿ ಹೇಗಿತ್ತೋ ಹಾಗೆ ಉಳಿಸುತ್ತದೆ. ಕಾಯ್ದೆ ಜಾರಿಗೆ ಬಂದ ನಂತರ ಪ್ರಾರ್ಥನಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಬದಲಾಯಿಸುವ ಯಾವುದೇ ಮನವಿಯನ್ನು ಯಾವುದೇ ನ್ಯಾಯಾಲಯವು ಒಪ್ಪಿಕೊಳ್ಳುವುದಿಲ್ಲ ಎಂದು ಕಾಯಿದೆಯ ಸೆಕ್ಷನ್ 4 ಹೇಳುತ್ತದೆ. ಈ ಹಿನ್ನೆಲೆ ನ್ಯಾಯಾಲಯವು ಈದ್ಗಾ ಮಸೀದಿ ತೆರವು ಅರ್ಜಿಯನ್ನು ಕಾನೂನಿನ ಪ್ರಕಾರ ವಜಾಗೊಳಿಸಿತು.

ಸದ್ಯ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಎಚ್‌ಪಿ ಕರಸೇವಕರ ನಾಚಿಕೆಗೇಡಿನ ಕೃತ್ಯಗಳಿಗೆ ನ್ಯಾಯಾಂಗದ ಅನುಮೋದನೆ, ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ರಾಮ ಮಂದಿರವನ್ನು ನಿರ್ಮಿಸಲು ಅನುಮತಿ ಸಿಕ್ಕಿದೆ. ಜೊತೆಗೆ ಈಗ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನಲ್ಲಿ ಅಂದು ಹಿಂಸಾಚಾರವನ್ನು ಪ್ರಚೋದಿಸಿದ ಎಲ್ಲ ಆರ್‌ಎಸ್‌ಎಸ್ ನಾಯಕರನ್ನು ಖುಲಾಸೆಗೊಳಿಸಿದೆ. ಇದು ಹಿಂದೂ ಮೂಲಭೂತವಾದಿಗಳಲ್ಲಿ ನಿರ್ಭಯದ ಭಾವನೆಯನ್ನು ಸೃಷ್ಟಿಸಿದೆ.

ಈದ್ಗಾ ಮಸೀದಿಯನ್ನು ತೆರುವುಗೊಳಿಸುವ ಮೊದಲಿನ ಪ್ರಯತ್ನಕ್ಕೆ ಸೋಲಾಗಿದೆ. ಕಾನೂನು ಕೂಡ ಮಸೀದಿ ತೆರವಿಗೆ ಅನುಮತಿ ನೀಡುವುದಿಲ್ಲ. ಆದರೂ ಇವೆಲ್ಲದರ ನಡುವೆಯೂ ಹಿಂದುತ್ವ ಕಾರ್ಯಕರ್ತರು ಮಸೀದಿ ತೆರವಿಗೆ ಒತ್ತಾಯಿಸುತ್ತಿದ್ದಾರೆ.

ಪ್ರಸ್ತುತ ರಾಮ ಜನ್ಮಭೂಮಿಯ ಉತ್ಸಾಹವು ಕಳೆದಿದೆ ಹಾಗಾಗಿ ಈ ಮೊಕದ್ದಮೆಯು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸಲು ಮತ್ತು ಸರ್ಕಾರದ ವೈಫಲ್ಯಗಳನ್ನು ಗಮನಿಸದಂತೆ ದೇಶದ ಜನರನ್ನು ಬೇರೆಡೆಗೆ ಸೆಳೆಯುವ ಮತ್ತೊಂದು ಪ್ರಚಾರ ಅಭಿಯಾನದ ಆರಂಭವನ್ನು ಸೂಚಿಸುತ್ತದೆ.


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...