Homeಕರ್ನಾಟಕಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಸಮಾವೇಶಕ್ಕೆ ಬಂದಿದ್ದ ಬಹುತೇಕ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾತುಗಳಿಂದ ನಿರಾಶೆಗೊಂಡು ಹಿಂದಿರುಗಿದರು.

- Advertisement -
- Advertisement -

ಶಿರಾ ಉಪಚುನಾವಣೆ ಭರಾಟೆ ತೀವ್ರತೆ ಪಡೆದುಕೊಳ್ಳುತ್ತಿದೆ. ಉಪಚುನಾವಣೆಯ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಸೆಪ್ಟೆಂಬರ್ 30 ರಂದು ಶಿರಾ ನಗರದಲ್ಲಿ ಬೃಹತ್ ಸಮಾವೇಶ ನಡೆಸಿದ ಜೆಡಿಎಸ್ ವರಿಷ್ಠರು, ಅಭ್ಯರ್ಥಿ ಆಯ್ಕೆಗೆ ನಾಲ್ಕು ದಿನಗಳ ಗಡುವು ನೀಡಿ ಹೋಗಿದ್ದಾರೆ. ಇಂದೇ ಅಭ್ಯರ್ಥಿಯ ಹೆಸರು ಪ್ರಕಟಿಸುತ್ತಾರೆ ಎಂಬ ಕಾರ್ಯಕರ್ತರ ನಿರೀಕ್ಷೆಗೆ ಪಕ್ಷದ ನಾಯಕರು ತಣ್ಣೀರು ಎರೆಚಿದ್ದಾರೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯ ಕಗ್ಗಂಟು ಮುಂದುವರಿದಿದ್ದು ಕಾರ್ಯಕರ್ತರ ಜಿಜ್ಞಾಸೆಗೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದ ಪ್ರಜ್ವಲ್ ರೇವಣ್ಣ, ಶಿರಾದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಿದರು. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿದರು. ರಾಜ್ಯದಲ್ಲಿ ಬರ ಮತ್ತು ಪ್ರವಾಹ ಬಂದು ರೈತರ ಬೆಳೆ ನಾಶವಾಗಿದೆ. ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ದೊಡ್ಡ ಪ್ರಮಾಣದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಉಭಯ ನಾಯಕರು ಆರೋಪಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ ನವೆಂಬರ್ 3 ಕ್ಕೆ: 56 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಂಸದರಾಗಿದ್ದ ಮುದ್ದಹನುಮೇಗೌಡ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, “ರಾಜ್ಯದಲ್ಲಿ ಬರ ಮತ್ತು ಪ್ರವಾಹದಿಂದ ಬೆಳೆ ನಷ್ಟವಾಗಿದೆ. ಪ್ರವಾಹ ಬಂದು ಮಣ್ಣುಪಾಲಾಗಿದೆ. ಶೀಘ್ರವೇ ರಾಜ್ಯಕ್ಕೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ” ಮನವಿ ಮಾಡಿದರು. “ಪ್ರಧಾನಿ ನಯಾ ಪೈಸೆಯನ್ನು ಕೊಡಲಿಲ್ಲ. ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ನಮ್ಮ ಮನವಿಗಳಿಗೆ ಪ್ರಧಾನಿ ಮೋದಿ ಓಗೊಡುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

ತುಮಕೂರು ಜಿಲ್ಲೆಯಲ್ಲಿ ಅಧಿಕ ಪ್ರಮಾಣದಲ್ಲಿ ತೆಂಗು ಬೆಳೆಯಲಾಗುತ್ತಿದೆ. ನುಸಿ ರೋಗಕ್ಕೆ ಬಹುತೇಕ ತೆಂಗು ಒಣಗಿ ಹೋಗಿದೆ. ಕೊಬ್ಬರಿಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಇದೇ ಕಾರಣಕ್ಕಾಗಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 180 ಕೋಟಿ ರೂಪಾಯಿ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಕೇಂದ್ರ ನಮ್ಮ ರಾಜ್ಯದ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು ಅಭ್ಯರ್ಥಿಯ ಹೆಸರನ್ನು ಈಗ ಘೋಷಣೆ ಮಾಡಬಹುದು ಎಂದು ಕಾದರು. ಉಭಯ ನಾಯಕರು ಭಾಷಣ ಮುಗಿಸಿದರೇ ಹೊರತು ಅಭ್ಯರ್ಥಿ ಆಯ್ಕೆ ಸಂಬಂಧದ ಕುರಿತು ಕೆಲವೇ ಮಾತುಗಳಲ್ಲಿ ಹೇಳಿದರು. ಇನ್ನು ಮೂರ್ನಾಲ್ಕು ದಿನಗಳೊಳಗೆ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗುವುದು. ಈ ಸಂಬಂಧ ಮತ್ತೊಂದು ಬಾರಿ ಶಿರಾ ತಾಲೂಕಿನ ಮುಖಂಡರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾತುಗಳಿಂದ ಬಹುತೇಕ ಕಾರ್ಯಕರ್ತರು ನಿರಾಶೆಗೊಂಡು ಹಿಂದಿರುಗಿದರು. ಕುಮಾರಣ್ಣ ಅಭ್ಯರ್ಥಿ ಹೆಸರನ್ನು ಘೋಷಿಸುತ್ತಾರೆ. ಪ್ರಚಾರಕ್ಕೆ ಅನುಕೂಲ ಆಗುತ್ತದೆ ಎಂದುಕೊಂಡೆವು. ಆದರೆ ಕುಮಾರಣ್ಣ ಇನ್ನೂ ನಾಲ್ಕು ದಿನಗಳ ಗಡುವು ತೆಗೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಶಿರಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುಖಂಡರು ಸಪ್ಪೆ ಮೋರೆ ಹಾಕಿಕೊಂಡು ಹಿಂತಿರುಗಿದ ದೃಶ್ಯ ಕಂಡುಬಂತು.

ಇದೇ ವೇಳೆ ಬಿಜೆಪಿಯೂ ಕೂಡ ಅಭ್ಯರ್ಥಿಯ ಹೆಸರನ್ನು ಇದುವರೆಗೂ ಅಂತಿಗೊಳಿಸಿಲ್ಲ. ಜೆಡಿಎಸ್ ಅಭ್ಯರ್ಥಿ ಯಾರೆಂಬುದನ್ನು ನೋಡಿಕೊಂಡು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಆಲೋಚನೆ ಮಾಡುತ್ತಿದೆ. ಸ್ಥಳೀಯರಿಗೆ ಕೊಡಬೇಕೇ? ಹೊರಗಿನಿಂದ ಕರೆತರಬೇಕೆ ಎಂಬ ಬಗ್ಗೆ ಬಿಜೆಪಿ ಮುಖಂಡರು ತಲೆಕಡೆಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...