Homeಮುಖಪುಟಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ

- Advertisement -
- Advertisement -

ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ, ಬರ್ಬರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು. ಯಾವ ಹೆಣ್ಣುಜೀವಕ್ಕೂ ಇಂತಹ ಬರ್ಬರ ಅಂತ್ಯ ಬಾರದಿರಲಿ.

ಸಮಾಜ ಹೆಣ್ಣನ್ನು ಸದಾ ಶರಣಾಗತ ಸ್ಥಿತಿಯಲ್ಲಿಡಲು ಅತ್ಯಾಚಾರ ಎಂಬ ಅಸ್ತ್ರ ಬಳಸಿಕೊಂಡು ಬಂದಿದೆ. ಅನಾದಿಯಿಂದಲೂ ಯುದ್ಧವಿರಲಿ, ದಂಗೆಯಿರಲಿ ಅಥವಾ ಕ್ರಾಂತಿಯಿರಲಿ; ಯಾವ ಪಕ್ಷವಾದರೂ ಸೋಲಲಿ ಅಥವಾ ಗೆಲ್ಲಲಿ – ಈ ಕ್ರೌರ್ಯ, ಉನ್ಮಾದಗಳ ಅಂತಿಮ ಬಾಧಿತಳು ಮಹಿಳೆಯೇ ಆಗಿದ್ದಾಳೆ. ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ. ಈ ಮಾತು ದಲಿತ ಸೋದರಿಯರಿಗೆ ಹೆಚ್ಚು ಅನ್ವಯಿಸುತ್ತದೆ.

ಇದನ್ನೂ ಓದಿ:ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಅತ್ಯಾಚಾರವೊಂದು ವಿಲಕ್ಷಣ ಅಪರಾಧ. ಅದು ಇದ್ದಕ್ಕಿದ್ದಂತೆ ಸಂಭವಿಸಿಬಿಡುವುದಿಲ್ಲ. ಅಪರಾಧಿ ಮತ್ತು ಆ ಮನಸ್ಸು ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿರುತ್ತದೆ. ಪೂರ್ವ ತಯಾರಿ ನಡೆಸಿರುತ್ತದೆ. ಅದಕ್ಕೆಂದೇ ನಮ್ಮ ದಲಿತ ಸೋದರಿಯರು ಅತ್ಯಂತ ಬರ್ಬರವಾಗಿ ದೌರ್ಜನ್ಯಕ್ಕೊಳಗಾಗಿ, ಕೊಲೆಯಾಗಿ ಹೋಗುತ್ತಾರೆ. ದೇಶವೇ ಎದ್ದು ಕುಣಿದರೂ ನಾಲಿಗೆ ಕತ್ತರಿಸಲ್ಪಟ್ಟ ಮನಿಶಾಗಳು ‘ಸೂಕ್ತ ಸಾಕ್ಷ್ಯಾಧಾರ’ ಒದಗಿಸಲಾರದೆ ಕೇಸು ಬಿದ್ದು ಹೋಗುತ್ತವೆ.

ಈ ಹೊತ್ತು ಅಧ್ಯಯನ ಶಿಬಿರವೊಂದರಲ್ಲಿ ದಲಿತ ಸೋದರಿಯರು ಕೇಳಿದ, ವಿಸ್ತೃತ ಚರ್ಚೆಗೊಳಗಾದ ಪ್ರಶ್ನೆಗಳು ನೆನಪಾಗುತ್ತಿವೆ. ದಿನನಿತ್ಯ ನಡೆಯುವ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳ ಬಗೆಗೆ ಮಾಧ್ಯಮದವರಾಗಲೀ, ಆಡಳಿತ ಮತ್ತು ನ್ಯಾಯವ್ಯವಸ್ಥೆಯಾಗಲೀ, ಮಹಿಳಾ ಸಂಘಟನೆಗಳಾಗಲೀ ಒಮ್ಮೆಲೇ ಏಕೆ ಪ್ರತಿಕ್ರಿಯಿಸುವುದಿಲ್ಲ? ಖೈರ್ಲಾಂಜಿ, ನಾಗಲಾಪಲ್ಲಿಗಳಂತಹ ಎಷ್ಟೋ ಬರ್ಬರ ಅತ್ಯಾಚಾರ-ಸಾವುಗಳು ಸಂಭವಿಸಿದರೂ ಅವು ದೆಹಲಿ ಪ್ರಕರಣದಷ್ಟು ಪ್ರಾಮುಖ್ಯತೆ ಏಕೆ ಪಡೆಯಲಿಲ್ಲ? ತಳಹಂತದ ನ್ಯಾಯಾಲಯಗಳಲ್ಲಿ ಸಿಕ್ಕ ನ್ಯಾಯವು ಮತ್ತೆ ಮೇಲ್ಮನವಿಯಾಗಿ ಮೇಲಿನ ನ್ಯಾಯಾಲಯಗಳಿಗೆ ಹೋದದ್ದೇ ತಿರುಗುಮುರುಗು ಆಗುವುದೇಕೆ?

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಹೌದು. ಎಲೈಟ್ ಜಾತಿ/ವರ್ಗ ಅನುಭವಿಸುವ ಕಷ್ಟಗಳಿಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ದೊರೆಯುತ್ತದೆ. ವ್ಯವಸ್ಥೆಯ ಗಮನ ಸೆಳೆದು ಪರಿಹಾರವೂ ಬೇಗ ದೊರೆಯುತ್ತದೆ. ನ್ಯಾಯದಾನ ವ್ಯವಸ್ಥೆ ಕೂಡ ವರ್ಗ/ಜಾತಿ ತಾರತಮ್ಯ ತೋರಿಸುತ್ತದೆ. ಬ್ರಿಟಿಷರು ಅತ್ಯಾಚಾರ ಕಾಯ್ದೆ ತಂದಾಗ ಕೆಲ ಮ್ಯಾಜಿಸ್ಟ್ರೇಟುಗಳು ತಮ್ಮ ತೀರ್ಪಿನಲ್ಲಿ ಮೇಲ್ಜಾತಿ ಹೆಣ್ಣು ಕೆಳಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಹೆಚ್ಚು ‘ಮಾನ’ ನಷ್ಟವಾಗುವುದಾಗಿಯೂ; ಕೆಳಜಾತಿ ಹೆಣ್ಣು ಮೊದಲೇ ‘ಸಡಿಲ’ ನಡತೆಯವಳಾಗಿರುವ ಕಾರಣ ಮೇಲ್ಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಮಾನ ನಷ್ಟ ಕಡಿಮೆ ಎಂದೂ ತೀರ್ಪು ಬರೆಯುತ್ತಿದ್ದರು! 1995ರಲ್ಲಿ ಭಂವರಿದೇವಿ ಅತ್ಯಾಚಾರ ಪ್ರಕರಣದಲ್ಲಿಯೂ ರಾಜಸ್ಥಾನ ಹೈಕೋರ್ಟು ಮೇಲ್ಜಾತಿ ಪುರುಷರು ದಲಿತ ಭಂವರಿಯ ಅತ್ಯಾಚಾರ ಮಾಡಿರಲಿಕ್ಕಿಲ್ಲ ಎಂದು ಇಂಥದೇ ತೀರ್ಪು ಬರೆಯಿತು!

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಹೀಗೆ ಅಸಮಾನ ಭಾರತದ ಪೊಲೀಸ್ ಮತ್ತು ನ್ಯಾಯವ್ಯವಸ್ಥೆಗಳು ಜಾತಿಪೂರ್ವಗ್ರಹದಿಂದ ಮುಕ್ತವಲ್ಲದೆ ಇರುವಾಗ ಪ್ರಕರಣಗಳ ದಾಖಲು, ವರದಿ, ನ್ಯಾಯದಾನ, ಶಿಕ್ಷೆ ಎಲ್ಲದರಲ್ಲೂ ಜಾತಿ/ವರ್ಗಗಳು ಪ್ರಮುಖ ಪಾತ್ರ ವಹಿಸುತ್ತವೆ. ಲಿಂಗಸಂಬಂಧ ಮತ್ತು ಲಿಂಗ ತಾರತಮ್ಯದೊಂದಿಗೆ ಭಾರತೀಯ ಜಾತಿವ್ಯವಸ್ಥೆ ಅವಿನಾ ಸಂಬಂಧ ಹೊಂದಿದ್ದು ಶೋಷಣೆಗೆ ಜಾತಿಯೂ ಒಂದು ಪ್ರಬಲ ಅಸ್ತ್ರವಾಗಿದೆ. ಎಂದೇ ಮಹಿಳಾ ಚಳುವಳಿ ತಮ್ಮನ್ನು ಒಳಗೊಳ್ಳುವ ಕುರಿತು ತಳಸಮುದಾಯಗಳಿಗೆ ಆಳದ ಅವಿಶ್ವಾಸ ಬೆಳೆದುಬಂದಿದೆ.

ಹೀಗಿರುತ್ತ ನಮ್ಮೊಳಗಿನ್ನೂ ಜೀವಂತವಿರಬಹುದಾದ ಜಾತಿವಾದ, ಜಾತಿ ಪೂರ್ವಗ್ರಹಗಳೆಂಬ ಕಿಲುಬನ್ನು ಸೋದರಿತ್ವದ ಪ್ರೀತಿಯಿಂದ ಉಜ್ಜಿ, ತಿಕ್ಕಿ ಸ್ವಚ್ಛಗೊಳಿಸಲೇಬೇಕಿದೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ: ಬೆಂಗಳೂರು ಹಾಗೂ ತುಮಕೂರಿನಲ್ಲಿ ನಾಳೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...